ನಾನು ಸೋತಿಲ್ಲ. ಪ್ರಯೋಗ ಸಾಧ್ಯವಗದಂತಹ 10000 ದಾರಿಗಳನ್ನು ಕಂಡು ಕೊಂಡಿದ್ದೇನೆ.

— ಥಾಮಸ್ ಅಲ್ವಾ ಎಡಿಸನ್ (ತಮ್ಮ ವಿದ್ಯುತ್ ಬಲ್ಪ್ ಪ್ರಯೋಗ 1000

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

Chamaraj ರವರ ಬ್ಲಾಗ್

ವಿಷದ ಗಿಡ

ಗೆಳೆಯನ ಮೇಲೆ ಏಕೋ ಮುನಿಸಾಯ್ತು
ಅವನೆದುರು ಹೇಳಿಕೊಂಡೆ, ಮುನಿಸು ಕರಗಿತು
ಶತ್ರವಿನ ಮೇಲೇಕೋ ಮುನಿಸಾಯ್ತು
ಅವನೆದುರು ಹೇಳಲಿಲ್ಲ, ಮುನಿಸು ಬೆಳೆಯಿತು

ಅವನ ಮೇಲಿನ ಭಯದ ನೀರುಣಿಸಿದೆ
ಹಗಲು-ರಾತ್ರಿ ಕಣ್ಣೀರು ಹನಿಸಿದೆ
ಹುಸಿ ನಗೆ ಹಾಗೂ ಕುತಂತ್ರಗಳ
ಬಿಸಿಲುಣಿಸಿ ಮುನಿಸು ಬೆಳೆಸಿದೆ

ದ್ವೇಷದ ಗಿಡ ಹಗಲು-ರಾತ್ರಿ ಬೆಳೆಯಿತು
ಕೊನೆಗೆ ಸುಂದರ ವಿಷ ಫಲ ಬಿಟ್ಟಿತು
ಅದು ಬೆಳಗುವುದನ್ನು ನನ್ನ ಶತ್ರು ನೋಡಿದ್ದ
ಆ ಫಲ ನನ್ನದೆನ್ನುವುದನ್ನು ಅವ ಅರಿತಿದ್ದ

ಕತ್ತಲಾವರಿಸಿದಾಗ, ಏನೂ ಕಾಣದಾದಾಗ
ಸದ್ದಿಲ್ಲದೇ ಬಂದ, ವಿಷ ಫಲವ ಕದ್ದು ಮೆದ್ದ
ಬೆಳಗಾದಾಗ ನನ್ನ ಹೃದಯ ಪುಟಿಯಿತು
ಮರದಡಿ ಅವ ಸತ್ತಿದ್ದ ಕಂಡು ನಲಿಯಿತು

ಮೂಲ: ವಿಲಿಯಂ ಬ್ಲೇಕ್‌
ಭಾವಾನುವಾದ: ಚಾಮರಾಜ ಸವಡಿ

ಕನಸು ಕಾಣಬಾರದು ಅಂದುಕೊಳ್ಳುತ್ತ...

ಮತ್ತೆ ಮತ್ತೆ ಕೀಬೋರ್ಡ್‌ ಮುಟ್ಟುತ್ತೇನೆ. ಸುಮ್ಮನಾಗುತ್ತೇನೆ.

ಕಳೆದ ಕೆಲ ದಿನಗಳಿಂದ ಇದು ಹೀಗೇ ನಡೆದುಕೊಂಡು ಬರುತ್ತಿದೆ. ಏನೋ ಬರೆಯಬೇಕೆಂದು ಅಂದುಕೊಳ್ಳುತ್ತೇನೆ. ಎಳೆಯೊಂದು ಮನದ ಮೂಲೆಯಲ್ಲಿ ಕಾಣುತ್ತದೆ. ಮೆತ್ತಗೇ ಹಿಡಿದೆಳೆದರೆ, ಸೊಗಸಾದ ನೇಯ್ಗೆ ಬಂದೀತು ಅಂದುಕೊಳ್ಳುತ್ತೇನೆ. ಅಷ್ಟೊತ್ತಿಗೆ ಮತ್ತೇನೋ ನೆನಪಾಗುತ್ತದೆ. ಎಳೆ ಅಲ್ಲೇ ಒಣಗಿ ಹೋಗುತ್ತದೆ.

ಏಕೆ ಹೀಗಾಗುತ್ತದೆ?

ಮನಸ್ಸಿನ ಯೋಚನೆಯ ಒಂದು ಎಳೆ ಎಂತೆಂಥ ಕನಸುಗಳನ್ನು ತಂದಿಡುತ್ತದೆ ಎಂಬುದನ್ನು ಖುದ್ದು ಅನುಭವಿಸಿದವ ನಾನು. ಎಳೆ ಎಂಬುದು ಮಗುವಿನಂತೆ. ಅದರ ಸಾಧ್ಯತೆಗಳು ಅಪಾರ. ಅದನ್ನು ಬೆಳೆಸಬೇಕಾದ ಜವಾಬ್ದಾರಿಯೂ ಅಷ್ಟೇ ದೊಡ್ಡದು. ಮೊಳಕೆಯೊಡೆದ ಪ್ರತಿಯೊಂದು ಬೀಜಕ್ಕೂ ಪೂರ್ತಿ ಮರವಾಗುವ ಎಲ್ಲ ಸಾಧ್ಯತೆಗಳೂ ಇರುತ್ತವೆ.

ಆದರೆ, ಎಲ್ಲ ಮೊಳಕೆಗಳೂ ಮರವಾಗುವುದಿಲ್ಲ. ಬಹಳಷ್ಟು ಮೊಳಕೆಗಳು ಮುರುಟಿಹೋಗುತ್ತವೆ. ನಮ್ಮ ಬಾಲ್ಯದ ಕನಸುಗಳಂತೆ.
 ಮುಂದೆ ಓದಿ »

ಖಾಲಿಯಾದ ಮನೆಯಲ್ಲಿ ನೆನಪುಗಳ ಮೆರವಣಿಗೆ

ನೆನಪಿನ ಮತ್ತೊಂದು ಕೊಂಡಿ ಕಳಚಿತು.

ನಿರೀಕ್ಷಿತವಾಗಿದ್ದರೂ, ಕೆ.ಎಸ್‌. ಅಶ್ವತ್ಥ ಅವರ ಸಾವು ವಿಚಿತ್ರ ವ್ಯಾಕುಲತೆ ಉಂಟು ಮಾಡುತ್ತಿದೆ. ಅವರನ್ನು ನಾಯಕರನ್ನಾಗಿ ಆರಾಧಿಸದಿದ್ದರೂ, ಅದರಾಚೆಯ ಜೀವಂತ ವ್ಯಕ್ತಿಯನ್ನಾಗಿ ನಾವೆಲ್ಲ ನೋಡಿದ್ದೆವು. ಪಾತ್ರಗಳಿಗೆ ಜೀವ ತುಂಬುತ್ತಿದ್ದ ಅವರ ಪ್ರತಿಭೆಗೆ ಮಾರು ಹೋಗಿದ್ದೆವು. ಅವರು ಮುಖ್ಯ ವ್ಯಕ್ತಿಯಾಗಿ ಚರ್ಚೆಯಾಗುತ್ತಿರಲಿಲ್ಲ. ತುಂಬಿದ ಮನೆಯಲ್ಲಿ ತನ್ನ ಪಾಡಿಗೆ ತಾನು ಒಂದೆಡೆ ಕೂತ ಹಿರಿಯನಂತೆ, ನೆನಪಿನ ಅವಿಭಾಜ್ಯ ಅಂಗವಾಗಿದ್ದರು. ಈಗ ಆ ಸ್ಥಳ ಖಾಲಿ ಖಾಲಿ. ಒಂದು ಬನಿಯನ್‌, ಒಂದು ಲುಂಗಿ ಹಾಕಿಕೊಂಡ ನಮ್ರ ಮುಖದ, ವಿನಂತಿಸುವ ಕಂಗಳ ಅಶ್ವತ್ಥ ಈಗಿಲ್ಲ.

ಸುಮ್ಮನೇ ಕೂತು ನೆನಪಿಸಿಕೊಂಡರೂ ವಿವಿಧ ಪಾತ್ರಗಳ ಅಶ್ವತ್ಥ ಮುಖ ಕಣ್ಮುಂದೆ ಬರುತ್ತದೆ. ನಾನು ತುಂಬ ಇಷ್ಟಪಟ್ಟ ಸಿನಿಮಾಗಳಲ್ಲಿ ಕೆ. ಬಾಲಚಂದರ್‌ ನಿರ್ದೇಶನದ ಎರಡು ರೇಖೆಗಳು ಚಿತ್ರವೂ ಒಂದು. ಅದರಲ್ಲಿ ಅಸಹಾಯಕ ಮೇಷ್ಟ್ರ ಪಾತ್ರದಿಂದ, ನಿಷ್ಠುರ-ನಿಷ್ಕರುಣಿ ತಂದೆಯಾಗಿ ಅಶ್ವತ್ಥ ಅಭಿನಯ ಇವತ್ತಿಗೂ ಅಚ್ಚಳಿಯದಂತಿದೆ. ತನ್ನ ಮಗಳಿಗೆ ವಂಚಿಸಿ, ಅವಳ ಮಡಿಲಿಗೊಂದು ಮಗು ಕರುಣಿಸಿ, ಹೇಳದೇ ಕೇಳದೇ ಹೋಗಿ ಇನ್ನೊಂದು ಮದುವೆಯಾದ ವ್ಯಕ್ತಿಯ ಮೇಲೆ ಸೇಡು ತೀರಿಸಿಕೊಳ್ಳಲು ಯತ್ನಿಸಿದ ಪಾತ್ರವಾಗಿ ಅಶ್ವತ್ಥ ಅಭಿನಯ ಅದ್ಭುತ. ಕುವೆಂಪು ಅವರನ್ನು ಆರಾಧಿಸುವ ಮೇಷ್ಟ್ರು ಪೈಪ್‌ ಸೇದುವ ಕುಲೀನ ವರ್ಗದ ವ್ಯಕ್ತಿಯಾಗಿ ಬದಲಾಗುತ್ತಾರೆ. ವಿನಯದ ಜಾಗದಲ್ಲಿ ನಿಷ್ಠುರತೆ, ನಮ್ರತೆಯ ಸ್ಥಾನದಲ್ಲಿ ಅಂತಸ್ತಿನ ಹಮ್ಮು ಸೇರಿಕೊಳ್ಳುವ ಪರಿಯೇ ಅದ್ಭುತ.  ಮುಂದೆ ಓದಿ »

ನಿನ್ನೆ ನಿನ್ನೆಗೆ, ಇಂದು ಇಂದಿಗೆ, ಇರಲಿ ನಾಳೆಯು ನಾಳೆಗೆ...

(ತುಂಬ ದಿನಗಳ ಹಿಂದೆ ಬರೆದು ಮರೆತ ಬರಹ ಇದು. ಥೇಟ್‌ ಕಟ್ಟಿಟ್ಟು ಮರೆತ ಕಾಣಿಕೆಯಂತೆ. ಊರು ಬಿಟ್ಟು ಬಂದವರಿಗೆ, ಪ್ರೀತಿಯ ಜೀವಗಳನ್ನು ದೂರದಲ್ಲಿ ಬಿಟ್ಟು ತಪಿಸುತ್ತಿರುವ ಎಲ್ಲರಿಗೂ ಹೊಸ ವರ್ಷದ ಸಂದರ್ಭಕ್ಕೆಂದು ಇದನ್ನು ಅರ್ಪಿಸುತ್ತಿದ್ದೇನೆ.)  ಮುಂದೆ ಓದಿ »

ಸಿಲ್ಲಿ ಕನಸುಗಳೆಂಬ ಸಣ್ಣ ಸೇತುವೆಗಳು

ಒಮ್ಮೊಮ್ಮೆ ನೆನಪಿಸಿಕೊಂಡರೆ ಅಚ್ಚರಿಯಾಗುತ್ತದೆ: ನಾವೆಲ್ಲ ಎಂತೆಂಥ ಅನಾಹುತಕಾರಿ ಘಟ್ಟಗಳನ್ನು ದಾಟಿ ಬಂದಿರುತ್ತೇವಲ್ವೆ?

ಬಾಲ್ಯದಲ್ಲಿ ಚಿತ್ರವಿಚಿತ್ರ ಆಸೆಗಳಿರುತ್ತವೆ. ಅವತ್ತಿನ ಮಟ್ಟಿಗೆ ಅವೇ ದೊಡ್ಡವು. ಬಲು ಪಸಂದಾಗಿರುವಂಥವು. ಚಿಕ್ಕವನಿದ್ದಾಗ, ನಮ್ಮೂರಿನ ಹಿಟ್ಟಿನ ಗಿರಣಿಗೆ ನಿಯಮಿತವಾಗಿ ಹೋಗುತ್ತಿದ್ದೆ, ಜೋಳ ಬೀಸಿಕೊಂಡು ಬರಲು. ಅದೇ ಮುಖ್ಯ ಆಹಾರ ನಮಗೆ. ತೀರಾ ಕುಳ್ಳನಾಗಿದ್ದ ನನಗೆ, ಎತ್ತರದಲ್ಲಿದ್ದ ಹಿಟ್ಟು ಬೀಸುವ ಯಂತ್ರದ ಬಾಯಿಗೆ ಜೋಳದ ಬುಟ್ಟಿ ಎತ್ತಿ ಸುರುವಲು ಆಗುತ್ತಿರಲಿಲ್ಲ. ಗಿರಣಿಯ ಕೆಲಸಗಾರ, ನನ್ನ ತಲೆ ಮೇಲಿನ ಬುಟ್ಟಿ ಎತ್ತಿ, ಜೋಳ ಸುರುವಿ ಬುಟ್ಟಿಯನ್ನು ವಾಪಸ್‌ ಕೊಡುತ್ತಿದ್ದ. ಆಗ ಕೆಲ ಗಾಲಿಗಳನ್ನು ತಿರುವಿದ ಕೂಡಲೇ ಯಂತ್ರದ ಸದ್ದು ಬದಲಾಗಿ, ಇದ್ದಕ್ಕಿದ್ದಂತೆ ಹಿಟ್ಟು ಬುಟ್ಟಿಯಲ್ಲಿ ಬೀಳಲು ಶುರುವಾಗುತ್ತಿತ್ತು.

ನನಗೆ ಅದು ಬಹಳ ಕೌತುಕದ ಸಂಗತಿಯಾಗಿತ್ತು. ಯಂತ್ರದ ಬಾಯಿಂದ ಜೋಳ ಅದರ ಹೊಟ್ಟೆಗೆ ಹೇಗೆ ಹೋಗುತ್ತದೆ ಎಂಬುದನ್ನು ನೋಡುವ ಆಸೆ ನನ್ನದು. ಆದರೆ, ಗಿರಣಿಯವ ನನ್ನನ್ನು ಬಿಡುತ್ತಿರಲಿಲ್ಲ. ಅಲ್ಲದೇ, ಜೋಳ ಮುಗಿಯುತ್ತ ಬಂತು ಎಂಬುದು ಅವನಿಗೆ ಹೇಗೆ ಗೊತ್ತಾಗುತ್ತದೆ ಎಂಬುದನ್ನು ತಿಳಿಯುವ ಕುತೂಹಲವೂ ಸಾಕಷ್ಟಿತ್ತು. ಎಷ್ಟೇ ಪ್ರಯತ್ನಿಸಿದರೂ, ಆತ ಹೇಳುತ್ತಿರಲಿಲ್ಲ. ’ಅದಕ್ಕೆಲ್ಲ ತಲೆ ಬೇಕಾಗುತ್ತದೆ’ ಎಂದು ತನ್ನ ತಲೆ ಮುಟ್ಟಿ ನಗುತ್ತಿದ್ದ.

ಆಗ ನನ್ನ ದೊಡ್ಡ ಕನಸೆಂದರೆ, ಗಿರಣಿಯಲ್ಲಿ ಹಿಟ್ಟು ಬೀಸುವ ಕೆಲಸ ಮಾಡಬೇಕೆಂಬುದು. ದೊಡ್ಡವನಾದಾಗ, ಹಿಟ್ಟು ಬೀಸುವ ಕೆಲಸ ಮಾಡಬೇಕು. ಆಗ, ನನ್ನಂಥ ಚಿಕ್ಕಮಕ್ಕಳಿಗೆ ಗಿರಣಿ ಕೆಲಸ ಮಾಡುವುದನ್ನು ತೋರಿಸಿ ಅವರ ಅಚ್ಚರಿ ಗಮನಿಸಬೇಕೆಂಬ ವಿಚಿತ್ರ ಆಸೆ ಹುಟ್ಟಿತ್ತು. ನಾನು ಹೈಸ್ಕೂಲು ಮುಗಿಸುವವರೆಗೂ ಈ ಆಸೆ ಇತ್ತೆಂಬುದನ್ನು ಇವತ್ತು ನೆನೆದರೆ ನಗು ಬರುತ್ತದೆ.  ಮುಂದೆ ಓದಿ »

Syndicate content