ದನ ಸಿಂಗ ಹುಲಿ ಹಕ್ಕಿ ಹಾವು ಮೀನ್‌ಗಳಿಗೆಲ್ಲ |
ಇನಿಸುಣಿಸು, ಬೆದೆ, ಬೆದರು - ಅಷ್ಟೆ ಜೀವಿತವು ||
ಮನುಜನೆಂತನಿತರಿಂ ತೃಪ್ತಿವಡೆವನವಂಗೆ |
ಕ್ಷಣಕ್ಷಣವು ಹೊಸ ಹಸಿವು -- ಮಂಕುತಿಮ್ಮ |

— ಡಿ. ವಿ. ಜಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

hamsanandi ರವರ ಬ್ಲಾಗ್

ಕೇಡಿಗನ ನಂಜು

ಚೇಳಿನ ನಂಜೋ ಬಾಲದ ತುದಿಯಲಿ
ನೊಣಕ್ಕದುವೆ ಬಾಯಲ್ಲೆಲ್ಲಾ!
ಹಾವಿನ ಹಲ್ಲಲಿ ತುಂಬಿರುವುದು ವಿಷ
ಕೇಡಿಗನಿಗೋ ಮೈಯಲ್ಲೆಲ್ಲಾ!

ಸಂಸ್ಕೃತ ಮೂಲ:

ವೃಶ್ಚಿಕಸ್ಯ ವಿಷಂ ಪುಚ್ಛೇ ಮಕ್ಷಿಕಾಯಾಶ್ಚ ಮಸ್ತಕೇ |
ತಕ್ಷಕಸ್ಯ ವಿಷಂ ದಂತೇ ಸರ್ವಾಂಗೇ ದುರ್ಜನಸ್ಯ ಚ ||

-ಹಂಸಾನಂದಿ

ಕೊ.ಕೊ: ಚಾಮರಾಜ ಸವಡಿಯವರ ’ವಿಷದ ಗಿಡ’ ಮತ್ತೆ, ಅದಕ್ಕೆ ಬಂದ ಅಡಿಟಿಪ್ಪಣಿಗಳನ್ನು ಓದಿದಾಗ, (http://sampada.net/b...) ಎಂದೋ ಮಾಡಿದ್ದ ಈ ಅನುವಾದ ನೆನಪಾಯ್ತು. ಒಂದೆರಡು ಚಿಕ್ಕ ಬದಲಾವಣೆಗಳೊಡನೆ ಹಾಕಿರುವೆ.

ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು!

ಬಾಯಿಂದ ಹೊರಬಿದ್ದ ಮಾತೆನುವ ಅಂಬುಗಳು
ಆಯಕಟ್ಟಿಗಿರಿದು ಕೊಟ್ಟಾವು ನೋವು ಹಗಲಿರುಳು;
ಅರಿವು ನಿನ್ನಲಿ ಇರಲು ಪರರ ನೋಯಿಸುವಂಥ
ನುಡಿಯಂಬುಗಳನೆಂದೂ ಬಿಡದಿರುವುದೇ ಲೇಸು.

ಸಂಸ್ಕೃತ ಮೂಲ:

ವಾಕ್ಸಾಯಕಾ ವದನಾನ್ನಿಷ್ಪತಂತಿ
ಯೈರಾಹತಃ ಶೋಚತಿ ರಾತ್ರ್ಯಹಾನಿ |
ಪರಸ್ಪರಂ ಮರ್ಮಸು ತೇ ಪತಂತಿ
ತಾನ್ ಪಂಡಿತೋ ನಾಪಸೃಜೇತ್ಪರೇಷು ||

-ಹಂಸಾನಂದಿ

ಜೊತೆಬಾಳ್ವೆ

ಅಡವಿಯ ತೊರೆದ ಹುಲಿಯ ಕೊಲುವರು
ಹುಲಿಯಿರದ ಅಡವಿಯನೆ ಕಡಿವರು
ಹುಲಿಗೆ ಇರಬೇಕು ಅಡವಿಯ ಕಾವಲು
ಅಡವಿಗಾದರೋ ಹುಲಿಯೇ ಕಾವಲು

ಸಂಸ್ಕೃತ ಮೂಲ (ಮಹಾಭಾರತ, ಉದ್ಯೋಗಪರ್ವ ೨೯-೫೫):

ನಿರ್ವನೋ ವಧ್ಯತೇ ವ್ಯಾಘ್ರೋ ನಿರ್ವ್ಯಾಘ್ರಂ ಛಿದ್ಯತೇ ವನಂ|
ತಸ್ಮಾತ್ ವ್ಯಾಘ್ರೋ ವನಂ ರಕ್ಷೇತ್ ವನಂ ವ್ಯಾಘ್ರಂ ಚ ಪಾಲಯೇತ್ ||

-ಹಂಸಾನಂದಿ

ಕೈಗೆಟುಕುವ ದೇವರು

ಕೈಯಳತೆಯಲೇ ಇರುವ ತಾಯಿ-ತಂದೆ-ಗುರುಗಳನುಳಿದು
ಕೈಯಲೆಂದೂ ನಿಲುಕದ ದೈವವೆಂಬುದನೆಂತು ನೆಚ್ಚುವುದು?

ಸಂಸ್ಕೃತ ಮೂಲ (ರಾಮಾಯಣ, ಅಯೋಧ್ಯಾಕಾಂಡ ೩೦-೩೩)

ಸ್ವಾಧೀನಂ ಸಮತಿಕ್ರಮ್ಯ ಮಾತರಂ ಪಿತರಂ ಗುರುಂ |
ಅಸ್ವಾಧೀನಂ ಕಥಂ ದೈವಂ ಪ್ರಕಾರೈರಭಿರಾಧ್ಯತೇ? ||

-ಹಂಸಾನಂದಿ

ಪುರಂದರ ದಾಸ ಆರಾಧನೆ ೨೦೧೦

ಜನವರಿ ೧೫, ೨೦೧೦ ಪುಷ್ಯ ಅಮಾವಾಸ್ಯೆ - ಪುರಂದರ ದಾಸರ ಆರಾಧನೆಯ ದಿನ ಈ ಕೊಂಡಿಯನ್ನು ಹಂಚಿಕೊಳ್ಳಲು ಸಂತಸವಾಗುತ್ತಿದೆ.

ಕೆಲವು ವರ್ಷಗಳ ಹಿಂದೆ ನಾನು ಮಾಡಿದ್ದ "ಹರಿದಾಸ ಸಾಹಿತ್ಯದ ಮೇಲೊಂದು ಪಕ್ಷಿನೋಟ" ವನ್ನು ಕೇಳಲು ಇಲ್ಲ ಚಿಟುಕಿಸಿ: http://chirb.it/f09a9L

-ಹಂಸಾನಂದಿ

Syndicate content