ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

January 6, 2008 - 7:48am — hamsanandi

ಇಂದು ಜನವರಿ ಆರು. ಸರಿಯಾಗಿ ನೂರರವತ್ತೊಂದು ವರ್ಷದ ಹಿಂದೆ, ನಾವು ಒಬ್ಬ ರಾಜನನ್ನು ಕಳೆದುಕೊಂಡೆವು. ಅಥವಾ ನಿಜ ಹೇಳಬೇಕೆಂದರೆ, ಅವತ್ತಿನಿಂದ ಆತ ಚಿರಂಜೀವಿಯಾಗಿಹೋದರು. ಈ ರಾಜ ಯಾವ ಯುದ್ಧವನ್ನೂ ಮಾಡಿ ಜಯಿಸಿಲಿಲ್ಲ. ಯಾವ ರಾಜ್ಯಕ್ಕೂ ರಾಜನಾಗಲಿಲ್ಲ. ಎಲ್ಲವನ್ನೂ ’ತ್ಯಾಗ’ ಮಾಡಿದರೂ, ಸಂಗೀತ ಪ್ರಪಂಚಕ್ಕೇ ರಾಜರಾಗಿ ಮೆರೆದರು.

ಹೌದು. ತ್ಯಾಗರಾಜರ ದೇಹಾಂತ್ಯ ಆದದ್ದು ೧೮೪೭ರ ಜನವರಿ ಆರರಂದು. ಆ ದಿನ ಪುಷ್ಯ ಬಹುಳ ಪಂಚಮಿ. ಪುರಂದರ ದಾಸರನ್ನು ಮನಸಲ್ಲೇ ಗುರುವಾಗಿ ನಿಲಿಸಿಕೊಂಡ ತ್ಯಾಗರಾಜರು ದಾಸರ ಆರಾಧನೆಯ ತಿಂಗಳಾದ ಪುಷ್ಯ ಮಾಸದಲ್ಲೇ ದೇಹತ್ಯಾಗ ಮಾಡಿದ್ದು ಕಾಕತಾಳೀಯವಿರಬಹುದು. ಆದರೆ, ಪುರಂದರ ದಾಸರ ರಚನೆಗಳಿಗೂ, ತ್ಯಾಗರಾಜರ ರಚನೆಗಳಲ್ಲೂ ಇರುವ ಹೋಲಿಕೆ ಕಾಕತಾಳೀಯವೇ? ಅಥವಾ, ದಾಸರ ಸಾಹಿತ್ಯ ತ್ಯಾಗರಾಜರ ಮೇಲೆ ಮಾಡಿದ ಪ್ರಭಾವದ ಪರಿಣಾಮವೇ? ಅಥವಾ ಮಹಾತ್ಮರ ಮನಗಳು ಒಂದೇ ತೆರದಲ್ಲಿ ಯೋಚಿಸುವುವೇ?

(ಚಿತ್ರ: http://www.karnatik.com/ ಕೃಪೆ)


ಈ ಪ್ರಶ್ನೆಗೆ ನನ್ನಲ್ಲಿ ಖಚಿತ ಉತ್ತರವಿಲ್ಲ. ಆದರೆ, ಪ್ರಹ್ಲಾದ ಭಕ್ತಿ ವಿಜಯದ ಮಂಗಳಶ್ಲೋಕದಲ್ಲಿ ತ್ಯಾಗರಾಜರು ಪುರಂದರ ದಾಸರನ್ನು ನೆನೆದಿರುವುದೂ, ಮತ್ತು ಹಲವಾರು ತ್ಯಾಗರಾಜರ ರಚನೆಗಳು ಪುರಂದರ ದಾಸರ ರಚನೆಗಳನ್ನು ಹೋಲುವುದೂ ನಿಜವಾದ ಸಂಗತಿ.

ಉದಾಹರಣೆಗೆ ಹೇಳುವುದಾದರೆ, ಪುರಂದರದಾಸರು "ಸಕಲಗ್ರಹಬಲನೀನೆ ಸರಸಿಜಾಕ್ಷ” ಎಂದರೆ, ತ್ಯಾಗರಾಜರು "ಗ್ರಹಬಲಮೇಮಿ? ರಾಮಾನುಗ್ರಹಮೇ ಬಲಮು" (ಗ್ರಹಬಲವೇನದು? ರಾಮನ ಅನುಗ್ರಹವೇ ಬಲ) ಅನ್ನುತ್ತಾರೆ. ಪುರಂದರ ದಾಸರು "ಕೇಳನೋ ಹರಿ ತಾಳನೋ, ತಾಳಮೇಳಗಳಿದ್ದು ಪ್ರೇಮವಿಲ್ಲದ ಗಾನ" ಎಂದು ಹಾಡಿದರೆ, ತ್ಯಾಗರಾಜರು "ಸಂಗೀತ ಜ್ಞಾನಮು ಭಕ್ತಿವಿನಾ ಸನ್ಮಾರ್ಗಮು ಗಲದೇ!" ಅನ್ನುತ್ತಾರೆ.

ನನಗೆ ಹಿಡಿಸಿರುವ ಪುರಂದರ ದಾಸರ ಒಂದು ಉಗಾಭೋಗ ಹೀಗಿದೆ:

ನಿನ್ನಂಥ ಸ್ವಾಮಿ ನನಗುಂಟು ನಿನಗಿಲ್ಲ
ನಿನ್ನಂಥ ದೊರೆಯು ಎನಗುಂಟು ನಿನಗಿಲ್ಲ
ನಿನ್ನಂಥ ತಂದೆ ಎನಗುಂಟು ನಿನಗಿಲ್ಲ
ನಾನೇ ಸ್ವದೇಶಿ ನೀನೇ ಪರದೇಶಿ
ನಿನ್ನರಸಿ ಲಕುಮಿ ಎನ್ನ ತಾಯಿ
ನಿನ್ನ ತಾಯ ತೋರೋ ಪುರಂದರ ವಿಠಲ!

ತ್ಯಾಗರಾಜರು ತಮ್ಮ ಜಿಂಗಲ ರಾಜದ ಕೃತಿಯೊಂದರಲ್ಲಿ ಹೀಗೆ ಹಾಡುತ್ತಾರೆ.

ಪಲ್ಲವಿ:

ಅನಾಥುಡನು ಗಾನು ರಾಮ ನೇ ||ನನಾಥುಡನುಗಾನು ||

ಅನುಪಲ್ಲವಿ:

ಅನಾಥುಡವು ನೀವನೆ ನಿಗಮಜ್ಞುಲ ಸನಾತನುಲ ಮಾಟವಿನ್ನಾವು ನೇ ||ನನಾಥುಡನುಗಾನು||

ಚರಣ:

ನಿರಾದರವು ಜೂಚಿ ಈ ಕಲಿ ನರಾಧಮುಲನೆದರು

ಪುರಾಣಪುರುಷ ಪುರರಿಪುನುತ ನಾಗರಾಜ ಶಯನ ತ್ಯಾಗರಾಜನುತ ನೇ|| ನನಾಥುಡನು ಗಾನು ||

 

ಇದನ್ನೇ ಕನ್ನಡದಲ್ಲಿ ಓದುವ ಹಂಬಲ ನನಗೆ - ಅದಕ್ಕೆಂದು ಇದನ್ನು ಹೀಗೆ ಕನ್ನಡಿಸಿದ್ದೇನೆ.

ಪಲ್ಲವಿ:

ಅನಾಥನಾಗಿಲ್ಲ! ರಾಮ ನಾ ||ನನಾಥನಾಗಿಲ್ಲ ||

ಅನುಪಲ್ಲವಿ:

ಅನಾಥ ನೀನೆಂದು ನಿಗಮಗಳನರಿತ
ಸನಾತನರು ಪೇಳ್ವುದ ಕೇಳಿಹೆ! ನಾ ||ನನಾಥನಾಗಿಲ್ಲ||

ಚರಣ:

ಆದರಿಪರು ಎನಗಿರದೆ ಮನುಜರು ಕಲಿಕಾ-
ಲದಿ ಅನಾಥ ನೀಯೆಂಬರು! ಅ-
ನಾದಿಪುರುಷ ತ್ರಿಪುರಾರಿನುತನ
ಸದಾ ಈ ತ್ಯಾಗರಾಜ ಮಣಿದಿರೆ, ನಾ ||ನನಾಥನಾಗಿಲ್ಲ||

ಇಲ್ಲಿ ಪುರಂದರರು, ಮತ್ತು ತ್ಯಾಗರಾಜರ ಭಾವನೆಗಳ ಹೋಲಿಕೆಗಳು ಎಷ್ಟು ಚೆನ್ನಾಗೆ ಎದ್ದು ತೋರುತ್ತಿವೆ. ಅಲ್ಲವೇ? ಇನ್ನೂ ತ್ಯಾಗರಾಜರ ಬಗ್ಗೆ ಮಂಥನ ಮಾಡುವಂತಹದ್ದು ಬೇಕಾದಷ್ಟಿದೆ. ಸ್ವಲ್ಪವನ್ನಾದರೂ ಪುಷ್ಯ ಬಹುಳ ಪಂಚಮಿಯ ತ್ಯಾಗರಾಜ ಆರಾಧನೆಯ ದಿವಸಕ್ಕೆ ಬಾಕಿ ಇರಿಸಿಕೊಳ್ಳುತ್ತೇನೆ Smiling ಅಷ್ಟು ದಿನ ಕಾಯಲು ಇಷ್ಟವಿಲಲ್ವೆ? ಇಂಗ್ಲಿಷ್ ನಲ್ಲಿರುವ ಈ ಬರಹವನ್ನು ಓದುತ್ತಿರಿ! ನಿಮಗೆ ಹಿಡಿಸಲೂಬಹುದು!

ಸದ್ಯಕ್ಕೆ ತ್ಯಾಗರಾಜರ ನುಡಿಮುತ್ತಿನೊಂದಿಗೆ ಈ ಬರಹಕ್ಕೆ ಮಂಗಳ ಹಾಡುವೆ - "ಎಂದರೋ ಮಹಾನುಭಾವುಲು ಅಂದರಿಕಿ ವಂದನಮುಲು".

-ಹಂಸಾನಂದಿ

  • ಅನುವಾದ
  • ಕರ್ನಾಟಕ ಸಂಗೀತ
  • ಜ್ಞಾನವಾಹಿನಿ
  • ತ್ಯಾಗರಾಜ
  • ಪುರಂದರ ದಾಸ
~.~
  • hamsanandi ರವರ ಬ್ಲಾಗ್
  • Login or register to post comments
  • 476 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 6, 2008 - 9:27am — rameshbalaganchi

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

rameshbalaganchi's picture

ಉಗಾಭೋಗ ಅನ್ನುವ ಪದ ಯಾವುದಕ್ಕೆ ಅನ್ವಯಿಸುತ್ತದೆ? ಕೃತಿಯ ಸ್ವರೂಪಕ್ಕೋ ಅಥವಾ ಅದರ ತಿರುಳಿಗೋ? ದಯಮಾಡಿ ತಿಳಿಸಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 7, 2008 - 6:24am — aniljoshi

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

aniljoshi's picture

ಹಂಸಾನಂದಿ ಅವರೆ,
ಚನ್ನಾಗಿದೆ ನಿಮ್ಮ ನುಡಿನಮನ. ಪುರಂದರದಾಸರು ಮತ್ತು ತ್ಯಾಗರಾಜರ ಕೃತಿಗಳ ಉದಾಹರಣೆಗಳು ಎಸ್.ಕೆ.ರಾಮಚಂದ್ರ ಅವರು ಬರೆದ 'ದಾಸಸಾಹಿತ್ಯ ಮತ್ತು ಸಂಸ್ಕೃತಿ' ಎನ್ನುವ ಪುಸ್ತಕವನ್ನು ನೆನಪಿಸಿತು.

ಅನಿಲ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 7, 2008 - 10:26pm — hamsanandi

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

hamsanandi's picture

ಅನಿಲ ಜೋಷಿ,

ಮೆಚ್ಚುಗೆಗೆ ಧನ್ಯವಾದಗಳು. ಎಸ್.ಕೆ.ಆರ್ ಅವರ ಈ ಪುಸ್ತಕವನ್ನು ನಾನೂ ಓದಿದ್ದೇನೆ. ವಿ.ಎಸ್.ಸಂಪತ್ಕುಮಾರಾಚಾರ್ಯರ ಪುಸ್ತಕ ( ತ್ಯಾಗರಾಜ-ಜೀವನ-ಸಾಧನೆ ಎಂದೇನೋ ಹೆಸರು ಎಂದು ನೆನಪು) ಸಿಕ್ಕರೆ ಓದಿ. ಚೆನ್ನಾಗಿದೆ.

ರಮೇಶರೆ,

ಉಗಾಭೋಗ ಎನ್ನುವುದು ಹರಿದಾಸರು ಮಾಡಿರುವ ರಚನೆಗಳಲ್ಲಿ ಒಂದು ಬಗೆ. ಪದ ಮತ್ತು ಸುಳಾದಿಗಳು ಇತರ ಬಗೆಗಳು.

ಪದ, ಸುಳಾದಿಗಳಲ್ಲಿ ಪಲ್ಲವಿ-ಅನುಪಲ್ಲವಿ-ಚರಣ ಎಂಬ ಭಾಗಗಳಿರುತ್ತವೆ. ಪದಗಳಲ್ಲಿ ಕಡೇ ಪಕ್ಷ ಒಂದು ಚರಣ ಇರುತ್ತದೆ. ೨೦-೩೦ ಚರಣಗಳಿರುವ ಪದಗಊ ಇವೆ. ಸುಳಾದಿಗಳಿಗೆ ತಾಳದ ರಚನೆ ಹೀಗೇ ಇರಬೇಕು ಎನ್ನುವ ಕಟ್ಟುಪಾಡಿದೆ,ಮತ್ತಲ್ಲದೆ ಚರಣಗಳು ೪-೫-೬-೭ ಸಂಖ್ಯೆಯಲ್ಲೇ ಇರಬೇಕು. ಮತ್ತೆ ಈ ಎರಡೂ ಪ್ರಕಾರಗಳಿಗೂ, ಕವಿತೆಗಳಿಗೆ ಇರಬೇಕಾದ ಪ್ರಾಸ-ಯತಿ ಮೊದಲಾದ ಛಂದಸ್ಸಿನ ಬಂಧವೂ ಇದೆ.

ಉಗಾಭೋಗಗಳಿಗೆ ತಾಳದ ಕಟ್ಟು, ಛಂದಸ್ಸಿನ ಹಂಗು ಎರಡೂ ಇಲ್ಲ. ಕೆಲವುಕಡೆ ದ್ವಿತೀಯಾಕ್ಷರ ಪ್ರಾಸ ಕಂಡುಬರುವುದಾದರೂ (ಉದಾಹರಣೆಗೆ, ನಾನು ಮೇಲಿನ ಬರಹದಲ್ಲಿ ಕೊಟ್ಟಿರುವ ನಿನ್ನಂಥ ಸ್ವಾಮಿ ಎನಗುಂಟು ಎನ್ನುವ ಉಗಾಭೋಗ), ಎಲ್ಲ ಉಗಾಭೋಗಗಳಲ್ಲೂ ಅದು ಕಾಣದು. ಹಾಗಾಗಿ, ಅದರ ಅಗತ್ಯ ಇದ್ದೇ ಇದೆ ಎಂಬ ಕಟ್ಟುಪಾಡಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಉಗಾಭೋಗಗಳಲ್ಲಿ ಪಲ್ಲವಿ-ಅನುಪಲ್ಲವಿ ಮೊದಲಾದ ಕೃತಿ ವಿಭಾಗಗಳಿಲ್ಲ. ಇದನ್ನು ಹಾಡುವಾಗಲೂ, ತಾಳವಿಲ್ಲದೇ (ಗಮಕ ವಾಚನ/ಕಾವ್ವ್ಯ ವಾಚನದಂತೆ) ವಿಸ್ತಾರ ಮಾಡಿ ಹಾಡುವುದು ಪದ್ಧತಿ. ಅಲ್ಲದೆ, ಹಾಡುವಾದ, ಉಗಾಭೋಗವೊಂದನ್ನು ಹಾಡಿ, ನಂತರ ಅದರ ಅರ್ಥಕ್ಕೆ- ಮೂಲ ಯೋಚನೆಗೆ ಹೊಂದುವಂತಹ, ದೇವರನಾಮ(ಪದ್) ವೊಂದನ್ನು ಹಾಡುವುದು ರೂಢಿ. ಬರೀ ಉಗಾಭೋಗವೊಂದನ್ನು stand-alone ಹಾಡುವುದನ್ನು ನಾನು ಕೇಳಿಲ್ಲ. ಆದರೆ, ಅದು ಪರಂಪರಾಗತವಾಗಿ ಬಂದದ್ದೇ ಅಲ್ಲವೇ ಎನ್ನುವುದಕ್ಕೆ ನನ್ನಲ್ಲಿ ಉತ್ತರವಿಲ್ಲ.

ಉಗಾಭೋಗಗಳಿಗೆ ಅತಿ ಹತ್ತಿರದ ಸಂಬಂಧಿ ಎಂದರೆ ಶಿವ ಶರಣರ ವಚನಗಳು. ಆದರೆ, ನನಗೆ ತಿಳಿದ ಮಟ್ಟಿಗೆ ವಚನಗಳು ಹೇಳುವಂತಹವು (ವಚನ -> ಮಾತು). ಆದರೆ, ಉಗಾಭೋಗಗಳು ಹಾಡುವಂತಹವು (ಹರಿದಾಸ ಪರಂಪರೆಯ ಎಲ್ಲ ರಚನೆಗಳಂತೆ).

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 7, 2008 - 10:51pm — mahesha

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

mahesha's picture

ಚನ್ನಾಗಿದೆ

ಗಾನು ಅಂದ್ರೆ ಆಗೆನು/ಆಗನು ಅಂತ ಅಲ್ವ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 8, 2008 - 12:59pm — muralihr

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

muralihr's picture

ಶತಾವಧಾನಿ ಗಣೇಶ್ ಮತ್ತು ವಿದ್ವಾನ್ ಶ೦ಕರ್ ರವರು - ಗೋಖಲೆ ಸ೦ಸ್ಥೆಯಲ್ಲಿ ಪ್ರವಚನ ಮಾಡುತ್ತಿದ್ದಾರೆ, ವಿಷಯ -
ತ್ಯಾಗರಾಜ ಸ೦ಗೀತದಲ್ಲಿ ಆಧ್ಯಾತ್ಮ.
ತು೦ಬಾ ಚೆನ್ನಾಗಿತ್ತು .. ನೀವು ಬರೆದಿರೋದನ್ನೇ ಅವರು ಹೇಳಿದ್ದೂ..Smiling
ಎ೦ದರೋ ಮಹಾನುಭಾವುಲು...
ಮುರಳಿ..

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 9, 2008 - 6:34pm — rameshbalaganchi

ಉ: ಸಂಗೀತ ರಾಜ್ಯಕ್ಕೆ ಹೀಗೊಬ್ಬ ರಾಜ

rameshbalaganchi's picture

ವಂದನೆಗಳು ಹಂಸಾನಂದಿಯವರೆ,
ಬಹಳ ಚೆನ್ನಾಗಿ ವಿವರಣಾತ್ಮಕ ಉತ್ತರ ನೀಡಿದ್ದೀರಿ. ಉಪಕಾರ ಸ್ಮರಿಸುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ
  • ಸುಲಭವಲ್ಲವೋ ಮಹದಾನಂದ ...
  • ಬ್ರೋಚೇವಾರೆವರುರಾ ನಿನುವಿನಾ?
  • ಇಷ್ಟೊಂದು ಕನ್ನಡ ಬ್ಲಾಗುಗಳನ್ನು ದಿನಾಲೂ ಓದುವುದು ಹೇಗೆ? (ಗೂಗಲ್ ರೀಡರ್)
  • ಐಸ್ ಕ್ರೀಮ್ (Ice Cream) ಗೆ ಕನ್ನಡದಲ್ಲಿ ಸರಿಯಾದ ಪದ ಯಾವುದು?
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 29 ಅತಿಥಿಗಳು ಆನ್ಲೈನ್ ಇರುವರು.


ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator