ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಆರು ಹುಸಿ ವಿದ್ಯೆಗಳು

May 7, 2008 - 11:52am — hamsanandi

ಕನ್ನಡಕಂದರು ಆರು ಬಗೆಯ ಹುಸಿವಿದ್ಯೆಗಳ ಬಗ್ಗೆ ಸಂಸ್ಕೃತ ಸುಭಾಷಿತಗುಚ್ಛವೊಂದನ್ನು ಹಾಕಿದ್ದರು. ನನಗೆ ಅರ್ಥವಾದ ಮಟ್ಟಿಗೆ ಕನ್ನಡಿಸಿರುವೆ.

ಇನ್ನೂ ಒಳ್ಳೆಯ ಅನುವಾದವನ್ನು ಕನ್ನಡಕಂದರು ಕೊಡುವ ಸಾಧ್ಯತೆ ಇದೆ Eye-wink ಅಲ್ಲಿಯವರೆಗೆ ಇದು ಓದಿ!

ಕಲಿತದು ವಿದ್ಯೆ ಮಾಡಲದು ನೆರವು ತನಗೋ ಮೇಣ್ ಪರರಿಗೋ
ಅದಿಲ್ಲದೆ ಬರಿ ಹೊತ್ತಿಗೆಯೊಳಿರಲದರಿಂದೇನು ಭಾರವಿದ್ಯೆಯಿಂ? || 1||

ಹಿರಿಮೆಯಿಂದ ಒಯ್ಯಬೇಕದು ಸಟೆಯಿಂ ದಿಟದೆಡೆಗೆ
ಅಲ್ಲದೆ ದಿಟದಿಂ ಸಟೆಯೆಡೆಗೊಯ್ದರದು ಕೀಳುವಿದ್ಯೆಯು ||2||

ಬಾಯ್ಮಾತಿನಲಿ ಮಾತ್ರ ಬಳಕೆಯಲಿ ತಾನಿಲ್ಲದೆಲೆ
ಬರಿ ರಂಜಿಸುವುದದು ಗಿಳಿವಿದ್ಯೆಯು! ||3||

ಬಲ್ಲವರ ಮುಂದೆ ತೋರದೆಲೆ, ಮರುವರ ಮುಂದೆ ಬೆಳಗುತಲಿ
ಬಯಸಿದವರಿಗೆ ಕಲಿಸದಿರಲದುವೆ ದುರುಳವಿದ್ಯೆಯು || ೪||

ಆವ ಕಲಿಕೆಯದು ಕಂಡವರ ಮಚ್ಚರವ ತರಿಸುತಲಿ
ಸುಖನಿದಿರೆಯ ಕೆಡಿಸುವುದದು ಶೂಲವಿದ್ಯೆಯು! || ೫||

ನಾನು ಸರಿಯಾಗಿ ಅರ್ಥಮಾಡೀಕೊಳ್ಳ್ದದ ಕಾರಣ, ಬೆನಕರು ಕಡೆಯ ಶ್ಲೋಕವನ್ನು ಹೀಗೆ ಭಾಷಾಂತರಿಸಿದರು:

ಕಸಿದು ಪರರ ನಲ್ನುಡಿಗಳನು ತನ್ನದೆಂದಾಡುವನ
ಹೆಸರ ಗಿಟ್ಟಿಸುವ ಕಲಿಕೆ ತಾ ನಿಜದಿ ಕಳವಲ್ತೆ?

ಅಥವಾ,

ನನ್ನ ಉಳಿದೈದರ ಧಾಟಿಯಲ್ಲೇ ಹೇಳುವುದಾದರೆ

ಕಂಡವರೊಳ್ಳೆಯ ಮಾತನು ತನ್ನದೆಂಬಂತೆ ನುಡಿಯುತಲಿ

ಅಂತೋ ಇಂತೋ ಹೆಸರಗಳಿಸಲದು ತಾ ಕಳ್ಳವಿದ್ಯೆಯು!
||೬||

ಮೂಲ ಕೆಳಗೆ ಕೊಟ್ಟಂತೆ - ಕನ್ನಡಕಂದರ ದಯ Smiling

ಷಣ್ಮಿಥ್ಯಾವಿದ್ಯಾಃ
ಉಪಕಾರಾಯ ಯಾ ಪುಂಸಾಂ ನ ಪರಸ್ಯ ನ ಚಾತ್ಮನಃ|
ಗ್ರನ್ಥಸಞ್ಚಯಸಮ್ಭಾರೈಃ ಕಿಂ ತಯಾ ಭಾರವಿದ್ಯಯಾ||೧||
ಅನ್ಯಾಯಃ ಪ್ರೌಢವಾದೇನ ನೀಯತೇ ನ್ಯಾಯತಾಂ ಯಯಾ|
ನ್ಯಾಯಶ್ಚಾನ್ಯಾಯತಾಂ ಲೋಭಾತ್ ಕಿಂ ತಯಾ ಕ್ಷುದ್ರವಿದ್ಯಯಾ||೨||
ಅನುಷ್ಠಾನೇನ ರಹಿತಾ ಪಾಠಮಾತ್ರೇಣ ಕೇವಲಮ್|
ರಞ್ಜಯತ್ಯೇವ ಯಾ ಲೋಕಂ ಕಿಂ ತಯಾ ಶುಕವಿದ್ಯಯಾ||೩||
ಗೋಪ್ಯತೇ ಯಾ ಬುಧಸ್ಯಾಗ್ರೇ ಮೂರ್ಖಸ್ಯಾಗ್ರೇ ಪ್ರಕಾಶ್ಯತೇ|
ನ ದೀಯತೇ ಚ ಶಿಷ್ಯೇಭ್ಯಃ ಕಿಂ ತಯಾ ಶಠವಿದ್ಯಯಾ||೪||
ಪರಮಾತ್ಸರ್ಯಶೂಲಿನ್ಯಾ ವ್ಯಥಾ ಸಞ್ಜಾಯತೇ ಯಯಾ|
ಸುಖನಿದ್ರಾಪಹಾರಿಣ್ಯಾ ಕಿಂ ತಯಾ ಶೂಲವಿದ್ಯಯಾ||೫||
ಪರಸೂಕ್ತಾಪಹಾರೇಣ ಸ್ವಸುಭಾಷಿತವಾದಿನಾ|
ಉತ್ಕರ್ಷಃ ಖ್ಯಾಪ್ಯತೇ ಯಸ್ಯಾಃ ಕಿಂ ತಯಾ ಚೌರವಿದ್ಯಯಾ||೬||

 

 

-ಹಂಸಾನಂದಿ

  • ಅನುವಾದ
  • ಕನ್ನಡ
  • ಜ್ಞಾನವಾಹಿನಿ
  • ಸುಭಾಷಿತ
~.~
  • hamsanandi ರವರ ಬ್ಲಾಗ್
  • Login or register to post comments
  • 270 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸುಭಾಷಿತಗಳು
  • ಸಂಗೀತ ಪಾಠದ ಮೊದಲ ಗೀತೆ
  • ಭಾವನೆಯ ಹಕ್ಕಿ
  • ಓ ನನ್ನ ಜೀವವೇ
  • ಸ್ವಲ್ಪ ಅಡ್ಜಸ್ಟ ಮಾಡ್ಕೊಳ್ಳಿ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 93 ಅತಿಥಿಗಳು ಆನ್ಲೈನ್ ಇರುವರು.


ಏನೇನೋ ನಡೆದಿಹವು ವಿಜ್ಞಾನ ಸಂಧಾನ ।
ಮಾನುಷ್ಯ ಬಾಂಧವ್ಯವೊಂದು ಮುರಿದಿಹುದು ।।
ತಾನೊಡರ್ಚಿದ ಹೊನ್ನರಸವೆ ನರನ ಕೊರಳ್ಗೆ ।
ನೇಣಾಗಿಹುದು ನೋಡು - ಮರಳ ಮುನಿಯ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator