ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › keshav ರವರ ಬ್ಲಾಗ್

ಒಂದಿಷ್ಟು ನೀಲುಗಳು

April 9, 2008 - 5:23am — keshav

"ಮುಂದಿನ ಜನ್ಮ ಅಂತ ಒಂದಿದ್ದರೆ

ಗಂಡಿನ ಚಪಲ ಇರುವ ಹೆಣ್ಣಾಗಿ ಹುಟ್ಟಿಸಯ್ಯಾ"

ಅಂತ ಗಂಡ ಬರೆದ ಪದ್ಯ ಸಿಕ್ಕು

ಮದುವೆ ರ್ರೇಷ್ಮಸೀರೆಗಳ ನಡುವೆ ಅಡಿಗಿಸಿಟ್ಟ

ನೂರಾರು ಗ್ರೀಟಿಂಗ್ ಕಾರ್ಡುಗಳನ್ನು ನೆನೆಸಿಕೊಂಡು

ಮುಸಿ ಮುಸಿ ನಕ್ಕಳು

-----------------------------------------------------------

ಪಾಂಡಿತ್ಯದ ಭಾರದಿಂದ ಹತ್ತು ಓದಿಗೂ ದಕ್ಕದ ಕವಿತೆ

ಬಿ.ಎಫ್.ಗಳಲ್ಲಿ ಗಂಟೆಗಟ್ಟಲೇ ನಡೆಯುವ ನೀರಸ ಸಂಭೋಗದಂತೆ

ಎಂದು

ಇನ್ನೂ ಹಲ್ಲುಜ್ಜಿರದ ನನ್ನ ಬಾಯಿಗೆ ಗಟ್ಟಿ ಚುಂಬಿಸಿ

ಇದು ಕವಿತೆ ಎಂದಳು

-------------------------------------------------------------------------------- 

ಏಕಾಂತ ಮತ್ತು ಮೌನವಿಲ್ಲದೇ ಹೊಸದೇನೂ ಸೃಷ್ಟಿಯಾಗುವುದಿಲ್ಲ

ಎಂದು ಕವಿ ಹೇಳಿದ್ದಕ್ಕೆ

ನಾನಿಲ್ಲದೇ ಮಗುವನ್ನು ಸೃಷ್ಟಿಸು ನೋಡೋಣ

ಎಂದು ಕಣ್ಣುಮಿಟುಕಿಸಿದಳು

----------------------------------------------------------------------------------- 

ಜಾತಿ ಧರ್ಮ ವರ್ಣ ಗಡಿ

ಇತಿಹಾಸದುದ್ದಕ್ಕೂ

ಚೆಲ್ಲಿದ ರಕ್ತ ದ್ವೇಷ ವೈಷಮ್ಯ

ಕುರಿತು ತಲ್ಲಣಗೊಂಡು ಮಾತಾಡುತ್ತಿದ್ದರೆ

ತನ್ನ ತುಂಬಿದ ಹೊಟ್ಟೆಯ ಮೇಲೆ ನನ್ನ ಕೈಯಿಟ್ಟು

'ಭವಿಷ್ಯ' ಎಂದು ನಿದ್ದೆ ಹೋದಳು

------------------------------------------------------------------------------- 

ದಿನ ಪೂರ್ತಿ ಕೂತು ಬರೆದ ಕವನ

ಓದೇ ಅಂದರೆ

ಗಟ್ಟಿಯಾಗಿ ತುಟಿಗೊಂದು ಮುತ್ತನಿತ್ತು

ಈ ಮುತ್ತಿಗಿಂತ ನಿನ್ನ ಕವನ ಚೆನ್ನ

ಎಂದರೆ ಮಾತ್ರ ಓದುತ್ತೇನೆ

ಎಂದು ಮಾಯವಾದಳು

----------------------------------------------------------------------------------- 

ತಲೆಕೂದಲು ಡೈ ಮಾಡಿಕೊಳ್ಳುವಾಗ

ಕನ್ನಡಿಯಲ್ಲಿ

ಎದೆಯ ಬಿಳಿ ಕೂದಲು ಕಂಡು

ಗಾಬರಿಯಾದ

---------------------------------------------------------------------------------------

  • ನೀಲು
~.~
  • keshav ರವರ ಬ್ಲಾಗ್
  • Login or register to post comments
  • 464 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 9, 2008 - 5:40am — mahesha

ಉ: ಒಂದಿಷ್ಟು ನೀಲುಗಳು

mahesha's picture

ಕೇಶವ ಅವರೇ..

ಎಲ್ಲವು ಚನ್ನಾಗಿದೆ.. ಕೆಲವನ್ನ ಹಿಂದೆ ಕೇಳಿದಂತನ್ನಿಸ್ತಿದೆ...

ತಪ್ಪು ತಿಳಿಯಬೇಡಿ, ಎಲ್ಲವೂ ನಿಮ್ಮದೇ?

ನಿಮಗೆ ನೀಲುಗಳಲ್ಲಿ ಹುರುಪಿದ್ರೆ, ಅನಿವಾಸಿಯವರದನ್ನು ಓದಿ, ಚನ್ನಾಗಿರ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 9, 2008 - 4:47pm — hpn

ಉ: ಒಂದಿಷ್ಟು ನೀಲುಗಳು

hpn's picture

ಹೌದು, ಹಿಂದೊಮ್ಮೆ (ಬಹುಶಃ ಕೇಶವರ ಬ್ಲಾಗ್ ಸ್ಪಾಟ್ ಬ್ಲಾಗಿನಲ್ಲಿ) ಇವನ್ನು ಓದಿದ ನೆನಪು.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೀಲು
  • ಇರುಳು ಹಗಲು
  • ನನ್ನ ಆಸೆ
  • ನವ್ಯ ಪಯಣ
  • ಎಸ್ಸೆಮ್ಮೆಸ್ ಕವಿತೆ
Syndicate content

ಲೇಖಕರು

keshav's picture

ಪರಿಚಯ

I am a radiologist (doctor) by profession, but I spend lots of time in literature, music, movies and internet.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 93 ಅತಿಥಿಗಳು ಆನ್ಲೈನ್ ಇರುವರು.


ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator