ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ನಿಮಗೂ ಹೀಗೆ ಅನಿಸಿದೆಯೆ?

April 6, 2008 - 5:00pm — Chamaraj

ಹಲವಾರು ಬಾರಿ ಹಾಗನ್ನಿಸಿದೆ.

ಸತ್ಯ ಏನೆಂಬುದು ಗೊತ್ತಿರುತ್ತದೆ. ಆದರೆ, ಹೇಳಲಾಗುವುದಿಲ್ಲ. ಭಂಡತನದಿಂದ ತನ್ನ ನಿರ್ಣಯವನ್ನು ಜಾರಿಗೊಳಿಸುವ ವ್ಯಕ್ತಿ ತಪ್ಪು ಮಾಡುತ್ತಿದ್ದಾನೆ ಎಂದು ತಿಳಿದಿದ್ದರೂ, ಅದನ್ನು ಹೇಳಲಾಗುವುದಿಲ್ಲ.

ಏಕೆ ಹಾಗಾಗುತ್ತದೆ?

ನಾನು ಸತ್ಯ ಹೇಳಿದರೆ ನಮ್ಮ ಇದ್ದಬದ್ದ ಸಂಬಂಧ ಅಲ್ಲಿಗೇ ಮುಕ್ತಾಯವಾಗುತ್ತದೆ ಎಂಬುದು ನನಗೆ ಗೊತ್ತು. ಅದು ವೃತ್ತಿಪರ ಆಗಿರಬಹುದು ಅಥವಾ ವೈಯಕ್ತಿಕವಾಗಿರಬಹುದು- ಒಟ್ಟಿನಲ್ಲಿ ನಮ್ಮ ಸಂಬಂಧ ಅಂತ್ಯಗೊಳ್ಳುತ್ತದೆ.

ತುಂಬ ಸಾರಿ ನೋಡಿದ್ದೇನೆ: ಸಾಮಾನ್ಯವಾಗಿ ದಡ್ಡರು ಉನ್ನತ ಸ್ಥಾನದಲ್ಲಿ ಕೂತಿರುತ್ತಾರೆ. ಪ್ರತಿಭಾವಂತರನ್ನು ಕಂಡರೆ ಅವರಿಗೆ ಅಸೂಯೆ, ಕೀಳರಿಮೆ. ಅದನ್ನು ಹೋಗಲಾಡಿಸಲು ಗತ್ತು ನಟಿಸುತ್ತಾರೆ. ತಮಗೆ ಎಲ್ಲದೂ ಗೊತ್ತಿದೆ ಎಂಬ ಮುಖವಾಡ ತೊಡುತ್ತಾರೆ. ಅದೇ ಹೊತ್ತಿಗೆ, ತನ್ನ ಹುಳುಕು ಯಾರಿಗಾದರೂ ಗೊತ್ತಾದರೆ ಹೇಗೆ ಎಂಬ ಅಳುಕೂ ಅವರನ್ನು ಕಾಡುತ್ತಿರುತ್ತದೆ. ಹೀಗಾಗಿ, ಕೆಲಸ ಗೊತ್ತಿರುವವರನ್ನು ಕಂಡರೆ ಭಯ. ಅವರನ್ನು ಕಾಡಲು ಶುರು ಮಾಡುತ್ತಾರೆ. ಅವರು ಮಾಡಿದ್ದೆಲ್ಲ ತಪ್ಪು ಎನ್ನುತ್ತಾರೆ. ಬೆಳೆಯಲು ಸಾಧ್ಯವಿರುವ ಬಾಗಿಲುಗಳನ್ನೆಲ್ಲ ಮುಚ್ಚುತ್ತಾರೆ. ತಾವಿಲ್ಲದಾಗ ಬಾಗಿಲು ತೆಗೆದುಕೊಂಡು ಬಂದರೆ? ಎಂಬ ಅಳುಕಿನಿಂದಾಗಿ, ಹೊರಗೇ ಕಾವಲು ನಿಲ್ಲುತ್ತಾರೆ.

ಇದು ನಿಜಕ್ಕೂ ದುರ್ಭರ ಪರಿಸ್ಥಿತಿ. ಅವಕಾಶ ನಿರಾಕರಿಸಲ್ಪಟ್ಟ ವ್ಯಕ್ತಿಯೂ ಬೆಳೆಯುವುದಿಲ್ಲ, ಆತನ ಕಾವಲಿಗೆ ನಿಂತವನೂ ಬೆಳೆಯಲಾರ. ಇಂಥ ಪರಿಸ್ಥಿತಿ ಉಂಟಾದಾಗ, ಇಬ್ಬರು ವ್ಯಕ್ತಿಗಳು ಮಾತ್ರವಲ್ಲ, ಸಂಸ್ಥೆ ಕೂಡ ಹಾಳಾಗುತ್ತದೆ. ಆಗ ಏನು ಮಾಡಬೇಕು?

ನಾನು, ಮೌನವಾಗಿ ಇದ್ದುಬಿಡುತ್ತೇನೆ. ಗತ್ತು ತೋರಿಸುವವನಿಗೇ ಮೊದಲ ಬ್ಯಾಟಿಂಗ್ ಭಾಗ್ಯ ದಕ್ಕಲಿ. ಅವನದೇ ಮಾತು ನಡೆಯಲಿ. ತನ್ನ ಗತ್ತು ಮತ್ತು ಶಕ್ತಿ ಪ್ರದರ್ಶನದ ಅತಿರೇಕದಲ್ಲಿ ಆತನ ದೌರ್ಬಲ್ಯ ಬಲು ಬೇಗ ಬಯಲಾಗುತ್ತ ಹೋಗುತ್ತದೆ.

ಮೌನವಾಗಿದ್ದುಕೊಂಡು ಓದು-ಬರೆಹ ಮುಂದುವರೆಸಿಕೊಂಡು ಹೋಗುತ್ತೇನೆ. ಅದೊಂಥರಾ ವನವಾಸದ ಸುಖ. ಏನೋ ಶಾಂತಿ, ನೆಮ್ಮದಿ ತರುವ ಮೌನ. ಅಧ್ಯಯನದಲ್ಲಿ ಮುಳುಗಿದಂತೆ, ಅತ್ತ ಗತ್ತು ಯಾವತ್ತೋ ಕರಗಿರುತ್ತದೆ. ಹುಳುಕು ಹೊರಬಿದ್ದಿರುತ್ತದೆ. ಒಮ್ಮೊಮ್ಮೆ ವರ್ಷಗಟ್ಟಲೇ ಕಾಯಬೇಕಾಗಬಹುದು.

ಅಷ್ಟೊಂದು ಸಮಾಧಾನ/ಅನಿವಾರ್ಯತೆ ನನಗಿದ್ದರೆ ಕಾಯುತ್ತೇನೆ. ಇಲ್ಲದಿದ್ದರೆ, ಎದ್ದು ಹೋಗುತ್ತೇನೆ.

ಏಕೆಂದರೆ, ಬದುಕಿನಲ್ಲಿ ಮುಚ್ಚಿದ ಬಾಗಿಲುಗಳಿಗಿಂತ ತೆರೆದ ಬಾಗಿಲುಗಳೇ ಹೆಚ್ಚು. ಅದು ನನ್ನ ನಂಬಿಕೆಯಷ್ಟೇ ಅಲ್ಲ, ಅನುಭವವೂ ಹೌದು.

- ಚಾಮರಾಜ ಸವಡಿ

  • ಅನಿಸಿಕೆ
~.~
  • Chamaraj ರವರ ಬ್ಲಾಗ್
  • Login or register to post comments
  • 185 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 7, 2008 - 10:22am — varunbhatbm

ಉ: ನಿಮಗೂ ಹೀಗೆ ಅನಿಸಿದೆಯೆ?

varunbhatbm's picture

ದೊಡ್ಡ ಸಂಸ್ಥೆಗಳಲ್ಲಿ, ನಮ್ಮ ಸುತ್ತ ಏನು ನಡೆಯುತ್ತದೆ ಎಂಬುದನ್ನು ಸರಿಯಾಗಿ ಹೇಳಿದ್ದೀರ. ದುಃಖಕರ ವಿಷಯ ಏನು ಅಂದ್ರೆ, ಕೆಲವು ಸಲ ನಮ್ಮ ಸ್ನೇಹಿತರ ಗುಂಪಲ್ಲೇ ಇಂತವರು ಇರ್ತಾರೆ.
ನೀವು ಹೇಳಿದಂತ ನಮ್ಮ ಪಾಡಿಗೆ ನಾವು ಇದ್ದು ಬಿಡುವುದು ಒಳ್ಳೆಯದು, ಸಮಯ ಎಲ್ಲರಿಗೂ ಪಾಠ ಕಲಿಸುತ್ತೆ.

-ವರುಣ ಭಟ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿಮಗೂ ಹೀಗೆ ಅನಿಸಿದೆಯೆ?
  • ಕಚೇರಿ ಎಂದರೆ ಸುಮ್ಮನೇನಾ?
  • ಕಚೇರಿ ಎಂದರೆ ಸುಮ್ಮನೇನಾ?
  • ಕನಸು ಭವಿಷ್ಯದ ಸೂಚಕ ಖಂಡಿತಾ ಹೌದು
  • ಅಸೂಯೆ ಎಂಬ ತಡೆಗೋಡೆ...
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ನ್ಯೂಸ್‌ ಎಡಿಟರ್‍ ಎಂದು ಕೆಲಸ ಮಾಡುತ್ತಿದ್ದೇನೆ. ಬರವಣಿಗೆ ಇಷ್ಟದ ಕೆಲಸ.
See my blog: http://chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 16 ಅತಿಥಿಗಳು ಆನ್ಲೈನ್ ಇರುವರು.


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.

— ಹಿತೋಪದೇಶ, ಸುಹೃದ್ಭೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator