ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಸ್ಟಾನ್‍ಫರ್ಡ್‍ನಲ್ಲಿ ಕೇಳಿ ಬಂದ ಕುಮಾರವ್ಯಾಸನ ಕಹಳೆ!

November 9, 2007 - 12:13am — hamsanandi

ನನಗೆ ತಿಳಿದ ಮಟ್ಟಿಗೆ ಕಾವ್ಯವಾಚನ ಕರ್ನಾಟಕದ ಒಂದು ವಿಶಿಷ್ಟ ಕಲೆ. ಇದಕ್ಕೆ ಗಮಕ ವಾಚನ, ಭಾರತ ವಾಚನ ಎಂದೂ ಕರೆಯುವ ರೂಢಿ ಇದೆ. ವಾಲ್ಮೀಕಿ ರಾಮಾಯಣದ ಉತ್ತರಕಾಂಡದಲ್ಲೇ,ಲವಕುಶರು ರಾಮಾಯಣವನ್ನು ವೀಣೆ ನುಡಿಸುತ್ತಾ ಅದರೊಂದಿಗೆ ಹಾಡಿದರು ಎಂಬ ಉಲ್ಲೇಖವಿದೆ. ಹಾಗಾಗಿ, ಕಾವ್ಯಗಳನ್ನು ಹಾಡುತ್ತಾ ಹೇಳುವ/ಓದುವ ಸಂಪ್ರದಾಯ ಸಾವಿರಾರು ವರ್ಷಗಳಷ್ಟು ಹಳೆಯದು ಎನ್ನುವುದರಲ್ಲೇನೂ ಅನುಮಾನವಿಲ್ಲ.

ಈಗ ಮಾತ್ರ, ಈ ಕಲೆ ಕರ್ನಾಟಕದಲ್ಲಿ ಮಾತ್ರ (ನನಗೆ ತಿಳಿದಂತೆ) ಜೀವಂತವಾಗಿದೆ. ಗಮಕಿಯು ಕಾವ್ಯವನ್ನು ಸೂಕ್ತ ರಾಗಭಾವದೊಂದಿಗೆ ಹಾಡುವುದನ್ನೂ, ಅದಕ್ಕೆ ವ್ಯಾಖ್ಯಾನಕಾರರು ತಮ್ಮ ವಿವರಗಳೊಂದಿಗೆ ಜೀವತುಂಬುವುದನ್ನೂ ಕೇಳುವುದು ಬಹಳ ಸೊಗಸು.

ಸ್ಟಾನ್‍ಫರ್ಡ್ ರೇಡಿಯೋ ದಲ್ಲಿ ವಾರಕ್ಕೊಮ್ಮೆ ಮೂರು ಘಂಟೆ ಕಾಲ ಭಾರತೀಯ ಸಾಂಸ್ಕೃತಿಕ ಕಾರ್ಯಕ್ರಮಗಳು ಬರುತ್ತವೆ. "ಇಟ್ಸ್ ಡಿಫೆರೆಂಟ್" (It's Different - www.itsdiff.com) ಎನ್ನುವ ತಲೆಬರಹದಲ್ಲಿ ಪ್ರತೀ ಬುಧವಾರ ಬೆಳಗ್ಗೆ ಆರರಿಂದ ಒಂಬತ್ತ್ತರವರೆಗೆ ಪ್ರಸಾರವಾಗುವ ಈ ಕಾರ್ಯಕ್ರಮದ ರೂವಾರಿ ಶ್ರೀಕಾಂತ್ ಶ್ರೀನಿವಾಸ. ಪ್ರತಿ ವಾರ, ಒಂದಲ್ಲ ಒಂದು ಹೊಸ ರೀತಿಯ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುವ ಶ್ರೀ, ಈ ಕಾರ್ಯಕ್ರಮದ ಹೆಸರನ್ನು ಸಾರ್ಥಕಗೊಳಿಸಿದ್ದಾರೆ.

ನವೆಂಬರ್ ಏಳರಂದಿನ ಕಾರ್ಯಕ್ರಮ ಕನ್ನಡ ರಾಜ್ಯೋತ್ಸವ ವಿಶೇಷ. ಇದರಲ್ಲಿ ಕನ್ನಡಿಗರ ಹೆಮ್ಮೆಯ ಕವಿ ಕುಮಾರವ್ಯಾಸನ ಗದುಗಿನ ಭಾರತದಿಂದಾಯ್ದ ಸುಭದ್ರಾ ಪರಿಣಯ ಎಂಬ ಪ್ರಕರಣ ಕಾವ್ಯ ವಾಚನ-ವ್ಯಾಖ್ಯಾನ ಮೂಡಿ ಬಂತು. ಇದರ ಒಂದೆರಡು ಕಿರುನೋಟಗಳು ಈ ಕೆಳಗಿನ ಯುಟ್ಯೂಬ್ ಕೊಂಡಿಗಳಲ್ಲಿ ನಿಮಗೆ ಸಿಗುತ್ತದೆ.

ಗಮಕಿ - ವಿದುಷಿ ಶ್ರೀಮತಿ ವಸಂತಲಕ್ಷ್ಮಿ ವ್ಯಾಖ್ಯಾನ - ವಿದ್ವಾನ್ ರಾಮಚಂದ್ರ ಶರ್ಮ ತ್ಯಾಗಲಿ

ಇನ್ನೊಂದು ಕೊಂಡಿ- ಅದೇ ಕಾರ್ಯಕ್ರಮದಿಂದ

ಇಟ್ಸ್ ಡಿಫೆರೆಂಟ್ ನಲ್ಲಿ ಈ ಮೊದಲು ಹಲವು ಬಾರಿ ಕನ್ನಡ ಕಾರ್ಯಕ್ರಮಗಳು ಪ್ರಸಾರವಾಗಿವೆ. ಕಾವ್ಯವಾಚನ ಪ್ರಸಾರವಾಗಿರುವುದು ಇದೇ ಮೊದಲು. ನೀವು ಹಿಂದಿನ ಕಾರ್ಯಕ್ರಮಗಳನ್ನು ಇಲ್ಲಿ ಕೇಳಬಹುದು. ಈ ವಾರದ ಕಾವ್ಯವಾಚನ-ವ್ಯಾಖ್ಯಾನದ ಧ್ವನಿ ಮುದ್ರಿಕೆಯೂ ಇದೇ ಸ್ಥಳದಲ್ಲಿ, ಇನ್ನು ಕೆಲವು ದಿನಗಳನಂತರ ನಿಮಗೆ ದೊರೆಯಲಿದೆ.

ಇಟ್ಸ್ ಡಿಫರೆಂಟ್ ನ ಶ್ರೀಕಾಂತ್ (’ಶ್ರೀ) ಅವರನ್ನು ನೀವು itsdiff@gmail.com ಇಲ್ಲಿ ತಲುಪಬಹುದು.

-ಹಂಸಾನಂದಿ

  • It's Different
  • ಕನ್ನಡ
  • ಕವಿ
  • ಕಾವ್ಯ
  • ಗಮಕ ವಾಚನ
~.~
  • hamsanandi ರವರ ಬ್ಲಾಗ್
  • Login or register to post comments
  • 349 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಕೆಲವು ಕಿರು ಚಿತ್ರಗಳನ್ನು ನೋಡಿ. ನಿಮ್ಮ ಅಭಿಪ್ರಾಯ ತಿಳಿಸಿ.
  • ಬಾನಿನುಲಿ
  • ಒಂದು ಜತುನ
  • ಗೂಗಲ್ ನಲ್ಲಿ ಬ್ಲಾಗ್ ಹುಡುಕಾಟ
  • ಡಿಜಿಟಲ್ ಲೈಬ್ರರಿಯಿಂದ ಹೊತ್ತಿಗೆ ಇಳಿಸಿಕೊಳ್ಳುವದು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಲಿಂಪಿಕ್ಸ್ : ಬರ ಕೊನೆಯಾಗುತ್ತದೆ, ಆದರೆ...
  • ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
  • ಅಕ್ಕಾ..ಅಕ್ಕಾ..ನಾನೂ ಬತ್ತೀನಿ...
  • ಮಳೆಯ ಮೇಲೇಕೆ ದೂರು?
  • ಎಲ್ಲ ತುಸುಹೊತ್ತು...
  • ಕನ್ನಡ ತಾಯಿಗೆ ನಮನ
  • ನೋಡಿ ಕಂಡದ್ದು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ‘............’
  • ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sirisobagu
    ಉ: ನನ್ನವಳು
    August 22, 2008 - 10:15am
  • mahesha
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 10:05am
  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 48 ಅತಿಥಿಗಳು ಆನ್ಲೈನ್ ಇರುವರು.


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator