ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ನ್ಯಾನೊ ಮತ್ತು ವೈಚಾರಿಕ ಸಣ್ಣತನ

April 6, 2008 - 5:03pm — Chamaraj

ಬಹುತೇಕ ಭಾರತೀಯರ ಸಂಕುಚಿತ ಮನಃಸ್ಥಿತಿಯನ್ನು ಎರಡು ಪ್ರಮುಖ ಬೆಳವಣಿಗೆಗಳು ಬಹಿರಂಗಪಡಿಸಿವೆ.

ಮೊದಲನೆಯದು, ಕಳೆದ ಒಂದೆರಡು ತಿಂಗಳುಗಳಿಂದ ನಡೆದಿರುವ ಉಡುಪಿ ಪರ್ಯಾಯ ವಿವಾದ. ಎರಡನೆಯದು, ವಾರಾಂತ್ಯದಲ್ಲಿ ಪ್ರದರ್ಶಿಸಲ್ಪಟ್ಟ ಜಗತ್ತಿನ ಅತಿ ಕಡಿಮೆ ಬೆಲೆಯ ಕಾರು ’ನ್ಯಾನೊ’.

ಪರ್ಯಾಯ ಪೀಠ, ಕೃಷ್ಣ ಪೂಜೆ ಹಾಗೂ ಪುತ್ತಿಗೆ ಶ್ರೀಗಳ ವಿದೇಶಿ ಪಯಣದ ಕಥೆಯನ್ನು ಓದುತ್ತಿದ್ದರೆ ನಗೆ ಬರುತ್ತದೆ, ವಿಷಾದವೂ ಆಗುತ್ತದೆ. ಏಕೆಂದರೆ, ಕೃಷ್ಣ ಅತ್ಯಂತ ಮುಕ್ತ ಮನಸ್ಸಿನಿಂದ ಬದುಕಿದ ವ್ಯಕ್ತಿ. ಜೀವನ ಪ್ರೀತಿಯನ್ನು ಕಡೆತನಕ ಉಳಿಸಿಕೊಂಡು ಬಂದ ವ್ಯಕ್ತಿ. ಯಾವ ಪಾರಂಪರಿಕ ಕಟ್ಟುಪಾಡುಗಳಿಗೂ ಬಂಧಿಯಾಗದೆ, ತನ್ನ ಕಾಲದ ಎಲ್ಲ ಮೂಢ ನಂಬಿಕೆಗಳನ್ನು ಹಾಗೂ ಆಷಾಡಭೂತಿತನ (ಹಿಪೊಕ್ರಸಿ)ವನ್ನು ವಿರೋಧಿಸಿದ್ದ ವ್ಯಕ್ತಿ ಆತ. ಎಲ್ಲರ ನಂಬಿಕೆಗೆ ವಿರುದ್ಧವಾಗಿ, ಎಲ್ಲರ ಕನಸುಗಳಿಗೆ ವ್ಯತಿರಿಕ್ತವಾಗಿ ನಡೆದುಕೊಂಡ ಈ ಅಪರೂಪದ ವ್ಯಕ್ತಿಯ ಪೂಜೆಯ ಹೆಸರಿನಲ್ಲಿ ನಮ್ಮ ಧಾರ್ಮಿಕ ಹಿರಿ ತಲೆಗಳು ಮಾಡುತ್ತಿರುವುದಾದರೂ ಏನು?

ಕೃಷ್ಣ ಪಂಥ ಸಾವಿರಾರು ವರ್ಷಗಳ ಹಿಂದೆಯೇ ಸಾಗರ ದಾಟಿತ್ತು. ಆಧುನಿಕ ಕಾಲದಲ್ಲಿ ಇಸ್ಕಾನ್ ಆ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದೆ. ಧಾರ್ಮಿಕ ನಂಬಿಕೆಗಳಿಗೆ ದೇಶಗಳ, ನದಿ-ಕಡಲುಗಳ ಗಡಿಗಳು ಇರುವುದಿಲ್ಲ. ಒಂದು ವೇಳೆ ಅಂತಹ ಕಟ್ಟುಪಾಡುಗಳಡಿ ಯಾವುದಾದರೂ ಧರ್ಮ ಅಥವಾ ನಂಬಿಕೆ ಸಿಕ್ಕಿಕೊಂಡಿದ್ದರೆ, ಅದು ಖಂಡಿತ ಧರ್ಮವಲ್ಲ.

ಹೀಗಿದ್ದರೂ, ಉಡುಪಿ ಅಷ್ಟಮಠಗಳ ಬಹುತೇಕ ಶ್ರೀಗಳು ಯಾವುದೇ ನೆಲೆಗಟ್ಟಿಲ್ಲದ, ತರ್ಕಬದ್ಧವಲ್ಲದ ನಂಬಿಕೆಗೆ ಜೋತು ಬಿದ್ದು, ತಮ್ಮದೇ ಪಂಥದ ವ್ಯಕ್ತಿಯ ಸಹಜ ಹಕ್ಕನ್ನು ಕಸಿದುಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಪೇಜಾವರ ಶ್ರೀಗಳಂತಹ ಧಾರ್ಮಿಕ ರಾಜಕಾರಣಿಗಳು ಕೈಜೋಡಿಸಿದ್ದಾರೆ. ವಿವಾದಗಳಿದ್ದಲ್ಲಿ ಸಾಮಾನ್ಯವಾಗಿ ಚಿದಾನಂದಮೂರ್ತಿಗಳು, ಚಂಪಾ-ವಾಟಾಳ್-ಪಾಟೀಲ ಪುಟ್ಟಪ್ಪರಂಥವರು ಇದ್ದೇ ಇರುತ್ತಾರೆ. ಆದರೆ, ಈಗ ಆ ಸಾಲಿಗೆ ಪೇಜಾವರ ಶ್ರೀಗಳೂ ಸೇರಿದ್ದು ವಿಷಾದಕರ.

ನಮಗೆ ಕೃಷ್ಣನ ಸಂದೇಶ ಮುಖ್ಯವೇ, ಆತನನ್ನು ಪೂಜಿಸುವ ವಿಧಿ-ವಿಧಾನಗಳು ಮುಖ್ಯವೆ? ’ಪತ್ರಂ ಪುಷ್ಪಂ ಫಲಂ ತೋಯಂ...’ ಎಂದಿದ್ದಾನೆ ಕೃಷ್ಣ ಗೀತೆಯಲ್ಲಿ. ಎಲೆ, ಹೂ, ಹಣ್ಣು- ಹೀಗೆ ಯಾವುದನ್ನು ನನಗೆ ಅರ್ಪಿಸಿದರೂ ಅದು ಪ್ರಿಯವೇ. ಎಲ್ಲಕ್ಕಿಂತ ಪ್ರಿಯ ಭಕ್ತಿ ತುಂಬಿದ ಪ್ರಾರ್ಥನೆ’ ಎಂದು ಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದನ್ನು ಅಷ್ಟಮಠಗಳ ನಾಯಕರು, ಅವರ ನಂಬಿಕೆಗಳನ್ನು ಬೆಂಬಲಿಸುವ ಕುರುಡು ಮನಸ್ಸುಗಳು ಎಂದಾದರೂ ಅರ್ಥ ಮಾಡಿಕೊಳ್ಳುವುದು ಸಾಧ್ಯವೆ?

******

ಎರಡನೆಯದು, ಟಾಟಾ ಮೋಟಾರ್ಸ್ ಬಿಡುಗಡೆ ಮಾಡಿರುವ ೧ ಲಕ್ಷ ರೂಪಾಯಿ ಬೆಲೆಯ ನ್ಯಾನೊ ಕಾರಿನ ಬಗ್ಗೆ.
ಮಾಧ್ಯಮದಲ್ಲಿ ಕಾರಿನ ಭರಾಟೆಯಂತೂ ಜೋರಾಗಿಯೇ ಇದೆ. ವಾದ-ಪ್ರತಿವಾದಗಳೂ ಕೇಳಿ ಬಂದಿವೆ. ಅವುಗಳ ಪೈಕಿ ನನ್ನ ಗಮನ ಸೆಳೆದ ಒಂದೆರಡು ವಾದಗಳ ಬಗ್ಗೆ ಇಲ್ಲಿ ಪ್ರಸ್ತಾಪಿಸುತ್ತೇನೆ.

ಒಬ್ಬ ಮಹನೀಯರು, ’ಟಾಟಾ ಮಾಡಿದ್ದು ಒಂದಿಷ್ಟೂ ಸರಿಯಿಲ್ಲ. ಕಡಿಮೆ ವೆಚ್ಚೆದಲ್ಲಿ ಕಾರು ದೊರೆಯುವಂತಾದರೆ ಮೊದಲೇ ಗಿಜಿಗುಟ್ಟುತ್ತಿರುವ ಭಾರತದ ರಸ್ತೆಗಳು ಉಸಿರುಕಟ್ಟುವಂತಾಗುತ್ತವೆ. ವಾಯು ಮಾಲಿನ್ಯ ಹೆಚ್ಚುತ್ತದೆ. ಸಹಾಯಧನದ ಮರ್ಜಿಯಲ್ಲಿರುವ ತೈಲೋತ್ಪನ್ನಗಳ ಆಮದು ಇನ್ನಷ್ಟು ಹೆಚ್ಚಿ, ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಉಂಟಾಗುತ್ತದ’ ಎಂದು ’ಟೈಮ್ಸ್ ಆಫ್ ಇಂಡಿಯಾ’ದಲ್ಲಿ ಹೇಳಿದ್ದಾರೆ.

ವಾರೆವ್ಹಾ ಆಷಾಡಭೂತಿತನವೇ!

ಹತ್ತಾರು ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ, ಬಡ ರೈತರಿಂದ ಭೂಮಿ ವಶಪಡಿಸಿಕೊಂಡು ವಿಮಾನ ನಿಲ್ದಾಣ ಮಾಡಿದರೆ ಈ ಮಹನೀಯರು ಅದನ್ನು ಪ್ರಗತಿ ಎಂದು ಬಣ್ಣಿಸುತ್ತಾರೆ. ರೈತನ ಭೂಮಿಯನ್ನು ಕ್ಷುಲ್ಲಕ ಬೆಲೆಗೆ ಕೊಂಡು ಐ.ಟಿ. ಕಂಪನಿ ಮಾಡಿದರೆ, ಅದನ್ನು ದೇಶ ಹೆಮ್ಮೆ ಪಡಬೇಕಾದ ಬೆಳವಣಿಗೆ ಎಂದು ಮೆಚ್ಚುತ್ತಾರೆ. ಆದರೆ, ಮಧ್ಯಮವರ್ಗದ ವ್ಯಕ್ತಿಯೊಬ್ಬ, ತನ್ನ ಬಜೆಟ್‌ಗೆ ನಿಲುಕುವ ಮಿತಿಯಲ್ಲಿ ಕಾರೇ ದೊರೆಯುತ್ತದೆ ಎಂದು ಸಂಭ್ರಮಿಸಿದರೆ, ಈ ವ್ಯಕ್ತಿಗೆ ಅದು ವಾತಾವರಣಕ್ಕೆ, ವಾಹನ ಸಂದಣಿಗೆ, ದೇಶದ ಕೀಸೆಗೆ ನುಗ್ಗಲು ಯತ್ನಿಸುತ್ತಿರುವ ಭೂತದಂತೆ ಕಾಣುತ್ತದೆ.

ನಿಜವಾದ ಆಷಾಡಭೂತಿತನ ಎಂದರೆ ಇದೇ ಇರಬೇಕು.

ಮಧ್ಯಮವರ್ಗದವರು, ಅವರಿಗಿಂತ ಕೆಳಗಿರುವವರು ಆರ್ಥಿಕವಾಗಿ ಮುಂದೆ ಬರಬಾರದು ಎಂಬ ಸಣ್ಣತನ ಬಿಟ್ಟರೆ ಈ ವಾದದಲ್ಲಿ ಮೆಚ್ಚುವಂಥದ್ದು ಏನೂ ಕಾಣುತ್ತಿಲ್ಲ. ಕೆಲವೇ ಕೆಲವು ಜನರು ಬಳಸುವ ವಿಮಾನ ನಿಲ್ದಾಣಕ್ಕೆ ಹತ್ತಾರು ಸಾವಿರ ಕೋಟಿ ರೂಪಾಯಿಗಳು, ಸಾವಿರಾರು ಎಕರೆ ಭೂಮಿ ಖರ್ಚಾದರೆ ಪರವಾಗಿಲ್ಲ. ಆದರೆ, ತನ್ನ ಮಿತಿಯಲ್ಲಿ ನಿಲುಕುವ ಒಂದು ಕಾರನ್ನು ಮಧ್ಯಮವರ್ಗದ ವ್ಯಕ್ತಿ ಖರೀದಿಸಲು ಉತ್ಸುಕನಾದರೆ, ಅದರ ಹಿಂದೆ ವಿನಾಶದ ಭೀತಿ ಕಾಣುತ್ತದೆ. ಅಡುಗೆ ಅನಿಲ ಖರೀದಿಸಲು ಶಕ್ತನಲ್ಲದ ವ್ಯಕ್ತಿ ಸೌದೆ ಉರಿ ಹಚ್ಚಿ ಅಡುಗೆ ಮಾಡಿದರೆ, ಅದನ್ನು ಪರಿಸರ ಮಾಲಿನ್ಯ ಕ್ರಮ ಎಂದು ಬಣ್ಣಿಸಿದಂತಿದೆ ಈ ಮಹನೀಯರ ವಾದ.

ಇದಕ್ಕೂ, ಅಷ್ಟಮಠಗಳ ಶ್ರೀಗಳು ಎಬ್ಬಿಸುತ್ತಿರುವ ವೈಚಾರಿಕ ಮಾಲಿನ್ಯಕ್ಕೂ ಏನೂ ವ್ಯತ್ಯಾಸವಿಲ್ಲ. ಎರಡೂ ಬೌದ್ಧಿಕ ಅಧಃಪತನದ ಸಂಕೇತಗಳೇ.

- ಚಾಮರಾಜ ಸವಡಿ

  • ಅನಿಸಿಕೆ
~.~
  • Chamaraj ರವರ ಬ್ಲಾಗ್
  • Login or register to post comments
  • 243 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 7, 2008 - 10:12am — varunbhatbm

ಉ: ನ್ಯಾನೊ ಮತ್ತು ವೈಚಾರಿಕ ಸಣ್ಣತನ

varunbhatbm's picture

ನ್ಯಾನೊವನ್ನು ವಿರೋಧಿಸುವವರಿಗೆ, ಮಧ್ಯಮ ವರ್ಗದವರು ಕಾರಲ್ಲಿ ಓಡಾಡುವುದು ಸಹಿಸೋಕೆ ಆಗೋದಿಲ್ಲ.
ಉತ್ತಮ ಲೇಖನ Smiling

-ವರುಣ ಭಟ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 8, 2008 - 2:23pm — madhava_hs

ಉ: ನ್ಯಾನೊ ಮತ್ತು ವೈಚಾರಿಕ ಸಣ್ಣತನ

madhava_hs's picture

Smiling
Smiling:-)
Smiling:-)Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 17, 2008 - 4:37pm — Chamaraj

ಉ: ನ್ಯಾನೊ ಮತ್ತು ವೈಚಾರಿಕ ಸಣ್ಣತನ

Chamaraj's picture

ಧನ್ಯವಾದ ವರುಣ
- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನ್ಯಾನೊ ಮತ್ತು ವೈಚಾರಿಕ ಸಣ್ಣತನ
  • ಜನರಿಗೆ ಬೇಡವಾದ ಬಡಾಯಿದಾಸ
  • ಜನರಿಗೆ ಬೇಡವಾದ ಬಡಾಯಿದಾಸ
  • ಅಸೂಯೆ ಎಂಬ ತಡೆಗೋಡೆ...
  • ಅಸೂಯೆ ಎಂಬ ತಡೆಗೋಡೆ...
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ನ್ಯೂಸ್‌ ಎಡಿಟರ್‍ ಎಂದು ಕೆಲಸ ಮಾಡುತ್ತಿದ್ದೇನೆ. ಬರವಣಿಗೆ ಇಷ್ಟದ ಕೆಲಸ.
See my blog: http://chamarajsavadi@blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 41 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator