ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ನವರಾತ್ರಿಯ ದಿನಗಳು

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ನವರಾತ್ರಿಯ ಮೊದಲ ದಿನ

October 13, 2007 - 12:15am — hamsanandi

ಇಂದು ನವರಾತ್ರಿಯ ಮೊದಲ ದಿನ. ದುಷ್ಟರ ಮುಂದೆ, ಒಳ್ಳೆಯ ಶಕ್ತಿ ವಿಜೃಂಭಿಸಿದ ದಿನವನ್ನು ನೆನೆಯಲು ನಾವು ಆಚರಿಸುವ ಹಬ್ಬ ನವರಾತ್ರಿ. ಹಳೆಯ ಮೈಸೂರಿನ ಕಡೆಯವರಿಗಂತೂ, ಅರಸರ ಕಾಲದಿಂದ ಬಂದಿರುವ ನಾಡಹಬ್ಬದ ಸಂಭ್ರಮ. ಮನೆಮನೆಯಲ್ಲೂ ಗೊಂಬೆಗಳ ಅಲಂಕಾರ. ಅಲ್ಲಲ್ಲಿ ಸಂಗೀತೋತ್ಸವಗಳು - ಹೀಗಾಗಿ ಧಾರ್ಮಿಕ ಕಾರಣಗಳಿಗಿಂತ, ಸಾಂಸ್ಕೃತಿಕ ಕಾರಣಗಳಿಗೆ ನವರಾತ್ರಿ ನನಗೆ ಮೆಚ್ಚುಗೆಯಾಗುವ ಹಬ್ಬ.

ಮೈಸೂರಿನಂತೆಯೇ, ವೈಭವದ ನವರಾತ್ರಿ ನಡೆಯುವ ಊರು ತಿರುವನಂತಪುರ. ಅಲ್ಲಿಯ ಪದ್ಮನಾಭದೇವಸ್ಥಾನದ ಪಕ್ಕದ ನವರಾತ್ರಿ ಮಂಡಪಂ ನಲ್ಲಿ, ಇನ್ನೂರಕ್ಕೂ ಹೆಚ್ಚು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಗೀತೋತ್ಸವದ ಆಚರಣೆ ಇದೆ. ಮಹಾರಾಜ ಸ್ವಾತಿ ತಿರುನಾಳ್ ( ಕ್ರಿ.ಶ. ರಿಂದ ಕ್ರಿ.ಶ. ) ಕರ್ನಾಟಕ ಸಂಗೀತದ ಪ್ರಮುಖ ವಾಗ್ಗೇಯಕಾರರಲ್ಲೊಬ್ಬರು. ಅವರು ನವರಾತ್ರಿಯ ಸಂದರ್ಭದಲ್ಲೇ ಹಾಡಬೇಕೆಂದು ರಚಿಸಿರುವ ಒಂಬತ್ತು ದೇವೀ ಪರವಾದ ಕೃತಿಗಳನ್ನು, ಈ ಸಂಗೀತೋತ್ಸವದಲ್ಲಿ ಪ್ರತಿ ದಿನ ತಲಾ ಒಂದು ಕೃತಿಯನ್ನು ವಿಸ್ತರಿಸಿ ಹಾಡಲಾಗುತ್ತೆ. ಈ ರಚನೆಗಳಿಗೆ ನವರಾತ್ರಿ ಕೃತಿಗಳೆಂದೇ ಕರೆಯಲಾಗುತ್ತೆ. ದಸರೆಯ ಮೊದಲ ದಿವಸ ಸಂಜೆ ಹಾಡುವ ಕೃತಿ ಶಂಕರಾಭರಣ ರಾಗದ ದೇವಿ ಜಗಜ್ಜನನಿ ಎಂಬುದು.

ಈ ಸಂದರ್ಭದಲ್ಲೇ, ನನಗೆ ಇಷ್ಟವಾದ ಕೆಲವು ರಚನೆಗಳನ್ನೂ ಸಂಗೀತಾಸಕ್ತರೊಂದಿಗೆ ಹಂಚಿಕೊಳ್ಳೋಣವೆನಿಸಿತು. ಪ್ರತಿ ದಿನ ಒಂದು ಕೃತಿಯ ಬಗ್ಗೆ ಸ್ಬಲ್ಪ ಮಾಹಿತಿಯನ್ನೂ, ಸಾಧ್ಯವಾದರೆ ಕೇಳಲು ಕೊಂಡಿಗಳನ್ನೂ ಕೊಡುವ ಇರಾದೆ ನನ್ನದು. ನವರಾತ್ರಿ ಆದ್ದರಿಂದ, ದೇವಿಯ ವಿವಿಧ ರೂಪಗಳ ( ಪಾರ್ವತಿ, ಸರಸ್ವತಿ, ದುರ್ಗೆ, ಇತ್ಯಾದಿ) ಬಗ್ಗೆ ಇರುವ ಕೃತಿಗಳಿವು ಅನ್ನುವುದನ್ನು ಬಿಟ್ಟರೆ, ಯಾವುದೇ ಕ್ರಮವನ್ನು ನಾನು ಅನುಸರಿಸುತ್ತಿಲ್ಲ.

ಮೊದಲ ದಿವಸ ನಾನು ಆಯುತ್ತಿರುವ ಕೃತಿ ಕಲ್ಯಾಣಿ ರಾಗದ ತ್ಯಾಗರಾಜರ ಕೃತಿ - ಸುಂದರಿ ನೀ ದಿವ್ಯರೂಪಮುನು ಎಂಬುದು. ತ್ಯಾಗರಾಜರು ತಮಿಳುನಾಡಿನ ಮದ್ಯಭಾಗದಲ್ಲಿ, ತಂಜಾವೂರಿನ ಬಳಿ ತಿರುವಾರೂರಿನಲ್ಲಿದ್ದವರು. ಒಮ್ಮೆ ತಮ್ಮ ಶಿಷ್ಯರಾದ ವೀಣಾ ಕುಪ್ಪಯ್ಯರ್ ಅವರ ಮನೆಗೆ ಅಹ್ವಾನಿತರಾಗಿ ಅವರಿದ್ದ ಚೆನ್ನಪಟ್ಟಣಂ (ಚೆನ್ನೈ, ಮದ್ರಾಸು) ಗೆ ಪ್ರವಾಸ ಕೈಗೊಂಡಿದ್ದರು. ಆಗ, ಅಲ್ಲೇ ಬಳಿಯಿರುವ ತಿರುವೊಟ್ಟ್ರಿಯೂರ್ ಎಂಬ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು. ಈ ಊರು, ಈಗ ಮದ್ರಾಸಿಗೇ ಸೇರಿಕೊಂಡಂತೆ, ಊರಿನ ಉತ್ತರಭಾಗದಲ್ಲಿದೆ. ಅಲ್ಲಿರುವ ತ್ರಿಪುರಸುಂದರಿಯ ಮೇಲೆ ಐದು ಕೃತಿಗಳನ್ನು ರಚಿಸಿದರು. ಇವು ತಿರುವೊಟ್ಟ್ರಿಯೂರ್ ಪಂಚರತ್ನ ಕೃತಿಗಳು ಎಂದೇ ಹೆಸರುವಾಸಿಯಾಗಿವೆ.

ಕಲ್ಯಾಣಿ ರಾಗ ೧೫-೧೬ನೇ ಶತಮಾನಗಳಲ್ಲಿ ಪ್ರಚಲಿತದಲ್ಲಿದ್ದರೂ, ಅದಕ್ಕೆ ಅಷ್ಟಾಗಿ ಪಂಡಿತರ ಪ್ರಶಸ್ತಿ ದೊರಕಿರಲಿಲ್ಲವೆಂದು ತೋರುತ್ತದೆ. ಹಾಗೆಂದೇ, ವೆಂಕಟಮಖಿಯಂತಹ ಶಾಸ್ತ್ರಜ್ಞರು ಈ ರಾಗವನ್ನು ಮುಸಲ್ಮಾನರಿಗೆ ಪ್ರಿಯವಾದ ರಾಗ -ಎಂದು ಅದಕ್ಕೆ ಇರುವ ಉತ್ತರಾದಿ ಮತ್ತು ಪರ್ಶಿಯನ್ ಸಂಗೀತದ ಸಂಬಂಧಗಳನ್ನು ಹೇಳಿ ತೋರಿಸಿದ್ದಾರೆ. ಆದರೆ, ಕಾಲಾನುಕ್ರಮದಲ್ಲಿ ಅದು ಕರ್ನಾಟಕ ಸಂಗೀತದ ವಾಗ್ಗೇಯಕಾರರಿಗೆ ಬಹಳ ಪ್ರೀತಿಯ ರಾಗವೇ ಆಗಿಹೋಯಿತು. ತ್ಯಾಗರಾಜರೊಬ್ಬರೇ ಸುಮಾರು ಮೂವತ್ತಕ್ಕೂ ಹೆಚ್ಚು ರಚನೆಗಳನ್ನು ಕಲ್ಯಾಣಿ ರಾಗದಲ್ಲಿ ರಚಿಸಿದ್ದಾರೆ. ಅವುಗಳಲ್ಲಿ ಒಂದು ಉತ್ತಮ ರಚನೆ ಸುಂದರಿ ನೀ ದಿವ್ಯ ರೂಪಮುನು. ಆದಿತಾಳದಲ್ಲಿ ನಿಬದ್ಧವಾಗಿರುವ ಈ ಕೃತಿಯ ಸಾಹಿತ್ಯ ತೆಲುಗಿನಲ್ಲಿದೆ. ಈ ರಚನೆಯಲ್ಲಿ ತ್ಯಾಗರಾಜರು ತಿರುವೊಟ್ಟ್ರಿಯೂರಿನ ತ್ರಿಪುರ ಸುಂದರಿಯನ್ನು ನೋಡಿದ ತಮ್ಮ ಭಾಗ್ಯವನ್ನು ಬಡವನಿಗೆ ಸಿರಿಬಂದಂತೆ ಎಂದು ವರ್ಣಿಸಿದ್ದಾರೆ.

ಈ ರಚನೆಯನ್ನು ನೀವು ಇಲ್ಲಿ ಕೇಳಬಹುದು:

ಬಾಲಮುರಳಿ ಅವರ ಕಂಠದಲ್ಲಿ ಸುಂದರಿ ನೀ ದಿವ್ಯ ರೂಪಮುನು

ಆರಂಭದಲ್ಲಿ ಕಲ್ಯಾಣಿ ರಾಗಾಲಾಪನೆಯೂ ಇದೆ. ಕೊನೆಯಲ್ಲಿ ಸೊಗಸಾದ ಕಲ್ಪನಾಸ್ವರಗಳು ಇವೆ. ಕೇಳಿ ಆನಂದಿಸಿ.

ಮತ್ತೆ, ನಾಳೆ ಇನ್ನೊಂದು ಕೃತಿಯೊಂದಿಗೆ ಮರಳಿ ಸಿಗುವೆ.

-ಹಂಸಾನಂದಿ

‹ ನವರಾತ್ರಿಯ ದಿನಗಳುಮೇಲಿನ ಪುಟಕ್ಕೆನವರಾತ್ರಿಯ ಎರಡನೇ ದಿನ ›
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Printer-friendly version
  • Login or register to post comments
  • 835 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಾತ್ರಿಯ ಎರಡನೇ ದಿನ
  • ನವರಾತ್ರಿಯ ನಾಲ್ಕನೇ ದಿನ
  • ನವರಾತ್ರಿಯ ಐದನೆಯ ದಿನ
  • ನವರಾತ್ರಿಯ ಎಂಟನೇ ದಿನ
  • ನವರಾತ್ರಿಯ ಮೂರನೆಯ ದಿನ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
  • ಮಿಂಚಿನ ಓಟ
  • ಸಿಟಿಯ ಮೇಲಣ ಗುಳ್ಳೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • mahesha
    ಉ: ನನ್ನ ಅನುನಾಯಿ
    July 24, 2008 - 7:51pm
  • rameshbalaganchi
    ಉ: ನನ್ನ ಅನುನಾಯಿ
    July 24, 2008 - 7:34pm
  • mahesha
    ಉ: ತೆರೆ, ತೆಱೆ
    July 24, 2008 - 7:32pm
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 6:41pm
  • madhava_hs
    ಉ: ಕುಮಾರವ್ಯಾಸ ಭಾರತ
    July 24, 2008 - 6:41pm
  • mahesha
    ಉ: ಸ್ತ್ರೀಸೌಂದರ್ಯ
    July 24, 2008 - 6:04pm
  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator