ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › halaswamyrs ರವರ ಬ್ಲಾಗ್

ಹಾಲ

ನಾಟಕ, ಕಾಡು, ಹಾಡು ಇತ್ಯಾದಿ...

ದೀಪದ ಹಬ್ಬಕ್ಕೆ ಅಕ್ಷರದ ಹಣತೆ

November 5, 2007 - 1:07am — halaswamyrs
 
‘ನಾತಲೀಲೆ’ಯ ಮೂಲಕ ಗಮನ ಸೆಳೆದ ಎಸ್. ಸುರೇಂದ್ರನಾಥ್ 
ಅವರ ಕಾದಂಬರಿ ‘ಎನ್ನ ಭವದ ಕೇಡು’ ಬಿಡುಗಡೆ ಆಗಿದೆ. ಕನ್ನಡ 
ಸಾಹಿತ್ಯದಲ್ಲಿ ಅಪರೂಪವಾದ ಫ್ಯಾಂಟಸಿ, ಮ್ಯಾಜಿಕ್ ರಿಯಾಲಿಸಂ 
ತಂತ್ರದ ೨೬೧ ಪುಟದ ಈ ಕಾದಂಬರಿ ಓ-ತ್ತಾ ಹೋದಂತೆ ಅದ್ಭುತ 
ಅನುಭವ ನೀಡತ್ತೆ.
ಈ ದೀಪಾವಳಿ ಸಂಭ್ರಮಕ್ಕೆ ಭವದ ಕೇಡಿನ ಕೆಲ ಸಾಲುಗಳ ಹಣತೆ...

...ನಮ್ಮ ಅಜ್ಜಿ ನಮ್ಮಪ್ಪನಂಗೆ ದೊಡ್ಡ ಡಾಕ್ಟ್ರು, ಅವರು ಒಂದು ಮಾತು 
ಹೇಳೋರು. ಪ್ರತಿಯೊಬ್ರೂ ಹುಟ್ಟೋವಾಗ ಎದೇಲಿ ಒಂದು ನಂದಾದೀಪ 
ಇಟ್ಕೊಂಡೇ ಹುಟ್ತಾರಂತೆ. ಈಗ ನಿನ್ನ ಎದೇಲೂ ಅಂಥಾ ಒಂದು ನಂದಾದೀಪ 
ಇದ್ದೇ ಇರುತ್ತೆ. ಆ ನಂದಾದೀಪನ್ನ ಹಚ್ಚೋಕೆ ಎಣ್ಣೆ ಬೇಕು. 
ಬೆಳಗೋಕೆ ಬೆಂಕಿ 
ಬೇಕು. ನಿನ್ನ ಎದೇಲಿರೋ ನಂದಾದೀಪನ್ನ ಬೆಳಗೋಕೆ ನಿನ್ಕೈಲಿ ಆಗಲ್ಲ. 
ನಿನ್ನ ಎದೇಲಿರೋ ದೀಪಕ್ಕೆ ಎಣ್ಣೆ ತುಂಬೋಕೆ. ದೀಪಾನ್ನ ಬೆಳಗೋಕೆ 
ಇನ್ಯಾರಾದ್ರೂ ಬೇಕು. ನಿನ್ನ ಮನೆ, ನಿನ್ನ ಅಪ್ಪ- ಅಮ್ಮ, ನಿನ್ನ ಜೊತೆ 
ಹುಟ್ದೋರು ನಿನ್ನ ದೀಪಕ್ಕೆ ಎಣ್ಣೆ ತುಂಬ್ತಾ ಹೋಗ್ತಾರೆ. ಅದ್ರೆ ಇವ್ರಿಗೂ 
ನಿನ್ನ ಎದೇಲಿರೋ ದೀಪ ಬೆಳಗೋಕೆ ಆಗಲ್ಲ. ಆಂದ್ರೆ ನಿನ್ನ ಎದೇಲಿರೋ 
ದೀಪಾನ್ನ ಬೆಳಗೋಕೆ ನೀನು ಪ್ರೀತಿ ಮಾಡಿದ ಯಾರಾದ್ರೂ ಒಬ್ರು ಬರಬೇಕು. 
ಅವರ ಪ್ರೀತಿಯಿಂದ ನಿನ್ನ ದೀಪ ಹತ್ತಬೇಕು. ಈ ಪ್ರೀತಿ 
ಯಾವುದ್ರಿಂದಾನಾದ್ರೂ ಬರಬಹುದು. ಒಂದು ಹಾಡು, ಒಂದು ಕತೆ, 
ಒಂದಿಷ್ಟು ಮಾತು, ಇಲ್ಲಾಂದ್ರೆ ನಿಂಗೆ ಬೇಕಾದ ಅಡುಗೆ, ನಿಂಗಿಷ್ಟ 
ಆಗೋ ಹಾಗೆ ನಗಬಹುದು, ನಿನ್ನ ಅಪ್ಕೆಬಹುದು, ನಿಂಗೆ ಒಂದು 
ಮುತ್ತು ಕೊಡಬಹುದು, ಏನಾದ್ರೂ ಆಗಬಹುದು. ಅವರ 
ಪ್ರೀತಿಯಿಂದ ನಿನ್ನ ದೀಪ ಬೆಳಗಬೇಕು. ಆ ದೀಪ ಹತ್ತಿದ 
ಕೂಡಲೇ ನಮ್ಮ ಮೈ ಬೆಚ್ಚಗಾಗತ್ತೆ. ನಮ್ಮ ಮೈಯಲ್ಲಿ 
ಬಿಸಿಯೇರತ್ತೆ. ವಿಪರೀತ ಸಂತೋಷ ಆಗತ್ತೆ. ಅಳಬೇಕೂ 
ಅನ್ಸತ್ತೆ. ನಮ್ಮ ಮುಖಕ್ಕೆ ಬೆಳಕು ಹಿಡಿದ ಹಾಗಾಗತ್ತೆ. 
ಮುಖಕ್ಕೆ ರಂಗು ಬರತ್ತೆ. ನೋಡು ಜಗತ್ತು ಬದಲಾದ 
ಹಾಗೆ ಕಾಣತ್ತೆ. ಜಗತ್ತಿಗೆ ಹೊಸ ಬಣ್ಣ ಬಂದ ಹಾಗಾಗತ್ತೆ. 
ಈ ದೀಪ ಮುಂದ್ಯಾವತ್ತೂ ಆರದ ಹಾಗೆ ನೋಡಿಕೊಳ್ಳೋದೇ 
ನಮ್ಮ ಜೀವನ. ನಿನ್ನ ನಂದಾದೀಪ ಬೆಳಗೋ ಪ್ರೀತಿ ಎಲ್ಲಿದೆ, 
ಅದು ಯಾರ ಹತ್ರ ಇದೆ ಅಂತ ಹುಡುಕೋದು ನಿನ್ನ ಜವಾಬ್ದಾರಿ. 
ಈ ದೀಪದಿಂದ ನಿನ್ನ ಆತ್ಮಕ್ಕೆ ಸಂತೋಷ ಸಿಗತ್ತೆ. ನಿನ್ನ ಸಂತೋಷಕ್ಕೆ 
ಈ ನಂದಾದೀಪ ಬೆಳಗಲೇಬೇಕು. ಒಂದ್ವೇಳೆ ಈ ದೀಪ ಹಚ್ಚೋರು 
ಯಾರೂ ಸಿಗಲಿಲ್ಲ ಅಂತಿಟ್ಕೋ, ನಿಧಾನವಾಗಿ ನಿನ್ನ ದೀಪದಲ್ಲಿರೋ 
ಎಣ್ಣೆ ತೀರ್‍ತಾ ಹೋಗತ್ತೆ. ಎಣ್ಣೆ ಪೂರಾ ಖಾಲಿಯಾದ ಮೇಲೆ 
ಆ ದೀಪ ಮತ್ಯಾವತ್ತೂ ಬೆಳಗೋದಿಲ್ಲ, ಯಾರಿಂದಲೂ ಬೆಳಗೋಲ್ಲ. 
..
...
ನಿನ್ನ ಎದೇಲಿರೋ ನಂದಾದೀಪ ಬೆಳಗುತ್ತಿದ್ದ ಹಂಗೇ ಅದನ್ನು 

ಆರಿಸೋಕೂ ಜನ ಕಾಯ್ತಾ ಇರ್‍ತಾರೆ. ಅಂಥೋರಿಂದ ನಿನ್ನ ದೀಪಾನ್ನ 
ಜೋಪಾನವಾಗಿ ಇಟ್ಕೋಳೋದು ನಿನ್ನ ಜವಾಬ್ದಾರಿ. ಅಂಥೋರ 
ಉಸಿರು ನಿನ್ನ ಜೀವನಕ್ಕೆ ತಗುಲಿದ್ರೂ ನಿನ್ನ ದೀಪ ಮಂಕಾಗಿ 
ಬಿಡತ್ತೆ. ಮಂಕಾಗ್ತಾ ಮಂಕಾಗ್ತಾ ಆರೇ ಹೋಗಿ ಬಿಡತ್ತೆ. 
ಇಂಥೋರಿಂದ ದೂರ ಇರೋದೇ ಒಳ್ಳೇದು. ಇದು 
ನಿಂಗೂ ಗೊತ್ತಾಗಿರಬೇಕಲ್ಲಾ. 
...
...
ದೀಪದ ಎಣ್ಣೆ ತೀರಹೋಯ್ತು, ದೀಪ ಆರಿ ಹೋಯ್ತು ಅಂತ 

ಯೋಚನೆ ಮಾಡಬೇಕಿಲ್ಲ. ದೀಪಾನ್ನ ಮತ್ತೆ ಹಚ್ಚಬಹುದೂ 
ಅಂತ ನಿಂಗೆ ನಂಬಿಕೆ ಇರಬೇಕು. ಅಂದ್ರೆ ದೀಪ ಹಚ್ಚೋಕೆ 
ದಾರಿ ಸಿಗತ್ತೆ. ಕಳೆದು ಹೋದರೆ ಮತ್ತೆ ಸಿಗಲಾರದ 
ವಸ್ತು ಏನಲ್ಲಾ ಅದು. ಸಿಕ್ಕೇ ಸಿಗತ್ತೆ. ದೀಪ ಹಚ್ಚೋಕೆ 
ಯಾರಾದ್ರೂ ಸಿಕ್ಕೇ ಸಿಗ್ತಾರೆ ಅಂತ ನಂಬಿಕೆಯಿರಬೇಕು. 
ಸಿಕ್ಕೇ ಸಿಗ್ತಾರೆ... 
....

ನನ್ನ ಎದೇಲೂ ಒಂದು ದೀಪ ಇದೆ. ಎಣ್ಣೆ ಇದೇ ದೀಪ ಬೆಳಗೋಕೆ ಯಾರು 
ಬರ್‍ತಾರೆ ಅಂತ ಕಾಯ್ತಾ ಇದೀನಿ. ಯಾರಾದ್ರೂ ಬಂದೇ 
ಬರ್‍ತಾರೆ ಅನ್ನೋ ನಂಬಿಕೆ ನಂಗಿದೆ. ಏನಂತೀಯ...... 

~.~
  • halaswamyrs ರವರ ಬ್ಲಾಗ್
  • Login or register to post comments
  • 424 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 7, 2007 - 10:56am — ksnayak

ಉ: ದೀಪದ ಹಬ್ಬಕ್ಕೆ ಅಕ್ಷರದ ಹಣತೆ

ksnayak's picture

ಖಂಡಿತ...ನಿಮ್ಮ ಎದೆಯ ದೀಪ ಹಚ್ಚುವರು ಬೇಗನೇ ಬರಲಿ ಎಂದು ಹೃದಯ ಪೂರ್ವಕವಾಗಿ ಆಶಿಸುತ್ತೇನೆ.....
ಬಹಳ ಚೆನ್ನಾಗಿದೆ. ಬೆಂಕಿ ಶಬ್ದಕ್ಕಿಂತ ಬೆಳಕು ಸರಿ ಹೋಗುತ್ತಿತ್ತು ಅನಿಸುತ್ತದೆ. ಬೆಂಕಿ ಶಬ್ದವು ಭಯವನ್ನು ಹುಟ್ಟಿಸುತ್ತದೆಯಲ್ಲವೆ?

ಶೀಲಾ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅಲ್ಲಿಂದ ಇಲ್ಲಿಗೆ
  • ಒಂಥರಾ ಪ್ರೀತಿ...
  • *ವಿಶ್ವ ಮಹಿಳಾ ದಿನದ ಶುಭಾಷಯಗಳು*
  • ಸಮಸ್ತ ಕನ್ನಡಿಗರಿಗೆ ಯುಗಾದಿಯ ಶುಭಾಷಯಗಳು
  • ಹದಿನಾಲ್ಕರ ಆಚರಣೆ
Syndicate content

ಲೇಖಕರು

halaswamyrs's picture

ಪರಿಚಯ

ಬಂದೆ ಸುಮ್ಮನೆ ಇಲ್ಲಿಗೆ.....

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
  • ಕ್ರುಶ್ಣಾನೀ ಬ್ಯಾಗನೆ ಬಾರೋ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • harsha.st
    ಉ: ತೋಡು ಮತ್ತು ಮೊಗೆ
    October 7, 2008 - 2:48pm
  • girish.rajanal
    ಉ: ಹೀಗೆ ಒಂದು ಮಾತುಕತೆ(ಹೆಂಗಳೆಯರ)
    October 7, 2008 - 2:45pm
  • createam
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:42pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 2:22pm
  • createam
    ಉ: ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
    October 7, 2008 - 2:21pm
  • mahesha
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:16pm
  • savithasr
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 2:15pm
  • anivaasi
    ಉ: ಈ ಬ್ಲಾಗ್‌ ಪೋಸ್ಟಿಗೆ ಹೆಸರಿಲ್ಲ.
    October 7, 2008 - 2:08pm
  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 149 ಅತಿಥಿಗಳು ಆನ್ಲೈನ್ ಇರುವರು.


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator