ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › Ennares ರವರ ಬ್ಲಾಗ್

ಜೀವನ ರಹಸ್ಯ

October 1, 2007 - 12:49pm — Ennares

( ಯಾರಿಂದಲೋ ಕೇಳಿ ತಿಳಿದದ್ದು. )

ಭಗವಂತ ಬ್ರಹ್ಮಾಂಡವನ್ನು ಸೃಷ್ಟಿ ಮಾಡಿದ ನಂತರ ಮಾಡಿದ ಮೊದಲ ಕೆಲಸ ನಾಲ್ಕು ಚರಾಚರ ಪ್ರಾಣಿಗಳನ್ನು ಸೃಷ್ಟಿಸಿದ್ದಂತೆ. ಅವೆಂದರೆ - ಮನುಷ್ಯ; ಕತ್ತೆ: ನಾಯಿ ಮತ್ತು ಎರೆಹುಳ. ಇವೆಲ್ಲದರಲ್ಲೂ ಮನುಷ್ಯನೊಬ್ಬನಿಗೆ ಮಾತ್ರ ಯೊಚನಾಶಕ್ತಿಯಿರುವ (ವಿಪರೀತ!!) ಮಿದುಳಿತ್ತು.

ಎಷ್ಟಾದರೂ ಭಗವಂತನಲ್ಲವೇ! ನಿಷ್ಪಕ್ಷಪಾತಿ! ಎಲ್ಲರಿಗೂ ಕೇವಲ ನಲವತ್ತು ವರುಷಗಳ ಆಯುಸ್ಸು ಕೊಟ್ಟನಂತೆ. ಎಲ್ಲರೂ ಈ ನಿರ್ಣಯವನ್ನು ಒಪ್ಪಿಕೊಂಡರಾದರೂ, ಬುಧ್ಧಿ ಜಾಸ್ತಿಯಿರುವ ಮನುಷ್ಯನಿಗೆ ತೃಪ್ತಿಯಗಲಿಲ್ಲ. ತನಗಿರುವ ಬುಧ್ಧಿ ಮತ್ತು ಚಾಲಾಕಿ ಉಪಯೋಗಿಸುವ ಹಂಚಿಕೆ ಹಾಕಿ, ಬೇರೆ ಪ್ರಾಣಿಗಳ ಆಯುಸ್ಸಿನ ಸ್ವಲ್ಪ ಭಾಗವನ್ನು ಒತ್ತುವರಿ ಮಾಡಲೆತ್ನಿಸಿದ.

ಮೊದಲಿಗೆ ಅವನು ಕತ್ತೆಯನ್ನು ಬಳಿಗೆ ಕರೆದು, ಅದರ ಬೆನ್ಸವರಿ, “ ಅಯ್ಯಾ ಕತ್ತೆ, ಎಂತಹುದಯ್ಯಾ ನಿನ್ನ ಜೀವನ! ಎಲ್ಲರ ಕೈಯಲ್ಲಿ ಭಾರ ಹೊರಸಿಕೊಂಡು, ತಿಪ್ಪೆಯಲ್ಲಿ ಬಿದ್ದಿದ್ದು, ಕಸ ಕಡ್ಡಿ ತಿಂದುಕೊಂಡು, ಮೈಮುರಿಸಿಕೊಳ್ಳುವ ಹಾಗೆ ಹೊಡಿಸಿಕೊಂಡು, ಎಲ್ಲರ ತಿರಸ್ಕಾರಕ್ಕೂ ಪಾತ್ರವಾಗುತ್ತೀಯಲ್ಲ.! ನಲವತ್ತು ವರ್ಷ ಹೀಗೇಕೆ ಬದುಕಬೇಕು? ನನಗಾದರೋ ಬುಧ್ಧಿ ಇದೆ. ಅದನ್ನು ಉಪಯೋಗಿಸಿಕೊಂಡು ಜೀವನವನ್ನು ಸ್ವಲ್ಪ ಸುಖವಾಗಿಸಬಲ್ಲೆ. ನಿನ್ನ ಅರ್ಧ ಆಯುಸ್ಸನ್ನು ನನಗೇಕೆ ಕೊಡಬಾರದು ? “ ಅಂತ ಪುಸಲಾಯಿಸಿ, ಅದರ ಇಪ್ಪತ್ತು ವರ್ಷ ಆಯುಸ್ಸನ್ನು ತನಗೆ ಸೇರಿಸಿಕೊಂಡ.

ಆಮೇಲೆ ನಾಯಿಯನ್ನು ಕರೆದು, “ ಎಲೇ ನಾಯಿ, ಎಲ್ಲರ ಎಂಜಲು ತಿಂದುಕೊಂಡು, ಎಲ್ಲರ ಬಳಿ ಒದಿಸಿಕೊಂಡು, ಕುಯ್ಯೋ ಮರ್ರೋ ಅಂತ ಗೋಳಾಡುತ್ತ, ಬೇರೆ ನಾಯಿಗಳ ಸಂಗಡ ಕಚ್ಚಾಡಿಕೊಂಡು, ಬೊಗಳಿಕೊಂಡೂ ಅದೆಷ್ಟು ಸುಖ ಪಡುತ್ತೀಯೋ ನಾ ಬೇರೆ ಕಾಣೆ ! ನಿನಗೇಕೆ ನಲವತ್ತು. ನನಗೆ ಕೊಡು ಅದರಲ್ಲರ್ಧ ಇಪ್ಪತ್ತು” ಎಂದು ಪ್ರೇರೇಪಿಸಿದ. ಪೆದ್ದ ನಾಯಿ ಅವನ ಮಾತಿಗೆ ಮರುಳಾಗಿ, ತನ್ನ ಇಪ್ಪತ್ತು ವರ್ಷ ಆಯುಸ್ಸನ್ನು ಮನುಷ್ಯನಿಗೆ ಕೊಟ್ಟಿತು.

ಕತ್ತೆ ಮತ್ತು ನಾಯಿಗಳೇ ಮನುಷ್ಯನ ಮಾತಿನ ಮೋಡಿಗೆ ಮರುಳಾದ ಮೇಲೆ ಎರೆ ಹುಳದ ಸಾಸಿವೆ ಗಾತ್ರದ ಮಿದುಳದೆಷ್ಟುತಾನೆ ತಡೆದೀತು. ಅದರ ಇಪ್ಪತ್ತು ವರ್ಷ ಅಯುಸ್ಸನ್ನು ತನಗೆ ಜೋಡಿಸ್ಕೊಂಡ ಆ ಪಾಕಡಾ ಮನುಷ್ಯ. ಹೀಗೆ ತನ್ನದೇ ಆದ ನಲವತ್ತಕ್ಕೆ ಎರವಲು ಪಡೆದ ಅರವತ್ತನ್ನು ಜೋಡಿಸಿಕೊಂಡು ಮನುಷ್ಯನ ಅಯುಸ್ಸು ನೂರಾಯಿತಂತೆ.

ಅಂದಿನಿಂದ ಮನುಷ್ಯ ಮೊದಲ ನಲವತ್ತು ವರ್ಷ ಗಳ ಕಾಲ , ತಂದೆ ತಾಯಿಗಳಿಗೆ ವಿಧೇಯನಾಗಿದ್ದು, ಉತ್ತಮ ವಿದ್ಯಾಭ್ಯಾಸ ಪಡೆದು , ಕೆಲಸ ಹಿಡಿದು, ಮದುವೆಯಾಗಿ ಮನುಷ್ಯನಂತೆ ಜೀವಿಸುತ್ತಾನಂತೆ.

ನಲವತ್ತರಿಂದ ಅರವತ್ತರವರೆಗೆ, ಮಕ್ಕಳ ಮತ್ತು ಹೆಂಡತಿಯ ಸುಖಕ್ಕಾಗಿ ಹೆಣಗಿ, ಸಾಲ ಸೋಲ ಮಾಡಿಯಾದರೂ ಮಕ್ಕಳ ಮದುವೆ, ಮನೆ ಮಠ ಮಾಡಿಕೊಳ್ಳುವ ಸಲುವಾಗಿ ಕತ್ತೆಯಂತೆ ದುಡಿಯುತ್ತಾನಂತೆ.

ಆರವತ್ತಕ್ಕೂ ಹೆಚ್ಚು ವರ್ಷ ಬದುಕಿದ್ದರೆ, ನಿವೃತ್ತನಾಗಿದ್ದು, ಮನೆಯಲ್ಲಿ ತನ್ನ ಅಂತಸ್ತು ಬದಲಾಗಿರುವ ಅರಿವಿಲ್ಲದೆಯೇ, ತಾನಿನ್ನೂ ಮನೆಯ ಯಜಮಾನ, ತನ್ನ ಹೆಂಡತಿ ಮತ್ತು ಮಕ್ಕಳಿಗೆ ತಾನಿನ್ನೂ ಬೇಕಾದವ ಎಂಬ ಭ್ರಮೆಯಲ್ಲಿದ್ದುಕೊಂಡು, ತನ್ನ ಮಾತುಗಳನ್ನು ಯಾರೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂಬ ಜ್ನಾನವೂ ಇಲ್ಲದೆ ನಾಯಿಯಂತೆ ಬೊಗಳಿಕೊಂಡು ಜೀವಿಸುತ್ತಾನಂತೆ.

ಇನ್ನು ಎಂಭತ್ತಕ್ಕೂ ಹೆಚ್ಚು ವರ್ಷ ಬದುಕಿದನೋ, ಆ ವೇಳೆಗಾಗಲೇ ತಾನೇನು, ತನ್ನ ಅಂತಸ್ತು ಮತ್ತು ಯೋಗ್ಯತೆಯೇನು ಎಂಬ ಜ್ನಾನೋದಯವಾಗಿ ಎರೆ ಹುಳ ತನ್ನ ತಲೆಯನ್ನು ಮಣ್ಣೊಳಗೆ ಹುದುಗಿಕೊಂಡಿರುವ ಹಾಗೆ ಮುಳು ಮುಳು ಎಂದುಕೊಂಡು ಬದುಕಿರುತ್ತಾನಂತೆ.

**********************************

< ಮೇಲಿನ ಲೇಖನ ಮೊದಲೊಮ್ಮೆ ourkarnataka.com ನಲ್ಲಿ ಪ್ರಕಟವಾಗಿತ್ತು>

  • ಜೀವನದ ಕೆಲವು ಸಂದೇಶಗಳು
~.~
  • Ennares ರವರ ಬ್ಲಾಗ್
  • Login or register to post comments
  • 357 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಒಂದು ಕಥೆ, ಒಂದುವ್ಯಥೆ
  • ವಾನಪ್ರಸ್ಥ
  • ಮುಲ್ಲಾ ಕತೆ: ೩: ಆಚೆ ಈಚೆ ೪: ಒಂಟೆ ೫: ಕತ್ತೆ ಮನುಷ್ಯ
  • ಹತ್ತು ಹತ್ತು ಇಪ್ಪತ್ತು...
  • ಝೆನ್ ಕತೆ ೧೪ ಪ್ರತಿ ಕ್ಷಣ ಝೆನ್
Syndicate content

ಲೇಖಕರು

Ennares's picture

ಪೂರ್ಣ ಹೆಸರು
ನವರತ್ನ ಸುಧೀರ್

ಪರಿಚಯ

ನಿವೃತ್ತ ಲೋಹಶಾಸ್ತ್ರಜ್ನ. ಹಿಂದೂಸ್ತಾನಿ ಸಂಗೀತ ಕೇಳುವ, ಪುಸ್ತಕ ಓದುವ, ಬ್ಲಾಗಿಸುವ ಹವ್ಯಾಸ. ನಾಟಕದ ಗೀಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 43 ಅತಿಥಿಗಳು ಆನ್ಲೈನ್ ಇರುವರು.


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator