ನಾವಾಡುವ ನುಡಿ.....
ನನಗೆ ಎಲ್ಲ ಗೊತ್ತಿದೆ ಎಂಬ ಹಮ್ಮು-ಬಿಮ್ಮುಗಳಿಲ್ಲ ಕಾರಣ ಇಷ್ಟೆ,
ಎಲ್ಲ ಬಲ್ಲವರಿಲ್ಲ, ಬಲ್ಲಿದರು ಬಹಳಿಲ್ಲ |
ಬಲ್ಲಿದರಿದ್ದು ಬಲವಿಲ್ಲ| ಲೋಕಕ್ರೆ
ಸಾಹಿತ್ಯವೆಲ್ಲರಿಗಲ್ಲ - ಸರ್ವಜ್ಞ |
ನನಗೆ ಗೊತ್ತಿರೊದನ್ನ ಕವನಗಳ ರೂಪದಲ್ಲಿ ಬರೆಯೋದು ಮಾತ್ರ ನನಗೆ ಗೊತ್ತು.
ಕವನಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತೇನೆಯೆ ಹೊರತು, ಎಲ್ಲರೂ ಓದಲೆಂದಲ್ಲ.
ಯಾರಾದ್ರೂ ಓದಿದರೆ, ಓದಿ ಕವನದ ಬಗ್ಗೆ ನಾಲ್ಕು ನಲ್ನುಡಿಗಳನ್ನಾಡಿದರೆ ಖಂಡಿತಾ ಸಂತೋಷವಾಗುತ್ತೆ.
ಕೋಗಿಲೆ ಹೇಗೆ ಎಲ್ಲ ಕೇಳಲಿ ಎಂದು ಹಾಡುವುದಿಲ್ಲವೋ, ಅಂತೆಯೆ ನಾನೂ ಸಹ ಎಲ್ಲ ಓದಲಿ ಎಂದು ಕವನ ಬರೆಯುವುದಿಲ್ಲ. ಅದು ನನಗೆ
ನನ್ನ ಭಾವನೆಗಳನ್ನು ವ್ಯಕ್ತ ಪಡಿಸಲು ಇರುವ ಒಂದು ಅನಿವಾರ್ಯ ದಾರಿ ಮಾತ್ರ. ಬರೆದ ಕವನಗಳೆಲ್ಲವನ್ನು ಎಲ್ಲ ಮೆಚ್ಚಿಕೊಳ್ಳಲಿ ಎಂದೂ
ಸಹ ನೆನೆಸುವುದಿಲ್ಲ. ಒಂದು ಕವನ ಇಷ್ಟವಾಗಳು ಎಷ್ಟು ಕಾರಣಗಳಿರುತ್ತವೆಯೋ ಅಷ್ಟೇ ಕಾರಣಗಳು ಇಷ್ಟವಾಗದಿರಲೂ ಇರಬಹುದು,
ಅದಕ್ಕೂ ಹೆಚ್ಚೂ ಸಹ ಇರಬಹುದು.
ಅದೇನೆ ಇರಲಿ ಕವನ ನಾಲ್ಕು ಜನಕ್ಕೆ ನೆಚ್ಚಿದರೆ, ನಾಲ್ಕು ಚಿಂತನೆಗಳಿಗೆ ದಾರಿ ಹಾಕಿಕೊಟ್ಟರೆ, ನಾಲ್ಕು ಜನ ಅದರ ಬಗ್ಗೆ
ಮಾತನಾಡಿದರೆ, ಅದರ ಇರುವಿಕೆಗೆ ಒಂದು ಸಾರ್ಥಕತೆಯಂಬುದಂತೂ ಬಂದೇ ಬರುತ್ತದೆ.
ಇಂಥಾ ಸಾರ್ಥಕತೆ ಎಂಬುದು ನನ್ನ ಕವನಗಳಿಗೆ ದೊರಕಲಿ ಎಂದು ಆಶಿಸುತ್ತಾ....
ನಿಮ್ಮವ,
ಜಯಪ್ರಕಾಶ ನೇವಾರ ಶಿವಕವಿ.
ಹಕ್ಕಿಯ ಲೋಕದ ಮಕ್ಕಳೆ
ಹಕ್ಕಿಯ ಲೋಕದ ಮಕ್ಕಳೆ
ದು:ಖದಿ ಕೊರಗುತ್ತಾ ಕುಂತಿರುವಿರಿ ಏಕೆ?
ನಕ್ಕಾರೂ ಮರೆಯಾದ ನೋವನ್ನು ಕೆದಕುತ್ತ
ಬಿಕ್ಕಿ-ಬಿಕ್ಕಿ ಅಳುವುದು ಏಕೆ?
ಸಣ್ಣಾಗೆ ಇದ್ಧಾ ನಿಮ್ಮ ಪ್ರೀತಿಯಗೂಡ
ಕಣ್ಣಾ ಎದುರೀಗೆ ಕಡವಿದ್ದ ನೆನೆದೀರಾ
ಅಣ್ಣ-ಅಕ್ಕರನು ನಿಮ್ಮ ಕಣ್ಣೆದುರೀಗೆ
ಹರಣವಾ ಮಾಡಿದ್ದ ನೆನೆದೀರೇನು?
ಉಂಡು ಆಡಿದ್ದ ನಿಮ್ಮ ಪ್ರೀತಿಯ ಮರವ
ತುಂಡು ಗೋಲಿಂದ ಕಡಿದಿದ್ದಾ ನೆನೆದೀರಾ
ದುಂಡೀಯ ಹಾಗಿದ್ದ ಆ ದೊಡ್ಡ ಮರವನ್ನು
ಕೆಂಡಾವ ಮಾಡಿದ್ದ ನೆನೆದೀರೇನು?
ಸೃಷ್ಠಿಕರ್ತನು ಅವನು ಎಲ್ಲವನು ಕೊಟ್ಟಾರು, ಕೆಟ್ಟ
ದೃಷ್ಠಿಬಿದ್ದೀತು ಮನುಜನದು
ಕಷ್ಟ ಎಂಬುದು ಬರುವೂದು ಎನ್ನಾದೆ, ತನ್ನ
ಇಷ್ಟ ಬಂದಂಗೆ ಬಳಸಿದನು
ಹಸಿರಿದ್ದ ಈ ತಿರೆಯ ಹಾಳು ಮಾಡಿದನು
ಉಸಿರಲ್ಲಿ ವಿಷವ ತುಂಬಿದನು
ಹೆಸರು ಹೆಸರೆಂಬ ಹೆಸರೀನ ಆಸೆಗೆ
ಕೆಸರಲ್ಲಿ ಸಿಕ್ಕೀದ ಮೀನಾದನು
ಕೆಡುವುದು ಮನುಜ ಒಬ್ಬಾನೆ ಅಲ್ಲ
ಎಡವುದೂ ಮಾತ್ರಾ ಒಬ್ಬಾನೆ
ಅಡಿಗಡಿಗೂ ತಪ್ಪನ್ನು ಮಾಡುತ್ತ ಕೊನೆಗೆ
ಕೆಡಿಸಿದ ಜಗದ ಚೆಲುವನ್ನು
ಬೋಳಾದ ಮರಗಳನು ಕಂಡು ಕೊರಗುವಿರೇನು?
ಹಾಳಾದ ಭುವಿಯನ್ನು ಕಂಡರಿತು
ಏಳಿಗೆ ಹೇಗೆ ಎಂಬುದು ಅರಿಯಾದೆ
ಬಾಳೀನ ಚಿಂತೆಯಲಿ ಮುಳುಗಿಹಿರೇನು?
- ಜಯಪ್ರಕಾಶ ನೇ ಶಿವಕವಿ

- jp.nevara ರವರ ಬ್ಲಾಗ್
- Login or register to post comments
- 230 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: