ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › kavitha ರವರ ಬ್ಲಾಗ್

ವಿಚಾರವಾದಿ ಕೆ.ರಾಮದಾಸ್ ಅನಂತದಲ್ಲಿ ಲೀನ

June 21, 2007 - 6:21pm — kavitha

ತಾಯಿ ಮಂಜಮ್ಮನ ಮುದ್ದಿನ ಮಗನಾಗಿ, ತಂಗಿ ಕಮಲಮ್ಮನ ಪ್ರೀತಿಯ ಅಣ್ಣನಾಗಿ, ಹೆಂಡತಿ ನಿರ್ಮಲಳ ನಲ್ಮೆಯ ಪತಿಯಾಗಿ, ಮಗಳು ಸಮತಾಳ (ಸ್ನೇಹ) ಮೆಚ್ಚಿನ ತಂದೆಯಾಗಿ, ಅಳಿಯ ಓಂಕಾರ್ ನ ನೆಚ್ಚಿನ ಮಾವನಾಗಿ, ಎಲ್ಲಕ್ಕಿಂತ ಮಿಗಿಲಾಗಿ ಬಡ, ದೀನ ದಲಿತರಿಗೆ ಮಾರ್ಗದರ್ಶಿಯಾಗಿದ್ದ, ಎಲ್ಲರಿಗೂ ಬೇಕಾದವರಾಗಿದ್ದ ಮೇಸ್ಟ್ರು ಇನ್ನಿಲ್ಲ.

ಅವರ ವೈಯಕ್ತಿಕ ಜೀವನದ ಬಗ್ಗೆ ನನಗೆ ತಿಳಿದ ಕೆಲವು ವಿಷಯಗಳನ್ನು ಇಲ್ಲಿ ಹೇಳಬಯಸುತ್ತೇನೆ.

ಸರಳ ವಿವಾಹಕ್ಕೆ ಒತ್ತು ನೀಡುತ್ತಿದ್ದ ಅವರು, ಯಾವುದೇ ಅದ್ದೂರಿ ಸಮಾರಂಭಗಳಿಗೆ ಭೇಟಿ ನೀಡುತ್ತಿರಲಿಲ್ಲವೆನಿಸುತ್ತದೆ. ನಮ್ಮ ಮದುವೆಗೂ ಸಮತಾಳನ್ನು ಮಾತ್ರ ಕಳುಹಿಸಿದ್ದು ಇದೇ ಕಾರಣಕ್ಕೆ ಎಂಬುದು ನನಗೆ ತಡವಾಗಿ ಅರ್ಥವಾಯಿತು. ನನ್ನ ಅತ್ತೆ (ರಾಮದಾಸ್ ರ ತಂಗಿ) ಅಣ್ಣನ ಒಂದೊಂದು ನೆನಪಿನ ಬುತ್ತಿಯನ್ನು ಬಿಚ್ಚಿದಂತೆ, ನನಗೂ ಆ ಅದಮ್ಯ ಚೇತನದ ಅಂತ್ಯ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ. ಅವರ ಆತಿಥ್ಯ ನಿಜಕ್ಕೂ ಅವಿಸ್ಮರಣೀಯ. ಮನೆಗೆ ಯಾರೇ ಭೇಟಿ ನೀಡಿದರೂ, ಒಂದು ಕಪ್ ಕಾಫಿ ಕುಡಿಯದೇ ಹಿಂದಿರುಗುವಂತಿರಲಿಲ್ಲ. ಇನ್ನು ತಾಯಿ ಮಂಜಮ್ಮನ ಕೈ ರುಚಿ ಸವಿದವೆರೆಷ್ಟೊ.

ಪ್ರೊ.ರಾಮದಾಸ್ ರಿಗೆ ಮಲೆನಾಡಿನ ಅಡುಗೆ ಅಂದ್ರೆ ಪಂಚಪ್ರಾಣ, ನಮ್ಮತ್ತೆ ಅವರ ಮನೆಗೆ ಭೇಟಿ ನೀಡಿದಾಗಲೆಲ್ಲಾ ಅವರ ಬೇಡಿಕೆ ‘ಎಣ್ಣೆ ರೊಟ್ಟಿ, ಮೀನಿನ ಸಾರು, ಅರಶಿನದೆಲೆ ಕಡುಬು’ ಹೀಗೆ ಮಲೆನಾಡಿನ ಸಾಂಪ್ರದಾಯಿಕ ಅಡುಗೆಗಳೆ. ಇದನ್ನೆಲ್ಲ ಬಲು ಅಕ್ಕರೆಯಿಂದ ಮಾಡಿ ಬಡಿಸುತ್ತಿದ್ದ ತಂಗಿಗೆ, ಅಣ್ಣ ಹದಿನೈದು ದಿನಗಳಿಂದ ಕೇವಲ ರವೆ ಗಂಜಿ ಸೇವಿಸುತ್ತಿದ್ದರೆಂದು ತಿಳಿದು ಬಹಳ ಸಂಕಟ ಪಟ್ಟರು.

ನನ್ನ ಯಜಮಾನರು, ಸೋದರ ಮಾವ ರಾಮದಾಸ್ ರ ಮನೆಯಲ್ಲಿ ಸಣ್ಣಂದಿನಲ್ಲಿ ಅವರ ಮಾರ್ಗದರ್ಶನದಲ್ಲಿ ಬೆಳೆದವರು. ‘ಆಗಾಗ್ಗೆ ಗೆಳೆಯರಾದ ತೇಜಸ್ವಿ ಮತ್ತು ಲಂಕೇಶರೊಂದಿಗೆ ಮೀನು ಹಿಡಿಯಲೊರಟರೆ ಮಾವ ಹಿಂದಿರುಗುತ್ತಿದ್ದದು ರಾತ್ರಿ ಹನ್ನೆರಡರ ಆಸುಪಾಸಿಗೆ, ಅವರ ದಾರಿ ಕಾಯುತ್ತಿದ್ದ ನಾನು, ಅಜ್ಜಿಯೊಂದಿಗೆ ಆ ಸರಿರಾತ್ರಿಯಲ್ಲಿ ಮೀನಿನ ಅಡುಗೆ ಮಾಡಿ ಬಡಸಿ, ನಾವು ತಿಂದುಂಡು ಮಲಗುತ್ತಿದ್ದೆವು’ ಎಂಬುದನ್ನು ಹಲವಾರು ಬಾರಿ ಹೇಳಿಕೊಂಡಿದ್ದರು.

ದಿನಕ್ಕೆ ನಾಲ್ಕು ಸಿಗರೇಟು ಪ್ಯಾಕ್ ಖಾಲಿ ಮಾಡುತ್ತಿದ್ದರಂತೆ, ಕೇಳಿದೊಡನೆ ಸಿಗರೇಟು ತಂದುಕೊಡುತ್ತಿದ್ದ ತಂಗಿಯ ಮಗ ಪ್ರಶಾಂತನಿಗೆ ಅವರ ಆರೋಗ್ಯದ ಬಗ್ಗೆ ವಿಪರೀತ ಕಾಳಜಿಯಾಗುತ್ತಿತ್ತಂತೆ.

ಹತ್ತಿರದ ನೆಂಟರಿಷ್ಟರನ್ನು, ಕೈ ಹಿಡಿದು ಎತ್ತಿ, ಅವರ ಜೀವನಕ್ಕೆ ದಾರಿ ತೋರಿದವರು. ಕೊನೆಯುಸಿರೆಳೆಯುವ ಎರಡು ದಿನಗಳ ಹಿಂದೆ, ಶಿವಮೊಗ್ಗದಲ್ಲಿರುವ ತಂಗಿಯ ಮನೆಗೆ ಮತ್ತು ರಿಪ್ಪನ್ ಪೇಟೆಯಲ್ಲಿರುವ ಚಿಕ್ಕಮ್ಮನ ಮನೆಗೆ ಭೇಟಿ ನೀಡಬೇಕೆಂಬ ಇಂಗಿತ ವ್ಯಕ್ತ ಪಡಿಸಿದ್ದರಂತೆ. ಬಹುಶಃ ಕೊನೆಯ ಬಾರಿ ಎಲ್ಲರನ್ನೊಮ್ಮೆ ನೋಡುವ ಆಸೆ ಅವರಲ್ಲಿತ್ತೇನೊ??

ಯಾರಿಗೂ ಹೆದರದ ನಮ್ಮೆಜಮಾನ್ರಿಗೆ ಅವರ ಮಾವನ ಬಗ್ಗೆ ಎಲ್ಲಿಲ್ಲದ ಗೌರವ, ಅವರನ್ನು ಅಷ್ಟು ಹತ್ತಿರದಿಂದ ಕಂಡ ಅವರೇ ಧನ್ಯ.

--ಕವಿತ ಪ್ರಶಾಂತ್--

  • ಪ್ರಚಲಿತ
~.~
  • kavitha ರವರ ಬ್ಲಾಗ್
  • Login or register to post comments
  • 392 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 25, 2007 - 6:40pm — srinivasc

ಉ: ವಿಚಾರವಾದಿ ಕೆ.ರಾಮದಾಸ್ ಅನಂತದಲ್ಲಿ ಲೀನ

srinivasc's picture

chennaagi barediddeeri. iMtaha vyaktigaLa bagge heccu janarige tiLiyuvaMte maaDuttiddeeri nimma prayatna heegE saagali

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 26, 2007 - 12:11pm — kavitha

ಉ: ವಿಚಾರವಾದಿ ಕೆ.ರಾಮದಾಸ್ ಅನಂತದಲ್ಲಿ ಲೀನ

kavitha's picture

ಧನ್ಯವಾದಗಳು ಶ್ರೀನಿವಾಸ್ ರವರೆ, ನಿಮ್ಮ ಪ್ರೋತ್ಸಾಹ ಹೀಗೆ ಇರಲಿ.

ಕವಿತ ಪ್ರಶಾಂತ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆ.ರಾಮದಾಸ್ ಇನ್ನಿಲ್ಲ
  • ನಿದ್ದೆಯಿಂದ ಆದ ನನ್ನ ಅನುಭವಗಳು
  • ರಾಮದಾಸ್ - ಇನ್ನೆಲ್ಲಿ ಆ ತಾಪ... ಆ ಬೆಳಕು!
  • ಅಡುಗೆಯ ಸಂಭ್ರಮ
  • ಯಾರು ಬಲ್ಲರು.............ವಾಣಿ ರಾಮದಾಸ್.
Syndicate content

ಲೇಖಕರು

kavitha's picture

ಪರಿಚಯ

ಹವ್ಯಾಸಿ ಬರಹಗಾರ್ತಿ, ಪತ್ರಿಕಾ ಕಛೇರಿಯಲ್ಲಿ ಉದ್ಯೋಗಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • nagesamrat
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 4:08pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 3:42pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 2:31pm
  • ವೈಭವ
    ಉ: ನಿಮಗೆ ಕನ್ನಡ ಬರುತ್ತಾ?
    July 5, 2008 - 1:30pm
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 5, 2008 - 1:13pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:11pm
  • sushil
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 1:05pm
  • hpn
    ಉ: ದಿನಕ್ಕೊಂದು ಪದ
    July 5, 2008 - 12:51pm
  • harshab
    ಉ: ಟೈಮಿಗಿಲ್ಲ ಟೈಮ್ ಸೆನ್ಸು
    July 5, 2008 - 12:43pm
  • kannadakanda
    ಉ: SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
    July 5, 2008 - 12:42pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 21 ಅತಿಥಿಗಳು ಆನ್ಲೈನ್ ಇರುವರು.


ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator