ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

'ಅಧಿಕಾರ'ಕ್ಕೆ ಹರಹಪಿಸುವ ಕೋಲಾಯುಕ್ತರು!...

October 28, 2006 - 12:53pm — BogaleRagale

(ಬೊಗಳೂರು ಭ್ರಷ್ಟಾಚಾರಿ ಬ್ಯುರೋದಿಂದ)
ಬೊಗಳೂರು, ಅ.28- ಲೋಕಾಯುಕ್ತರೂ ಅಧಿಕಾರಕ್ಕಾಗಿ ಹಪಹಪಿಸುತ್ತಿರುವುದನ್ನು ಓದಿ ಬೊಗಳೆ ರಗಳೆ ಬ್ಯುರೋ ಕುದಿಯತೊಡಗಿದ್ದು, ಈ ಬಿಸಿಯಿಂದಾಗಿ ಶೀಘ್ರವೇ ಬೇಳೆ ಬೇಯುವ ಸಾಧ್ಯತೆಗಳಿವೆ.

ದೇಶದ ಅರ್ಥ ವ್ಯವಸ್ಥೆಯ ಅಡಿಪಾಯವೇ ಆಗಿಬಿಟ್ಟಿರುವ ಭ್ರಷ್ಟಾಚಾರವನ್ನು ನಿವಾರಿಸಲು ಲೋಕಾಯುಕ್ತರು ಯತ್ನಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿರುವ ಸ್ವಅರ್ಥಾಭಿವೃದ್ಧಿ ಮಂಡಳಿಯು, ಈ ಭ್ರಷ್ಟಾಚಾರವನ್ನು ಇನ್ನಿಲ್ಲದಂತೆ ಮಾಡಿದರೆ, ದೇಶದ (ಅಂದರೆ ರಾಜಕಾರಣಿಗಳು, ಅಧಿಕಾರಶಾಹಿಯ) ಅರ್ಥಾಭಿವೃದ್ಧಿ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದೆ.

ಈಗಿನ ಪೀಳಿಗೆಗೆ ಭ್ರಷ್ಟಾಚಾರ ಮಾಡುವುದೇ ಕೆಲಸ. ಅದರ ನಿರ್ಮೂಲನೆ ವಿಷಯವನ್ನೆಲ್ಲಾ ಮುಂದಿನ ಪೀಳಿಗೆಗೆ ಬಿಡುವುದು ಬಿಟ್ಟು ಇವರಿಗೇಕೆ ಅದರ ಉಸಾಬರಿ ಎಂದು ಪ್ರಶ್ನಿಸಿರುವ ಮಂಡಳಿ ಅಧ್ಯಕ್ಷ ಭ್ರಷ್ಟ ಕುಮಾರ್ ಅವರು, ಬೇಕಿದ್ದರೆ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಕಡ್ಡಾಯ ಮಾಡಿದಂತೆ, ಹುಟ್ಟಿದ ತಕ್ಷಣ ಮಗುವಿಗೆ ಭ್ರಷ್ಟಾಚಾರ ವಿರುದ್ಧದ ಹೋರಾಟ ಬೇಕಿದ್ದರೆ ಕಲಿಸುವ ವ್ಯವಸ್ಥೆ ಮಾಡೋಣ ಮತ್ತು ಭ್ರಷ್ಟಾಚಾರ ಆರೋಪಗಳಿಂದ ಮುಕ್ತರಾಗುವುದು ಹೇಗೆಂಬ ಬಗ್ಗೆಯೂ ಒಂದು ಬದಿಯಲ್ಲಿ ಕಲಿಸೋಣ ಎಂದು ಹೇಳಿದ್ದಾರೆ.

ಸದ್ಯದ ಅಧಿಕಾರದಿಂದ ಏನನ್ನೂ ಸಾಧಿಸುವುದು ಸಾಧ್ಯವಿಲ್ಲ ಎಂಬ ಲೋಕಾಯುಕ್ತರ ಮಾತನ್ನು ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿರುವ ಅವರು, ಈಗಾಗಲೇ ಕೋಟಿ ಕೋಟಿ ಆಸ್ತಿಯನ್ನು ಬಯಲಿಗೆ ಎಳೆದುಹಾಕಿ ಪ್ರದರ್ಶಿಸಿದ್ದು ಯಾವ ಅಧಿಕಾರದಿಂದ ಎಂದು ಪ್ರಶ್ನಿಸಿದ್ದಾರೆ. ಯಾರಿಗೂ ತಿಳಿಯದ ಜಾಗದಲ್ಲಿ ಈ ಚಿನ್ನಾಭರಣಗಳು ಕೊಳೆಯದಂತೆ ಮತ್ತು ಅದು ಲೋಕಕ್ಕೆಲ್ಲಾ ತಿಳಿಯಲಿ, ಜನರೂ ಸಂತೋಷ ಪಡಲಿ ಎಂದು ಅವರೇ ಆಗಾಗ್ಗೆ ಇಂಥ ಚಿನ್ನಾಭರಣ ಪ್ರದರ್ಶನಗಳನ್ನು ಏರ್ಪಡಿಸುತ್ತಿದ್ದಾರೆ. ಮತ್ಯಾಕೆ ಅವರಿಗೆ ಇನ್ನಷ್ಟು ಅಧಿಕಾರ ಎಂದು ಪ್ರಶ್ನಿಸಿರುವ ಭ್ರಷ್ಟಕುಮಾರ್, ಅವರ ಕೈಗೆ ದಂಡ ಕೊಟ್ಟು ನಮ್ಮಂಥವರು ದಂಡ ತೆರಬೇಕೇ ಎಂದು ಕೇಳಿದ್ದಾರೆ,

ಲೋಕಾಯುಕ್ತರ ಕೈಗೆ ಕತ್ತರಿ ಕೊಟ್ಟು ನಮ್ಮ ಜೇಬು ಕತ್ತರಿಸಿಕೊಳ್ಳಲು ನಾವಂತೂ ಖಂಡಿತಾ ತಯಾರಿಲ್ಲ, ಅವರಿಗೆ ಹೆಚ್ಚಿನ ಅಧಿಕಾರ ಕೊಡುವುದಕ್ಕೆ ನಮ್ಮ ಗಂಭೀರ ವಿರೋಧವಿದೆ. ಈಗಾಗಲೇ ಚಿನ್ನಾಭರಣ ಪ್ರದರ್ಶನದೊಂದಿಗೆ, ಅದರ ಒಡೆಯರ ಚಿತ್ರ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿದೆ. ಇಷ್ಟೇ ಸಾಕು, ಹೆಚ್ಚಿನ ಶಿಕ್ಷೆಯ ಅಗತ್ಯವೇ ಇಲ್ಲ ಎಂದು ಹೇಳಿರುವ ಅವರು, ಕೊನೆಗೊಂದು ನುಡಿ ಮುತ್ತು ಉದುರಿಸಿದ್ದಾರೆ.

ಎಲ್ಲರನ್ನೂ ಶಿಕ್ಷಿಸುವ ಅಧಿಕಾರ ಲೋಕಾಯುಕ್ತರಿಗೆ ಕೊಟ್ಟುಬಿಟ್ಟರೆ, ಈ ದೇಶದಲ್ಲಿ ಭ್ರಷ್ಟಾಚಾರಿಗಳ ಸಂಘದ ಗತಿಯೇನು ಎಂದು ಅವರು ಪ್ರಶ್ನಿಸಿರುವುದು ಉತ್ತರ ಸಿಗದ new type question ಎಂದು ಪರಿಗಣಿಸಲಾಗಿದೆ.

Bogaleragale.blogspot.com

~.~
  • BogaleRagale ರವರ ಬ್ಲಾಗ್
  • Login or register to post comments
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೆಗ್ಗಳಿಕೆಗೆ ಕಳಂಕ ಯತ್ನ : ಲಂಚಾವತಾರಿಗಳ ಆಕ್ರೋಶ
  • ನರ್ಸರಿ... ಸಂದರ್ಶನವೇ ಸರಿ: ಪುಟಾಣಿ ಪರಿಷತ್ ಆಗ್ರಹ
  • ದಾಖಲೆ: ಅಮಿತಾಭ್‌ಗೆ ಸೆಡ್ಡು ಹೊಡೆದ ಜಾರಕಾರಣಿಗಳು!
  • ರಾಜಕಾರಣಿಗಳ ಬಾಯಲ್ಲಿ 'ಬೊಗಳೆ' ಮಂತ್ರ!
  • ಬಡತನ ಹೆಸರು ಚಿರಸ್ಥಾಯಿಯಾಗಿಸಲು ಪಣ
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 183 ಅತಿಥಿಗಳು ಆನ್ಲೈನ್ ಇರುವರು.


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator