ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ನವರಾತ್ರಿಯ ದಿನಗಳು

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ನವರಾತ್ರಿಯ ಮೂರನೆಯ ದಿನ

October 14, 2007 - 11:54pm — hamsanandi

ಇವತ್ತು ನವರಾತ್ರಿಯ ಮೂರನೆಯ ದಿನ. ಮೈಸೂರು ಮತ್ತು ತಂಜಾವೂರು ಎರಡೂ ೧೮-೧೯ ನೆ ಶತಮಾನಗಳಲ್ಲಿ ದಕ್ಷಿಣ ಭಾರತದ ಪ್ರಮುಖ ಸಾಂಸ್ಕೃತಿಕ ನೆಲೆಗಳಾಗಿ ರೂಪುಗೊಂಡವು. ಹಾಗಾಗಿಯೇ ಇಂದಿಗೂ ನಾವು ವೀಣೆ, ಚಿತ್ರಕಲೆ ಮತ್ತು ಭರತನಾಟ್ಯ ಇವೆರಡರಲ್ಲೂ, ಮೈಸೂರು ಶೈಲಿ ಮತ್ತು ತಂಜಾವೂರು ಶೈಲಿ ಎಂದು ಎರಡು ಪ್ರಮುಖ ಶೈಲೆಗಳನ್ನು ನೋಡಬಹುದು. ಕರ್ನಾಟಕ ಸಂಗೀತ ತ್ರಿಮೂರ್ತಿಗಳೆಂದೇ ಹೆಸರಾದ  ತ್ಯಾಗರಾಜ, ಮುತ್ತುಸ್ವಾಮಿ ದೀಕ್ಷಿತ ಮತ್ತು ಶಾಮಾಶಾಸ್ತ್ರಿ ಅವರು ಬಾಳಿದ್ದು ತಂಜಾವೂರು ರಾಜ್ಯದಲ್ಲೇ. ಅದರಲ್ಲಿಯೂ ಶಾಮಾಶಾಸ್ತ್ರಿ ಅವರು ಇದ್ದದ್ದಂತೂ ತಂಜಾವೂರು ನಗರದಲ್ಲೇ.

ಶಾಮಾಶಾಸ್ತ್ರಿ ಅವರ ನಿಜವಾದ ಹೆಸರು ವೆಂಕಟಕೃಷ್ಣ. ಆದರೆ, ಹೆಚ್ಚಾಗಿ ಅವರು ಶಾಮಾಶಾಸ್ತ್ರಿ ಎನ್ನುವ ಹೆಸರಿನಿಂದಲೇ ಪ್ರಖ್ಯಾತರಾಗಿದ್ದಾರೆ.ತಮ್ಮ ರಚನೆಗಳಲ್ಲಿ ಶಾಮಕೃಷ್ಣ ಎಂಬ ಅಂಕಿತವಿಟ್ಟಿದ್ದಾರೆ. ಇವರು ತಮ್ಮ ರಚನೆಗಳಲ್ಲಿ ದೇವಿಯನ್ನು, ಸಾಧಾರಣವಾಗಿ ಶಾಮಕೃಷ್ಣಸೋದರಿ ಎಂದು ಕರೆಯುತ್ತಾರೆ.  ಇವರು ತಂಜಾವೂರಿನ ಬಂಗಾರು ಕಾಮಾಕ್ಷಿಯ ಅರ್ಚಕರಾಗಿದ್ದರು. ಹೆಚ್ಚಾಗಿ ಇವರ ರಚನೆಗಳು ಈ ಬಂಗಾರು ಕಾಮಾಕ್ಷಿಯ ಮೇಲೇ ರಚಿತವಾಗಿವೆ. ಸಂಗೀತ ತ್ರಿಮೂರ್ತಿಗಳಲ್ಲಿ, ಸಂಖ್ಯೆಯ ದೃಷ್ಟಿಯಿಂದ ನೋಡಿದರೆ, ಇವರು ಎಲ್ಲರಿಗಿಂತ ಕಡಿಮೆ ರಚನೆಗಳನ್ನು ಮಾಡಿದ್ದಾರೆ. ಆದರೆ, ಒಂದೂಂದೂ ಅನರ್ಘ್ಯ ರತ್ನವೆಂದು ಹೇಳಬಹುದು.

ಶರಭೋಜಿ (ಕ್ರಿ.ಶ.1777-1832) ತಂಜಾವೂರಿನ ರಾಜನಾಗಿದ್ದಾಗ, ಬೊಬ್ಬಿಲಿ ಕೇಶವಯ್ಯ ಎಂಬ ಸಂಗೀತಗಾರರು ಅವನ ಆಸ್ಥಾನಕ್ಕೆ ಬಂದರಂತೆ. ಎಲ್ಲಿ ಹೋದರೂ, ಅಲ್ಲಿ ಸಂಗೀತಗಾರರನ್ನು ತನ್ನ ಸಂಗೀತಚತುರತೆಯಿಂದ, ಸವಾಲು ಹಾಕಿ ಸೋಲಿಸುತ್ತಿದ್ದರಂತೆ. ಹಾಗಾಗೆ ಆತನು ತಂಜಾವೂರಿನ ರಾಜಾಸ್ತಾನಕ್ಕೆ ಬಂದಾಗ, ಅವನ ಸವಾಲನ್ನು ಎದುರಿಸಲು ಯಾರೂ ತಯಾರಿರಲಿಲ್ಲವಂತೆ. ಆಗ, ರಾಜ ಶರಭೋಜಿ ಶಾಮಾಶಾಸ್ತ್ರಿಗಳನ್ನು ತನ್ನ ರಾಜ್ಯದ ಮಾನ ಉಳಿಸಲು ಕೇಳಿಕೊಂಡನಂತೆ. ಈ ಸವಾಲುಗಳು ಹೇಗೆ ನಡೆಯುತ್ತಿದ್ದವೆಂದರೆ, ಒಬ್ಬ ಸಂಗೀತಗಾರ ಮೊದಲಿಗೆ ಒಂದು ರಾಗದಲ್ಲಿ, ಕ್ಲಿಷ್ಟವಾದ ತಾಳಪ್ರಸ್ತಾರದಲ್ಲಿ ಪಲ್ಲವಿಯೊಂದನ್ನು ಹಾಡಬೇಕು. ಎದುರಾಳಿ, ಅದನ್ನು ಆ ಕ್ಷಣದಲ್ಲೇ ಗ್ರಹಿಸಿ ಅದನ್ನು ಮತ್ತೆ ಹಾಡಬೇಕು. ಅದು ಆಗದಿದ್ದರೆ, ಅವನು ಸೋತಂತೆ.

ಬೊಬ್ಬಿಲಿ ಕೇಶವಯ್ಯ ಶಾಮಾಶಾಸ್ತ್ರಿಯರ ಮುಖಾಮುಖಿಯಾದದ್ದೂ ಹೀಗೆಯೇ. ಕೇಶವಯ್ಯ ಸಿಂಹನಂದನ ತಾಳದಲ್ಲಿ ಕ್ಲಿಷ್ಟವಾದ ಪಲ್ಲವಿಯನ್ನು ಹಾಡಿದ್ದಾಯಿತು. ಅದನ್ನು ಶಾಮಾಸಾಸ್ತ್ರಿ  ಮರಳಿ ಹಾಡಿದ್ದೂ ಆಯಿತು. ಮರುದಿನ ಶಾಮಾಶಾಸ್ತ್ರಿಗಳ ಸರದಿ. ಅಂದು ರಾತ್ರಿ, ತಮಗೆ ಸ್ಪರ್ಧೆಯಲ್ಲಿ ಜಯ ಲಭಿಸಲಿ, ರಾಜ್ಯದ ಮಾನ ಉಳಿಯಲಿ ಎಂದು ಯೋಚಿಸುತ್ತಾ ದೇವಿಯನ್ನು ಪೂಜಿಸುವಾಗ ಹೊಸತೊಂದೇ ರಾಗದ ಸೃಷ್ಟಿ ಆಯಿತಂತೆ. ಇಂತಹ ಕಷ್ಟಕಾಲದಲ್ಲಿ ಆ ದೇವಿಯೇ ತಮ್ಮನ್ನು ಕಾಯಬೇಕು, ತನ್ನ ವ್ಯಥೆಯನ್ನು ಹೋಗಿಸಿ ಕಾಪಾಡಬೇಕೆಂದು ಮೊರೆಯಿಡುತ್ತಾ ಹಾಡಿದ್ದು ಹೊಸ ಕೃತಿಯಾಗಿ ಹೊರಹೊಮ್ಮಿತಂತೆ. ಅದೇ ಚಿಂತಾಮಣಿ ರಾಗ, ಆದಿತಾಳದಲ್ಲಿರುವ ದೇವೀ ಬ್ರೋವ ಸಮಯಮಿದೇ.

ಡಾ. ರಾಮನಾಥನ್ ಅವರು ಹಾಡಿರುವ ದೇವೀ ಬ್ರೋವ ಸಮಯಮಿದೇ - ರಾಗ ಚಿಂತಾಮಣಿ. (ಸಂಗೀತಪ್ರಿಯ.ಆರ್ಗ್ ನಿಂದ)

ಮರುದಿನ, ಶಾಮಾಶಾಸ್ತ್ರಿ ಶರಭನಂದನವೆಂಬ ತಾಳದಲ್ಲಿ ಹಾಡಿದ ಪಲ್ಲವಿಯನ್ನು, ಕೇಶವಯ್ಯ ಮತ್ತೆ ಹಾಡಲಾರದೆ, ಸೋಲೊಪ್ಪಿ, ತನಗೆ ಸಿಕ್ಕಿದ್ದ ಮರ್ಯಾದೆಗಳನ್ನೆಲ್ಲ ಶಾಮಾಶಾಸ್ತ್ರಿಗಳಿಗೇ ಕೊಟ್ಟು ಹೋದನೆಂಬುದು ಐತಿಹ್ಯ. ಇದು ಬರೀ ದಂತಕತೆಯೇ ಆಗಿರಬಹುದು - ಆದರೂ, ಈ ರಾಗದಲ್ಲಿ ಮೊದಲು ಕೃತಿ ರಚನೆ ಮಾಡಿದ್ದಂತೂ ಶಾಮಾಶಾಸ್ತ್ರಿಗಳೇ ಅನ್ನುವುದಂತೂ ನಿಜ. ಮತ್ತೆ ಬಹಳ ವಾಗ್ಗೇಯಕಾರರೂ ಈ ರಾಗದಲ್ಲಿ ಹೆಚ್ಚಾಗಿ ರಚನೆಗಳನ್ನು ಮಾಡಿಲ್ಲ. 

ದಸರಾ ಹಬ್ಬದ ಮೂರನೆಯ ದಿನ ತಿರುವನಂತಪುರದ ನವರಾತ್ರಿ ಮಂಡಪದಲ್ಲಿ ಹಾಡುವ ಕೃತಿ ಸ್ವಾತಿ ತಿರುನಾಳ್ ಮಹಾರಾಜ ಸಾವೇರಿ ರಾಗದಲ್ಲಿ ರಚಿಸಿರುವ  ದೇವಿ ಪಾವನಿ ಎನ್ನುವುದು. ಅದನ್ನು, ಬಾಂಬೆ ಸಹೋದರಿಯರ ಕಂಠದಲ್ಲಿ ನೀವು ಇಲ್ಲಿ ಕೇಳಬಹುದು.

-ಹಂಸಾನಂದಿ

‹ ನವರಾತ್ರಿಯ ಎರಡನೇ ದಿನಮೇಲಿನ ಪುಟಕ್ಕೆನವರಾತ್ರಿಯ ನಾಲ್ಕನೇ ದಿನ ›
  • ಜ್ಝಾನವಾಹಿನಿ
  • ದಸರ
  • ಸಂಗೀತ
~.~
  • hamsanandi ರವರ ಬ್ಲಾಗ್
  • Printer-friendly version
  • Login or register to post comments
  • 576 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 17, 2007 - 12:42am — hpn

ಉ: ನವರಾತ್ರಿಯ ಮೂರನೆಯ ದಿನ

hpn's picture

"ನವರಾತ್ರಿಯ ದಿನಗಳು" ಓದಿಸಿಕೊಂಡು ಹೋಗುತ್ತಿವೆ, ಬಹಳ ಚೆನ್ನಾಗಿ ಬರೆಯುತ್ತಿದ್ದೀರಿ. Smiling

ಸಂಗೀತ್ರಪ್ರಿಯ ಸೈಟಿನಲ್ಲಿ ಒಂದೆರಡು mp3ಗಳನ್ನ ಡೌನ್ಲೋಡ್ ಮಾಡಿಕೊಂಡು ಕೇಳಿದೆ - ಅವುಗಳಲ್ಲಿ ಹಿನ್ನೆಲೆಯ ಸದ್ದು ಎಲ್ಲ ರೆಕಾರ್ಡ್ ಮಾಡಿರುವುದರಲ್ಲಿ ಬಂದುಬಿಟ್ಟಿದೆ. Sticking out tongue
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 17, 2007 - 2:53am — hamsanandi

ಉ: ನವರಾತ್ರಿಯ ಮೂರನೆಯ ದಿನ

hamsanandi's picture

ನಾಡಿಗರೆ,

ನಿಮಗೆ ಹಿಡಿಸಿದ್ದು ಬಹಳ ಸಂತೋಷ.

ಸಂಗೀತಪ್ರಿಯ ದಲ್ಲಿ ಇರುವ ಎಷ್ಟೋ ಕಾರ್ಯಕ್ರಮಗಳು ’ಹವ್ಯಾಸಿ’ ರೆಕಾರ್ಡಿಂಗ್ ಗಳು Smiling ಹಾಗಾಗಿ, ಆ ರೀತಿ ಇದ್ದರೆ ಆಶ್ಚರ್ಯವಿಲ್ಲ! ಎಶ್ಟೋ ಜನ, ತಮ್ಮಲ್ಲಿದ್ದ ಅಮೂಲ್ಯ ನಿಧಿಯನ್ನು ಹೀಗೆ ಹಂಚಿಕೊಳ್ಳುತ್ತಿರುವುದು ನಿಜವಾಗಲು ಹೊಗಳಬೇಕಾದ ಸಂಗತಿ.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 17, 2007 - 11:47am — hpn

ಉ: ನವರಾತ್ರಿಯ ಮೂರನೆಯ ದಿನ

hpn's picture

ಹೊಗಳಬೇಕಾದ ಸಂಗತಿಯೆಂಬೋದು ಖರೆ. ಸ್ವತಃ ಒಂದಷ್ಟು ರೆಕಾರ್ಡಿಂಗ್ ಮಾಡಿರುವ ಅನುಭವದಿಂದ ನಾಯ್ಸ್ ದೂರ ಇಡೋದು ಎಷ್ಟು ಕಷ್ಟ ಅನ್ನೋದು ನನಗೆ ಗೊತ್ತುಂಟು. ಆದರೆ ತುಂಬಾ ನಾಯ್ಸ್ ಇದೆ ಮಾರಾಯ್ರೆ. ಮಾತು ಕೇಳಬಹುದು, ಸಂಗೀತ ಕೇಳುವಾಗ ನಾಯ್ಸ್ ಇದ್ರೆ ಕಿರಿಕಿರಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಾತ್ರಿಯ ನಾಲ್ಕನೇ ದಿನ
  • ನವರಾತ್ರಿಯ ಐದನೆಯ ದಿನ
  • ನವರಾತ್ರಿಯ ಮೊದಲ ದಿನ
  • ನವರಾತ್ರಿಯ ಹತ್ತನೇ ದಿನ
  • ನವರಾತ್ರಿಯ ಎಂಟನೇ ದಿನ
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 30 ಅತಿಥಿಗಳು ಆನ್ಲೈನ್ ಇರುವರು.


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator