ಪರಂಪರೆಯನ್ನು ಕುಲಗೆಡಿಸುವ ಹೊಸ ಹವ್ಯಾಸ..... ಇನೋವೇಷನ್ ಹೆಸರಲ್ಲಿ!
January 5, 2008 - 12:22pm — ksnayakತಾರೀಕು ೩೧-೧೨-೨೦೦೭ದ ಉದಯವಾಣಿ ಪತ್ರಿಕೆಯಲ್ಲಿ "ಕಲಿ-ಯುಗ"ವೆಂಬ ಅಂಕಣದಲ್ಲಿ ಶ್ರೀಯುತ ಬೇಳೂರು ಸುದರ್ಶನರಿಂದ ಪ್ರಸ್ತಾವಿಸಲ್ಪಟ್ಟ ವಿಷಯವು ನನ್ನ ಗಮನ ಸೆಳೆದುದರಿಂದ ನನ್ನ ಸಹಬ್ಲಾಗಿಗರ ಗಮನಕ್ಕೂ ಈ ವಿಷಯ ಬರಲಿ ಎಂದು ಇಲ್ಲಿ ಇದನ್ನು ಬರೆಯುತ್ತಿದ್ದೇನೆ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 287 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕರ್ನಾಟಕದ ಹಣೆಬರಹ!
October 31, 2007 - 12:12pm — ksnayakಕರ್ನಾಟಕದ ಹಣೆಬರಹ!
ಅಂತೂ ಇಂತೂ ಕರ್ನಾಟಕದ ರಾಜ ಭವನದಲ್ಲಿ ಮತ್ತೆ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಯಡ್ಯೂರಪ್ಪನವರ ತಂಡ ಮತ್ತೆ ಬಣ್ಣಹಚ್ಚಿಕೊಂಡಿದೆ, ಗೆಜ್ಜೆ ಗಿಜ್ಜೆ ಎಲ್ಲಾ ಕಟ್ಟಿಯಾಯಿತು. ಹೊಸ ಪ್ರಸಂಗ! ಇನ್ನೇನೂ ಠಾಕೂರರ ಮತ್ತು ದೆಹಲಿಯಿಂದ ಒಪ್ಪಿಗೆ ಮಾತ್ರ ಬರುವುದು ಬಾಕಿ! ದೆಹಲಿ ಒಡೆಯರು ಒಪ್ಪಿಗೆ ಕೊಡುವುದು ಮಾತ್ರ ಸಂಶಯ. ಮುಂದೆ ಓದಿ »

- Login or register to post comments
- 231 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಟೀಚರ್ಸ್ ಡೇ!
September 5, 2007 - 11:45am — ksnayakಮತ್ತೆ ಸೆಪ್ಟೆಂಬರ್ ೫ ಬಂತು.ಮಕ್ಕಳೆಲ್ಲಾ ನಿನ್ನೆನೇ ತಮ್ಮ ತಮ್ಮ ಟೀಚರ್ ಗೋಸ್ಕರ ತಂದ ಹೂ, ಕಾರ್ಡ್, ಉಡುಗೊರೆಗಳನ್ನು ಹಿಡಿದುಕೊಂಡು ಸ್ಕೂಲಿಗೆ ಹೊರಟಿದ್ದಾರೆ. ಈ ಮಕ್ಕಳ್ಳನ್ನು ನೋಡಿ ನನಗೆ ನನ್ನ ಶಾಲೆಯ ದಿನಗಳು ನೆನಪಿಗೆ ಬಂತು. ನಾವೆಲ್ಲಾ ಈಗಿನ ಮಕ್ಕಳ ಹಾಗೆ ನಮ್ಮ ಟೀಚರ್ ಗೆ ಏನೂ ತೆಗೆದುಕೊಂಡು ಹೋದ ನೆನಪಿಲ್ಲ ನನಗೆ! ಮುಂದೆ ಓದಿ »

- 3 ಪ್ರತಿಕ್ರಿಯೆಗಳು
- 422 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ನಂದ ಕಿಶೋರನ ಹುಟ್ಟುಹಬ್ಬ!
September 3, 2007 - 11:46am — ksnayakಅನಿಕೇತ, ಬ್ರ್ಹಹ್ಮಜ್ಞಾನಿ, ಗೋಪಿ ವಲ್ಲಭ, ಮುರಲಿಮನೋಹರನಾದ ಶ್ರೀಕೄಷ್ಣನ ಜನ್ಮದಿನದ ಶುಭಾಶಯಗಳು! ಮುಂದೆ ಓದಿ »

- Login or register to post comments
- 309 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ತ್ರೇತಾ, ದ್ವಾಪರಾ ಮತ್ತು ಕಲಿಯುಗದ ಮಹಿಳೆಯರು.
August 14, 2007 - 3:58pm — ksnayakನಾನು ನನ್ನ ೭, ೮ನೇವಯಸ್ಸಿನಿಂದ ಪುರಾಣ ಕಥೆಗಳನ್ನು ಓದುತ್ತಾ ಬಂದಿದ್ದೇನೆ. ಕಾಲೆೇಜು ಮೆಟ್ಟಲು ಹತ್ತುವ ತನಕ ಪುರಾಣಗಳು ನನ್ನಲ್ಲಿ ಯಾವ ತರದ ಸಂಶಯಗಳನ್ನು ಹುಟ್ಟಿಸಿರಲ್ಲಿಲ್ಲ. ಬಹುಶಃ ಹಿರಿಯರು ನಮ್ಮಲ್ಲಿ ಯಾವುದೇ ಸಂಶಯ ಮೂಡದಂತೆ ಹೆದರಿಕೆ ಮೂಡಿಸಿರಬೇಕು. ಆಗ ಪುರಾಣಗಳು ಕೇವಲ ಕಥೆಗಳಂತೆ ಕಾಣುತ್ತಿತ್ತು. ನಾನು ಬೆಳೆದಂತೆ ಮಹಾಭಾರತ, ರಾಮಾಯಾಣದ ಕಥೆಗಳೆಲ್ಲವೂ ಒಂದಾನೊಂದು ಕಾಲದಲ್ಲಿ ನಡದ ನಿಜ ಘಟನೆಗಳೆಂದು ತಿಳಿಯಿತು. ಮತ್ತು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟಿಸಿದವು. ನಮ್ಮ ಸಮಾಜವಿಜ್ಞಾನ ಪುಸ್ತಕದಲ್ಲಿ ತಿಳಿಸುವಂತೆ ವೇದದ ಕಾಲದಲ್ಲಿ ಮಹಿಳೆಯರಿಗೆ ಅತ್ತ್ಯುತ್ತಮ ಸ್ಥಾನ ದೊರಕ್ಕಿತ್ತು ಎಂದು ತಿಳಿದು ಬರುತ್ತದೆ. ಆದರೆ ತ್ರೇತಾ ಮತ್ತು ದ್ವಾಪರಾ ಯುಗದಲ್ಲಿನ ನಾಯಿಕೆಯರ ಪಾಡು ಹೇಗಿತ್ತು? ಸೀತೆ, ದ್ರೌಪದಿ, ಕುಂತಿ, ಊರ್ಮಿಳೆ ಇವರೆಲ್ಲಾ ಅನುಭವಿಸಿದ ಪಾಡು ನೋಡಿದರೆ ಅಯ್ಯೋ ಎನಿಸುತ್ತದೆ. ಸೀತೆಯನ್ನು ಕಾಡಿಗಟ್ಟುವಾಗ ಯಾರು ಈ ಬಗ್ಗೆ ಚಕಾರವೆತ್ತುವುದಿಲ್ಲ. ವಿಚಿತ್ರವಲ್ಲವೇ? ಯಾವನೋ ಒಬ್ಬನ ಮಾತಿಗೆ ಬೆಲೆಕೊಟ್ಟು ರಾಮ ತನ್ನ ಪ್ರಿಯ ಪತ್ನಿಯನ್ನು ಕಾಡಿಗಟ್ಟುವುದೇ? ಹೋಗಲಿ, ಆಕೆಯ ವಾಸ್ತವ್ಯದ ಬಗ್ಗೆ ಏನಾದರೂ ಮಾಡಬಹುದಿತ್ತಲ್ಲವೇ! ಲಕ್ಶ್ಮಿಯ ಅವತಾರವೆಂದು ತಿಳಿಯುವ ಸೀತೆಗೇ ಈ ತರದ ಕಷ್ಟ ಬರಬೇಕಾದರೆ ಉಳಿದ ಮಹಿಳೆಯರ ಪಾಡು ಏನಾಗಿರಬಹುದು? ಮುಂದೆ ಓದಿ »

- 4 ಪ್ರತಿಕ್ರಿಯೆಗಳು
- 409 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: