ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ನುಡಿ ಚಿತ್ರ ಬರೆಯಲು ಕಲಿತಿದ್ದು

July 9, 2008 - 10:12am — Chamaraj

ಒಂದೆರಡು ಘಟನೆಗಳನ್ನು ಹೇಳುವ ಮೂಲಕ ವಿಷಯಕ್ಕೆ ಬರುವುದು ಸುಲಭ ಅನ್ನಿಸುತ್ತಿದೆ.

ಪತ್ರಿಕೋದ್ಯಮಕ್ಕೆ ಬಂದ ಪ್ರಾರಂಭಿಕ ದಿನಗಳವು. ಅಪರಾಧ ಸುದ್ದಿಯನ್ನು ಬರೆದು ಅನುಭವವಿದ್ದ ನನ್ನನ್ನು, ನುಡಿ ಚಿತ್ರದತ್ತ ಹೊರಳಿಸಲು ಮಿತ್ರ ಆನಂದತೀರ್ಥ ಪ್ಯಾಟಿ ಯತ್ನಿಸುತ್ತಿದ್ದರು.

ಆಗ ಕೊಪ್ಪಳ ಹೊಸ ಜಿಲ್ಲೆಯಾಗಿ ಉದಯಿಸಿತ್ತು. ಆದರೆ ಅಲ್ಲಿಯ ಹಳೆಯ ಸಮಸ್ಯೆಗಳು ಮಾತ್ರ ಹಾಗೇ ಉಳಿದಿದ್ದವು. ಓಡಾಡಲು ಸೈಕಲ್ ಕೂಡ ಇಲ್ಲದ ನಾನು ಮತ್ತು ಪ್ಯಾಟಿ ಸೇರಿಕೊಂಡು ಈ ಸಮಸ್ಯಾತ್ಮಕ ಊರಿನ ಕಲ್ಲು ಬೆಟ್ಟ, ಬೆಂಗಾಡಿನಂಥ ಪ್ರದೇಶಗಳಲ್ಲಿ ಅಲೆಯುತ್ತ, ಬರೆಯಲು ವಿಷಯಗಳನ್ನು ಹುಡುಕುತ್ತಿದ್ದೆವು.

’ಕ್ರೈಮ್ ಬರೀಬೇಕ್ರೀ ಆನಂದ್’ ಎಂದು ನಾನು ಒತ್ತಾಯಿಸುತ್ತಿದ್ದರೆ, ’ನಿಮ್ಮ ಬರವಣಿಗೆಗೆ ಫೀಚರ್ ರೈಟಿಂಗ್‌ಗೆ ಕೂಡ ಒಗ್ಗುತ್ತದೆ. ಪ್ರಯತ್ನಿಸಿ ನೋಡ್ರಿ’ ಎಂಬುದು ಅವರ ಆಗ್ರಹ. ಫೋಟೊ ಇಲ್ಲದೆ ಫೀಚರ್ ಬರೆಯುವುದು ಹೇಗೆ ಎಂಬ ಪ್ರಶ್ನೆ ಇಬ್ಬರನ್ನೂ ಕಾಡಿದಾಗ ದೊರೆತ ಇನ್ನೋರ್ವ ಮಿತ್ರ ಪ್ರಕಾಶ ಕಂದಕೂರ.

ಆಗ ಮಾರ್ಚ್ ಸಮಯ. ಕೊಪ್ಪಳದ ಕಲ್ಲುಬೆಟ್ಟಗಳು ಬಿಸಿಯಾಗಿ, ಸುತ್ತಲಿನ ಖಾಲಿ ಹೊಲಗಳು ಬಿಸಿಯುಸಿರು ಬಿಡುತ್ತ, ಊರಿನ ಸಣ್ಣ ಕಿಟಕಿಗಳ ಮನೆಗಳನ್ನು ಇಡ್ಲಿ ಪಾತ್ರೆಯಂತೆ ಕಾಯಿಸುತ್ತಿದ್ದವು. ಅಂಥ ಕೆಟ್ಟ, ರಣ ರಣ ಬಿಸಿಲಿನಲ್ಲಿ, ಗಾಳಿ ಕೂಡ ಸರಿಯಾಗಿ ಹಾಕಿರದ ಎರಡು ಸೈಕಲ್‌ಗಳ ಮೇಲೆ ಯಾತ್ರೆ ಹೋಗುತ್ತಿದ್ದ ನಮ್ಮನ್ನು ನೋಡಿ ಮರುಗುತ್ತಿದ್ದ ಸಮಕಾಲೀನ ಪತ್ರಕರ್ತರು, ನಮಗೆ ಹುಚ್ಚು ಹಿಡಿದಿದೆ ಎಂದು ಒಮ್ಮತದ ತೀರ್ಮಾನಕ್ಕೆ ಬಂದಿದ್ದರು.

ಹಾಗೆ ಪ್ರಾರಂಭವಾದ ನಮ್ಮ ಮೊದಲ ಯಾತ್ರೆ ಸಾಗಿದ್ದು ಊರಿನ ಪಕ್ಕದಲ್ಲಿಯೇ ಇದ್ದ ಮಳೆಮಲ್ಲಪ್ಪನ ಬೆಟ್ಟದತ್ತ. ಇಲ್ಲಿಯ ಭೂಗರ್ಭದ ಕಿಂಡಿಯೊಂದರಿಂದ ವರ್ಷ ಪೂರ್ತಿ ನೀರು ಬರುತ್ತಿರುತ್ತದೆ. ಅಲ್ಲೇನಾದರೂ ಬರೆಯಲು ಸಿಗಬಹುದೆ ಎಂದು ಹುಡುಕಲು ಮಟಮಟ ಮಧ್ಯಾಹ್ನದಲ್ಲಿ ನಮ್ಮ ಯಾತ್ರೆ ಅತ್ತ ಸಾಗಿತು.

ಸೈಕಲ್ ತುಳಿದು ಏದುಸಿರು ಬಿಡುತ್ತಿದ್ದ ನಾವು, ಕಿಂಡಿಯಿಂದ ಬರುತ್ತಿದ್ದ ನೀರು ಕುಡಿದು ದಣಿವಾರಿಸಿಕೊಳ್ಳಲು ಕಾಲುವೆ ಪಕ್ಕ ಕೂತೆವು. ಆಗ ’ಅದು’ ಕಣ್ಣಿಗೆ ಬಿತ್ತು.

ಕಾಲುವೆ ಒಳಗೆ ಹರಿಯುತ್ತಿದ್ದ ನೀರೊಳಗಿಂದ ಜೀವಿಯೊಂದು ಇಣುಕಿ ನೋಡುತ್ತಿತ್ತು. ನೆರಳಿನಲ್ಲಿ ಇತ್ತಾದ್ದರಿಂದ ಅದರ ವಿವರ ತಕ್ಷಣಕ್ಕೆ ಗೋಚರವಾಗಲಿಲ್ಲ. ಸೂಕ್ಷ್ಮವಾಗಿ ಗಮನಿಸಿದಾಗ, ಸೀಳು ನಾಲಗೆ ಕಾಣಿಸಿತು.

ಸೈಕಲ್ ಬಾರ್ ಗಾತ್ರದ ನಾಗರ ಹಾವು ಅದು. ನಮಗೆ ಅದರ ಮುಖ ಹಾಗೂ ಕುತ್ತಿಗೆಯ ಭಾಗವಷ್ಟೇ ಕಾಣುತ್ತಿತ್ತು. ಇಡೀ ದೇಹ, ಕಾಲುವೆಯ ಕಿಂಡಿಯಲ್ಲಿ ಮರೆಯಾಗಿತ್ತು. ಪ್ರಾರಂಭದಲ್ಲಿ ರೋಮಾಂಚನಗೊಂಡ ನಾವು ’ಹುಶ್, ಹುಶ್’ ಎಂದು ಅದರ ಗಮನ ಸೆಳೆಯಲು ಯತ್ನಿಸಿದೆವು.
ಆದರೆ ನಮ್ಮ ಇಷಾರೆಗಳನ್ನು ಅಲಕ್ಷಿಸಿ, ಹಾವು ತನ್ನ ನಾಲಗೆ ಚಲನೆಯನ್ನು ಮುಂದುವರೆಸಿತು. ಅಷ್ಟೊತ್ತಿಗೆ ಕ್ಯಾಮರಾಕ್ಕೆ ಫ್ಲ್ಯಾಷ್ ಜೋಡಿಸಿಕೊಂಡು ಸಿದ್ಧವಾಗಿದ್ದ ಛಾಯಾಗ್ರಾಹಕ ಮಿತ್ರ ಪ್ರಕಾಶ ಕಂದಕೂರ, ಫೋಟೊ ತೆಗೆಯಲು ಹವಣಿಸುತ್ತಿದ್ದರು.

ಹರಿಯುತ್ತಿರುವ ನೀರಿನ ಕೆಳಗಿದ್ದ ಮುಂಗೈ ಉದ್ದದ ನಾಗರಹಾವಿನ ಮುಖದ ಚಿತ್ರವನ್ನು ನಾಲಗೆ ಸಮೇತ ತೆಗೆಯಬೇಕೆಂದು ಪ್ರಕಾಶ್‌ಗೆ ಸೂಚಿಸಿದೆವು. ಆಗಿನ್ನೂ ಡಿಜಿಟಲ್ ಕ್ಯಾಮೆರಾಗಳು ಬಂದಿದ್ದಿಲ್ಲ. ಹೀಗಾಗಿ, ಫಿಲ್ಮ್ ಕ್ಯಾಮೆರಾದಲ್ಲಿಯೇ ಮೂರ್‍ನಾಲ್ಕು ಚಿತ್ರಗಳನ್ನು ತೆಗೆದರು ಪ್ರಕಾಶ. ಎರಡು ಚೆನ್ನಾಗಿ ಬಂದಿವೆ ಎಂಬ ತೃಪ್ತಿಯನ್ನೂ ವ್ಯಕ್ತಪಡಿಸಿದರು.

’ಕೆಲಸವಾಯಿತು, ಇನ್ನು ಕೋಲೊಂದನ್ನು ತೆಗೆದುಕೊಂಡು ನಾಗರಹಾವನ್ನು ಕೆಣಕೋಣ’ ಎಂಬ ಧೂರ್ತ ವಿಚಾರ ನಮಗೆ ಬಂದಿತು. ನಾವು ಫೋಟೊ ತೆಗೆಯುತ್ತಿದ್ದುದನ್ನು ನೋಡಿದ ಕೆಲವರು ಹತ್ತಿರ ಬಂದು, ನಮ್ಮ ವಿಚಾರವನ್ನು ಪ್ರಚೋದಿಸಿದರು. ಕೋಲೊಂದನ್ನು ಹುಡುಕಿಕೊಂಡು ಬಂದ ಉತ್ಸಾಹಿಯೊಬ್ಬ ಹಾವೆಲ್ಲಿದೆ ಎಂದು ಕೇಳಿದ. ಅಷ್ಟರೊಳಗೆ, ಅಪಾಯ ಗ್ರಹಿಸಿದ್ದ ಹಾವು ಪರಾರಿಯಾಗಿತ್ತು. ’ಮಗಂದು, ಫೊಟೊ ತೆಗೆಸಿಕೊಳ್ಳಲು ಬಂದಿತ್ತು ಅಂತ ಕಾಣುತ್ತದೆ’ ಎಂದು ತಮಾಷೆ ಮಾಡಿಕೊಂಡು ನಾವು ಲಟಕಾ ಸೈಕಲ್‌ಗಳಲ್ಲಿ ಹಿಂತಿರುಗಿದೆವು.

ಅವತ್ತೇ ರೀಲ್ ಕತ್ತರಿಸಿ, ಪ್ರಿಂಟ್‌ಗೆ ಹುಬ್ಬಳ್ಳಿಗೆ ಕಳಿಸಲಾಯಿತು. ಅದು ಬರಲು ಮೂರು ದಿನಗಳೇ ಹಿಡಿದವು. ಆದರೆ, ಫೋಟೊಗಳು ಪ್ರಿಂಟಾಗಿ ಬಂದಾಗ ನಾವು ಕುಣಿದಾಡುವುದೊಂದೇ ಬಾಕಿ. ಲಟಕಾ ಸೈಕಲ್‌ನಲ್ಲಿ ನಮ್ಮನ್ನು ಹೇರಿಕೊಂಡು ಹೋಗಿದ್ದಲ್ಲದೇ, ಮೂರು ಉತ್ತಮ ಫೋಟೊಗಳನ್ನು ಉದ್ರಿಯಾಗಿ ತೆಗೆದುಕೊಟ್ಟಿದ್ದರು ಪ್ರಕಾಶ ಕಂದಕೂರ. ’ಪ್ರಜಾವಾಣಿ’ಯ ’ನಾಡು-ನುಡಿ’ ಅಂಕಣಕ್ಕೆ ಬರೆಯಲು ಜಂಟಿಯಾಗಿ ನಿರ್ಧರಿಸಲಾಯಿತು. ಆದರೆ, ಅದನ್ನು ನಾನೇ ಬರೆಯಬೇಕೆಂದು ಬಲವಾಗಿ ಆಗ್ರಹಿಸಿದವರು ಆನಂದ.

’ಅಪರಾಧ ಸುದ್ದಿ’ಗಳ ಹೊರತಾಗಿ ನಾನು ಬರೆದ ಮೊದಲ ಲೇಖನ ಈ ಹಾವಿನದು. ’ನಿರ್ಲಿಪ್ತ ನಾಗರ’ ಶೀರ್ಷಿಕೆಯಲ್ಲಿ ಮರುವಾರವೇ ಅದು ಅಚ್ಚಾಗಿ ಬಂದಾಗ ನಮ್ಮ ಖುಷಿಗೆ ಪಾರವೇ ಇದ್ದಿಲ್ಲ. ನಮ್ಮ ಲಟಕಾ ಸೈಕಲ್‌ಗಳು ರಭಸದಿಂದ ಊರು ಸುತ್ತತೊಡಗಿದವು. ಕಂಡಿದ್ದನ್ನೆಲ್ಲ ಬರವಣಿಗೆಗೆ ಇಳಿಸುವ ಹುಚ್ಚು ಏರಿತು. ಪ್ರಕಾಶ್ ಕೂಡ ಕ್ಯಾಮೆರಾ ಹಿಡಿದು ನಮ್ಮೊಂದಿಗೆ ಹೊರಟಿದ್ದನ್ನು ನೋಡಿದವರು, ’ದುಡಿದು ತಿಂದುಕೊಂಡಿದ್ದ ಹುಡುಗನನ್ನು ಇವರಿಬ್ಬರೂ ಹಾಳು ಮಾಡುತ್ತಿದ್ದಾರಲ್ಲಾ...’ ಎಂದು ಬಹಿರಂಗವಾಗಿ ವಿಷಾದಿಸಿದ್ದರು.

ಹಾಗೆ ಶುರುವಾದ ನಮ್ಮ ನುಡಿ-ಚಿತ್ರದ ಹುಚ್ಚು ಕಳೆದ ಹತ್ತು ವರ್ಷಗಳಿಂದ ಅಬಾಧಿತವಾಗಿ ಮುಂದುವರೆಯುತ್ತಿದೆ. ನೂರಾರು ವಿಷಯಗಳ ಮೇಲೆ, ನೂರಾರು ಲೇಖನಗಳನ್ನು ಆನಂದ ಮತ್ತು ನಾನು ಬರೆದಿದ್ದೇವೆ. ಸಾವಿರಾರು ಫೊಟೊಗಳನ್ನು ಪ್ರಕಾಶ ತೆಗೆದುಕೊಟ್ಟಿದ್ದಾರೆ. ಈ ಅವಧಿಯಲ್ಲಿ ನಮ್ಮ ಹುಚ್ಚಿಗೆ ಹೊಸ ಆಯಾಮಗಳು ಸೇರಿಕೊಂಡಿವೆ. ವ್ಯಾಪ್ತಿ ವಿಸ್ತಾರವಾಗಿದೆ. ಡಿಜಿಟಲ್ ತಂತ್ರಜ್ಞಾನ ಆಸರೆಗೆ ನಿಂತಿದೆ. ನಮ್ಮ ಕ್ಯಾನ್ವಾಸ್ ವಿಶಾಲವಾಗಿದೆ. ಅಷ್ಟೇ ಅಲ್ಲ, ದಿನದಿಂದ ದಿನಕ್ಕೆ ಅದು ವಿಸ್ತರಿಸುತ್ತಲೇ ಇದೆ.

ಈಗ ಸಂಪದ ಅದಕ್ಕೊಂದು ಜಾಗತಿಕ ವಿಸ್ತರಣೆಯಾಗಿ ದೊರೆತಿದೆ. ಮತ್ತಿಷ್ಟು ನುಡಿಚಿತ್ರಗಳನ್ನು ಬರೆಯಲು ಮನಸ್ಸು ಹಾತೊರೆಯುತ್ತಿದೆ.

- ಚಾಮರಾಜ ಸವಡಿ

  • ಕೊಪ್ಪಳ
  • ನುಡಿಚಿತ್ರ
  • ಬರವಣಿಗೆ
~.~
  • Chamaraj ರವರ ಬ್ಲಾಗ್
  • Login or register to post comments
  • 212 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಸಬ್ಮೆರೀನ್ ಯಾತ್ರೆಯ ಮೊದಲು, ನಮಗೆ ಕಾಣಿಸುವ ಹಳದಿ ಫಲಕ !
  • ಕೊಪ್ಪಳಕ್ಕೆ ಬರುವವರು ದೊಣ್ಣೆ ತನ್ನಿ!
  • ಹೀಗೇ ಎಂದು ಬರಿ
  • ಅಂಗೈಯಲ್ಲಿ ಅರಮನೆ
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • manjunath s reddy
    ಉ: ಹೀಗೊಂದು ಘಟನೆ
    January 10, 2009 - 8:32am
  • manjunath s reddy
    ಉ: ನಾವು ಅದೆಷ್ಟು ಬಡವರು!
    January 10, 2009 - 8:25am
  • manjunath s reddy
    ಉ: ಯಾವುದು ಬೇಕು?
    January 10, 2009 - 8:20am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:11am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 8:07am
  • JAYADEV
    ಉ: ಯಾವುದು ಬೇಕು?
    January 10, 2009 - 8:05am
  • JAYADEV
    ಉ: ಮನೆಗೆ ಬಂದದ್ದು: ಕಾಫ್ಕಾ ಕಥೆ
    January 10, 2009 - 8:03am
  • anivaasi
    ಉ: ನಾವು ಅದೆಷ್ಟು ಬಡವರು!
    January 10, 2009 - 8:01am
  • mahesha
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:54am
  • venkatesh
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 7:48am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 208 ಅತಿಥಿಗಳು ಆನ್ಲೈನ್ ಇರುವರು.


ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator