ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಕಾಪಾಡುವ ತಾಯಿಯರು

April 8, 2008 - 12:23pm — hamsanandi

ಅವನು ಆ ಊರಿನಲ್ಲಿ ಕಾಲಿಟ್ಟು ಹೆಚ್ಚು ಕಾಲ ಆಗಿರಲಿಲ್ಲ. ಒಂದೆರಡು ತಿಂಗಳಿರಬಹುದು. ಅಥವಾ ಮೂರುನಾಕೇ ಇದ್ದಿರಬಹುದು.

ಹೊರಗೆ ಓಡಾಡುವ ಅವಕಾಶ ಕಡಿಮೆಯೇ, ಆದ್ದರಿಂದ ಆ ಊರಿನ ಭಾಷೆ ಇನ್ನೂ ಸರಿಯಾಗಿ ಬರುತ್ತಿದ್ದಿಲ್ಲ ಅವನಿಗೆ. ಪ್ರಯತ್ನವೇನೋ ಇತ್ತು. ಆದರೂ, ಬಾಯಿಬಿಟ್ಟರೆ ಬಣ್ಣಗೇಡೇನೋ ಅನ್ನುವ ಕಳವಳ. ಯಾರಾದರೂ ನಕ್ಕರೆ? ಅದಕ್ಕೆ ಬರುವ ಮಾತನ್ನೂ ಆಡದೆ ಇಂಗ್ಲಿಷ್ ಮೊರೆ ಹೋಗುತ್ತಿದ್ದಿದ್ದೇ ಹೆಚ್ಚು.

ಅಷ್ಟರಲ್ಲಿ ನ್ಯಾಯ ಮಂಡಲಿಯ ಮಧ್ಯಂತರ ತೀರ್ಪು ಹೊರಬಿದ್ದಿತ್ತು. ಜನರೆ ಸಹನೆಯ ಕಟ್ಟೆಯೂ ಒಡೆದಿತ್ತೇನೋ. ಊರಿನಲ್ಲೆಲ್ಲ ಗಲಭೆಯಂತೆ. ಬಸ್ ಗಳಿಗೆ ಕಲ್ಲು ಬಿದ್ದವೆಷ್ಟೋ. ಗಾಜುಗಳು ಒಡೆದವೆಷ್ಟೋ. ರಸ್ತೆ ತಡೆಯೂ ಆಯಿತು. ಹನಿ ಹನಿ ನೀರಿಗಾಗಿ, ಬವಣೆ ಪಟ್ಟಿದ್ದ ಅವನಿಗೆ, ಈ ಗಲಭೆಗಳ ಹಿಂದೆ ಇರುವ ಆಕ್ರೋಶ ಅರ್ಥವಾಗಿತ್ತು. ಆದರೂ, ಅದು ಸರಿಯೇ ತಪ್ಪೇ? ಅಷ್ಟರಲ್ಲಿ, ಯಾರೋ ಪಾಪದವರ ಮೇಲೂ ಹಲ್ಲೆಯಾಯಿತಂತೆ. ಇದೆಲ್ಲ ಕೇಳಿದ ಇಲ್ಲಿನವರು ಸುಮ್ಮನಿರುತ್ತಾರೆಯೇ?

ಸರಿ. ಮಾರನೆ ದಿನವೇ ಇಲ್ಲಿನ್ನ ಪತ್ರಿಕೆಗಳ ಮುಖಪುಟದಲ್ಲಿ ಸುದ್ದಿ. ಈ ಹೋಟೆಲ್ ನ ಮೇಲೆ ದಾಳಿ. ಆ ಬೇಕರಿಯನ್ನು ಸುಟ್ಟರಂತೆ.

ರೆಸ್ಟುರಾಗಳನ್ನೂ, ಬೇಕರಿಗಳನ್ನೂ ನಡೆಸುವವರು ಎಲ್ಲಿಯವರು ಎಂಬುದು ತೆರೆದಿಟ್ಟ ಪುಸ್ತಕ. ಹೆಚ್ಚಿನ ಬೇಕರಿಯವರೋ, ಅವನ ಊರಿನ ಸುತ್ತಮುತ್ತಲವರೇ.

ಇವೆಲ್ಲ ಪತ್ರಿಕೆಗಳಲ್ಲಿ ನೋಡಿದಾಗ ಅಷ್ಟು ಮನಸ್ಸಿಗೆ ತಟ್ಟದೇ ಹೋಗಬಹುದು. ಆದರೆ, ಸುಟ್ಟುಹೋದ ಬೇಕರಿಯ ಮೇಲಿನ ಮಸಿ ಕಣ್ಣಿಗೆ ರಾಚುವಂತೆ ಕಂಡಾಗ? ಅದರಲ್ಲೂ, ಆ ಬೇಕರಿಯ ಮಾಲೀಕನೂ, ತನ್ನ ಊರಿನವನೇ ಎಂದು ನೆನ್ನೆ ಮೊನ್ನೆ ಪರಿಚಯವಾಗಿದ್ದಾಗ...? ಯೋಚನೆ ಯಾರಿಗೆ ತಾನೇ ಆಗುವುದಿಲ್ಲ?

ಈ ಯೋಚನೆಯಲ್ಲಿದ್ದಾಗಲೇ ಆಕೆ ಬಂದದ್ದು. ನೆರೆಯಾಕೆ. ಶಾಲೆಯಲ್ಲಿ ಟೀಚರ್ ಆಗಿ, ನಿವೃತ್ತಿ ಹೊಂದಿದಾಕೆ.

"ಸ್ವಲ್ಪ ಗಲಾಟೆ ನಡೆಯುತ್ತಿದೆ ಅಂತ ಕೇಳಿದೆ. ನೀನು ಊರಿಗೆ ಹೊಸಬ. ಭಾಷೆಯೂ ಬರದು. ಮಾತು ಕೇಳಿದರೆ, ಎಲ್ಲಿಯವನು ಅಂತ ಸುಲಭವಾಗಿ ತಿಳಿಯುತ್ತೆ. ಸ್ವಲ್ಪ ಜೋಪಾನವಾಗಿರಪ್ಪ. ಅಂಗಡಿ-ಪಂಗಡಿಗೆ ಹೋದಾಗ ಯಾರ ಹತ್ತಿರವೂ ಮಾತಾಡಬೇಡ. ಯಾರಾದರೂ, ಏನಾದರೂ ಕೇಳಿದರೆ, ನಮ್ಮ ಹೆಸರನ್ನೋ, ಪಕ್ಕದ ಮನೆಯವರ ಹೆಸರನ್ನೋ ಹೇಳಪ್ಪ. ಬೇಕಾದರೆ, ನಮ್ಮ ಮನೆಯವನು, ಈ ಕಡೆ ಪಕ್ಕದ ರಾಜ್ಯದವನು, ಇನ್ನೊಂದು ಭಾಷೆ ಮಾತಾಡುವವನು ಅಂತ ಹೇಳಿಬಿಡು. ನಾಕಾರು ದಿನ ಗಲಾಟೆ ಕಮ್ಮಿ ಆಗುವ ವರೆಗೂ ಆದಷ್ಟೂ ನಮ್ಮ ಮನೆಯಲ್ಲೇ ಇದ್ದುಬಿಡು."

ಆಕೆ ತೋರಿದ ಮಮತೆಗೆ ಅವನು ಬೆರಗಾದದ್ದರಲ್ಲಿ ಅಚ್ಚರಿಯೇನಿತ್ತು?

ಯಾವ ಜನ್ಮದ ಯಾವ ನಂಟೋ? ತಾಯಿ ಹತ್ತಿರದಲ್ಲಿಲ್ಲದಿದ್ದರೇನು? ತಾಯ ಭಾವವನ್ನು ಎಲ್ಲೆಲ್ಲಿ ಕಾಣಬಹುದೋ ಬಲ್ಲವರು ಯಾರು?

*** ‍

ಹದಿನೈದು ಹದಿನಾರು ವರುಷಗಳ ನಂತರ - ಮತ್ತೆ ಅದೇ ಬಗೆಯ ಒಂದು ದಿನ.

ಅದೇ ನದಿಯಲ್ಲಿ ಹರಿದು ಹೋದ ನೀರೆಷ್ಟೋ.

ಅವರನ್ನು ಒದೀಬೇಕು. ಇವರನ್ನು ಬಡೀಬೇಕು ಅಂದವರೆಷ್ಟೋ ಮಂದಿ.

ಆದರೂ, ಅವನ ಮನಸ್ಸಿನಲ್ಲಿ ಒಂದು ನಂಬಿಕೆ ಇದೆ.

ನಮ್ಮೂರಲ್ಲೂ ತಾಯಿಯರಿದ್ದಾರಲ್ಲ? ತಮ್ಮ ಅಕ್ಕ-ಪಕ್ಕದವರಿಗೆ ತೊಂದರೆಯಾಗಬಹುದು ಎಂದು ಕಂಡರೆ, ಅವರನ್ನು ಕಾಪಾಡಬಲ್ಲರು ಅವರು. ಅಲ್ಲವೇ?

ಸದ್ಯಕ್ಕೇನೋ ನಿಲುಗಡೆ ಕಂಡಿದೆ. ಮತ್ತೆ ಹತ್ತಿ ಉರಿದರೆ?

ತಾಯಂದಿರ ಮೇಲಿನ ಅವನ ನಂಬಿಕೆ ಹುಸಿಯಾಗದಿದ್ದರೆ ಸಾಕು. ಮುಗ್ಧ ಜನ ಸಾಮಾನ್ಯರಿಗೆ ತೊಂದರೆ ಆಗದಿದ್ದರೆ ಸಾಕು.

ಇಷ್ಟು ದೂರದಲ್ಲಿ ನಿಂತು, ಅವನು ಇನ್ನೇನು ತಾನೇ ಹಾರೈಸಬಲ್ಲ?

---------------------------------------------------------------------------------------

 

-ಹಂಸಾನಂದಿ

 

  • ಒತ್ತಾಸೆ
  • ಕಲಹ
  • ನಂಬಿಕೆ
  • ನೆನಪು
~.~
  • hamsanandi ರವರ ಬ್ಲಾಗ್
  • Login or register to post comments
  • 220 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಗೀತ ಪಾಠದ ಮೊದಲ ಗೀತೆ
  • ಅವನು ಇವನು ನೀಲುಗಳು
  • ಝೆನ್ ಕಥೆ ೩೧: ಚೆಲುವು
  • ಸೀತೆಯ, ಭೂಮಿಜಾತೆಯ
  • ಅವನಿಲ್ಲ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator