ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › BogaleRagale ರವರ ಬ್ಲಾಗ್

ಕಾಂguess ಸತ್ಯಾಗ್ರಹದ ವಿರುದ್ಧ ಬಿಜೆಪಿ ಸತ್ಯಾಗ್ರಹ !

January 31, 2007 - 9:32am — BogaleRagale

ಬೊಗಳೂರು, ಜ.31- ಗಾಂಧೀಜಿ ಪ್ರಣೀತ ಸತ್ಯಾಗ್ರಹದ ಶತಮಾನೋತ್ಸವವನ್ನು ಪಕ್ಷಕ್ಕೆ ಸೀಮಿತಗೊಳಿಸಿ ಆಚರಿಸಿದೆ ಎಂದು ವಿರೋಧಿಗಳಿಂದ ಶ್ಲಾಘನೆಗೆ ಕಾರಣವಾಗಿರುವ ಕಾಂguess, ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. http://bogaleragale.blogspot.com/

ತಮ್ಮ ಪಕ್ಷವನ್ನು ಗಾಂಧೀಜಿ ಅವರೇ ಕಟ್ಟಿದ್ದು, ಈಗ ಕೂಡ "ಗಾಂಧೀಜಿ" ಅವರೇ ಪಕ್ಷಾಧ್ಯಕ್ಷೆಯಾಗಿ ಮುನ್ನಡೆಸುತ್ತಿದ್ದಾರೆ. ಹಾಗಾಗಿ ಸತ್ಯಾಗ್ರಹದ ಪೂರ್ಣ ಕ್ರೆಡಿಟ್ ತಮಗೇ ಸಲ್ಲಬೇಕು ಎಂದು ಕಾಂguess ವಕ್ತಾರರಾದ ಶಣಿ ಮಂಕರ್ ಅಯ್ಯೋರು ತಿಳಿಸಿದ್ದಾರೆ.

ಹಿಂದೆ ಬ್ರಿಟಿಷರೇ ನಮ್ಮ ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದರು. ನಮ್ಮ ಪಕ್ಷದವರು ಸತ್ಯಾಗ್ರಹ ನಡೆಸಿದ ಪರಿಣಾಮವಾಗಿ ಏನನ್ನು ಬೇಕಾದರೂ ನಾವು ನಾವೇ ತಿನ್ನಬಹುದಾದ ಸ್ವಾತಂತ್ರ್ಯ ಇಡೀ ದೇಶಕ್ಕೆ ಸಿಕ್ಕಿದೆ. ನೀವು ಈ ಸ್ವಾತಂತ್ರ್ಯವನ್ನು ತೆಗೆದುಕೊಂಡು ಸುಮ್ಮನಿರಿ. ಸತ್ಯವನ್ನು ಆಗ್ರಹಿಸುವುದರಲ್ಲೇಕೆ ಪಾಲು ಕೇಳುತ್ತೀರಿ ಎಂದು ಅವರು ವಿರೋಧ ಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ಮಹಾತ್ಮ ಗಾಂಧೀಜಿ ಅವರು ಇಹಲೋಕದಿಂದ ಪರಲೋಕಕ್ಕೆ ಹೋಗುವ ಮುನ್ನ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕು ಎಂದು ಆದೇಶ ಮಾಡಿದ್ದರು. ಆದರೆ ಗಾಂಧೀಜಿ ನೆನಪು ಹಸಿರಾಗಿರುವಂತೆ ಮಾಡಲು ನಾವು ಅದನ್ನು ಉಳಿಸಿಕೊಂಡಿದ್ದೇವೆ. ಪಕ್ಷದ ಈ ಹಿಂದಿನ ಅಧ್ಯಕ್ಷರಿಗೆಲ್ಲಾ ಗಾಂಧಿ ಉಪ-ನಾಮ "ಹಾಕಿ"ದ್ದೇವೆ. ಗಾಂಧೀಜಿ ನೆನಪು ಅಚ್ಚಳಿಯದಂತೆ ಮಾಡುತ್ತಿದ್ದೇವೆ ಎಂದು ಶಣಿ ಮಂಕರ್ ಸ್ಪಷ್ಟಪಡಿಸಿದ್ದಾರೆ.

ಆದರೆ, ಗಾಂಧೀಜಿ ಈಗ ಇದ್ದಿದ್ದರೆ ಪಕ್ಷದ ವಿರುದ್ಧ ಸತ್ಯಾಗ್ರಹ ಮಾಡುತ್ತಿದ್ದರು ಎಂಬ ವಿಷಯವನ್ನು ಮಾತ್ರ ಅವರು ಹೇಳದಿದ್ದರೂ ನಮ್ಮ ವದರಿಗಾರರು ಬರೆದುಕೊಂಡಿದ್ದು, ಅದನ್ನು ಪ್ರಕಟಿಸದಿರಲು ನಮ್ಮ ಬ್ಯುರೋವನ್ನು ಕೋರಿದ್ದಾರೆ.

ಗಾಂಧಿ ಹೆಸರಲ್ಲೇ ನಾವು ಓಟು ಕೇಳುವ ಮೂಲಕ ಜನತೆಯಲ್ಲೂ ಅವರ ಹೆಸರು ಚಿರಸ್ಥಾಯಿಯಾಗಿರುವಂತೆ ನೋಡಿಕೊಂಡಿಲ್ಲವೇ? ವಿರೋಧ ಪಕ್ಷಗಳು ಎಂದಾದರೂ ಈ ರೀತಿ ಮಾಡಿವೆಯೇ ಎಂದು ಪ್ರಶ್ನಿಸಿರುವ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಬೇರೆ ಪಕ್ಷಗಳಿಗೆ ಸೇರಿದರೆ ಅದು ನಮ್ಮ ತಪ್ಪಲ್ಲ. ನಮ್ಮ ಪಕ್ಷಕ್ಕೇ ಬನ್ನಿ. ನೀವು ಕೂಡ ಸತ್ಯಾಗ್ರಹದ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ಈ ಮಧ್ಯೆ, ಸತ್ಯಾಗ್ರಹದ ಶತಮಾನೋತ್ಸವವನ್ನು ಪಕ್ಷಾಗ್ರಹದ ಶತಮಾನೋತ್ಸವವಾಗಿ ಆಚರಿಸಿದ ಕಾಂguessನಿಂದ ನ್ಯಾಯ ಬಯಸಿ ಬಿಜೆಪಿಯು ಸತ್ಯಾಗ್ರಹ ನಡೆಸಲಿದೆ ಎಂದು ತಿಳಿದುಬಂದಿದೆ. ಸತ್ಯಾಗ್ರಹವನ್ನು ವಿರೋಧಿಸಿದ್ದ Commuನಿಷ್ಠರನ್ನು ಕಾಂguess, ಆಹ್ವಾನಿಸಿದೆ, ಆದರೆ ಕಮ್ಯು-nullಗಳು ಎಂದು ನಮ್ಮನ್ನು ಹೊಗಳುತ್ತಿರುವವರು ಎರಡಕ್ಕೂ ಕನಿಷ್ಠ ಸಾಮಾನ್ಯ ಅಪವರ್ತನ ಆಗಿರುವ "commu" ಎಂಬ ಶಬ್ದಕ್ಕೆ ಬೆಲೆಯನ್ನೇ ನೀಡಿಲ್ಲ ಎಂದು ಬಿಜೆಪಿ ವಕ್ತಾರ ನಂಕಯ್ಯ ವೇಯ್ಡು ಆಕ್ಷೇಪಿಸಿದ್ದಾರೆ.

ಇದಲ್ಲದೆ, ಕಾಂguess ಈಗ ಕಾಂಗ್ರೆಸ್ ಆಗಿ ಉಳಿದಿಲ್ಲ, ಮೀಸಲಾತಿ, ವಿಶೇಷ ಸವಲತ್ತುಗಳನ್ನು ಒದಗಿಸುವ ಕುರಿತು ಮಾತನಾಡುತ್ತಾ ಈಗ ಅದು ವಿಭಜನಪೂರ್ವ ಭಾರತದ ಮುಸ್ಲಿಂ ಲೀಗ್‌ನಂತಾಗಿಬಿಟ್ಟಿದೆ, ವಿಭಜನಪೂರ್ವ ಭಾರತದ ಕಾಂಗ್ರೆಸ್ ಸಿದ್ಧಾಂತಗಳನ್ನು ಬಿಜೆಪಿ ತನ್ನ ಜೇಬಿನೊಳಗೆ ಹಾಕಿಕೊಂಡಿರುವುದರಿಂದ ನಾವು ಕೂಡ ಸತ್ಯಾಗ್ರಹ ಮಾಡಲು ಅರ್ಹರು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

~.~
  • BogaleRagale ರವರ ಬ್ಲಾಗ್
  • Login or register to post comments
  • 641 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗಾಂಧಿ ಮತ್ತೆ ಹುಟ್ಟಿ ಬಾ...
  • ಬಡತನ ಹೆಸರು ಚಿರಸ್ಥಾಯಿಯಾಗಿಸಲು ಪಣ
  • ಗಾಂಧಿ ಜಯಂತಿ
  • ಮಹಾತ್ಮಾ ಗಾಂಧಿ ಅಂತರ್ಜಾಲವನ್ನು ಹೇಗೆ ಬಳಸುತ್ತಿದ್ದರು?
  • ಸಿಪಾಯಿ ದಂಗೆ-II
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜಿಪುಣ ನನ್ನ ಗಂಡ
  • ದೊಡ್ಡಣ್ಣನ ಆರ್ಥಿಕ ಹಿನ್ನಡೆಯ ಬಗೆಗಿನ ಎಸ್ ಎಮ್ ಎಸ್
  • ಓದಿದ್ದು ಕೇಳಿದ್ದು ನೋಡಿದ್ದು 42 ಮಾನಸಿಕ ಸ್ಥಿತಿ ಪರೀಕ್ಷಿಸಿ ಮಿಂಚಂಚೆ ಕಳುಹಿಸುವ ಗೂಗಲ್
  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 13 ಸದಸ್ಯರು ಮತ್ತು 82 ಅತಿಥಿಗಳು ಆನ್ಲೈನ್ ಇರುವರು.


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator