ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ಜಿ ಟಿ ಎನ್ ಹಾಗೂ ನೆನಪುಗಳು

June 27, 2008 - 10:26pm — hamsanandi

ನೆನ್ನೆ ಸಂಜೆ ಸಂಪದ ನೋಡಿದಾಗ ಕಂಡದ್ದು ಇದು.

ಇಸ್ಮಾಯಿಲ್ ಬರೆದ ಅತೀ ದುಃಖದ ಸಮಾಚಾರ.

ಜಿಟಿಎನ್ ಇನ್ನಿಲ್ಲ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಅನ್ನಲೇ? ಅದು ಕೇವಲ ಔಪಚಾರಿಕವಾಗುತ್ತೆ. ಅಷ್ಟೇ.

ಕನ್ನಡದಲ್ಲಿ ವೈಜ್ಞಾನಿಕ ಬರಹಗಳು ಎಂದಾಗ ಮೊತ್ತಮೊದಲು ಮನಸ್ಸಿಗೆ ಬರುವ ಹೆಸರೇ ಜಿಟಿನಾರಾಯಣರಾಯರದ್ದು.  ಸುಧಾ ಮೊದಲಾದ ಪತ್ರಿಕೆಗಳಲ್ಲಿ ಅವರ ಹಲವು ಬರಹಗಳು ಬೆಳಕು ಕಾಣುತ್ತಿದ್ದವು.

ಆಗ ಪ್ರಕಟವಾಗುತ್ತಿದ್ದ ಕನ್ನಡ ವಿಶ್ವಕೋಶ ಸ್ವಂತಕ್ಕೆ ಕೊಳ್ಳಲು ಬೆಲೆ ಕೈಗೆಟುಕುವಂತಿರಲಿಲ್ಲ.  ಲೈಬ್ರರಿಯಲ್ಲಿ ಸಿಗುವುದರ ಮಾತಂತೂ ಸ್ವಲ್ಪ ಕಷ್ಟವೇ! ಮತ್ತೆ ಐದನೇ ತರಗತಿಯವರೆಗೆ ಇಂಗ್ಲಿಷ್ ಕಲಿತಿಲ್ಲದ ಕಾರಣ ಎನ್ಸೈಕ್ಲೋಪಿಡಿಯಾ ಬ್ರಿಟಾನಿಕಾ ಅಂತಾಹವಂತೂ ನನಗೆ ಸ್ವಲ್ಪ ದೂರವೇ. ಇದೆಲ್ಲಾ ಸೇರಿ, ನಾನು  ಜಿಟಿಎನ್ ಅವರ ಬರಹಗಳು ಎಲ್ಲಿ ಕಂಡರೂ ತುಂಬ ಆಸಕ್ತಿಯಿಂದ ಓದುತ್ತಿದ್ದೆ.

ಸ್ವಲ್ಪ "ಅಧಿಕವಾಗಿಯೇ ಸಂಸ್ಕೃತಭೂಯಿಷ್ಟವಾದ" ಶೈಲಿ ಅವರದ್ದು. ಆಕಾಶವೀಕ್ಷಣೆಯ ಬಗ್ಗೆ ಅವರು ಬರೆದ ಕೆಲವು ಪುಸ್ತಕಗಳು, ಕಿರುಬರಹಗಳೇ ನನಗೆ ಆಕಾಶ-ಗ್ರಹ-ನಕ್ಷತ್ರಗಳ ಹುಚ್ಚು ಹಿಡಿಸಿದ್ದು. ಹಾಗಾಗಿ, ಅವರು ಯಾರು ಎಂದು ನೋಡದೇ, ನಾನು ಅವರ ಕಟ್ಟಾ ಅಭಿಮಾನಿ ಆಗಿದ್ದರಲ್ಲಿ ಆಶ್ಚರ್ಯವೇ ಇಲ್ಲ.

ಅವತ್ತು ೧೯೮೩ ಅಕ್ಟೋಬರ್ ೩೦. ನಟ್ಟನಡು ಮಧ್ಯಾಹ್ನ.

ಮನೆಗೊಂದು ಟೆಲಿಗ್ರಾಮ್ ಬಂತು. 

ಲೇಖಕ್-ವರ್ಷದ ವಿದ್ಯಾರ್ಥಿ ಸ್ಪರ್ಧೆಯ ಮೊದಲ ಹಂತದಲ್ಲಿ ನನ್ನನ್ನು ಆಯ್ದು, ಎರಡನೇ ಹಂತಕ್ಕಾಗಿ ವಲಯ ಮಟ್ಟದ ಸ್ಪರ್ಧೆಗಾಗಿ ಮಡಿಕೇರಿಗೆ ಕರೆಯಲಾಗಿತ್ತು.

ಆ ಕಾಲಕ್ಕೆ ಆ ಸ್ಪರ್ಧೆ ಬಹಳ ಹೆಸರು ಗಳಿಸಿತ್ತು. ಸ್ವಲ್ಪ ಕಷ್ಟವೇ ಅನ್ನಿಸುತ್ತಿದ್ದ ಆ ಸ್ಪರ್ಧೆಯಲ್ಲಿ, ವಿಜ್ಞಾನ, ಸಾಹಿತ್ಯ, ಯೋಚಿಸುವ ಶಕ್ತಿ, ಮೊದಲಾಗಿ ತಲೆ ತಿಣುಕುವ ಹಲವು ರೀತಿಯ ಪ್ರಶ್ನೆಗಳಿರುತ್ತಿದ್ದವು. ಅಲ್ಲದೇ, ಪ್ರತಿ ಶಾಲೆಯಿಂದಲೂ ಕಿರಿಯರು- ಹಿರಿಯರು ಎಂದು ಎರಡು ವಿಭಾಗಗಳಲ್ಲಿ ಇಬ್ಬರು ಮಕ್ಕಳಿಗೆ ಮಾತ್ರ ಭಾಗವಹಿಸುವ ಅವಕಾಶ. ಅಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಉತ್ತರಿಸಲು ನನಗೆ ಸಾಧ್ಯವಾದದ್ದು, ಜಿಟಿಎನ್ ಅವರ  ಬರಹಗಳನ್ನು  ಓದಿದ್ದರಿಂದ ಎಂದು ಧಾರಾಳವಾಗಿ ಹೇಳಬಲ್ಲೆ. 

ನನಗಂತೂ ಬಹಳ ಸಂತೋಷವಾಗಿತ್ತು. ಕೆಲವೇ ದಿನಗಳಲ್ಲಿ ಮಡಿಕೇರಿಯಲ್ಲಿ ನಾಲ್ಕು ದಿನದ ಕ್ಯಾಂಪ್. ವಲಯದಿಂದ ಆಯ್ಕೆಯಾದ ಇಪ್ಪತ್ತು  ವಿದ್ಯಾರ್ಥಿಗಳು ಅಲ್ಲಿಗೆ ಬರುವವರಿದ್ದರು. ಬಗೆ ಬಗೆಯ ಚಟುವಟಿಕೆಗಳು ಅಲ್ಲಿರುತ್ತವೆ ಎಂದಷ್ಟೇ  ವಿಷಯ ಗೊತ್ತಿತ್ತು.

ಮಡಿಕೇರಿಯ ಮಯೂರ ವ್ಯಾಲಿ ವ್ಯೂ ಗೆ ಅವರು ತಿಳಿಸಿದ ದಿನ ಹೋಗಿ ನೋಡಿದರೆ ನಮ್ಮೊಡನೆ ಒಡನಾಡಲು, ನಮ್ಮನ್ನು ಒರೆಗೆ ಹಚ್ಚಲು ಒಂದು ಪರಿಣತರ ತಂಡವೇ ತಯಾರಾಗಿತ್ತು.

ಅದರ ಮುಖ್ಯಸ್ಥರು ಸಾಕ್ಷಾತ್ ಜಿ.ಟಿ.ನಾರಾಯಣ ರಾವ್ ಅವರೇ!

ಅಲ್ಲಿ ಕಳೆದ ನಾಲ್ಕು ದಿನಗಳನ್ನು ಇಷ್ಟು ವರ್ಷಗಳ ನಂತರವೂ ನಾನು ಮರೆಯಲಾರೆ. ಸಮಯ ಸಿಕ್ಕಾಗಲೆಲ್ಲ, ಆಕಾಶದ, ನಕ್ಷತ್ರಗಳ ವಿಷಯ ನಾನು ಅವರಿಂದ ಕೇಳಿದ್ದೆ. ಅಲ್ಲದೇ ಅವರ ಇನ್ನೊಂದು ಸಂಗೀತ ಪ್ರೇಮಿಯ ಮುಖ ನನಗೆ ತೋರಿದ್ದೂ ಆಗಲೇ ಮೊದಲು.

ಕೊನೆಯದಿನ ಭಾಗಮಂಡಲ, ತಲಕಾವೇರಿಗಳಿಗೆ ನಮ್ಮನ್ನು ಕರೆದುಕೊಂಡು ಹೋಗಿದ್ದೂ ಜಿಟಿಎನ್ ಅವರೇ. ಭಾಗಮಂಡಲದಲ್ಲಿ ಕಾವೇರಿ ಕನ್ನಿಕೆಯರ ಸಂಗಮದಲ್ಲಿ ಕುಳಿತು ತಮ್ಮ ಬಾಲ್ಯದ ಕೆಲವು ಘಟನೆಗಳನ್ನು ಹೇಳುತ್ತ, ಬ್ರಹ್ಮಗಿರಿ ಬೆಟ್ಟದ ತುದಿಯನ್ನು ನಮ್ಮೊಡನೇ ಏರುತ್ತ, ನಮ್ಮೊಡನೆ ತಾವೂ  ಚಿಕ್ಕ ಹುಡುಗರಾಗಿದ್ದ

ಜಿಟಿಎನ್ ಇನ್ನಿಲ್ಲ.

ಆದರೇನಂತೆ?  ನನ್ನಂತಹ ಎಷ್ಟೋ ಸಾವಿರಾರು ಜನ ನಮ್ಮ ಕೊನೆಯ ಉಸಿರಿರುವವರೆಗೆ ಅವರನ್ನು ಮರೆಯಲಾರೆವು.

-ಹಂಸಾನಂದಿ

 ( ಈ ಬರಹದ ಇಂಗ್ಲಿಷ್ ರೂಪಾಂತರ ಇಲ್ಲಿದೆ)

  • ಆಕಾಶ
  • ಜಿಟಿಎನ್
  • ದಿನ-ಪ್ರತಿದಿನ
  • ನೆನಪುಗಳು
~.~
  • hamsanandi ರವರ ಬ್ಲಾಗ್
  • Login or register to post comments
  • 590 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 27, 2008 - 10:38pm — Sunil Jayaprakash

ಉ: ಜಿ ಟಿ ಎನ್ ಹಾಗೂ ನೆನಪುಗಳು

Sunil Jayaprakash's picture

ಹಂಸಾನಂದಿಗಳೇ, ಸಂಪದದ ಪರವಾಗಿ ಜಿಟಿಆರ್ ಅವರಿಗೆ ಸರಿಯಾದ ರೀತಿಯಲ್ಲಿ ಶ್ರದ್ಧಾಂಜಲಿಯನ್ನು ನಡೆಸಿಕೊಟ್ಟಿರಿ. ಅರ್ಥಪೂರ್ಣವಾದ, ಸಮಯೋಚಿತವಾದ ಬರಹ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 27, 2008 - 11:24pm — sushil

ಉ: ಜಿ ಟಿ ಎನ್ ಹಾಗೂ ನೆನಪುಗಳು

sushil's picture

ಜೆಟಿಏನ್ ಅವರ ಬಗ್ಗೆ ತಿಳಿಸಿ ನಿಮ್ಮ ಅನುಭವ ಹಂಚಿಕೊಂಡದ್ದಕ್ಕೆ ಧನ್ಯವಾದಗಳು ಹಂಸಾನಂದಿಯವರೇ.
ಆ ಹಿರಿಯ ಜೀವಕ್ಕೆ ನನ್ನ ನಮನಗಳು.
ಹಿರಿಯರ ಆದರ್ಶಗಳು ನಮಗೆಲ್ಲ ದಾರಿದೀಪವಾಗಲಿ..

-ಸುಶೀಲ್.
ಕನ್ನಡಕಡಲಲಿ ಪುಟ್ಟ ಮೀನು ನಾ..!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 28, 2008 - 12:12pm — kpbolumbu

ಉ: ಜಿ ಟಿ ಎನ್ ಹಾಗೂ ನೆನಪುಗಳು

kpbolumbu's picture

ಕನ್ನಡದ ಶ್ರೇಷ್ಠ ಬರಹಗಾರರಲ್ಲೊಬ್ಬರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಸ್ಮರಣೆ ಸಮಯೋಚಿತವಾಗಿದೆ.
__________________________
ಮುಟ್ಟುತಲೆ ಗುರಿ ತಾನ್ ದೂರವಾಗುತಿರಲಿ!
ಕೆಪಿ ಬೊಳುಂಬು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 28, 2008 - 6:30pm — smurthygr

ಉ: ಜಿ ಟಿ ಎನ್ ಹಾಗೂ ನೆನಪುಗಳು

smurthygr's picture

ಅಪ್ಪಟ ನಾಸ್ತಿಕರಾದ ಜಿ.ಟಿ.ಎನ್.ರವರು ತಮ್ಮ ದೇಹವನ್ನು ಜೆ.ಎಸ್.ಎಸ್. ಆಸ್ಪತ್ರೆಗೆ ದಾನ ಮಾಡಿದ್ದಾರಂತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್
  • ಗ್ರಹ-ತಾರೆಗಳ (ಜಿ.ಟಿ) ನಾರಾಯಣ ತೇ ನಮೋ ನಮೋ...
  • ಮದುವೆ ಕರೆಯೋಲೆ ತಯಾರಿ !!
  • ಪು ತಿ ನ ಅವರ "ಶ್ರೀರಾಮ ಪಟ್ಟಾಭಿಷೇಕ"
  • 365 ದಿನಗಳು
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
  • ಶಿವಮಣಿ ಎಂಬ ಅದ್ಭುತ ಪ್ರತಿಭೆ
  • ಹಿಮವದ್ ಗೋಪಾಲಸ್ವಾಮಿ ಬೆಟ್ಟ - ಪ್ರವಾಸ ಕಥನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 61 ಅತಿಥಿಗಳು ಆನ್ಲೈನ್ ಇರುವರು.


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator