ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › jp.nevara ರವರ ಬ್ಲಾಗ್

ನಾವಾಡುವ ನುಡಿ.....

ನನಗೆ ಎಲ್ಲ ಗೊತ್ತಿದೆ ಎಂಬ ಹಮ್ಮು-ಬಿಮ್ಮುಗಳಿಲ್ಲ ಕಾರಣ ಇಷ್ಟೆ,
ಎಲ್ಲ ಬಲ್ಲವರಿಲ್ಲ, ಬಲ್ಲಿದರು ಬಹಳಿಲ್ಲ |

ಬಲ್ಲಿದರಿದ್ದು ಬಲವಿಲ್ಲ| ಲೋಕಕ್ರೆ

ಸಾಹಿತ್ಯವೆಲ್ಲರಿಗಲ್ಲ - ಸರ್ವಜ್ಞ |

ನನಗೆ ಗೊತ್ತಿರೊದನ್ನ ಕವನಗಳ ರೂಪದಲ್ಲಿ ಬರೆಯೋದು ಮಾತ್ರ ನನಗೆ ಗೊತ್ತು.
ಕವನಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತೇನೆಯೆ ಹೊರತು, ಎಲ್ಲರೂ ಓದಲೆಂದಲ್ಲ.
ಯಾರಾದ್ರೂ ಓದಿದರೆ, ಓದಿ ಕವನದ ಬಗ್ಗೆ ನಾಲ್ಕು ನಲ್ನುಡಿಗಳನ್ನಾಡಿದರೆ ಖಂಡಿತಾ ಸಂತೋಷವಾಗುತ್ತೆ.
ಕೋಗಿಲೆ ಹೇಗೆ ಎಲ್ಲ ಕೇಳಲಿ ಎಂದು ಹಾಡುವುದಿಲ್ಲವೋ, ಅಂತೆಯೆ ನಾನೂ ಸಹ ಎಲ್ಲ ಓದಲಿ ಎಂದು ಕವನ ಬರೆಯುವುದಿಲ್ಲ. ಅದು ನನಗೆ
ನನ್ನ ಭಾವನೆಗಳನ್ನು ವ್ಯಕ್ತ ಪಡಿಸಲು ಇರುವ ಒಂದು ಅನಿವಾರ್ಯ ದಾರಿ ಮಾತ್ರ. ಬರೆದ ಕವನಗಳೆಲ್ಲವನ್ನು ಎಲ್ಲ ಮೆಚ್ಚಿಕೊಳ್ಳಲಿ ಎಂದೂ
ಸಹ ನೆನೆಸುವುದಿಲ್ಲ. ಒಂದು ಕವನ ಇಷ್ಟವಾಗಳು ಎಷ್ಟು ಕಾರಣಗಳಿರುತ್ತವೆಯೋ ಅಷ್ಟೇ ಕಾರಣಗಳು ಇಷ್ಟವಾಗದಿರಲೂ ಇರಬಹುದು,
ಅದಕ್ಕೂ ಹೆಚ್ಚೂ ಸಹ ಇರಬಹುದು.

ಅದೇನೆ ಇರಲಿ ಕವನ ನಾಲ್ಕು ಜನಕ್ಕೆ ನೆಚ್ಚಿದರೆ, ನಾಲ್ಕು ಚಿಂತನೆಗಳಿಗೆ ದಾರಿ ಹಾಕಿಕೊಟ್ಟರೆ, ನಾಲ್ಕು ಜನ ಅದರ ಬಗ್ಗೆ
ಮಾತನಾಡಿದರೆ, ಅದರ ಇರುವಿಕೆಗೆ ಒಂದು ಸಾರ್ಥಕತೆಯಂಬುದಂತೂ ಬಂದೇ ಬರುತ್ತದೆ.

ಇಂಥಾ ಸಾರ್ಥಕತೆ ಎಂಬುದು ನನ್ನ ಕವನಗಳಿಗೆ ದೊರಕಲಿ ಎಂದು ಆಶಿಸುತ್ತಾ....
ನಿಮ್ಮವ,
ಜಯಪ್ರಕಾಶ ನೇವಾರ ಶಿವಕವಿ.

ಇಳೆಗಿಳಿದಿದೆ ನಾಕ

August 17, 2007 - 8:42pm — jp.nevara

ಅದೋ, ಬಾಂದಳದಲಿ ಮಿನುಗುತ್ತಿದೆ
ಬಿಳಿ ಬೆಳ್ಳಿಯ ಚುಕ್ಕಿ,
ಬೆಳಗಾಯಿತು, ಬೆಳಕಾಯಿತು
ಎಂದುಲಿಯುತ್ತಿವೆ ಹಕ್ಕಿ.

ಕಪ್ಪಿದ್ದದು ಕೆಂಪಾಯಿತು
ಮೂಡಣದಂಗಳದಿ.
ರಂಗವಲ್ಲಿಯ ಕಂಡಾಯಿತು
ಮನೆ-ಮನೆಯಂಗಳದಿ.

ಎಳೆ ಕುಡಿಯಲಿ, ಗಿಡದೊಡಲಲಿ
ಹರಡಿದ ಇಬ್ಬನಿಯು.
ಕರಗುತ್ತಿವೆ ಎಳೆಬಿಸಿಲಿಗೆ
ಆ ಮುತ್ತಿನ ಹನಿ-ಹನಿಯು.

ಬಿರಿಯುತ್ತಿವೆ ಗಂಟಿಕ್ಕಿದ
ಮೊಗ್ಗವು ಮುನಿ ಮರೆತು.
ಹರಿಯುತ್ತಿದೆ ತಂಗಾಳಿಲಿ
ಹೂ-ಗಂಧವು ತಾ ಬೆರೆತು.

ಬೆಳ್ಳಕ್ಕಿಯು ಸಾಲುಗಟ್ಟಿ
ಹೊರಟಿದ್ದವು ವಲಸೆ.
ಏರುತ್ತಾ-ಇಳಿಯುತ್ತಾ ತೋರುತ್ತಿದ್ದವು
ತರ-ತರದ ವರಸೆ.

ಬೆಳ-ಬೆಳಗ್ಗೆ ಇಳೆಗಿಳಿದೆದೆ
ಆ ಹೊಸ ಹಸಿ ನಾಕ.
ಇದ ಕಂಡ ಕವಿಯಮನಸು
ಮಾತನಾಡದೆ ತಾನಾಯಿತು ಮೂಕ.

-- ಜಯಪ್ರಕಾಶ ನೇ ಶಿವಕವಿ

  • ಕನ್ನಡ ಕವಿತೆ
~.~
  • jp.nevara ರವರ ಬ್ಲಾಗ್
  • Login or register to post comments
  • 454 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 19, 2007 - 11:43pm — ಸಂಗನಗೌಡ

ಉ: ಇಳೆಗಿಳಿದಿದೆ ನಾಕ

ಸಂಗನಗೌಡ's picture

ಮನಗಂಡ...

ಗುಡಿ ಗುಂಡಾರಗಳಲಿ
ಮೊಳಗಿದೆ ಗಂಟೆಯ ಸದ್ದು,
ದೇವರಿಗೆ ಮುಗಿಯ ಬಂದಿಹರು
ಮಂದಿ ಬೆಳಗಾಗೆ ಎದ್ದು,

ಹರಿಯಿಸಿ ರವಿ ತಾ ಬೆಳಕನು
ಹರಿದು ಹಾಕಿದ ಕತ್ತಲೆಯನು,
ಇದನವನು ಕಾಣುವನೋ ಕಾಣನೋ,
ಕವಿಯು ತಾ ಕಂಡು ಬೆರಗಾದನು.

ಹೆಂಗ್ ಐತ್ರಿ? ಕವಿಗಳೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 20, 2007 - 11:45am — jp.nevara

ಉ: ಇಳೆಗಿಳಿದಿದೆ ನಾಕ

jp.nevara's picture

ಭಾಳ ಛಲೋ ಅಯ್ ತ್ರೀ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 20, 2007 - 12:16pm — mahesha

ಉ: ಇಳೆಗಿಳಿದಿದೆ ನಾಕ

mahesha's picture

ಇಬ್ರು ನಲುವಾಗೇ ಒರೆದಿದ್ದೀರಿ!! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೋಗಿಲೆ-ನನ್ನ ಮನೆಯ ಎದುರಿನ ಮರದಲ್ಲಿ ಕುಳಿತು ನಿತ್ಯವೂ ಹಾಡುತ್ತಿದ್ದ ಹಾಡುಗಾರನ ನೆನಪು
  • ಬಾವಿಯೊಳಗಿದ್ದವನ
  • ನನ್ನ ಚೆಲುವೆ.
  • ಬರ್ಡ್ ಪ್ಲೂ
  • ಸಹವಾಸದ ಮಹತ್ವ
Syndicate content

ಲೇಖಕರು

jp.nevara's picture

ಪೂರ್ಣ ಹೆಸರು
ಜಯಪ್ರಕಾಶ ನೇವಾರ ಶಿವಕವಿ

ಪರಿಚಯ

ನನ್ನ ಹೆಸರು ಜಯಪ್ರಕಾಶ ನೇವಾರ ಶಿವಕವಿ, ಊರು ಬಳ್ಳಾರಿ ಜಿಲ್ಲೆಯಲ್ಲಿರುವ ಉಜ್ಜೈನಿ ಗ್ರಾಮ, ವಾಸ ಬೆಂಗಳೂರೆಂಬ ಬೆಂದಕಾಳೂರು, ಝೈಲೋಗ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಅನ್ನೊ ಸಂಸ್ಥೆಯಲ್ಲಿ ತಂತ್ರಾಂಷ ತಂತ್ರಜ್ಞನಾಗಿ ಕೆಲಸ, ಕವನ ಬರೆಯುವ ಮತ್ತು ಅನುವಾದಮಾಡುವುದು ನನ್ನ ಹವ್ಯಾಸ, ನನ್ನ ಜಿಮೈಲ್ ವಿಳಾಸ. jp.nevara@gmail.com
ಇದಿಷ್ಟು ನನ್ನ ಸ್ವ ಪುರಾಣ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 46 ಅತಿಥಿಗಳು ಆನ್ಲೈನ್ ಇರುವರು.


ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator