ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||
ಸಂಪದ ಆರ್ಕೈವಿನಿಂದ
ಲೇಖಕರು
ಪೂರ್ಣ ಹೆಸರು
ಹಂಸಾನಂದಿ
ಪರಿಚಯ
ನಿಮ್ಮೆಲ್ಲರಂತೆ ನಾನೊಬ್ಬ ಕನ್ನಡಿಗ. ಇಂಗ್ಲಿಷಲ್ಲೇನಾದ್ರೂ ಗೀಚ್ಬೇಕೂನ್ಸ್ದಾಗ ಇಲ್ಬರೀತೀನ್ನೋಡಿ: http://neelanjana.wo...
ಬೆನ್ನು ತಟ್ಟಿದವರು :-)
ಯಾರಾದರೂ ಬೆನ್ನು ತಟ್ಟಿದರೆ ಯಾರಿಗೆ ತಾನೇ ಸಂತೋಷವಾಗುವುದಿಲ್ಲ?
ಅದೂ, ಅಪರಿಚಿತರು ಒಂದು ಒಳ್ಳೆ ಮಾತು ಹೇಳಿದರೂ ಮನಸ್ಸಿಗೆ ಹಿತವಾಗುವುದು ಸಹಜ. ಇದೇ ಕಾರಣಕ್ಕೆ, ಭಾರೀ ಸಂಗೀತಗಾರರೂ ಕೂಡ, ಕಾರ್ಯಕ್ರಮದ ನಂತರ ಒಬ್ಬ ಕೇಳುಗ ಅವರ ಬಳಿ ಹೋಗಿ ಇಂದಿನ ಕಾರ್ಯಕ್ರಮ ಚೆನ್ನಾಗಿತ್ತು, ಈ ರಾಗ ಈ ಕೃತಿ ಹಿಡಿಸಿತು ಎಂಬುದನ್ನು ಹೇಳಿದರೆ ಆನಂದಪಡುತ್ತಾರೆ. ಇದನ್ನು ಪ್ರಖ್ಯಾತ ಕಲಾವಿದೆಯರಾದ ಮೈಸೂರು ನಾಗಮಣಿ ಶ್ರೀನಾಥ್, ಸುಧಾ ರಘುನಾಥನ್ ಮೊದಲಾದವರು ಸ್ವತಃ ಹೇಳಿದ್ದನ್ನು ಕೇಳಿರುವೆ.
ಇಷ್ಟೆಲ್ಲ ಮಾತಿಗೆ ಕಾರಣವೇನು ಎಂದಿರಾ? ಇವತ್ತು ಕೆಂಡಸಂಪಿಗೆ ಪೋರ್ಟಲ್ ದಿನಪತ್ರಿಕೆಯ ದಿನದ ಬ್ಲಾಗ್ ಆಗಿ ಹಂಸ ನಾದ :) ಕಾಣಿಸಿಕೊಂಡಿದೆ.
-ಹಂಸಾನಂದಿ
(ನನ್ನ (mostly) ಇಂಗ್ಲಿಷ್ ಬ್ಲಾಗ್ ಅಲ್ಲಿದೆ ನಮ್ಮ ಮನೆ:- http://neelanjana.wordpress.com/ )
- hamsanandi's blog
- Login or register to post comments
- 737 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version


RSS:
ಪ್ರತಿಕ್ರಿಯೆಗಳು
ಉ: ಬೆನ್ನು ತಟ್ಟಿದವರು :-)
ಹಂಸಾನಂದಿಗಳೇ, ನನಗೆ ಈ ದಿನವಷ್ಟೇ ತಿಳಿಯಿತು. ಕೆಂಡಸಂಪಿಗೆಯವರು ನನ್ನ ಬ್ಲಾಗಿನ ಬಗ್ಗೆಯೂ ಬರೆದಿದ್ದಾರೆ. ಅದೂ ಮಾರ್ಚ್ ೧೨ರಷ್ಟು ಹಿಂದೆಯೇ. ಅಂದರೆ ಒಂದು ತಿಂಗಳ ಹಿಂದೆ.
ನಾನು ಈ ದಿನವಷ್ಟೇ ನೋಡಿದೆ. ನನಗೂ ತುಂಬಾ ಸಂತೋಷವಾಯಿತು.