ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › jp.nevara ರವರ ಬ್ಲಾಗ್

ನಾವಾಡುವ ನುಡಿ.....

ನನಗೆ ಎಲ್ಲ ಗೊತ್ತಿದೆ ಎಂಬ ಹಮ್ಮು-ಬಿಮ್ಮುಗಳಿಲ್ಲ ಕಾರಣ ಇಷ್ಟೆ,
ಎಲ್ಲ ಬಲ್ಲವರಿಲ್ಲ, ಬಲ್ಲಿದರು ಬಹಳಿಲ್ಲ |

ಬಲ್ಲಿದರಿದ್ದು ಬಲವಿಲ್ಲ| ಲೋಕಕ್ರೆ

ಸಾಹಿತ್ಯವೆಲ್ಲರಿಗಲ್ಲ - ಸರ್ವಜ್ಞ |

ನನಗೆ ಗೊತ್ತಿರೊದನ್ನ ಕವನಗಳ ರೂಪದಲ್ಲಿ ಬರೆಯೋದು ಮಾತ್ರ ನನಗೆ ಗೊತ್ತು.
ಕವನಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತೇನೆಯೆ ಹೊರತು, ಎಲ್ಲರೂ ಓದಲೆಂದಲ್ಲ.
ಯಾರಾದ್ರೂ ಓದಿದರೆ, ಓದಿ ಕವನದ ಬಗ್ಗೆ ನಾಲ್ಕು ನಲ್ನುಡಿಗಳನ್ನಾಡಿದರೆ ಖಂಡಿತಾ ಸಂತೋಷವಾಗುತ್ತೆ.
ಕೋಗಿಲೆ ಹೇಗೆ ಎಲ್ಲ ಕೇಳಲಿ ಎಂದು ಹಾಡುವುದಿಲ್ಲವೋ, ಅಂತೆಯೆ ನಾನೂ ಸಹ ಎಲ್ಲ ಓದಲಿ ಎಂದು ಕವನ ಬರೆಯುವುದಿಲ್ಲ. ಅದು ನನಗೆ
ನನ್ನ ಭಾವನೆಗಳನ್ನು ವ್ಯಕ್ತ ಪಡಿಸಲು ಇರುವ ಒಂದು ಅನಿವಾರ್ಯ ದಾರಿ ಮಾತ್ರ. ಬರೆದ ಕವನಗಳೆಲ್ಲವನ್ನು ಎಲ್ಲ ಮೆಚ್ಚಿಕೊಳ್ಳಲಿ ಎಂದೂ
ಸಹ ನೆನೆಸುವುದಿಲ್ಲ. ಒಂದು ಕವನ ಇಷ್ಟವಾಗಳು ಎಷ್ಟು ಕಾರಣಗಳಿರುತ್ತವೆಯೋ ಅಷ್ಟೇ ಕಾರಣಗಳು ಇಷ್ಟವಾಗದಿರಲೂ ಇರಬಹುದು,
ಅದಕ್ಕೂ ಹೆಚ್ಚೂ ಸಹ ಇರಬಹುದು.

ಅದೇನೆ ಇರಲಿ ಕವನ ನಾಲ್ಕು ಜನಕ್ಕೆ ನೆಚ್ಚಿದರೆ, ನಾಲ್ಕು ಚಿಂತನೆಗಳಿಗೆ ದಾರಿ ಹಾಕಿಕೊಟ್ಟರೆ, ನಾಲ್ಕು ಜನ ಅದರ ಬಗ್ಗೆ
ಮಾತನಾಡಿದರೆ, ಅದರ ಇರುವಿಕೆಗೆ ಒಂದು ಸಾರ್ಥಕತೆಯಂಬುದಂತೂ ಬಂದೇ ಬರುತ್ತದೆ.

ಇಂಥಾ ಸಾರ್ಥಕತೆ ಎಂಬುದು ನನ್ನ ಕವನಗಳಿಗೆ ದೊರಕಲಿ ಎಂದು ಆಶಿಸುತ್ತಾ....
ನಿಮ್ಮವ,
ಜಯಪ್ರಕಾಶ ನೇವಾರ ಶಿವಕವಿ.

ನಾ ಸೊತಾಗಲೆಲ್ಲಾ

July 5, 2007 - 11:06am — jp.nevara

ನಾ ಸೊತಾಗಲೆಲ್ಲಾ, ನಾ ಎಡವಿದಾಗಲೆಲ್ಲಾ,

ಬರುವನೊಬ್ಬನಪರಿಚಿತ ಮುನ್ನಡೆಸಲೆನ್ನ

ನಾ ಬಿದ್ದಾಗಲೆಲ್ಲಾ, ನಾ ಖಿನ್ನನಾದಾಗಲೆಲ್ಲಾ

ಬರುವನೊಬ್ಬನಪರಿಚಿತ ಮುನ್ನಡೆಸಲೆನ್ನ.

ಜೊತೆಯಾಗಿ ಬಾಳುವನು, ಹೊರಾಡುವನು,

ಬಾಳೆ೦ಬ ಕದನದಲ್ಲಿ, ಗೆಲುವ ತ೦ದಿಡುವವನು,

ತನ್ನೆಲ್ಲಾ ಜಾಣತನದಿ೦ದ, ತನ್ನಮಿತ ಶಕ್ತಿಯಿ೦ದ,

ಅವನೇ ಅವನು ನನ್ನೊಳಗೆ ನೆಲೆಸುವ೦ತವನು

ಈಸೊ೦ದು ದಿನ, ಬೇರೇನೊ೦ದನೂ ನಾನೆಣಿಸಲಿಲ್ಲ

ಅವನು ನನ್ನೊಳಗೆ ಇರುವನೆ೦ಬೊ೦ದು ನೆವದಲ್ಲಿ

ಹೊಳೆವ ರವಿಕಿರಣಗಳ ತೆರನಿದ್ದ ಅವನ ನೆನವಲ್ಲಿ

ತೊರೆಯನವನೆ೦ದಿಗೂ ಎ೦ಬ ತು೦ಬು ಭರವಸೆಯಲ್ಲಿ

ಬದಲಾಗುತಿವೆ ಸಮಯ, ಬದಲಾಗುತಿವೆ ಋತುಗಳು

ನಾನು ಮಾತ್ರವೇ ಒ೦ಟಿ, ಯಾರಿಲ್ಲದೆ ಎನ್ನ ಜೊತೆಯಲ್ಲಿ

ಕಳೆದುಕೊ೦ಡು ಗೆಲುವುಗಳನು,ಸೆಳೆದುಕೊ೦ಡೆ ಸೋಲುಗಳನು

ಎಲ್ಲಿರುವೆಯೊ ಗೆಳೆಯ, ನನ್ನ ಮುನ್ನಡೆಸದೆ ನೀನು

ದಿನಗಳುರುಳಿದ೦ತೆಲ್ಲಾ, ದುಃಖಗಳೂ ಏರುತ್ತಿವೆ

ನಾ ಸರಿಯೊ, ನಾ ತಪ್ಪೊ ಅರಿವಾಗದ೦ತಿದೆ ನನಗೆ

ಬೇಕಾಗಿದೆ ನನಗೀಗ ನಿಮ್ಮಗಳಲ್ಲೊಬ್ಬರ ನೆರವು

ಬರುವಿರಾ ಯಾರಾದರು ನೆರವ ನೀಡುವ ಧೈರ್ಯದಲಿ

ಅವನೇ ನನ್ನ ಆತ್ಮ, ನನ್ನೊಳಗಿನ ಆಲೋಚನೆಗಳು

ಯಾರಾದರು ಅವನ ನನ್ನೆಡೆಗೆ ತರುವಿರಾ

ಭಯವಿದ್ದರೇನು, ಬಿಕ್ಕಟ್ಟುಗಳಿದ್ದರೇನು ನನ್ನೊಳಗೆ

ಆರದೆ ಇದೆ ಇನ್ನೂ ಭರವಸೆ, ಮತ್ತೊಮ್ಮೆ ಅವನು ನನ್ನಲ್ಲಿ ನೆಲೆಸುವನೆ೦ದು..

(ಇ೦ಗ್ಲಿಷ್ ನಿ೦ದ ಕನ್ನಡಕ್ಕೆ ಆನುವಾದಿಸಿದವರು - ಜಯಪ್ರಕಶ್ ನೆವಾರ ಶಿವಕವಿ.)

  • ಕನ್ನಡ ಕವಿತೆ
~.~
  • jp.nevara ರವರ ಬ್ಲಾಗ್
  • Login or register to post comments
  • 292 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನೊಳಗೆ ನನ್ನೊಳಗೆ
  • ನಾನು ಈಗ ಪ್ರೀತಿಯಲ್ಲಿ ಬೀಳಬೇಕು. ನನಗೆ ಒಬ್ಬ ಗೆಳೆಯಬೇಕು - ಮೊಗ್ಗಿನ ಮನಸು
  • ನನ್ನಲ್ಲಿ ಒಬ್ಬ ಕವಿ ಹುಟ್ಟಿದ್ದು ಹೀಗೆ....
  • ಅದೃಷ್ಟ
  • ನನ್ನೊಳಗೆ
Syndicate content

ಲೇಖಕರು

jp.nevara's picture

ಪೂರ್ಣ ಹೆಸರು
ಜಯಪ್ರಕಾಶ ನೇವಾರ ಶಿವಕವಿ

ಪರಿಚಯ

ನನ್ನ ಹೆಸರು ಜಯಪ್ರಕಾಶ ನೇವಾರ ಶಿವಕವಿ, ಊರು ಬಳ್ಳಾರಿ ಜಿಲ್ಲೆಯಲ್ಲಿರುವ ಉಜ್ಜೈನಿ ಗ್ರಾಮ, ವಾಸ ಬೆಂಗಳೂರೆಂಬ ಬೆಂದಕಾಳೂರು, ಝೈಲೋಗ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಅನ್ನೊ ಸಂಸ್ಥೆಯಲ್ಲಿ ತಂತ್ರಾಂಷ ತಂತ್ರಜ್ಞನಾಗಿ ಕೆಲಸ, ಕವನ ಬರೆಯುವ ಮತ್ತು ಅನುವಾದಮಾಡುವುದು ನನ್ನ ಹವ್ಯಾಸ, ನನ್ನ ಜಿಮೈಲ್ ವಿಳಾಸ. jp.nevara@gmail.com
ಇದಿಷ್ಟು ನನ್ನ ಸ್ವ ಪುರಾಣ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಜಿಪುಣ ನನ್ನ ಗಂಡ
  • ದೊಡ್ಡಣ್ಣನ ಆರ್ಥಿಕ ಹಿನ್ನಡೆಯ ಬಗೆಗಿನ ಎಸ್ ಎಮ್ ಎಸ್
  • ಓದಿದ್ದು ಕೇಳಿದ್ದು ನೋಡಿದ್ದು 42 ಮಾನಸಿಕ ಸ್ಥಿತಿ ಪರೀಕ್ಷಿಸಿ ಮಿಂಚಂಚೆ ಕಳುಹಿಸುವ ಗೂಗಲ್
  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
  • mahesha
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:00am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 86 ಅತಿಥಿಗಳು ಆನ್ಲೈನ್ ಇರುವರು.


ಅಖಂಡ ಕರ್ನಾಟಕ:
ಅಲ್ತೊ ನಮ್ಮ ಬೂಟಾಟದ ರಾಜಕೀಯ ನಾಟಕ!

ಇಂದು ಬಂದು ನಾಳೆ ಸಂದು
ಹೋಹ ಸಚಿವ ಮಂಡಲ
ರಚಿಸುವುದು ಕೃತಕವಲ್ತೊ
ಸಿರಿಗನ್ನಡ ಸರಸ್ವತಿಯ
ವಜ್ರ ಕರ್ಣಕುಂಡಲ!

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator