ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಕೆಲವು ಸುಭಾಷಿತಗಳು

March 3, 2007 - 6:58am — hamsanandi

ನಾನು ರೂಪಾಂತರಿಸಿದ (ಭಾಷಾಂತರ ಎನ್ನುವುದಕ್ಕಿಂತ ಇದು ಉತ್ತಮ ಪದವೇನೋ ಎಂಬುದು ನನ್ನ ಭಾವನೆ) ಕೆಲವು ಸಂಸ್ಕೃತ ಸುಭಾಷಿತಗಳು ಇಲ್ಲಿವೆ. ಓದಿ ನೋಡಿ, ಏನೆನಿಸಿತೋ ತಿಳಿಸಿ; ಕೆಲವು ಮೂಲ ಶ್ಲೋಕಗಳನ್ನೂ, ಕನ್ನಡ ಲಿಪಿಯಲ್ಲೇ ಸೇರಿಸಿದ್ದೇನೆ. ಇದು ದೇವನಾಗರಿಯಲ್ಲಿದ್ದರೆ ಒಳಿತೇನು? ತಿಳಿಸಿ. ಮಿಕ್ಕ ಶ್ಲೋಕಗಳನ್ನೂ ಒಂದೊಂದಾಗಿ ಸೇರಿಸುತ್ತೇನೆ.

----------------------------------------------------------------------------------------- 

ಉದ್ಯಮೇ ನ್ ಹಿ ಸಿದ್ಧ್ಯಂತಿ ಕಾರ್ಯಾಣಿ ನ  ಮನೋರಥೈಃ|

ನ  ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಸಂತಿ ಮುಕೇ ಮೃಗಾಃ||                                              

ಮನಕೆ ಬಂದ ಮಾತ್ರಕೆ
ಕಾರ್ಯಗತವಾದೀತೇ ?
ಮಲಗಿದ ಸಿಂಹದ ಬಾಯಿಗೆ
ಜಿಂಕೆ ಬಂದು ಬಿದ್ದೀತೇ ?
------------------------------------------------------------
ದಾನಂ ಭೋಗೋ ನಾಶಸ್ತಿಸ್ರೋ ಗತಯೋ ಭವಂತಿ ವಿತ್ತಸ್ಯ |                                                          ಯೋ ನ ದದಾತಿ ನ ಭುಂಕ್ತ್ತೇ ತಸ್ಯ ತೃತೀಯಾ ಗತಿರ್ಭವತಿ||

ಅನುಭವಿಸು ಇಲ್ಲ ದಾನ ಕೊಡು ಅಥವ
ವಿನಾಶವೆಂದು ಹಣಕಿದೆ ಮೂರು ಗತಿ
ಒಂದನೆಯದು ಎರಡನೆಯದೂ ಮಾಡದೆ
ಹೋದರೆ ಮೂರನೆ ಗತಿಯೇ ಪ್ರಾಪ್ತಿ
------------------------------------------------------------
ಇರಲಿ ಆಸಕ್ತಿ ಸಾಹಿತ್ಯ ಸಂಗೀತ
ಅಥವಾ ಇನ್ನಾವುದೋ ಕಲೆಯ ಮೇಲೆ
ಇಲ್ಲದೆ ಹೋದರೆ ಅವ ಪಶುವೇ ಸರಿ
ಬಾಲ ಕೊಂಬು ಎರಡಿಲ್ಲದೆಲೆ!
ಹುಲ್ಲನು ತಿನ್ನದೇ ಜೀವಿಸಬಲ್ಲವ
-ನೆಂಬುದೆ ಪುಣ್ಯ ಪ್ರಾಣಿಗಳಿಗೆ!

------------------------------------------------------------
ನೀಚರಿಗೆ ಮಾಡಿದುಪಕಾರ
ಆಗೇ ಆಗುವುದು ಅಪಕಾರ
ಹಾವಿಗೆ ಕುಡಿಸಿದ ಹಾಲು ಸಹ
ಆಗುವುದಲ್ಲವೆ ಘೋರ ವಿಷ
---------------------------------------------------------------
ಗುಣಗಳ ಗುಂಪಲಿ ಒಂದೇ ಕೊರತೆ
ಚಂದ್ರನ ಬೆಳಕಲಿ ಕಲೆಯಂತೆ
ಮುಚ್ಚೀತೆಂದ ಕವಿ ತಾ ಕಾಣನು
ಲೋಕದ ನಿಜರೂಪದ ಮೋರೆ;
ಸಾವಿರ ಗುಣಗಳ ಮುಚ್ಚಿ ಹಾಕದೆ
ಬಡತನವೆಂಬೊಂದು ಕೊರೆ ?

----------------------------------------------------------------

ಕಮಲೇ ಕಮಲೋತ್ಪತ್ತಿಃ ಶ್ರೂಯತೇ ನ ಚ ದೃಶ್ಯತೇ

ಬಾಲೇ ತವ ಮುಖಾಂಬೋಜೇ ದೃಶ್ಯಮಿಂದೀವರದ್ವಯಂ

ಕಮಲದಲಿ ಕಮಲ ಹುಟ್ಟಿದುದ
ಕಾಣೆನು ಕೇಳೆನು ಎನ್ನದಿರು
ಓ ಗೆಳತೀ ನಿನ್ನೀ ಮುಖಕಮಲದಲಿ
ಜನಿಸಿರಲು ಕಣ್ಣೆಂಬ ಕಮಲವೆರಡು

ಕೇಳಿರಿ ಚಿಂತೆಗೂ ಚಿತೆಗೂ
ವ್ಯತ್ಯಾಸವಂತೂ ಬರಿ ಸೊನ್ನೆ
ಸುಟ್ಟರೆ ಚಿತೆ ಹೋದವನನ್ನು
ಚಿಂತೆ ಸುಟ್ಟೀತು ಇದ್ದವನನ್ನೆ

ದುಷ್ಟರ ಜೊತೆಯಲಿ ದ್ವೇಷವು ಬೇಡ
ಮಾಡದಿರು ನೀ ಅತಿ ಪ್ರೀತಿ
ಕೆಂಡವು ಬಿಸಿಯಲಿ ಕೈಯನು ಸುಡುವುದು
ತಣಿದಿದ್ದರೆ ಆಗುವುದು ಮಸಿ

ಹಲ್ಲು ಉಗುರು ಕೂದಲು ಮನುಜರು
ಇರಬೇಕಾದಲ್ಲೆ ಶೋಭಿಪರು
ಅದಕೆಂದೇ ಉತ್ತಮ ಜನರು
ತಮ್ಮ ಸ್ಥಾನವ ಬಿಡದಿಹರು

ಚೇಳಿನ ವಿಷವದು ಬಾಲದ ಕೊಂಡಿಲಿ
ನೊಣಕ್ಕದು ಬಾಯಲ್ಲೆಲ್ಲಾ
ಹಾವಿನ ಹಲ್ಲಲಿ ತುಂಬಿದೆ ಆ ವಿಷ
ಕೆಟ್ಟವನಿಗೋ ಮೈಯಲ್ಲೆಲ್ಲಾ

ಲಕ್ಷ್ಮಿಯು ಬಳಿಯಿದ್ದವನರಿಯನು
ಪ?ರಿಗಾಗುವ ವೇದನೆ
ಭೂಮಿಯ ಭಾರವ ಹೊತ್ತಿರೆ ಶೇಷನು
ಮಲಗಿಹ ನಾರಾಯಣ ಸುಮ್ಮನೆ

ಸ್ವಯಂಪ್ರಜ್ಞೆ ಇಲ್ಲದವನಿಗೆ
ಕಲಿಕೆ ಏನು ಮಾಡೀತು ?
ಕಣ್ಣೇ ಇಲ್ಲದ ಹುಟ್ಟುಕುರುಡಗೆ
ಕನ್ನಡಿಯಿಂದೇನಾದೀತು ?

ಪ್ರಿಯವಾಕ್ಯ ಪ್ರದಾನೇನೆ ಸರ್ವೇ ತುಷ್ಯಂತಿ ಮಾನವಾಃ

ಏತದ್ ತದೈವ ವಕ್ತವ್ಯಮ್, ವಚನೇ ಕಿಮ್ ದರಿತ್ರತಾ?

ಒಳ್ಳೆಯ ಮಾತನು ಕೇಳಲು
ಎಲ್ಲರು ಸಂತಸ ಹೊಂದುವರು
ಅದಕೇ ಅಂಥಾ ಮಾತನೆ ನೀ ನುಡಿ
ಬರೀ ಮಾತಿಗೇನು ಬಡತನವು

ಕಟ್ಟಿಗೆಯಲ್ಲಿಲ್ಲ ಅವನು
ಕಲ್ಲಲಿ ಮಣ್ಣಲಿ ಅವನಿಲ್ಲ
ಮನದಲಿ ಇಹನು ಆ ಜಗದೊಡೆಯನು
ಭಾವವೆ ಎಲ್ಲಕು ಕಾರಣವು

ಕಾಕಃ ಕೃಷ್ಣಃ ಪಿಕ: ಕೃಷ್ಣಃ ಕೋ ಭೇದಃ ಪಿಕ ಕಾಕಯೋಃ?

ವಸಂತ ಕಾಲೇ ಸಂಪ್ರಾಪ್ತೇ ಕಾಕಃ ಕಾಕಃ ಪಿಕಃ ಪಿಕಃ 

ಕಾಗೆಯು ಕಪ್ಪು ಕೋಗಿಲೆ ಕಪ್ಪು
ಎಲ್ಲಿದೆ ಏನಿದೆ ವ್ಯತ್ಯಾಸ ?
ವಸಂತಕಾಲವು ಬಂದಿರೆ ತಾನು
ಆಗುವುದು ಖಂಡಿತ ಭಾಸ

-ಹಂಸಾನಂದಿ

  • ಸುಭಾಷಿತ ಜ್ಞಾನವಾಹಿನಿ
~.~
  • hamsanandi ರವರ ಬ್ಲಾಗ್
  • Login or register to post comments
  • 563 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 3, 2007 - 7:05am — hamsanandi

Re: ಕೆಲವು ಸುಭಾಷಿತಗಳು

hamsanandi's picture

ವರ್ಡ್ ನಿಂದ ಇಲ್ಲಿಗೆ ತರುವಾಗ, ಸಾಲುಗಳ ಅಂತರ ಹೆಚ್ಚ್ಜು-ಕಡಿಮೆಯಾಗಿದೆ - ಇದನ್ನು ಸರಿಮಾಡುವುದು ಹೇಗೆ ? ಯಾರಾದರೂ ತಿಳಿಸುವಿರಾ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 3, 2007 - 7:21pm — ismail

ದಯವಿಟ್ಟು ಯೂನಿಕೋಡ್ ಬಳಸಿ

ismail's picture

ಇತ್ತೀಚೆಗೆ ಸಂಪದದಲ್ಲಿ ಬರೆಹಗಳನ್ನು ಹಾಕುವ ಹಲವರು "ಬರಹ"ದ ANSI ಫಾಂಟ್ ಗಳನ್ನು ಬಳಸುತ್ತಿದ್ದಾರೆ. ಹಂಸಾನಂದಿಯವರೆ ತಾವೂ ವರ್ಡ್ ಡಾಕ್ಯುಮೆಂಟ್ ನಲ್ಲಿ  "ಬರಹ" ಬಳಸಿ ಟೈಪಿಸಿದ್ದನ್ನು ನೇರವಾಗಿ "ಸಂಪದ"ಕ್ಕೆ ಪೇಸ್ಟ್ ಮಾಡಿದ್ದೀರಿ. ಸದ್ಯಕ್ಕೆ ನಾನಿದನ್ನು ಯೂನಿಕೋಡ್ ಗೆ ಪರಿವರ್ತಿಸಿದ್ದೇನೆ. ಇನ್ನು ಮುಂದೆ ತಮ್ಮ ಬರೆಹವನ್ನು ಸಂಪೂರ್ಣವಾಗಿ ಯೂನಿಕೋಡ್ ನಲ್ಲಿ ಇರುವಂತೆ ನೋಡಿಕೊಳ್ಳುತ್ತೀರೆಂದು ನಂಬಿದ್ದೇನೆ. ಇದಕ್ಕಾಗಿ ನೀವು ಮತ್ತೊಮ್ಮೆ ಟೈಪಿಸುವ ಅಗತ್ಯವಿಲ್ಲ. ಬರಹ-6 ಮತ್ತು ಬರಹ-7 ತಂತ್ರಾಂಶಗಳ ಜತೆ ಲಭ್ಯವಿರುವ Baraha convert ಸೌಲಭ್ಯವನ್ನು ಬಳಸಿ ನಿಮ್ಮ ಬರೆಹವನ್ನು ಸುಲಭವಾಗಿ ANSIನಿಂದ ಯೂನಿಕೋಡ್ ಗೆ ಪರಿವರ್ತಿಸಬಹುದು. ವರ್ಡ್ ಡಾಕ್ಯುಮೆಂಟ್ ಗಳಿಂದ ನೇರವಾಗಿ ಕಾಪಿ-ಪೇಸ್ಟ್ ಮಾಡುವುದರಿಂದ ಆಗುವ ತೊಂದರೆಗಳ ಬಗ್ಗೆ ಎಚ್ .ಪಿ. ನಾಡಿಗ್ ಮತ್ತು ಸುನಿಲ್ ಜಯಪ್ರಕಾಶ್ ವಿವರವಾಗಿ ಬರೆದಿದ್ದಾರೆ. ಇದನ್ನು ನೀವು ಓದಿಕೊಳ್ಳಿ. ಹಾಗೆಯೇ ಸಂಪದದಲ್ಲಿ ಬರೆಯುವಾಗ ಗಮನದಲ್ಲಿಟ್ಟುಕೊಳ್ಳಬೇಕಾದ ಅಂಶಗಳ ಕುರಿತ ಮಾಹಿತಿಯನ್ನೂ ಓದಿಕೊಳ್ಳಿ.

ನಿಮ್ಮ ಅನುವಾದಗಳು ಚೆನ್ನಾಗಿವೆ. ಇನ್ನಷ್ಟು ಅನುವಾದಗಳು ನಿಮ್ಮಿಂದ ಬರಲಿ ಎಂದು ಹಾರೈಸುತ್ತೇನೆ.

ಇಸ್ಮಾಯಿಲ್ ನನ್ನ ಬ್ಲಾಗ್: http://ismail.sampada.net

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 3, 2007 - 10:48pm — hamsanandi

Re: ದಯವಿಟ್ಟು ಯೂನಿಕೋಡ್ ಬಳಸಿ

hamsanandi's picture

ಇಸ್ಮಾಯಿಲ್ ಅವರೆ,

ವರ್ಡ್ ನಿಂದ ನೇರವಾಗಿ ತಂದದ್ದಕ್ಕೆ ಕ್ಷಮೆ ಇರಲಿ. ನೀವು ಯುನಿಕೋಡ್ ಗೆ ಬದಲಾಯಿಸಿದ್ದಕ್ಕೆ ಧನ್ಯವಾದಗಳು. ಇದು ಹಿಂದೆ ಯಾವಾಗಲೋ ಮಾಡಿದ್ದವುಗಳು, ಹಾಗಾಗಿ ವರ್ಡ್ ನಲ್ಲಿದ್ದವು. ಬರಹ ಕನ್ವರ್ಟ್ ಬಗ್ಗೆ ನನಗೆ ತಿಳಿದಿರಲಿಲ್ಲ. ಇನ್ನು ಮುಂದೆ ಹೀಗಾಗದೆಂದು ಭರವಸೆ ಕೊಡುತ್ತೇನೆ.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 4, 2007 - 12:43am — hpn

ಬರಹ ಕನ್ವರ್ಟರ್

hpn's picture

http://dev.sampada.net/wiki/Baraha_Converter_on_Windows_XP

http://dev.sampada.net/wiki/Baraha_IME

http://dev.sampada.net/wiki/Kannada-Unicode-on-Windows-XP

http://dev.sampada.net/wiki/Enabling_Clear_type_on_Windows_XP

Smiling

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 3, 2007 - 10:40am — krishnamurthy bmsce

Re: ಕೆಲವು ಸುಭಾಷಿತಗಳು

krishnamurthy bmsce's picture

ನಂದಿಯವರೆ ನಿಮ್ಮ "ಕೆಲವು ಸುಭಾಷಿತಗಳು" ಸೊಗಸಾಗಿವೆ ಇದರ ಜೊತೆಯಲ್ಲೇ ಸಂಸ್ಕೃತ ಶ್ಲೋಕವನ್ನೂ ಬರೆದಿದ್ದರೆ ಸೂಕ್ತವಾಗಿತ್ತು.ಬರೆಯುತ್ತೀರಿತಾನೆ ಹಾಗೆ ಸಾಲುಗಳ ಅಂತರದ ಬಗ್ಗೆ ನೀವು ಕೇಳಿದ್ದೀರಿ ನೀವು ನೇರ ಬರಹ ದಲ್ಲಿ ಬರೆದು (paeview)(ತಿದ್ದಿ)ನೋಡಿ ನಿಮಗೆ ಸಾಲುಗಳ ಅಂತರ ಸರಿಯಾಗಿದ್ದರೆ (submit )ಮಾಡಿ.

ಕೃಷ್ಣಮೊರ್ತಿಅಜ್ಜಹಳ್ಳಿ ಐ ಇ ಎಂ ಬಿ ಎಂ ಎಸ್ ಸಿ ಇ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 5, 2007 - 11:30pm — hamsanandi

Re: ಕೆಲವು ಸುಭಾಷಿತಗಳು

hamsanandi's picture

 

ಎಡಿಟರ್ ನಲ್ಲಿ, ಎಂಟರ್ ಹಾಕಿ ಮುಂದಿನ ಸಾಲಿಗೆ ಹೋದರೆ, ಸಾಲುಗಳ ಮಧ್ಯ ಇರುವ ಅಂತರ ಹೆಚ್ಚಾಗುತ್ತಲ್ಲ ಏಕೆ?  ಮುಂದಿನ ಪ್ಯಾರಾಗ್ರಾಫ್ ಗೆ ಹೋಗದೆ, ಮುಂದಿನ ಸಾಲಿಗೆ ಹೋಗಲು ಯಾವುದಾದರೂ ಕಂಟ್ರೋಲ್ ಸಂಜ್ಝೆ ಬಳಸಬೇಕೇ? ಉದಾಹರಣೆಗೆ ನೋಡಿ - ನನ್ನ ಮೊದಲ ಪೋಸ್ಯ್ ಅನ್ನು ತಿದ್ದಿ, ಸಂಸ್ಕೃತ ಮೂಲ ಹಾಕಲು ಪ್ರಯತ್ಸಿಸಿದಾಗ, ಮುನ್ನೋಟದಲ್ಲಿ ಸರಿಯಾಗಿ ಕಂಡರೂ, ನಂತರ ಸಾಲುಗಳು ಸರಿಯಾಗಿ ಕಾಣುತ್ತಿಲ್ಲ.

(ಒಂದು ಶ್ಲೋಕದಲ್ಲಿ, ಎಂಟರ್ ಒತ್ತಿದ್ದೆ, ಇನ್ನೊಂದರಲ್ಲಿ, ಸ್ಪೇಸ್ ಬಳಸಿ ಮುಂದಿನ ಸಾಲಿಗೆ ಹೋಗಿದ್ದೆ)

ಇದರ ಬಗ್ಗೆ ಮಾಹಿತಿ ಇದೆಯೇ?

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಚಾಣಕ್ಯ ನೀತಿ - ಮತ್ತೊಮ್ಮೆ
  • ಹಣವೇ ಗುಣವೆ?
  • ಆಯ್ದ ಸಂಸ್ಕೃತ ಸುಭಾಷಿತಗಳು. (೩೭-೩೯)
  • ಭರ್ತೃಹರಿಯ ಸುಭಾಷಿತತ್ರಿಶತಿ - ಒಂದು ಅವಲೋಕನ
  • ಕಾಗೆ-ಕೋಗಿಲೆಗಳ ನಡುವಣ ವ್ಯತ್ಯಾಸ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator