ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › keshav ರವರ ಬ್ಲಾಗ್

ಹೀಗೊಂದು ಪತ್ರ

October 22, 2007 - 12:00am — keshav

ಹಿಂಗ್ಯಾಕೆ ನಮ್ಮೂರಲ್ಲೇ ಆಗುತ್ತೆ? ಎಂಬ ಲೇಖನಕ್ಕೆ ನನ್ನ ಪತ್ರ (thatskannada.com)

ಶಾಸ್ತ್ರಿಯವರೇ,

ನಾನೂ ನಿಮ್ಮ ಹಾಗೆ ಪಾಶ್ಚಿಮಾತ್ಯ ದೇಶದಲ್ಲಿರುವವನೇ (ಇಂಗ್ಲಂಡ್). ಆದರೇ ನನ್ನ ಅನುಭವ ನಿಮ್ಮ ಲೇಖನಕ್ಕೆ ತೀರ ತದ್ವಿರುದ್ಧ. ನನಗೇ ಇಲ್ಲಿನ ಖಾಲಿ ರಸ್ತೆಗಳು (ನಮ್ಮ ದೇಶದಲ್ಲಿ ಕರ್ಫೂ ಆದಾಗ ಮಾತ್ರ ಕಾಣುವಂಥಹ), ತುಂಬ ಕೃತಕವಾಗಿ Good Morning, Good evening, BYE, ಮತ್ತು ಮಾತು ಮಾತಿಗೆ Thanks, Sorry, excuse me ಎನ್ನುವುದನ್ನು ಕೇಳಿ ತಲೆ ಚಿಟ್ಟು ಹಿಡಿಯುತ್ತದೆ.

ನಾವು ನಮ್ಮ ದೇಶದ ಏರೋಪ್ಲೇನ್ ಹತ್ತಿದಾಗ ನಮ್ಮ ಸಂಕೋಚಗಳನ್ನೆಲ್ಲ ಬಿಟ್ಟು, ಪಾಶ್ಚಾತ್ಯರ ಢಾಂಬಿಕ (pseudo)ನಯ-ನಾಜೂಕುಗಳನ್ನು ಬಿಟ್ಟು ಹಗುರಾಗುತ್ತೇವೆ, ಅದಕ್ಕೆಂದೇ ಹತ್ತು ಸಾರಿ ಗಗನಸಖಿಯರನ್ನು ಕರೆಯುತ್ತೇವೆ. ಫಾರಿನ ಏರ್-ಲೈನಿನಲ್ಲಿ ಯಾಕೆ ಹೀಗಾಗೋಲ್ಲ ಅಂತ ಕೇಳ್ತೀರಲ್ಲಾ, ಒಂದು ಸಲ ಬಿಟ್ಟು ಎರಡು ಸಲ ಗಗನಸಖಿಯರನ್ನು ಕರೆದು ನೋಡಿ, ಕಂದು ಚರ್ಮದ ನಮ್ಮ ಬಣ್ಣದ ಬಗ್ಗೆ ತಮ್ಮತಮ್ಮಲ್ಲೇ ಮಾತಾಡಿಕೊಳ್ಳುತ್ತಾರೆ, ಅದಕ್ಕೆ ನಾವು ನೀವೆಲ್ಲ ಸುಮ್ಮನಿರುವುದು.

ಇನ್ನು ಕಸದ ಬುಟ್ಟಿಯಲ್ಲಿ ಬೀಸಾಕುವುವುದರ ವಿಚಾರಃ ದಿನಕ್ಕೆ ಸಾವಿರಾರು ಬಾರಿ CCTVಯಲ್ಲಿ ನಮ್ಮನ್ನು ರೆಕಾರ್ಡ್ ಮಾಡುವ ಈ Big Brother ಪಾಶ್ಚಾತ್ಯ ದೇಶಗಳಲ್ಲಿ ಕಸ ಬೀಸಾಕಿದರೆ ಕೌನ್ಸಿಲ್ನಿಂದ ತಪ್ಪಿಸಿಕೊಳ್ಳುವ ಛಾನ್ಸೇ ಇಲ್ಲ, ಮೇಲಾಗಿ ಕಸಕ್ಕೆ ಸಾವಿರಾರು ರೂಪಾಯಿ ದಂಡತೆರಬೇಕಾದ ಪರಿಸ್ಥಿತಿ. ನಮ್ಮ ದೇಶವಿನ್ನೂ Big Brother ಆಗಿಲ್ಲ ಸ್ವಾಮಿ, ಅದಕ್ಕೇ ಹಾಯಾಗಿ ನಾವು ಪಾನ್-ಬೀಡಾ ತಿಂದು ರಸ್ತೆಗಳಲ್ಲಿ ಆರಾಮವಾಗಿ ಉಗಿಯುತ್ತೇವೆ.

ಒಂದು ಭೇಲ್-ಪುರಿಗೆ ಇಲ್ಲಿ ಇಂಗ್ಲಂಡಿನಲ್ಲಿ ನಾನು ಕೊಡುವುದು ಕೇವಲ ೩೦೦ ರೂಪಾಯಿ ಮಾತ್ರ (ನಿಮ್ಮ ಅಮೇರಿಕದಲ್ಲಿ ಎಷ್ಟು ಅಂತ ಗೊತ್ತಿಲ್ಲ). ಭಾರತದಲ್ಲಿ ನೀವು ಅಷ್ಟು ದುಡ್ಡು ಕೊಟ್ಟು ತಿನ್ನುವಿರಾದರೆ, ಅಮೇರಿಕದಲ್ಲಿ ಸಿಗುವುದಕ್ಕಿಂತ ಚೆನ್ನಾಗಿ, ಶುಚಿಯಾಗಿ ಮಾಡಿ ಇನ್ನೂ ಜಾಸ್ತಿ quantity ಕೊಡುತ್ತಾರೆ. ಆದರೆ ನಿಮಗೆ ಭಾರತಕ್ಕೆ ಬರುತ್ತಿದ್ದಂತೆ , ಅಯ್ಯೋ, ಭೇಲ್-ಪುರಿಗೆ ೧೫ ರೂಪಾಯಿಯೇ, ೧೦ ರೂಪಾಯಿಗೆ ಸಿಗುತ್ತಿತ್ತಲ್ಲ ಅಂತ ಚಡಪಡಿಸುತ್ತೀರಿ. ಸುಮ್ಮನಿರಿ ಸಾರ್, ಈ ಥರ ಮಾತಾಡುವ NRIಗಳನ್ನು ದಿನನಿತ್ಯ ಕೇಳಿಸಿಕೊಳ್ಳುತ್ತಲೇ ಇರುತ್ತೇನೆ, ಬ್ಲಾಗುಗಳಲ್ಲಿ ಓದುತ್ತಲೇ ಇರುತ್ತೇನೆ.

ಇನ್ನು STOP ಸಿಗ್ನಲ್-ಗಳ ವಿಚಾರಃ ಪ್ರತಿ ಮೂಲೆಯಲ್ಲಿರುವ CCTVಗಳು, ಜೇಬನ್ನೆಲ್ಲ ಬರಿದು ಮಾಡುವ ಇನ್ಸುರನ್ಸ್ ಪಾಲಿಸಿಗಳು, ಸಣ್ಣ ತಪ್ಪಿಗೂ ಡ್ರೈವಿಂಗ್ ಲೈಸನ್ಸನ್ನೇ ರದ್ದು ಮಾಡುವ ಕಾನೂನುಗಳು - ಏಲ್ಲ ರಸ್ತೆಗಳು ಖಾಲಿ ಇದ್ದಾರೂ ಯಾವನಿಗೆ ಸ್ವಾಮಿ STOP ಸಿಗ್ನಲ್ ದಾಟಿ ಕಾರ್ ಓಡಿಸುವ ಧೈರ್ಯವಾಗುತ್ತೆ?

ಇನ್ನು Wheel chairಗಳ ವಿಚಾರಃ ನಮ್ಮ ದೇಶದ ಸದ್ಯದ ಸಮಸ್ಯೆಗಳಲ್ಲಿ ಇದು ಒಂಚೂರೂ ಮುಖ್ಯವಲ್ಲ. ಬೇಕು ನಿಜ, ಅದಕ್ಕಿನ್ನೂ ತುಂಬ ಕಾಲವಿದೆ.

Cell phone ವಿಚಾರಃ ಇಲ್ಲೂ ಯಾರಿಗೂ ಕಮ್ಮಿಯಿಲ್ಲ ಬಿಡಿ, ಬಸ್ಸು, ಟ್ರೇನು ಎಲ್ಲ ಕಡೆ ಜನ ಸೆಲ್ನಲ್ಲಿ ಮಾತಾಡ್ತಾನೇ ಇರ್ತಾರೆ. ಯಾಕೆ, ನಮ್ಮ ಚಂದದ ಐರಾವತಕ್ಕೆ ಬಯ್ತೀರಾ?

Be a Roman in Rome, ಅಂತ ಈ ಇಂಗ್ಲೀಷರು ಮಾಡಿರುವ ಗಾದೆ ನಿಮಗೂ ಗೋತ್ತು ಅಂದ್ಕೊಂಡಿದೀನಿ. ನಾವು ಈ ಪಾಶ್ಚಾತ್ಯ ದೇಶಗಳಿಗೆ ವಲಸೆ ಬರುತ್ತಿರುವಂತೇ, ಕುಂಡೆ ಸುಟ್ಟ ನಾಯಿಯಂತೆ, ಬಾಲವನ್ನು ಕಾಲುಗಳ ಮಧ್ಯೆ ಸಿಕ್ಕಿಸಿಕೊಂಡು ಬದುಕಲು ಶುರುವಚ್ಚಿಕೊಳ್ಳುತ್ತೇವೆಯೋ, ಹಾಗೆಯೇ, ತಾವುಗಳು ಭಾರತಕ್ಕೆ ಬಂದಾಗ ಇಲ್ಲಿಯವರಂತೆ ವ್ಯವಹರಿಸಿ, ಕ್ಯೂ ಇರಲಿ, ಬಿಡಲಿ, ಮುದುಕರು-ಹೆಂಗಸರಿಗೆ ನಮ್ಮ ಜನ ದಾರಿಮಾಡಿಕೊಡುವುದು ತಮಗೆ ಮರೇತು ಹೋಗಿದೆಯೇ (ಅಪವಾದಲಿಲ್ಲ ಏಂದಲ್ಲ)?

ಇಷ್ಟೆಲ್ಲ ಬರೆದರೂ, ನಾವು ಭಾರತೀಯರು ಅಥವಾ ನಮ್ಮ ಭಾರತ 100% ಒಳ್ಳೆಯ ಜನ್ 100% ಸುಂದರ ದೇಶ ಅಂತ ಹೇಳುತ್ತಿಲ್ಲ; ನಾವು ಮತ್ತು ನಮ್ಮ ದೇಶ ಪಶ್ಚಿಮದ ಜನಗಳಿಗಿಂತ, ದೇಶಗಳಿಗಿಂತ ಒಳ್ಳೆಯ ಜನ-ದೇಶ ಅಂತ ಹೇಳುತ್ತಿಲ್ಲ. ಅವರ ದೇಶ ಅವರಿಗೆ, ನಮ್ಮ ದೇಶ ನಮಗೆ...

ನಮ್ಮ ದೇಶದ ಏಳ್ಗೆಗೆ ಕೈಲಾದ ಸಹಾಯ ಮಾಡೋಣ, ಇಲ್ಲಾ ಪಲಾಯನವಾದಿಗಳಾಗಿ ದೇಶಬಿಟ್ಟು ವಲಸೆ ಹೋಗೋಣ. ಎರಡನೇ ಹಾದಿ ಹಿಡಿದಿರುವ ನಾವು, ರಜೆಗೆಂದು ನಮ್ಮ ದೇಶಕ್ಕೆ ಹೋದಾಗ, ಸುಂಸುಮ್ನೆ ಅರ್ಥವಿರದ comparisonಗಳನ್ನು ಮಾಡಿ ನಮ್ಮ ದೇಶವನ್ನೇ ಹೀಯಾಳಿಸುವುದನ್ನು ಬಿಟ್ಟು, ರಜೆಯನ್ನು ಆನಂದಿಸೋಣ. ಇನ್ನೂ ಶಕ್ಯವಿದ್ದರೆ, ನಿಮ್ಮ ಅಮೇರಿಕದ ಒಬ್ಬ ಅಧ್ಯಕ್ಷ ಹೇಳಿದಂತೆ, 'ದೇಶ ನಿಮಗಾಗಿ ಏನು ಮಾಡಿತೆಂದು ಕೇಳಬೇಡಿ, ನೀವು ನಿಮ್ಮ ದೇಶಕ್ಕೆ ಏನು ಮಾಡಿದ್ದೀರೆಂದು ಕೇಳಿಕೊಳ್ಳಿ' .

  • ಅನಿವಾಸಿ
  • ಪತ್ರ
~.~
  • keshav ರವರ ಬ್ಲಾಗ್
  • Login or register to post comments
  • 549 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 22, 2007 - 10:00am — DSVasantharam

ಉ: ಹೀಗೊಂದು ಪತ್ರ

DSVasantharam's picture

ಸರಿಯಾಗೆ ಹೇಳಿದೀರಿ ನೋಡಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 24, 2007 - 10:51am — girish.rajanal

ಉ: ಹೀಗೊಂದು ಪತ್ರ

girish.rajanal's picture

ನಮಸ್ಕಾರ,
ಮತ್ಯಾಕ ಯೋಚನೆ ಮಾಡತೀರಿ ? ಬಂದು ಬಿಡ್ರಿ ಮರಳಿ ಮಣ್ಣಿಗೆ..
ನಮ್ಮ ದೇಶಕ್ಕೆ ಸ್ವಲ್ಪನಾದರೂ ಸೇವೆ ಮಾಡೋಣ.
ನಿಮ್ಮವ,
ಗಿರೀಶ ರಾಜನಾಳ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 24, 2007 - 3:39pm — keshav

ಉ: ಹೀಗೊಂದು ಪತ್ರ

keshav's picture

ಧನ್ಯವಾದಗಳು ರಾಜನಾಳರೇ,
ಮಣ್ಣಿನ ಋಣ ತೀರಿಸಲಾದೀತೇ?
ಕೇಶವVisit my blog:
http://kannada-nudi.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಗೆ ಗವನ
  • ನುಡಿ ಮುತ್ತುಗಳು
  • *ಸ್ಪೂರ್ತಿಯ ಲೈಟು*
  • *ಆಹ್ವಾನ ಬರುವೆನೆಂದವಳಿಗೆ*
  • ಸಾಹಿತ್ಯ
Syndicate content

ಲೇಖಕರು

keshav's picture

ಪರಿಚಯ

I am a radiologist (doctor) by profession, but I spend lots of time in literature, music, movies and internet.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 12 ಅತಿಥಿಗಳು ಆನ್ಲೈನ್ ಇರುವರು.


ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator