ಹಂಸ ನಾದ
ಹಂಸ ನುಡಿದರೆ, ಹಂಸನಾದ!
ಗಂಡ-ಹೆಂಡಿರು ಮತ್ತು ಪುರಂದರ ದಾಸರು
July 2, 2008 - 11:37pm — hamsanandiನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?
ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ. ಮುಂದೆ ಓದಿ »

ಜಿ ಟಿ ಎನ್ ಹಾಗೂ ನೆನಪುಗಳು
June 27, 2008 - 10:26pm — hamsanandiನೆನ್ನೆ ಸಂಜೆ ಸಂಪದ ನೋಡಿದಾಗ ಕಂಡದ್ದು ಇದು.
ಇಸ್ಮಾಯಿಲ್ ಬರೆದ ಅತೀ ದುಃಖದ ಸಮಾಚಾರ.
ಜಿಟಿಎನ್ ಇನ್ನಿಲ್ಲ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನಲೇ? ಅದು ಕೇವಲ ಔಪಚಾರಿಕವಾಗುತ್ತೆ. ಅಷ್ಟೇ.
ಕನ್ನಡದಲ್ಲಿ ವೈಜ್ಞಾನಿಕ ಬರಹಗಳು ಎಂದಾಗ ಮೊತ್ತಮೊದಲು ಮನಸ್ಸಿಗೆ ಬರುವ ಹೆಸರೇ ಜಿಟಿನಾರಾಯಣರಾಯರದ್ದು. ಸುಧಾ ಮೊದಲಾದ ಪತ್ರಿಕೆಗಳಲ್ಲಿ ಅವರ ಹಲವು ಬರಹಗಳು ಬೆಳಕು ಕಾಣುತ್ತಿದ್ದವು.
ಆಗ ಪ್ರಕಟವಾಗುತ್ತಿದ್ದ ಕನ್ನಡ ವಿಶ್ವಕೋಶ ಸ್ವಂತಕ್ಕೆ ಕೊಳ್ಳಲು ಬೆಲೆ ಕೈಗೆಟುಕುವಂತಿರಲಿಲ್ಲ. ಲೈಬ್ರರಿಯಲ್ಲಿ ಸಿಗುವುದರ ಮಾತಂತೂ ಸ್ವಲ್ಪ ಕಷ್ಟವೇ! ಮತ್ತೆ ಐದನೇ ತರಗತಿಯವರೆಗೆ ಇಂಗ್ಲಿಷ್ ಕಲಿತಿಲ್ಲದ ಕಾರಣ ಎನ್ಸೈಕ್ಲೋಪಿಡಿಯಾ ಬ್ರಿಟಾನಿಕಾ ಅಂತಾಹವಂತೂ ನನಗೆ ಸ್ವಲ್ಪ ದೂರವೇ. ಇದೆಲ್ಲಾ ಸೇರಿ, ನಾನು ಜಿಟಿಎನ್ ಅವರ ಬರಹಗಳು ಎಲ್ಲಿ ಕಂಡರೂ ತುಂಬ ಆಸಕ್ತಿಯಿಂದ ಓದುತ್ತಿದ್ದೆ. ಮುಂದೆ ಓದಿ »

- 4 ಪ್ರತಿಕ್ರಿಯೆಗಳು
- 350 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ರಾಹು-ಕೇತು ಕಾಟ, ಮತ್ತು ಗ್ರಹಣ ಚಕ್ರ
June 26, 2008 - 11:19pm — hamsanandi
- 4 ಪ್ರತಿಕ್ರಿಯೆಗಳು
- 146 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಸೀತೆಯ, ಭೂಮಿಜಾತೆಯ
June 18, 2008 - 11:08pm — hamsanandiಮೊನ್ನೆ ತಾನೇ ಅನಿವಾಸಿ ಅವರು ದಾಸರ ಪದದಲ್ಲಿ ಹೆಣ್ಣಿನ ಚಿತ್ರಣ ಸರಿಯಾಗಿಲ್ಲ ಅನ್ನುವ ಬರಹವೊಂದನ್ನು ಹಾಕಿದ್ದರು. ಅದನ್ನು ಓದುತ್ತಾ ನನಗೂ ಸ್ವಲ್ಪ ಯೋಚನೆ ಹತ್ತಿತು. ಒಂದು ವಿಧದಲ್ಲಿ ನೋಡಿದರೆ, ಹಿಂದಿನ ಕಾವ್ಯನಾಟಕಗಳಲ್ಲಿ ಹೆಚ್ಚು ನಾಯಕ ಪಾತ್ರ ಪ್ರಧಾನವೇ. ಮೂಲದ ವ್ಯಾಸ ಭಾರತದಲ್ಲಿ ಹೇಗೋ ಗೊತ್ತಿಲ್ಲ, ಆದರೆ ಕುಮಾರವ್ಯಾಸನ ಕನ್ನಡ ಭಾರತದಲ್ಲಂತೂ ಅಂತಹ ಮುಖ್ಯವಾದ ದ್ರೌಪದಿಯ ಪಾತ್ರಕ್ಕೇ ಹೆಚ್ಚಿ ನ್ಯಾಯ ದೊರೆತಿಲ್ಲ ಎಂದು ನನ್ನ ಅಭಿಪ್ರಾಯ. ಸೀತೆ ದ್ರೌಪದಿಯರಂತಹ ಪಾತ್ರಗಳು ದು:ಖವನ್ನು ಅನುಭವಿಸಲೇ ಹುಟ್ಟಿದ ಹಾಗೆ ಕಾಣುತ್ತವೆ. ಈ ಇಬ್ಬರಿಗೂ ಉದ್ದನೆ ಕೂದಲಿತ್ತೆಂಬ ನಂಬಿಕೆ ಇರುವುದರಿಂದ, ಜಡೆಗೆ ಕತ್ತರಿ ಹಾಕದ ಹಿಂದಿನ ಕಾಲದವರು ಹೆಣ್ಣುಮಕ್ಕಳಿಗೆ ಉದ್ದ ಕೂದಲಿದ್ದರೆ ಸೀತೆಯಂತೆ, ದ್ರೌಪದಿಯಂತೆ ಕಷ್ಟ ಅನುಭವಿಸುವಳೋ ಎಂದು ಯೋಚನೆ ಮಾಡುತ್ತಿದ್ದರು.
ಅದಿರಲಿ. ಮೊನ್ನೆ ಸೀತೆಯ ಮೇಲೆ ವಿಜಯದಾಸರು ಬರೆದ ಒಂದು ರಚನೆಯನ್ನು ಮೊದಲಬಾರಿಗೆ ಕೇಳಿದೆ. ಹೆಚ್ಚಾಗಿ ಹರಿದಾಸರು ವಿಠಲನ ಮೇಲೆ, ಇಲ್ಲದಿದ್ದರೆ ರಾಮ ಕೃಷ್ಣನ ಮೇಲೆ ಬರೆದವರು. ಸೀತೆಯನ್ನು ಕೇಂದ್ರವಾಗಿಟ್ಟುಕೊಳ್ಳುವಂತಹ ಹಾಡುಗಳು ಕಡಿಮೆಯೇ. ಸರಳವಾಗಿದ್ದೂ ಸುಂದರವಾದ ಈ ಹಾಡು ನನಗೆ ಬಹಳ ಹಿಡಿಸಿತು. ಅದಕ್ಕೇ ಇಲ್ಲಿ ಬರೆಯುತ್ತಿದ್ದೇನೆ. ಮುಂದೆ ಓದಿ »

- 9 ಪ್ರತಿಕ್ರಿಯೆಗಳು
- 367 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: