ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › Ennares ರವರ ಬ್ಲಾಗ್

ಹನುಮಾನ್ - ಹಿಂದುವೋ? ಮುಸಲ್ಮಾನನೋ?

October 1, 2007 - 2:30pm — Ennares

(ಮೂಲ: ಎಲ್ಲಿಯೋ ಕೇಳಿದ್ದು.)

ನಿನ್ನೆ ಮೊನ್ನೆಯ ಮಾತು. ಪ್ರಧಾನಿ ಮನಮೋಹನ್ ಸಿಂಗ್‍ರವರ ಸರ್ಕಾರ ರಾಮಾಯಣ ನಡಿಯಲೇ ಇಲ್ಲ, ರಾಮ ಸೇತುವೆ ಇಲ್ಲವೇ ಇಲ್ಲ ಎಂದು ಸುಪ್ರೀಮ್ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು ನೀವೆಲ್ಲ ಕೇಳಿದಿರಷ್ಟೆ?

ಮೊದಲೂ ಒಂದು ಬಾರಿ ಶ್ರೀ ಮನಮೋಹನ್ ಸಿಂಗ್ ಇಂತಹುದೇ ಕೆಲಸ ಮಾಡಿದ್ದರಂತೆ. ಮುಂದೆ ಓದಿ ನೋಡಿ. ನಿಮಗೇ ವೇದ್ಯವಾಗುತ್ತೆ.

ರಾಮಜನ್ಮಭೂಮಿಯಲ್ಲಿ ಬಾಬರನ ಮಸೀದಿ ಉರುಳಿದ ಕೆಲವೇ ದಿನಗಳ ನಂತರ ವಿಶ್ವ ಹಿಂದೂ ಪರಿಷತ್ ಬೆಂಬಲ ಪಡೆದ ಹಿಂದುಗಳ ಗುಂಪೊಂದು ಆ ಜಾಗದಲ್ಲಿ ರಾಮ ಮಂದಿರ ನಿರ್ಮಿಸಲು ಅನುಮತಿ ಬೇಡುವ ಮನವಿ ಸಲ್ಲಿಸಲು ಆಗಿನ ಪ್ರಧಾನ ಮಂತ್ರಿಗಳಾದ ನರಸಿಂಹರಾವ್ ಬಳಿ ಹೋಗಲು ನಿಶ್ಚಯಿಸಿತು. ಇದರ ಸುಳಿವಾದೊಡನೆಯೆ ದೆಹಲಿಯ ಜುಮ್ಮಾ ಮಸೀದಿಯ ಇಮಾಮರ ನೆತೃತ್ವದಲ್ಲಿ ಮುಸಲ್ಮಾನರ ಗುಂಪು ಕೂಡ ಉರುಳಿದ ಮಸೀದಿಯ ಪುನರ್ನಿರ್ಮಾಣದ ಆಗ್ರಹ ಮಾಡುವ ಉದ್ದೇಶ್ಯದಿಂದ ಪ್ರಧಾನಿಯವರ ಮನೆಗೆ ಲಗ್ಗೆ ಹಾಕಿತು.

ಎಂದೂ ನಿರ್ಧಾರ ತೊಗೊಳ್ಳಲಾರದ ರಾಯರು, ಎರಡೂ ಬಣಗಳ ಅಹವಾಲನ್ನು ಕೇಳಿ ಇಕ್ಕಟ್ಟಿಗೆ ಸಿಕ್ಕಿ , ನುಣಿಚಿಕೊಳ್ಳುವ ಹಾಗೂ ಸ್ವಲ್ಪ ಕಾಲಾವಕಾಶ ಕಲ್ಪಿಸಲು ಉಪಾಯ ಹುಡುಕಿದರು. ತಮ್ಮ ಏನೇ ನಿರ್ಧಾರವು ಆರ್ಕೆಯಲಾಜಿಕಲ್ ಸರ್ವೆ ಆಫ್ ಇಂಡಿಯಾದವರಿಂದ ಆ ಸ್ಥಳದ ಉತ್ಖನನ ನಡಿಸಿದ ನಂತರ ಅಲ್ಲಿ ಸಿಕ್ಕಬಹುದಾದ ಪ್ರಮಾಣಗಳ ಆಧಾರದ ಮೇಲೆ ಅವಲಂಬಿಸುತ್ತದೆ. ಅಲ್ಲಿಯ ವರೆಗೂ ತಾಳ್ಮೆಯಿಂದಿರಿ ಎಂದು ಸ್ಪಷ್ಟ ಪಡಿಸಿದರು.

ಆರ್ಕೆಯಲಾಜಿಕಲ್ ಸರ್ವೆ ಆಫ್ ಇಂಡಿಯಾದವರು ಅಗೆಯಲು ಪ್ರಾರಂಭಿಸಿದ ಹಲವು ದಿನಗಳ ನಂತರ ಅಲ್ಲಿ ಹೂತಿಕೊಂಡಿದ್ದ ಹನುಮಾನ್ ವಿಗ್ರಹವೊಂದು ದೊರಕಿದೆ ಎಂಬ ವರದಿ ಪ್ರಕಟವಾಗುತ್ತಿದ್ದಂತೆಯೆ ಹಿಂದುಗಳು ಜಯ ನಮಗೇ ಎಂದು ಸಂತೋಷದಿಂದ ಕುಣಿದು ಕುಪ್ಪಳಿಸಲಾರಂಭಿಸಿದರು.

ಇತ್ತಕಡೆ, ಮುಸಲ್ಮಾನರ ತಂಡದವರು ಕೂಡ ಹನುಮಾನ್ ಹೆಸರೇ ಸೂಚಿಸುವಂತೆ ಮುಸಲ್ಮಾನನೆಂದೂ, ಅವನ ವಿಗ್ರಹ ಅಲ್ಲಿದ್ದದ್ದು, ಮಸೀದಿಯ ಪುನರ್ನಿರ್ಮಾಣಕ್ಕೆ ಪುರಾವೆ ಕೊಟ್ಟಂತಿವೆ ಎಂದು ಸಂಭ್ರಮಿಸಲು ಆರಂಭಿಸಿದರು. ಕಾರಣ, ಉಸ್ಮಾನ್, ರಹಮಾನ್, ಸುಲೇಮಾನ್, ಹನುಮಾನ್ ಎಲ್ಲವೂ ಮುಸ್ಲಿಮರ ಹೆಸರುಗಳು ಎಂದು ಅವರ ವಾದ.

ಬೆದರಿ ಕಂಗಾಲಾದ ನರಸಿಂಹರಾಯರಿಗೆ ಏನು ಮಾಡಬೇಕೋ ತೋಚದಿದ್ದಾಗ, ಅವರ ಆಪ್ತ ಕಾರ್ಯದರ್ಶಿಗಳ ಸಲಹೆಯ ಮೇರೆಗೆ ಎರಡೂ ಬಣದವರನ್ನು ಕರೆದು “ ನೋಡಿ, ಇದೊಂದು ಬಹಳ ಜಟಿಲವಾದ ಪ್ರಶ್ನೆ. ನಿರ್ಣಯ ಮಾಡುವ ಮುನ್ನ ಬಹಳ ವಿವೇಚನೆಯಿಂದ ಸಂಶೋಧನೆ ಮಾಡಿ ಮುನ್ನಡೆಯಬೇಕಾಗಿದೆ. ನಮ್ಮ ಪಾರ್ಟಿಯಲ್ಲಿಯ ಅತಿ ಮೇಧಾವಿ ಶ್ರೀ ಮನಮೋಹನ್ ಸಿಂಗ್ ಈ ಕಾರ್ಯಕ್ಕೆ ಸೂಕ್ತ ವ್ಯಕ್ತಿ. ನೀವೆಲ್ಲರೂ ಅವರ ಮುಂದೆ ನಿಮ್ಮ ಸಾಕ್ಷಿ ಪುರಾವೆಗಳನ್ನು ಮಂಡಿಸಿ. ಅವರ ಅಭಿಪ್ರಾಯ ಅರಿತ ನಂತರ ನಿರ್ಧಾರ ಮಾಡುತ್ತೇನೆ.” ಎಂದು ಹೇಳಿ ತಮಗೆ ಬಂದ ಸಂಕಟವನ್ನು ಬಡಪಾಯಿ ಸಿಂಗ್ರವರ ತಲೆಗೆ ಅಂಟಿಸಿ ಸದ್ಯಕ್ಕಂತೂ ಬಚಾವಾದರು.

ಪಾಪ ಪ್ರಾಧ್ಯಾಪಕ ಮನಮೋಹನ್ ಸಿಂಗ್ರವರು ಅನೇಕ ದಿನಗಳ ಕಾಲ ರಾಮಾಯಣದ ಎಲ್ಲ ರೂಪಗಳ (ತುಳಸಿ; ವಾಲ್ಮೀಕಿ, ಕಂಬ, ಇತರೆ ಇತರೆ… ) ಅಧ್ಯಯನ ಮಾಡಿದ ನಂತರ ಕೊರಾನ್, ಬಾಬರ್ನಾಮ ಮತ್ತು ಇತರೇ ಪರ್ಷಿಯನ್ ಗ್ರಂಥಗಳ ಕೂಲಂಕಷ ತನಿಖೆ ನಡೆಸಿದರು. ಅನೇಕ ಪಂಡಿತರುಗಳ, ವಿದ್ವಾಂಸರುಗಳ ಜೊತೆಗೇ ಎರಡೂ ಬಣದವರ ವಾದ ವಿವಾದಗಳನ್ನೆಲ್ಲ ತಾಳ್ಮೆಯಿಂದ ಕೇಳಿ ಕೊನೆಗೂ ಒಂದು ನಿರ್ಧಾರಕ್ಕೆ ಬಂದು ತಮ್ಮ ಅಭಿಪ್ರಾಯವನ್ನು ನರಸಿಂಹರಾಯರಿಗೆ ತಿಳಿಸಿದರು.

ಅವರ ಪ್ರಕಾರ ಹನುಮಾನ್ ಹಿಂದುವೂ ಅಲ್ಲ! ಮುಸಲ್ಮಾನನೂ ಅಲ್ಲ! ಕಕ್ಕಾಬಿಕ್ಕಿಯಾಗಿ ಗಾಬರಿಯಿಂದ ಅವರ ಕಡೆ ನೋಡಿದ ರಾಯರಿಗೆ ಶ್ರೀ ಮನಮೋಹನ್ ಸಿಂಗ್ ಹೇಳಿದ್ದು ಹೀಗೆ. “ ನೋಡಿ ಸ್ವಾಮಿ. ಯಾರದೋ ಹೆಂಡತಿಯನ್ನು ಹುಡುಕಲು ಹೊರಟು, ತನ್ನ ಬಾಲಕ್ಕೇ ಬೆಂಕಿ ಹಚ್ಚಿಕೊಂಡು, ಬೇರಾರದೋ ಮನೆಮಠ ಸುಟ್ಟು ಹಾಕುವಂಥ ವ್ಯಕ್ತಿ ಒಬ್ಬ ಸರ್ದಾರ್ಜಿಯಲ್ಲದೆ ಮತ್ಯಾರು ಆಗಿರಲು ಸಾಧ್ಯ? ನೀವೆ ಯೋಚಿಸಿ! ಹಿಂದುವೂ ಅಲ್ಲ. ಮುಸಲ್ಮಾನನೂ ಅಲ್ಲ! ಅವನು ಹನುಮಾನ್ ಸಿಂಗ್. ನೀವು ಸುಮ್ಮನೆ ಆ ಜಾಗದಲ್ಲಿ ಒಂದು ಗುರುದ್ವಾರ ಕಟ್ಟಿಸಿಬಿಡಿ. ಈ ಗೊಂದಲ ತಾನೇ ನಿಂತು ಹೋಗತ್ತೆ.”

ನರಸಿಂಹರಾಯರ ಮುಖ ನೋಡುವಂತಿತ್ತು.

***********************************************************
<ಮೇಲ್ಕಂಡ ಹಾಸ್ಯ ಲೇಖನ ಮೊದಲೊಮ್ಮೆ ourkarnataka.com ನಲ್ಲಿ ಪ್ರಕಟಿಸಲಾಗಿತ್ತು.>

  • ಹಾಸ್ಯ
~.~
  • Ennares ರವರ ಬ್ಲಾಗ್
  • Login or register to post comments
  • 409 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾಲೇ ಇಲ್ಲ!
  • ರಾಮೇಶ್ವರದಲ್ಲಿ ರಾಮಾಂಜನೇಯ ಸಂವಾದ
  • "ರಂಗ್ ದೇ ಬಸಂತಿ" ನಿಜವಾದ ಹೀರೋ ಯಾರು?
  • ಒಂದು ರಾಜ್ಯದ ಮುಖ್ಯ-ಮಂತ್ರಿ, ಮಹಾತ್ಮಗಾಂಧಿಯವರ ಸ್ಮಾರಕಕ್ಕೆ ನಮನ ಸಲ್ಲಿಸಲೋಸುಗವೇ, ದೆಹಲಿಗೆ ಹೋಗಬೇಕೆ ?
  • ವಾರಣಾಸಿ,ಬಾಂಬ್ ಮತ್ತು ರಾಜಕೀಯ
Syndicate content

ಲೇಖಕರು

Ennares's picture

ಪೂರ್ಣ ಹೆಸರು
ನವರತ್ನ ಸುಧೀರ್

ಪರಿಚಯ

ನಿವೃತ್ತ ಲೋಹಶಾಸ್ತ್ರಜ್ನ. ಹಿಂದೂಸ್ತಾನಿ ಸಂಗೀತ ಕೇಳುವ, ಪುಸ್ತಕ ಓದುವ, ಬ್ಲಾಗಿಸುವ ಹವ್ಯಾಸ. ನಾಟಕದ ಗೀಳು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 22 ಅತಿಥಿಗಳು ಆನ್ಲೈನ್ ಇರುವರು.


ಒಬ್ಬನೇ ವಕೀಲ ನೂರಾರು ಬಂದೂಕುಧಾರಿ ಕಳ್ಳರಿಗಿಂತ ಹೆಚ್ಚು ಕದಿಯಬಲ್ಲ

— ಡಾನ್ ಕಾರ್ಲೋನ್, 'ಗಾಡ್ ಫಾದರ್" ಚಿತ್ರದಲ್ಲಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator