ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಸಂಪದ ಫೌಂಡೇಶನ್ನಿಗೆ ನೆರವಾಗಿ

ಸಂಪದ › Sampada Blogs › manjunathsinge ರವರ ಬ್ಲಾಗ್

ಸ್ಪೂರ್ತಿ

June 16, 2007 - 12:27am — manjunathsinge

ಕಥೆ ಕಾದಂಬರಿಗಳನ್ನು ಅಥವ ಇನ್ಯಾವುದೇ ಪುಸ್ತಕಗಳನ್ನು ಓದುತ್ತ ಓದುತ್ತ ಹೋದಂತೆ ಹೊಸ ಹೊಸ ಕಲ್ಪನೆಗಳು ನಮ್ಮನ್ನಾವರಿಸಿ ಬಿಡುತ್ತವೆ. ಕೆಲವೊಂದು ಭಾಗಗಳು ನಮ್ಮನ್ನು ಆನಂದದ ಅತ್ಯುನ್ನತ ಸ್ಥಿತಿಗೊಯ್ದರೆ ಕೆಲವೊಂದು ಭಾಗಗಳು ತುಂಬಾ ದುಃಖಕ್ಕೆ ಗುರಿಮಾಡಬಹುದು. ಓದುತ್ತ ಓದುತ್ತ ಹೋದಂತೆ, ಯಾವುದೋ ಒಂದು ಶಕ್ತಿ ಥಟ್ಟನೆ ಬಂದು, ಒಂದೊಂದು ಬಗೆಯ ಭಾವನೆಗಳನ್ನು ಮೂಡಿಸಿ, ಆಶ್ಚರ್ಯಚಕಿತರನ್ನಾಗಿ ಮಾಡಿ, ಮರುಕ್ಷಣವೇ ಮಾಯವಾಗಬಹುದು. ಯಾವುದೋ ಒಂದು ಮಾನಸಿಕ ಸ್ಥಿತಿಯಲ್ಲಿದ್ದಾಗ, ಯಾವುದೋ ಒಂದು ವಿಷಯ ಥಟ್ಟನೆ ಹೊಳೆದು ನಮ್ಮನ್ನು ಅತೀವ ಸಂತೋಷಕ್ಕೆ ಗುರಿಮಾಡುತ್ತದೆ. ಆ ಅನುಭವವನ್ನು ನೆನೆದರೆ ಮತ್ತೆ ಅದೇ ಥರದ ರೋಮಾಂಚನ ಸಿಗುವುದಿಲ್ಲ.

ಸಾಮಾನ್ಯ ಸಂಗತಿಯನ್ನೇ ತೆಗೆದುಕೊಳ್ಳಿ. ಸಮುದ್ರದ ತೀರದಲ್ಲಿ ಕುಳಿತು ಸೂರ್ಯಸ್ತವನ್ನು ವೀಕ್ಷಿಸುತ್ತಿರುವಾಗ, ಕೆಂಪಾದ ಸೂರ್ಯನ ಮಧ್ಯ ಥಟ್ಟನೆ ಒಂದು ಹಕ್ಕಿ ಬಂದಾಗ ನಮಗೊದಗುವ ಆನಂದ, ಮತ್ತೆ ನೆನೆಸಿಕೊ೦ಡರೆ ಸಿಗದು. ಆ ಒಂದು ಕ್ಷಣದಲ್ಲಿ, ಅಯ್ಯೋ ಒಂದು ಕ್ಯಾಮರ ಇರಬೇಕಾಗಿತ್ತಲ್ಲ ಎನಿಸುತ್ತದೆ. ಒಂದು ವೇಳೆ ಕ್ಯಾಮೆರ ತೆಗೆದುಕೊಂಡು ಹೋದಾಗ ಎಲ್ಲಿಯೂ ಒಂದು ಹಕ್ಕಿ ಕೂಡ ಕಾಣಿಸುವುದಿಲ್ಲ, ಕಂಡರೂ ಅದು, ಕೆಂಪಾಗಿ, ದುಂಡಾಗಿರುವ ಸೂರ್ಯನ ಮಧ್ಯ ಬರುವುದೇ ಇಲ್ಲ! ಒಂದು ವೇಳೆ ಬಂದರೂ ಮೊದಲಾದ ಅನುಭವಕ್ಕೊ, ಈಗಾಗುವ ಅನುಭವಕ್ಕೂ ಎಷ್ಟೊಂದು ವ್ಯತ್ಯಾಸ!!

ಯಾವ ಶಕ್ತಿ ಈ ಅನುಭವಕ್ಕೆ ಕಾರಣ?? ಸ್ಪೂರ್ತಿ (Inspiration)! ಯಾವುದೋ ಒಂದು ಮಾನಸಿಕ ಸ್ಥಿತಿಯಲ್ಲಿದ್ದಾಗ, ಎಲ್ಲೋ ಹುದುಗಿಕೊಂಡಿದ್ದ ಒಂದು ಅಮೂರ್ತ ಶಕ್ತಿ ಪುಟಿದೆದ್ದು, ನಮ್ಮನ್ನು ವರ್ಣಿಸಲಾಗದೊಂದು ಅನುಭವಕ್ಕೆ ಗುರಿಮಾಡಿಬಿಡುತ್ತದೆ. ಆ ಪರಿಸ್ಥಿತಿಯಲ್ಲಿದ್ದ ಆವೇಶ, ಉತ್ಸಾಹ ಮತ್ತೆ ಯಾಕೆ ಬರುವುದಿಲ್ಲ? ಅದೇ ಸ್ಪೂರ್ತಿಯ ಮಹಿಮೆ. ಆವೇಶ, ಉತ್ಸಾಹವೇ ಅದರ ಮೂಲ. ಅಂಥ ಆವೇಶ, ಉತ್ಸಾಹಗಳನ್ನು ಪ್ರಯತ್ನಪೂರ್ವಕವಾಗಿ ಸೆರೆಹಿಡಿಯಬಹುದೇ? ಕೆಲವರಿಗೆ ಒಂದು ಸಿಗರೇಟ್ ಎಳೆದರೆ ಸಾಕು recharge ಆಗಿ ಬಿಡುತ್ತಾರೆ. ಕೆಲವರು ತಮಗೆ ಪ್ರಿಯವಾಗಿದ್ದವರ ಜೊತೆ ಮಾತನಾಡಿದರೆ ಸಾಕು ಹಸನ್ಮುಖಿಗಳಾಗಿಬಿಡುತ್ತಾರೆ. ಕೆಲವರು ನಿಸರ್ಗದ ಯಾವುದಾದರೊಂದು ರೂಪವನ್ನು ಕಂಡರೆ ಸಾಕು ಉತ್ಸಾಹಿಗಳಾಗಿಬಿಡುತ್ತಾರೆ. ಇದಕ್ಕೆಲ್ಲ ಏನು ಕಾರಣ? ಯಾಕೆ ಹೀಗೆ? ಇಂಥಹ ಪ್ರಶ್ನೆಗಳಿಗೆ ಖಚಿತವಾದ ಉತ್ತರಗಳಿಲ್ಲ. ಸೃಷ್ಟಿಕರ್ತನೇ ಆ ಭಾವನೆಗಳ ನಿರ್ಮಾಪಕ. ನಮ್ಮ ಸುತ್ತ ಮುತ್ತಲಿನ ವಸ್ತುಗಳು, ಅನುಭವಗಳು, ಘಟನೆಗಳು ಆ ಸ್ಪೂರ್ತಿಯ ನಿರ್ಮಿತಿಗೆ ಸಾಮಾಗ್ರಿಗಳಷ್ಟೆ.

ಸ್ಪೂರ್ತಿ ಇಲ್ಲದ ಮನಸ್ಸು ಯಾವುದೋ ಒಂದು ವಿಷಯದ ಕುರಿತು, ದೇಶದೇಶಾಂತರಗಳನ್ನು ಸುತ್ತುತ್ತಾ, ದುಃಖಲ್ಲಿ ಕೊರಗುತ್ತಿರಲೂ ಬಹುದು. ಥಟ್ಟನೇ ಏನೋ ಹೊಳೆದು, wow! ಇದು ಇಷ್ಟೊಂದು easy ಇದೆಯೆಂದು ಗೊತ್ತೇ ಇರಲಿಲ್ಲ ಎನ್ನಲೂ ಬಹುದು. ಹೀಗೆ ಉದಾಹರಣೆಗಳನ್ನು ಮೆಲುಕಿಸುತ್ತಾ ಎಷ್ಟೇ ದೂರ ಹೋದರೂ, ಸ್ಪೂರ್ತಿ ಎಲ್ಲಿ, ಹೇಗೆ, ಯಾವಾಗ ಚಿಮ್ಮುತ್ತದೆಂಬುದು ಇನ್ನೂ ರಹಸ್ಯವಾಗಿಯೇ ಉಳಿದಿದೆ.

~.~
  • manjunathsinge ರವರ ಬ್ಲಾಗ್
  • Login or register to post comments
  • 301 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಮ್ಮ ರತ್ನ Excellenಟು!
  • ಕನಸು
  • ಪ್ರೀತಿಗೆ ಯಾವ ಇನ್ಸುರನ್ಸೂ ಇಲ್ಲಾರಿ!!
  • ಏಕೆ ಹೀಗೆ ಅನಿಸುತ್ತದೆಯೋ!
  • ಏಕೆ ಹೀಗೆ ಅನಿಸುತ್ತದೆಯೋ!
Syndicate content

ಲೇಖಕರು

manjunathsinge's picture

ಪರಿಚಯ

ಹೇಳಿಕೊಳ್ಳುವಂತಹ ಸಾಧನೆ ಇನ್ನೂ ಮಾಡಬೇಕಾಗಿದೆ. ಮಾಡುತ್ತೇನೆ, ಮಾಡಿದ ತಕ್ಷಣ update ಮಾಡುತ್ತೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಜೋಹದ್ (ನಂದುವಾಲಿ ನದಿ ಪ್ರದೇಶ), ರಾಜಸ್ಥಾನ

(ಚಿತ್ರ: Farhad Contractor.)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಮುಂಬಯಿ ಮುಖಗಳು ಭಾಗ ೧.....
  • ಗುಟ್ಟು - ಸ್ಫೂರ್ತಿ ಸೆಲೆ ೬
  • ಕಣ್ಣೀರು - ಸ್ಫೂರ್ತಿ ಸೆಲೆ ೫
  • ಜೀವನ - ಸ್ಫೂರ್ತಿ ಸೆಲೆ ೪
  • ಸಾಲ - ಸ್ಫೂರ್ತಿ ಸೆಲೆ ೩
  • ಸಂತೋಷ - ಸ್ಫೂರ್ತಿ ಸೆಲೆ ೨
  • ಹಣ - ಸ್ಫೂರ್ತಿ ಸೆಲೆ ೧
  • ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
  • ಮನಸ್ಸಿಗೂ ಅಂಗಿ. . ?
  • ನಿನ್ನ ನಗುವಿಗೆ ನನ್ನ ಕನಸನರ್ಪಿಸುವೆ..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಹಸಿವು - ಮಾಯ್ಸನ ಕಂತೆ ೧೨
    August 8, 2008 - 2:20am
  • anivaasi
    ಉ: ಮನಸ್ಸಿಗೂ ಅಂಗಿ. . ?
    August 8, 2008 - 2:15am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:13am
  • anivaasi
    ಉ: ಕ್ರೌರ್ಯ ಮತ್ತು ಬಲಿ
    August 8, 2008 - 2:06am
  • kalpana
    ಉ: Abroad ಅನ್ನೋ ಮಾಯೆ...
    August 8, 2008 - 12:11am
  • kannada.kanteerava
    ಉ: ಕನ್ನಡ ಮಾತನಾಡದ ಶಾಸಕ
    August 7, 2008 - 11:33pm
  • Rajeshwari
    ಉ: ಸ೦ಪದದಲ್ಲಿ ಜಾಣೆಯರು
    August 7, 2008 - 10:59pm
  • Jayalaxmi.Patil
    ಉ: ಮುಂಬಯಿ ಮುಖಗಳು ಭಾಗ ೧.....
    August 7, 2008 - 10:33pm
  • hamsanandi
    ಉ: ಆ ರಾತ್ರಿ...(ನೈಜ ಘಟನೆ ಆಧಾರಿತ ಕಥೆ)
    August 7, 2008 - 9:56pm
  • shreedevikalasad
    ಉ: ಮನಸ್ಸಿಗೂ ಅಂಗಿ. . ?
    August 7, 2008 - 9:09pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 111 ಅತಿಥಿಗಳು ಆನ್ಲೈನ್ ಇರುವರು.


ತಣ್ಣನೆ ಮನದಿ೦ ತಣ್ಣಮಾನಸಕೆ
ಮಣ್ಣಿನ ಕ೦ಪಿದು ಹರಡುತಿದೆ
ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ
ಉಣ್ಣಬಡಿಸಿಯೌತಣಿಸುತಿದೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator