ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ನವರಾತ್ರಿಯ ದಿನಗಳು

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ನವರಾತ್ರಿಯ ಎರಡನೇ ದಿನ

October 14, 2007 - 6:36am — hamsanandi

ನೆನ್ನೆ ನವರಾತ್ರಿ ಹಬ್ಬದ ಮೊದಲ ದಿನ ದ ಬಗ್ಗೆ ಬರೆದಿದ್ದೆ. ಇವತ್ತು ಇನ್ನು ದಸರೆಯ ಎರಡನೆಯ ದಿವಸ.ನಮಗೆಲ್ಲ ತಿಳಿದ ಹಾಗೆ ನವರಾತ್ರಿ ಕನ್ನಡಿಗರಿಗೆ ದೊಡ್ಡ ಹಬ್ಬ. ವಿಜಯ ನಗರದ ಅರಸರ ಕಾಲದಲ್ಲಿ ದಸರೆಯ ಸಂಭ್ರಮ ನಡೆಯುತ್ತಿದ್ದದ್ದರ ವಿಷಯವಾಗಿ, ಆ ಕಾಲದಲ್ಲಿ ಬಂದಿದ್ದ ಪರ್ಶಿಯನ್ ಹಾಗೂ ಫ್ರೆಂಚ್ ಯಾತ್ರಿಕರ ಬರಹಗಳಿಂದ ತಿಳಿದುಬರುತ್ತದೆ. ಆ ವೈಭವಕ್ಕೆ, ಈಗಲೂ ಹಂಪೆಯಲ್ಲಿರುವ ಮಹಾನವಮಿ ದಿಬ್ಬವೂ ಸಾಕ್ಷಿಯಾಗಿದೆ. ನಂತರ, ಈ ಸಂಪ್ರದಾಯ ಮೈಸೂರಿನ ಅರಸರಲ್ಲೂ ಮುಂದುವರೆದದ್ದು ಆಶ್ಚರ್ಯವೇನಿಲ್ಲ.

ಮೈಸೂರರಸರು ದಸರೆಯ ಆಚರಣೆಯೊಂದರಲ್ಲೇ ಅಲ್ಲ - ಅವರು ವಿವಿಧ ಕಲಾಪ್ರಕಾರಗಳಿಗೆ ಕೊಡುತ್ತಿದ್ದ ಪ್ರೋತ್ಸಾಹದಲ್ಲೂ ಆ ಕಾಲದ ರಾಜ್ಯಗಳ ಮುಂಚೂಣಿಯಲ್ಲಿದ್ದರು. ೧೮-೧೯ ನೇ ಶತಮಾನಗಳಲ್ಲಿ ಮೈಸೂರು ವೀಣೆಯ ಬೆಡಗೆಂದಾಗುವುದಕ್ಕೂ ಇದೇ ಕಾರಣ. ಹಲವಾರು ವಿದ್ವಾಂಸರು ಹಾಗೇ ಮೈಸೂರರಸರ ಆಶ್ರಯ ಅರಸಿ ಬಂದದ್ದೂ ಉಂಟು. ಹಾಗೆ ಬಂದವರಲ್ಲಿ, ಹರಿಕೇಶನಲ್ಲೂರು ಮುತ್ತಯ್ಯ ಭಾಗವತರು ಪ್ರಮುಖರು.
ಕೃಷ್ಣರಾಜ ಒಡೆಯರ ಆಸ್ಥಾನ ವಿದ್ವಾಂಸರಾಗಿ ಇವರು ಬಂದದ್ದರ ಬಗ್ಗೆ ಒಂದು ಕುತೂಹಲಕಾರಿ ಸಂಗತಿಯೊಂದಿದೆ. ಅದೇನೋ, ಮುತ್ತಯ್ಯ ಭಾಗವತರಿಗೆ ಮಹಾರಾಜರ ಮುಂದೆ ಕಚೇರಿ ಕೊಡುವ ಅವಕಾಶ ಸಿಕ್ಕ ದಿನ ಅವರ ಗಂಟಲಿಗೆ ಏನೋ ತೊಂದರೆಯಾಗಿ, ಕಾರ್ಯಕ್ರಮ ಹೆಚ್ಚು ಕಳೆಕಟ್ಟಲಿಲ್ಲ. ಸಾಧಾರಣವಾಗಿ, ಅರಮನೆಯಲ್ಲಿ ಹಾಡುವ ವಿದ್ವಾಂಸರಿಗೆ, ಅವರಿಗೆ ತಕ್ಕ ಮರ್ಯಾದೆ ಕೊಡಲಾಗುತ್ತಿತ್ತು. ಆ ರೀತಿ ಅವರಿಗೂ ಮರ್ಯಾದೆ ಮಾಡಿ ಕಳಿಸಲಾಯಿತಂತೆ. ಭಾಗವತರಿಗೆ ಸ್ವಲ್ಪ ನಿರಾಸೆಯೇ ಆಯಿತು. ನಂತರ ಕೆಲವು ದಿನಗಳ ನಂತರ, ಅವರು ಚಾಮುಂಡಿ ಬೆಟ್ಟದ ಮೇಲೆ, ದೇವಾಲಯದಲ್ಲಿ ತಮ್ಮ ಪಾಡಿಗೆ ಹಾಡಿಕೊಳ್ಳುತ್ತಿದ್ದಾಗ ಆ ದಿನ ದೇವಿಯ ದರ್ಶನಕ್ಕೆ ಬಂದ ಒಡೆಯರಿಗೆ ಅದು ಕೇಳಿ, ಅವರ ಮೇಲೆ ಬಂದಿದ್ದ ಅಭಿಪ್ರಾಯ ಬದಲಾಯಿತಂತೆ. ನಂತರ ಅವರನ್ನು ತಮ್ಮ ಆಸ್ಥಾನ ವಿದ್ವಾಂಸರನ್ನಾಗಿ ಮಾಡಿಕೊಂಡರಂತೆ. ಇದು ನಡೆದದ್ದು ೧೯೨೭ರಲ್ಲಿ.

ರಾಜರು ತಮ್ಮ ಇಷ್ಟದೇವಿ ಮೈಸೂರಿನ ನಗರ ದೇವತೆ, ಚಾಮುಂಡಿಯ ಮೇಲೆ ೧೦೮ ಕೃತಿಗಳನ್ನು ರಚಿಸಲು ಕೇಳಿದರಂತೆ, ಅಂತೆಯೇ ಮುತ್ತಯ್ಯ ಭಾಗವತರು ೧೦೮ ಕೃತಿಗಳನ್ನು ರಚಿಸಿದರು - ಕನ್ನಡದಲ್ಲಿರುವ ಈ ಕೃತಿಗಳ ಸಾಹಿತ್ಯವನ್ನು ದೇವೋತ್ತಮ ಜೋಯಿಸರೆಂಬುವರು ಬರೆದುಕೊಟ್ಟರಂತೆ.

ಇವತ್ತು ನಾನು ಕೇಳಿಸುವ ರಚನೆ - ಭುವನೇಶ್ವರಿಯ ನೆನೆ ಮಾನಸವೆ; ಮೋಹನ ಕಲ್ಯಾಣಿ ರಾಗ, ಆದಿತಾಳದಲ್ಲಿದೆ. ಈ ರಾಗದಲ್ಲಿ ಸಂಗೀತರಚನೆ ಮಾಡಿದವರಲ್ಲಿ ಮುತ್ತಯ್ಯಭಾಗವತರೇ ಮೊದಲಿಗರು. ಅತಿ ಪ್ರಸಿದ್ಧ ವಾದ ಮೋಹನ, ಹಾಗೂ ಕಲ್ಯಾಣಿ ಈ ಎರಡು ರಾಗಗಳನ್ನು ಮೇಳೈಸುವುದರಿಂದ ಈ ರಾಗ ಉಂಟಾಗಿದೆ. ಕೃತಿಯ ಸಾಹಿತ್ಯ, ಸ್ವಲ್ಪ ಸಂಸ್ಕೃತ ಹೆಚ್ಚಾಗೇ ಇರುವಂತಹ ಕನ್ನಡಭಾಷೆಯಲ್ಲಿದೆ.

ಈಗ ಇದನ್ನು ಎಸ್.ರಾಜಮ್ (ವೀಣಾ ಬಾಲಚಂದರ್ ಅವರ ಅಣ್ಣ) ಅವರ ದ್ವನಿಯಲ್ಲಿ ನೀವು ಸಂಗೀತಪ್ರಿಯ.ಅರ್ಗ್ ನಲ್ಲಿ ಈ ಕೆಳಗಿನ ಕೊಂಡಿಯಲ್ಲಿ ಕೇಳಬಹುದು:

ರಾಜ್ಂ ಅವರ ಧ್ವನಿಯಲ್ಲಿ - ಭುವನೇಶ್ವರಿಯ ನೆನೆ ಮಾನಸವೇ

ಮರೆಯದ ಹಾಡು ಎಂಬ ಕನ್ನಡ ಚಲನಚಿತ್ರದಲ್ಲಿ ಈ ರಚನೆಯನ್ನು ಎಸ್.ಜಾನಕಿ ಅವರು ಸೊಗಸಾಗಿ ಹಾಡಿರುವುದನ್ನೂ ನೀವು ಕೇಳಿರಬಹುದು.

ಅಂದಹಾಗೆ, ತಿರುವನಂತಪುರದ ನವರಾತ್ರಿ ಮಂಡಪಂ ನಲ್ಲಿ, ಇಂದು ಹಾಡುವ ಸ್ವಾತಿ ತಿರುನಾಳ್ ಅವರ ನವರಾತ್ರಿ ಕತಿ, ಕಲ್ಯಾಣಿ ರಾಗದಲ್ಲಿ, ಆದಿತಾಳದಲ್ಲಿರುವ ಪಾಹಿಮಾಂ ಶ್ರೀ ವಾಗೀಶ್ವರೀ ಎಂಬುದು.

ನಾಳೆ, ದಸರೆಯ ಮತ್ತೊಂದು ವಿಶೇಷ ರಚನೆಯೊಂದಿಗೆ ಸಿಗೋಣ.

-ಹಂಸಾನಂದಿ

‹ ನವರಾತ್ರಿಯ ಮೊದಲ ದಿನಮೇಲಿನ ಪುಟಕ್ಕೆನವರಾತ್ರಿಯ ಮೂರನೆಯ ದಿನ ›
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Printer-friendly version
  • Login or register to post comments
  • 684 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 14, 2007 - 9:32am — Sunil Jayaprakash

ಉ: ನವರಾತ್ರಿಯ ಎರಡನೇ ದಿನ

Sunil Jayaprakash's picture

ಹಂಸಾನಂದಿಗಳೇ, ನಾಡಹಬ್ಬ ದಸರೆಯ ಈ ಸಂದರ್ಭದಲ್ಲಿ ಒಂದು ಅರ್ಥಪೂರ್ಣ ಮಾಲಿಕೆಯನ್ನು ನಮಗೆಲ್ಲ ನೀಡುತ್ತಾ, ದಿನವೂ ನಿಮ್ಮ ಬರಹಗಳಿಗಾಗಿ ಕಾತರದಿಂದ ನಿರೀಕ್ಷಿಸುವಂತೆ ಮಾಡಿಬಿಟ್ಟಿರಿ.!!!!

ಸವಿಗೆ ಮಿಕ್ಕೂ ಸವಿಯೊದಗು.

ನವರಾತ್ರಿ ದಿಬ್ಬದ ಬಗ್ಗೆ ಪ್ರಕಾಶ ಹೂಗಾರರ ಒಂದು ಬರಹ ಪ್ರಜಾವಾಣಿಯಲ್ಲಿ ಬಂದಿದೆ. ನವರಾತ್ರಿ ದಿಬ್ಬಕ್ಕೂ, ಪರ್ಶಿಯನ್ ಕಲಾವಿದರಿಗೂ ಇರುವ ನಂಟು ಇದರಲ್ಲಿ ಪ್ರಸ್ತಾಪವಾಗಿದೆ. ಓದುಗರಿಗೆ ನೆರವಾಗಲೆಂದು ಆ ಬರಹದ ಕೊಂಡಿ ನೀಡುತ್ತಿದ್ದೇನೆ. ನೆನೆ ನೆನೆ ಮಹಾನವಮಿ ದಿಬ್ಬವ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 15, 2007 - 12:37pm — mahesha

ಉ: ನವರಾತ್ರಿಯ ಎರಡನೇ ದಿನ

mahesha's picture

ತೊಂಇರುಳು ಹಬ್ಬದ ಬಗ್ಗೆ ಹೀಗೆ ಬರೇರಿ..

ನಮಗೆಲ್ಲ ಹಲವು ಗೊತ್ತಿಲ್ಲ, ಇನ್ನು ಕೆಲವು ಮರೆತು ಹೋಗವೆ. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 15, 2007 - 12:53pm — ವೈಭವ

ಉ: ನವರಾತ್ರಿಯ ಎರಡನೇ ದಿನ

ವೈಭವ's picture

ಬುವನೇಶ್ವರಿಯ ನೆನೆ ಮಾನಸವೇ....ನನ್ನ ಮೆಚ್ಚಿನ ಹಾಡು.

ನೆನಪಿಸಿದಕ್ಕೆ ನನ್ನಿ.
---
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 18, 2007 - 10:03am — Sunil Jayaprakash

ಉ: ನವರಾತ್ರಿಯ ಎರಡನೇ ದಿನ

Sunil Jayaprakash's picture

ಮುತ್ತಯ್ಯ ಭಾಗವತರ ಮತ್ತಷ್ಟು ಹಾಡುಗಳನ್ನು ನಿತ್ಯಶ್ರೀ ಎಂಬುವರ ದನಿಯಲ್ಲಿ ಉದ್ಭವ.ಕಾಂನಿಂದ ಇಲ್ಲಿ ಕೇಳಬಹುದು.
Muthaiah Bhagavatar Kritis by S.Nityashree

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಾತ್ರಿಯ ಒಂಬತ್ತನೆಯ ದಿನ
  • ನವರಾತ್ರಿಯ ಮೊದಲ ದಿನ
  • ವಚನ + ಟಿಪ್ಪಣಿ
  • ದೇವರಿಗೊಂದು ಮನವಿ
  • ನವರಾತ್ರಿಯ ನಾಲ್ಕನೇ ದಿನ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಆಟೋದ ಆಟೋಪ
  • ನನ್ನಜ್ಜನ ಬೆಚ್ಚಗಿನ ನೆನಪುಗಳು
  • ರಸ್ತೆ ನೀರಿನಿಂದ ಮಸ್ತ್ ಬೆಳೆ
  • ಮುಕ್ತ ಮತ್ತು ಸ್ವತಂತ್ರ ತಂತ್ರಾಂಶ ಬಗ್ಗೆ ಅರಹುತ್ತ
  • ಕನ್ನಡದ ನುಡಿದಾಟಿ ಎಂತದು?
  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sathishcv
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 8:40pm
  • ಮನಹ್ಪಠಲ
    ಉ: ಎಂ ಪಿ ಶಂಕರ್ - ಟಾಟಾ
    July 20, 2008 - 5:47pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:45pm
  • rasheedgm
    ಉ: ಉತ್ತರ ಸಿಗದ ಪ್ರಶ್ನೆಗೆ ಉತ್ತರಿಸುವಿರಾ
    July 20, 2008 - 5:32pm
  • rasheedgm
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 20, 2008 - 4:49pm
  • anil.ramesh
    ಉ: ಧಾರವಾಡದ ನವಿಲೂರ ಕೆರೆಯಲ್ಲಿ ಆಹಾರ ಹೆಕ್ಕುತ್ತಿರುವ ಶಾಪಗ್ರಸ್ಥ ! ಟಿಟ್ಟಿಭ ಹಕ್ಕಿ ಕುಟುಂಬ. ಚಿತ್ರ: ಹರ್ಷವರ್ಧನ ಶೀಲವಂತ.
    July 20, 2008 - 11:49am
  • ASHOKKUMAR
    ಉ: ನನ್ನಜ್ಜನ ಬೆಚ್ಚಗಿನ ನೆನಪುಗಳು
    July 20, 2008 - 11:32am
  • Ananth.R
    ಉ: ಆರುಷಿ ಪ್ರಕರಣ: ಮಾಧ್ಯಮದ ಹೊಣೆಗೇಡಿತನ
    July 20, 2008 - 11:22am
  • ರೇಖಾ
    ಉ: ಒ೦ದು ಬೆಚ್ಚನೆಯ ನೆನಪು..
    July 20, 2008 - 9:45am
  • Jayalaxmi.Patil
    ಉ: ಕತ್ತಲೆಯಿಂದ ಹೊರ ಬಂದ ಖಾದಿ
    July 19, 2008 - 11:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 31 ಅತಿಥಿಗಳು ಆನ್ಲೈನ್ ಇರುವರು.


ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
ಮನುಜಕುಲದೆಲ್ಲ ಕೃತಿವಿಜಯವಿಭವಗಳು ||
ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ |
ಜನುಮಸಫಲತೆ ನಿನಗೆ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator