ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › manjunathsinge ರವರ ಬ್ಲಾಗ್

ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು - The End!

February 3, 2008 - 4:59pm — manjunathsinge

ಸ್ನೇಹಿತರೆ, ಮೊದಲ ನಾಲ್ಕು ಭಾಗಗಳಲ್ಲಿ, ಮೈಲಾಪುರ ಜಾತ್ರೆಯ ಅನುಭವಗಳನ್ನು
ಅಕ್ಷರಗಳಲ್ಲಿ ಹಿಡಿದಿಡಲು ಸಾಕಷ್ಟು ತಿಣುಕಾಡಿದ್ದೇನೆ. ಎಲ್ಲಾ ಘಟನೆಗಳನ್ನು
ಹಂಚಿಕೊಳ್ಳಲಾಗಲಿಲ್ಲ. ಮನಸ್ಸಿಗೆ ಪರಿಣಾಮ ಬೀರಿದ ಕೆಲವೇ ಕೆಲವು ದೃಶ್ಯಗಳನ್ನು ನಿಮ್ಮ
ಮುಂದಿಟ್ಟಿದ್ದೇನೆ. ಕೇವಲ ಒಂದು ದಿನ ಇಷ್ಟೊಂದು ಘಟನೆಗಳ ಮಹಾಪೂರವಾಗಬಹುದೆಂದು
ಯಾವತ್ತೂ ಅಂದುಕೊಂಡಿರಲಿಲ್ಲ. ಜಾತ್ರೆಯನ್ನು ಅಂತರ್ ದೃಷ್ಟಿಯಿಂದ ನೋಡಿದ್ದಕ್ಕೆ
ಹಲವಾರು ಮರೆಯಲಾಗದ ಪಾಠಗಳನ್ನು ಕಲಿತಿದ್ದೇನೆ. ಗ್ರಾಮೀಣ ಭಾರತದ ಶೋಚನೀಯ ಜಗತ್ತಿನ
ಪರಿಚಯವಾಗಿದೆ. ನಾನು ಕಂಡ ಲೋಕ ಎಷ್ಟೊಂದು ಚಿಕ್ಕದೆಂಬ ಅರಿವು ಮೂಡಿದೆ. ಕಳೆದ ನಾಲ್ಕು
ಭಾಗಗಳಲ್ಲಿ ಮೂಡಿಬಂದ ಪ್ರತಿಯೊಂದು ಘಟನೆಯ ಹಿಂದೆ ಶತಶತಮಾನಗಳ ಇತಿಹಾಸವಿದೆ.
ತಲೆತಲಾಂತರದಿಂದ ಜನರ ಮನದಾಳದಲ್ಲಿ ಸಿಲುಕಿಕೊಂಡಿರುವ ಅವಿವೇಕದ ನಂಬಿಕೆಗಳು ಜನರನ್ನು
ಬಿಡಿಸಿಕೊಳ್ಳಲಾಗದ ಸಂಕಷ್ಟಗಳಿಗೆ ಸಿಲುಕಿಸಿವೆ. ಮೂಢನಂಬಿಕೆಗಳು ಪ್ರವಾಹದಂತೆ ನುಗ್ಗಿ
ಗ್ರಾಮೀಣ ಜನರ ಆರ್ಥಿಕ ಪರಿಸ್ಥಿತಿಯನ್ನು ಅಧಃಪತನಗೊಳಿಸುತ್ತಿವೆ. ಬದುಕುವ ದಾರಿ
ಹಲವಿದ್ದರೂ ಆರಿಸಿಕೊಂಡ ದಾರಿ ಮಾತ್ರ ಶೋಚನೀಯವಾದುದು. ಜಗತ್ತಿನಲ್ಲೇ ಅತ್ಯಂತ
ಶ್ರೀಮಂತವಾಗಿರು ಸಂಸ್ಕೃತಿಯ ಹಿಂದೆ ಇಂತಹ ಘೋರವಾದ ಬಡತನವಿದೆ ಎಂಬ ಸತ್ಯ ಅರಿಯುವುದು
ಯಾವಾಗ?? ಉದ್ಯೋಗಗಳಿದ್ದರೂ ಅದಕ್ಕೆ ತಕ್ಕ ಜನರಿಲ್ಲ, ನಿರುದ್ಯೋಗಿಗಳಿದ್ದರೂ ಅವರಿಗೆ
ತಕ್ಕ ಉದ್ಯೋಗಗಳಿಲ್ಲ. ಏನಾದರೂ ಮಾಡಲೇಬೇಕೆಂಬ ಛಲವಿದ್ದರೆ ಹಣವಿಲ್ಲ, ಹಣವಿದ್ದರೆ
ಜಾಗರೂಕತೆಯಿಂದ ಉಪಯೋಗಿಸಿಕೊಳ್ಳುವ ಚಾಣಾಕ್ಷತನವಿಲ್ಲ. ಪರಿಸ್ಥಿತಿಯನ್ನು
ಸಹಾನುಭೂತಿಯಿಂದ ನೋಡಿದರೆ, ಪ್ರತಿಯೊಂದು ಹೆಜ್ಜೆಗೂ ಹಲವಾರು ಸಮಸ್ಯೆಗಳಿವೆ. ಗ್ರಾಮೀಣ
ಭಾರತದ ಪ್ರತಿಯೊಂದು ಸಮಸ್ಯೆಯ ಮೂಲ ಬಡತನ, ಅನಕ್ಷರತೆ ಮತ್ತು ನಿರುದ್ಯೋಗ.
ಸಮಾಜದ ಯಾವುದೇ ಸಮಸ್ಯೆಯನ್ನು ತೆಗೆದುಕೊಳ್ಳಿ, ಅದರ ಬೇರು ಈ ಮೂರು ಸಮಸ್ಯೆಗಳ
ಯಾವುದಾದರೊಂದರಲ್ಲಿ ಹುದುಗಿಕೊಂಡಿರುತ್ತದೆ. ಬಡತನದ ಬೇಲಿಯನ್ನು ದಾಟಿ ಬರಲು ಬೇಕಾದ
ಉದ್ಯೋಗವೆಂಬ ದಾರಿ ಜನರಿಗೆ ಸಿಗುತ್ತಿಲ್ಲ. ವಿವೇಚನೆಯಿಲ್ಲದ ಮೂಢನಂಬಿಕೆಗಳಿಂದ
ಹೊರಬರಲು ಬೇಕಾದ
ಶಿಕ್ಷಣ ಜನರಲ್ಲಿಲ್ಲ. ಕೆಲವೊಮ್ಮೆ ಉದ್ಯೋಗವಿದ್ದರೂ ವಿವೇಚನೆಯಿಲ್ಲ. ಈ ಎಲ್ಲ
ಸಮಸ್ಯೆಗಳಿಗೆ ಪರಿಹಾರವೇ ಇಲ್ಲವೇ? ಯಾವಗ ಬದಲಾವಣೆ? ಎಷ್ಟು ದೂರ ಈ ದಾರಿ?

ನೋಡಿ: ಭಾಗ-೧, ಭಾಗ-೨, ಭಾಗ-೩, ಭಾಗ-೪, ಮೈಲಾಪುರ ಜಾತ್ರೆಯ ಮತ್ತಷ್ಟು ಚಿತ್ರಗಳು.

~.~
  • manjunathsinge ರವರ ಬ್ಲಾಗ್
  • Login or register to post comments
  • 225 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 3, 2008 - 10:39pm — Sunil Jayaprakash

ಉ: ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು - The End!

Sunil Jayaprakash's picture

ಮಂಜುನಾಥಸಿಂಗೆ, "ಅಲೆಮಾರಿಯಾದಾಗಿನ ಅವಿಸ್ಮರಣೀಯ ಅನುಭವಗಳು" ಸರಣಿ ಮನಕಲಕುವಂತೆ ಮಾಡಿತು Sad ನನಗೆ ಹೇಗೆ ಕಾಮೆಂಟ್ ಮಾಡಬೇಕೆಂಬುದೇ ತಿಳಿಯುತ್ತಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಓದಿದ್ದು ಕೇಳಿದ್ದು ನೋಡಿದ್ದು-35 ಸಿಯೋಲಿನಲ್ಲಿ ಸಸ್ಯಾಹಾರ ಸಿಗುತ್ತಾ?
  • ಓದಿದ್ದು ಕೇಳಿದ್ದು ನೋಡಿದ್ದು-32 ಕುಬೇರರು ತಿನ್ನೋದು ಬೇರುನಾರು!
  • ಓದಿದ್ದು ಕೇಳಿದ್ದು ನೋಡಿದ್ದು-27 ಸೆಕ್ಯುಲರ್ ಇಂಡಿಯಾ!
  • ಓದಿದ್ದು ಕೇಳಿದ್ದು ನೋಡಿದ್ದು-50 ವಿಮರ್ಶೆಯ ಬಗ್ಗೆ ವಿಮರ್ಶೆ:"ಪ್ರಕರಣ"ಕ್ಕೆ ತೆರೆ
  • ಓದಿದ್ದು ಕೇಳಿದ್ದು ನೋಡಿದ್ದು-34 ಬ್ರೂನೈನಲ್ಲಿ ಹಿಂದಿ ಚಿತ್ರಗಳೇಕೆ ಜನಪ್ರಿಯ?
Syndicate content

ಲೇಖಕರು

manjunathsinge's picture

ಪರಿಚಯ

ಹೇಳಿಕೊಳ್ಳುವಂತಹ ಸಾಧನೆ ಇನ್ನೂ ಮಾಡಬೇಕಾಗಿದೆ. ಮಾಡುತ್ತೇನೆ, ಮಾಡಿದ ತಕ್ಷಣ update ಮಾಡುತ್ತೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ನೇಹ ಬ೦ಧನ
  • ಓದಿದ್ದು ಕೇಳಿದ್ದು ನೋಡಿದ್ದು-51 (kann)ADIGA
  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
    October 16, 2008 - 12:50pm
  • bvenkatraya
    ಉ: ಗೆದ್ದೆತ್ತಿನ ಬಾಲ
    October 16, 2008 - 12:39pm
  • gurubaliga
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:38pm
  • mahesha
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:34pm
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:32pm
  • gurubaliga
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:29pm
  • mowna
    ಉ: ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
    October 16, 2008 - 12:10pm
  • ASHOKKUMAR
    ಉ: ಸೈಕಲ್ ರಿಕ್ಷಾಗೆ ಸೌರಶಕ್ತಿ
    October 16, 2008 - 12:05pm
  • gurubaliga
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:05pm
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:01pm
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 98 ಅತಿಥಿಗಳು ಆನ್ಲೈನ್ ಇರುವರು.


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator