ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › Kamalakar ರವರ ಬ್ಲಾಗ್

ವಾಸ್ತವವೆಂದರೆ ವಾಸ್ತವವೇ?

July 30, 2006 - 6:57pm — Kamalakar

ವಾಸ್ತವ ಎನ್ನುವುದು ಮಾಯೆ ಎಂದು ನಂಬುವುದಿದೆ. ಅದೊಂದು ಆದಿಭೌತಿಕ ನಿಲುವು. ಆದರೆ ಭೌತಿಕ ನೆಲೆಯಲ್ಲೂ ಕೂಡ ಈ ಕುರಿತು ಅದೇ ತರಹದ ನೋಟ ನಾವು ಕಾಣುತ್ತೇವೆ. ಅಂದರೆ, ವಾಸ್ತವವಾಗಿ ವಾಸ್ತವವೆಂದರೆ ಕಥನಗಳ ಮೂಲಕ ನಾವು ಕಟ್ಟಿಕೊಳ್ಳುವ ನಂಬಿಕೆಗಳು ಎಂಬರ್ಥದಲ್ಲಿ. ನಾವು ಕಾಣುವುದೆಲ್ಲ ಇರುವಹಾಗೇ ನಮಗೆ ಅರಿವಿಗೆ ಬರುತ್ತದೆ ಎನ್ನುವುದು ಕಲ್ಪನೆಯೇ ಸರಿ. ಸಮಾಜ ಜೀವಿಗಳಾದ ನಮಗೆ, ಸಾಮಾಜಿಕ ಕಥನಗಳು ಕಟ್ಟಿಕೊಟ್ಟಿರುವ ತಿಳಿವಿನ ಪ್ರಕಾರಗಳ ಹೊರತು ಇನ್ನೇನೂ ಅರಿವಿನ ಸಾಧ್ಯತೆ ಇಲ್ಲ. ಹಾಗಾಗಿಯೇ ಭಾಷೆಯ ಹೊರಗೆ ಏನೂ ಇಲ್ಲ ಎಂದು ಕೆಲವರ ಅಂಬೋಣ.
ಇದನ್ನು ನಿಧಾನವಾಗಿ ನೋಡೋಣ. ನನ್ನ ಕಣ್ಣ ಮುಂದೆ ಬಾಳೆಹಣ್ಣಿದೆ. ಆ ಬಾಳೆ ಹಣ್ಣು ವಾಸ್ತವವೋ, ಕಥನವೋ? ಭೌತಿಕವಾಗಿ ಬಾಳೆಹಣ್ಣಿರುವುದು ಪ್ರಶ್ನಾತೀತ. ಆದರೆ ಅದು ಬಾಳೆ ಹಣ್ಣು ಎಂಬ ನನ್ನೊಳಗಿನ ಅರಿವು ಹಾಗು ಆ ಭೌತಿಕ ವಸ್ತುವಿನ ನಡುವೆ ಸಾಮ್ಯವಿದ್ದರೆ ಅದಕ್ಕೆ ಆ ವಸ್ತುವಿನ ಬಗ್ಗೆ ನಾನು ಆಂತರಿಸಿಕೊಂಡ ಸಾಮಾಜಿಕ ಕಥನಗಳೇ ಕಾರಣ. ಯಾಕೆಂದರೆ ಆ ಭೌತಿಕ ವಸ್ತು ನನಗೆ ಒಂದು ವಿಶಿಷ್ಟ ಬಗೆಯ ಹಣ್ಣಾಗಿ, ವಿಶಿಷ್ಟ ಗುಣಗಳೊಂದಿಗೆ, ವಿಶಿಷ್ಟ ಉಪಯೋಗಗಳಿರುವ ವಸ್ತುವಾಗಿ ಅರಿವಾಗುತ್ತಿದೆ. ಈ ಎಲ್ಲ (ಇಂತಹ ಎಲ್ಲ) ತಿಳಿವು ಇರದಿದ್ದರೆ ಆ ವಸ್ತು ಏನೊಂದೂ ಆಗಲಾರದು. (ಅದು ವಸ್ತು ಎಂದು ತಿಳಿವುದರ ಪ್ರಕ್ರಿಯೆಯೂ ಹೀಗೆಯೇ ಇರುತ್ತದೆಯಾಗಿ). ಅಂದರೆ, ಬಾಳೆ ಹಣ್ಣು ಬಾಳೆ ಹಣ್ಣಾಗಿರುವುದು ಅದರದ್ದೇ ಆದ ಗುಣಲಕ್ಷಣಗಳಿಂದಾದರೂ, ಅದು ನನಗೆ ಬಾಳೆಹಣ್ಣಾಗುವುದು ಅದರ ಹೊರತಾದ ನನ್ನ ಸಾಮಾಜಿಕ/ಸಾಂಸ್ಕೃತಿಕ ಪ್ರಜ್ನಾವಲಯದ ಮೂಲಕವೇ.
ಹೀಗೆ ಶುರುಮಾಡಿದರೆ ಕಥನಗಳು ಹೇಗೆ ನಮ್ಮ ನಿತ್ಯ ವ್ಯವಹಾರಗಳನ್ನು ನಿರ್ಮಿಸುತ್ತವೆ ಎಂದು ಅರಿವಿಗೆ ಬರುತ್ತದೆ. Social Text ಎಂಬ ಪತ್ರಿಕೆಯಲ್ಲಿ ನಡೆದ ಗಫಲಾ ಒಂದರಲ್ಲಿ ಸೋಕಲ್ ಎಂಬ ಭೌತ ಶಾಸ್ತ್ರಜ್ನನು ಈ ಥರಹದ ವಿಚಾರಗಳನ್ನು ಸುಳ್ಳು ಎಂದು ಸಾಧಿಸಲು ಆ ಪತ್ರಿಕೆಯನ್ನೇ ವಿಡಂಬಿಸುವ ಒಂದು ಪ್ರಯೋಗ ಮಾಡಿದ. (http://www.physics.nyu.edu/faculty/sokal/). ವಾಸ್ತವ ಎನ್ನುವುದು ಸಾಮಾಜಿಕ ಕಥನ ಎನ್ನುವವರು ತನ್ನ ಹತ್ತನೇ ಮಹಡಿಯ ಮನೆಯ ಬಾಲ್ಕನಿಯಿಂದ ಹೊರ ಜಿಗಿದು ವಾಸ್ತವದ ಸತ್ಯತೆಯನ್ನು ಪರೀಕ್ಷಿಸಬಹುದು ಎಂದು ವ್ಯಂಗವಾಗಿ ಈ ವಿಚಾರವನ್ನು ಟೀಕಿಸಿದ. ಅವನು ಹೇಳುವುದು ಸರಿ. ಸೃಷ್ಟಿಯ ಆಗುಹೋಗುಗಳನ್ನು ಸಮಾಜ ಸೃಷ್ಟಿಸಿದೆ ಎನ್ನುವುದು ಸರಿ ಅಲ್ಲ. ಆದರೆ ಅವನು ಮುಗ್ಗರಿಸುವುದು ಇಲ್ಲಿಯೇ. ಸಾಮಾಜಿಕ ಕಥನಾವಾದ ಎನ್ನುವುದೆಂದರೆ, ಸ್ಥಿತಿಯ ಕುರಿತಾದ ನಮ್ಮ ಜ್ನಾನ ಕಥನವೆಂದೇ ಹೊರತೂ, ಸ್ಥಿತಿಯೇ ಕಥನವೆಂದಲ್ಲ. ಗುರುತ್ವಾಕರ್ಷಣ ಬಲದ ಕುರಿತು ನಮ್ಮ ಜ್ನಾನ ಕಥನವೆಂದೇ ಹೊರತೂ, ಆ ಬಲವೇ ಕಥನವೆಂದಲ್ಲ.
ಜ್ನಾನದ ಕಟ್ಟುಕೊಳ್ಳುವಿಕೆಯ ಈ ನಮ್ಮ ವ್ಯವಹಾರವನ್ನು ನಾವು ಸಾಮಾನ್ಯವಾಗಿ ನಿರ್ಲಕ್ಷಿಸಿ ಅದನ್ನು ನಿತ್ಯಸತ್ಯವೆಂದು ಸ್ವೀಕರಿಸಿಬಿಡುವುದು ಹಲವು ಬಗೆಯ ಗೊಂದಲಗಳನ್ನು ಹಾಗೂ ತೊಂದರೆಗಳನ್ನು ಹುಟ್ಟಿಸುತ್ತದೆ. ಇದು ಮಾನವ, ಮಾನವನ ಕುರಿತಾಗಿ ಕಟ್ಟಿಕೊಳ್ಳುವ ಜ್ನಾನಗಳಲ್ಲಿ ತನ್ನ ವಿಪರೀತಗಳನ್ನು ಪ್ರದರ್ಶಿಸುತ್ತದೆ. ಉದಾಹರಣೆಯಾಗಿ ಭಾರತದಲ್ಲಿ ಪಾಕಿಸ್ತಾನದ ಬಗ್ಗೆ ಇರುವ ನಂಬಿಕೆಗಳನ್ನೇ ನೋಡಬಹುದು. ಸಾಮನ್ಯವಾಗಿ ಇದು ನೆಗೆಟಿವ್ ಆದ ನಂಬಿಕೆ. ಅಂದರೆ ಪಾಕಿಸ್ತಾನಿಗಳು ಹಾಗೆ ಹೀಗೆ ಎಂಬಲ್ಲಿ, ಯಾರು ಯಾರು ಹಾಗೆ, ಎಲ್ಲರೂ ಹಾಗಿರುತ್ತಾರೆಯೇ ಎಂದೆಲ್ಲ ಯೋಚಿಸದೇ ಒಂದು ತರದ ಸಾರ್ವತ್ರಿಕ ರೂಪಿನಲ್ಲಿ ನಾವು ಪಾಕಿಸ್ತಾನ ಹಾಗೂ ಅಲ್ಲಿಯ ಜನರನ್ನು ಕಲ್ಪಿಸಿಕೊಂಡು ಬಿಡುತ್ತೇವೆ. ಹಾಗೆಯೇ, ವಸಾಹತುಶಾಹಿಯ ಸಮಯದಲ್ಲಿ ಭಾರತೀಯರ ಬಗ್ಗೆ ಬ್ರಿಟೀಷರಿಗಿದ್ದ ಕೆಲವು ನಂಬಿಕೆಗಳು. ಎಡ್ವರ್ಡ ಸಾಯಿದ್ ಅನ್ನುವಂತೇ ಹೀಗೆ ಮಾಡುವಾಗ ಆಗುವುದೇನೆಂದರೆ, ಮೊದಲು ಸಿಂಹ ಹೀಗಿರುತ್ತದೆ ಎಂಬ ವಿವರಣೆ ಯಾವುದೋ ಒಂದು ಅನುಭವದ ಮೇಲೆ ಹುಟ್ಟಿ ಆಮೇಲೆ, ಹೀಗಿರುವುದೆಲ್ಲ ಸಿಂಹವೇ, ಸಿಂಹ ಹೀಗೇ ಇರಬೇಕು, ನಮಗೆ ಗೊತ್ತಿರುವುದೋಂದೇ ಸಿಂಹ, ಇಲ್ಲದಿದ್ದರೆ ಅದು ಸಿಂಹವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಬರುತ್ತದೆ.
ದಿನದಿನದ ವ್ಯವಹಾರಗಳಲ್ಲಿ ಕೂಡ ನಾವು ಕಥಿತ ಜ್ನಾನವನ್ನು ಇತ್ಯಾತ್ಮಕ ಜ್ನಾನವೆಂದು ಸ್ವೀಕರಿಸಿ ಗೊಂದಲದೊಳಗಿರುತ್ತೇವೆ. ಅಂದರೆ, ನಮ್ಮ ನಂಬಿಕೆಗಳು ಮೇಲ್ನೋಟಕ್ಕೆ ಸತ್ಯ ಅನ್ನಿಸಿದರೂ, ಅವು ಸಾಂದರ್ಭಿಕ ಸಾಮಾಜಿಕ ಅಧಿಕಾರಗಳ ಜಾಲದಲ್ಲಿ ಹುಟ್ಟುಕೊಂಡ ಐಡಿಯಾಲಜಿಗಳನ್ನವಲಂಬಿಸಿರುತ್ತವೆ.

ಕಮಲಾಕರ,
30, ಜುಲೈ, 2006

~.~
  • Kamalakar ರವರ ಬ್ಲಾಗ್
  • Login or register to post comments
  • 699 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ್ತ್ರೀವಾದಿ ಏಕಾಗಬಾರದು?
  • ಕನಸು
  • ವಚನ ಚಿಂತನ: ೭: ಮನಸ್ಸು – ಆಸೆ - ಮಾಯೆ
  • ಕನ್ನಡ ಉಳಿಸುವಿಕೆ: ಭಿನ್ನ ನಿಲುವು
  • ನಾವು ದೀಪವನ್ನು ಏಕೆ ಹಚ್ಚುತ್ತೇವೆ?
Syndicate content

ಲೇಖಕರು

Kamalakar's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anamadheya
    ಉ: ವಾರಾಂತ್ಯ ಹೇಗಿತ್ತು?
    September 8, 2008 - 10:41pm
  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 129 ಅತಿಥಿಗಳು ಆನ್ಲೈನ್ ಇರುವರು.


ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator