ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › naasomeswara ರವರ ಬ್ಲಾಗ್

ಕನ್ನಡಿಗರಿಗೆ ಒಂದು ಸವಾಲು - ಸಿರಿಭೂವಲಯವನ್ನು ಬಿಡಿಸ ಬನ್ನಿ!

December 24, 2007 - 3:05pm — naasomeswara
  • ಸಿರಿಭೂವಲಯವು ಕನ್ನಡ ಸಾಹಿತ್ಯದ ಒಂದು ಅಪೂರ್ವ ಗ್ರಂಥ.
  • ಇದನ್ನು ಕುಮುದೇಂದು ಕವಿಯು ಕ್ರಿ.ಶ.೮೧೬ರಲ್ಲಿ ರಚಿಸಿದನು.
  • ಕಾವ್ಯ ರಚನೆಯನ್ನು ನಾವು ಅಕ್ಷರಗಳಿಂದ ಮಾಡುತ್ತೇವೆ. ಕುಮುದೇಂದುವು ಅಕ್ಷರಗಳ ಬದಲು ಕನ್ನಡ ಅಂಕಿಗಳನ್ನು (೧-೯) ಬಳಸಿದ್ದಾನೆ.
  • ಇದು ಅಂಕಾಕ್ಷರ ಕಾವ್ಯ. ಕನ್ನಡದ ೯ ಅಂಕಿಗಳನ್ನು ೬೪ ವಿಧದಲ್ಲಿ ಕ್ರಮಜೋಡಿಸಿ ಕಾವ್ಯವನ್ನು ರಚಿಸಿದ್ದಾನೆ.
  • ೬೪ ಅಂಕಗಳನ್ನು ಚಕ್ರಗಳೆಂಬ ಚೌಕಗಳಲ್ಲಿ (೨೭*೨೭=೭೨೯ ಮನೆಗಳು) ತುಂಬಿದ್ದಾನೆ. ನಮಗೆ ಇದುವರೆಗೂ ೧೨೭೦ ಚಕ್ರಗಳು ಲಭಿಸಿವೆ.
  • ಒಂದೊಂದು ಅಂಕಿಯ ಸ್ತಾನದಲ್ಲಿ ಒಂದೊಂದು ಕನ್ನಡ ಅಕ್ಷರವನ್ನು ತುಂಬಿದರೆ ಕಾವ್ಯ ಸಿಧ್ಢವಾಗುತ್ತದೆ.
  • ನಡುಗನ್ನಡ ಭಾಷೆಯ ಸಾಂಗತ್ಯ ಛಂದಸ್ಸಿನ ಪದ್ಯಗಳು ದೊರೆಯುತ್ತವೆ. ಇತರ ಛಂದಸ್ಸಿನ ಪದ್ಯಗಳೂ ಇವೆ.
  • ಕವಿಯು ಕನ್ನಡವನ್ನು `ಸರ್ವಭಾಷಾಮಯೀ ಕನ್ನಡ` ಎಂದು ಕರೆಯುತ್ತಾನೆ. ಏಕೆಂದರೆ ಕನ್ನಡ ಭಾಷೆಯ ಈ ಕಾವ್ಯದಲ್ಲಿ ೧೮ ಮಹಾಭಾಷೆಗಳು ಹಾಗೂ ೭೦೦ ಸಾಮಾನ್ಯ ಭಾಷೆಗಳು (೭೧೮) ಅಡಗಿವೆ.
  • ಈ ಚೌಕದ ಒಂದೊಂದು ಮನೆಯ ಅಕ್ಷರಗಳನ್ನು ಓದುತ್ತಾ ಹೋದರೆ, ಒಂದೊಂದು ಭಾಷೆಯಲ್ಲಿ ಕಾವ್ಯವನ್ನು ಓದಬಹುದು. ಉದಾ: ಚೌಕಗಳ ಮೊದಲ ಮನೆಯ ಅಕ್ಷರಗಳನ್ನು ಓದುತ್ತಾ ಹೋದರೆ ಪ್ರಾಕೃತ ಭಾಷೆಯ ಕಾವ್ಯ ಕಂಡು ಬರುತ್ತದೆ.
  • ಕನ್ನಡದ ಜೊತೆಗೆ ಸಂಸ್ಕೃತ, ಪ್ರಾಕೃತ, ದ್ರಾವಿಡ, ಆಂದ್ರ, ಮಹಾರಾಷ್ತ್ರ, ಮಲಯಾಳ, ಗುರ್ಜರ, ಅಂಗ, ಕಳೀಂಗ, ಕಾಶ್ಮೀರ, ಕಾಂಭೋಜ, ಹಮ್ಮೀರ, ಶೌರಸೇನಿ, ವಾಲಿ, ತೇಬತಿ, ವೆಂಗಿ, ವಂಗ, ಬ್ರಾಹ್ಮಿ, ವಿಜಾಯಾರ್ಧ, ಪದ್ಮ, ವೈಧರ್ಭ, ವೈಶಾಲಿ, ಸೌರಾಷ್ಟ್ರ, ಖರೋಷ್ಟಿ, ನಿರೋಷ್ಟ, ಅಪಭ್ರಂಶಿಕ, ಪೈಶಾಚ, ರಕ್ಥಾಕ್ಷರ, ಅರಿಷ್ಟ ಹೀಗೆ ಒಟ್ಟು ೭೧೮ ಭಾಷೆಗಳ ಕಾವ್ಯ ಇಲ್ಲಿದೆ. ಹಾಗಾಗಿ ಕನ್ನಡವನ್ನು `ಸರ್ವಭಾಷಾಮಯೀ ಕನ್ನಡ` ಎಂದು ಕವಿಯು ಹೇಳಿದ್ದಾನೆ.
  • ಇದರಲ್ಲಿ ಒಟ್ಟು ೫೬ ಅಧ್ಯಾಯಗಳಿವೆ. ಆರ್ಷೇಯ ಸಾಹಿತ್ಯದೊಡನೆ, ಭೌತರಸಾಯನಾದಿ ವಿಜ್ಞಾನಗಳು, ರಸವಾದ, ಜ್ಯೋತಿಷ, ಇತಿಹಾಸ, ಸಂಸ್ಕೃತಿ, ಧರ್ಮ, ದರ್ಶನ, ಲೋಹ, ಖಗೋಳ, ವೈದ್ಯ, ಗಣಿತ, ಅಣು-ಪರಮಾಣು, ಲಿಪಿ-ಭಾಷೆ ಇತ್ಯಾದಿ ವಿಷಯಗಳು ಅಡಕವಾಗಿವೆ.
  • ಶ್ರೀಯುತರಾದ ಎಲ್ಲಪ್ಪಶಾಸ್ತ್ರಿ, ಕರ್ಲಮಂಗಲಂ ಶ್ರೀಕಂಠಯ್ಯ, ಕೆ.ಅನಂತಸುಬ್ಬರಾಯರು ಅಂಕೆಗಳಿಗೆ ಸೂಕ್ತವಾದ ಅಕ್ಷರಗಳನ್ನು ಕಂಡುಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಈ ಕೆಲಸ ಪೂರ್ಣವಾಗಿಲ್ಲ.
  • ನಮ್ಮ ಕನ್ನಡಿಗರು ಇಂದು ಕಂಪ್ಯೂಟರ್ ಕ್ಷೇತ್ರದಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಾರೆ. ಕನ್ನಡ ಭಾಷೆಯ ಮೇಲೆ ಅಭಿಮಾನವನ್ನು ಹೊಂದಿದ್ದಾರೆ. ತಮ್ಮ ಕಂಪ್ಯೂಟರ್ ಸಾಮರ್ಥ್ಯವನ್ನು ಬಳಸಿಕೊಂಡು ಈ ಎಲ್ಲ ಚಕ್ರಗಳನ್ನು ಬಿಡಿಸುವ ಪ್ರಯತ್ನ ಮಾಡಬೇಕಾಗಿದೆ.
  • ಈಗ ಸಿರಿಭೂವಲಯದ ಭಾಗ-೧ ಮಾರಾಟಕ್ಕಿದೆ. ಆಸಕ್ತರು ಪುಸ್ತಕಶಕ್ತಿ, ನಮ್ ೧೦೩, ೩ ನೆಯ ಮುಖ್ಯರಸ್ತೆ, ತಾತಾ ಸಿಲ್ಕ್ ಫಾರಂ, ಬಸವನಗುಡಿ, ಬೆಂಗಳೂರು-೫೬೦ ೦೦೪: ಧೂರವಾಣಿ: ೨೬೯೧೫೯೧೭ ಸಂಪರ್ಕಿಸಬಹುದು.
  • ಕನ್ನಡಿಗರು ಈ ಎಲ್ಲ ಚಕ್ರಗಳನ್ನು ಬಿಡಿಸಲು ಸಾಧ್ಯವಾಗುವುದಾದರೆ, ಜಗತ್ತಿನ ೧೦ ನೆಯ ಅದ್ಭುತವನ್ನು ಜಗತ್ತಿಗೆ ಕೊಟ್ಟ ಕೀರ್ತಿಗೆ ಪಾತ್ರರಾಗುತ್ತಾರೆ.
  • ಕನ್ನಡಿಗರೆ! ಈ ಸವಾಲನ್ನು ಸ್ವೀಕರಿಸಿ!!
~.~
  • naasomeswara ರವರ ಬ್ಲಾಗ್
  • Login or register to post comments
  • 328 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 24, 2007 - 3:09pm — naasomeswara

ಉ: ಕನ್ನಡಿಗರಿಗೆ ಒಂದು ಸವಾಲು - ಸಿರಿಭಾವಲಯವನ್ನು ಬಿಡಿಸ ಬನ್ನಿ!

naasomeswara's picture

ಸಿರಿಭೂವಲಯವನ್ನು ಸಿರಿಭಾವಲಯ ಎಂದು ತಪ್ಪಾಗಿ ಟೈಪಿಸಿದ್ದೇನೆ. ದಯವಿಟ್ಟು ಕ್ಷಮಿಸಿ
- ನಾಸೋ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 24, 2007 - 3:52pm — hpn

ಉ: ಕನ್ನಡಿಗರಿಗೆ ಒಂದು ಸವಾಲು - ಸಿರಿಭಾವಲಯವನ್ನು ಬಿಡಿಸ ಬನ್ನಿ!

hpn's picture

ಮಾನ್ಯರೆ,
ಬ್ಲಾಗ್ ಪುಟದಲ್ಲ "ಬದಲಾಯಿಸಿ" ಬಟನ್ ಕ್ಲಿಕ್ಕಿಸಿ ಲೇಖನ ಬದಲಾಯಿಸಬಹುದು.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 24, 2007 - 6:51pm — Sunil Jayaprakash

ಉ: ಕನ್ನಡಿಗರಿಗೆ ಒಂದು ಸವಾಲು - ಸಿರಿಭೂವಲಯವನ್ನು ಬಿಡಿಸ ಬನ್ನಿ!

Sunil Jayaprakash's picture

ನಾನು ಇಂದಿಗೆ ಸರಿಯಾಗಿ ಮೂರು ವಾರದ ಹಿಂದೆ ಸಿರಿಭೂವಲಯ ಪುಸ್ತಕ-೧ ಅಂಕಿತ ಪುಸ್ತಕದಲ್ಲಿ ಕೊಂಡುಕೊಂಡೆ. ಒಂದು ರಹಸ್ಯ ಗುಹೆಯನ್ನು ಪ್ರವೇಶಿಸಲು ತವಕಿಸುವ ಒಬ್ಬ ಅನ್ವೇಷಕನನ್ನು ಪ್ರೇರೇಪಿಸುವಂತೆ ಈ ಪೀಠಿಕೆ ಓದುಗನಲ್ಲಿ ತುಂಬಾ ಕುತೂಹಲವನ್ನು ಕೆರಳಿಸುತ್ತದೆ.

ಸೋಮೇಶ್ವರ ಅವರೆ, ಸಿರಿಭೂವಲಯದ ವಿಷಯವಾಗಿ ಹೆಚ್ಚಿನ ಸಂಶೋಧನೆಗೆ ಒಂದು ಸಂಸ್ಥೆಯನ್ನು ಹುಟ್ಟುಹಾಕಲಾಗಿದೆ ಎಂದು ಕೇಳಿದ್ದೇನೆ. ನಿಮಗೆ ಇದರ ಕುರಿತು ಹೆಚ್ಚಾದ ಮಾಹಿತಿ ಇದೆಯೇ ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
December 26, 2007 - 8:10am — ವೈಭವ

ಉ: ಕನ್ನಡಿಗರಿಗೆ ಒಂದು ಸವಾಲು - ಸಿರಿಭೂವಲಯವನ್ನು ಬಿಡಿಸ ಬನ್ನಿ!

ವೈಭವ's picture

ಆ ಹೊತ್ತಿಗೆಯಲ್ಲಿ ಕೊಟ್ಟಿರುವ ಹಾಗೆ '೦' ಯನ್ನು ಅರ್ದಕ್ಕೆ ಒಡೆದು ಇನ್ನಿತರ ಅಂಕಿಗಳನ್ನು ಮಾಡಿರುವುದು ಸಕ್ಕತ್. ಕನ್ನಡದ ಅಂಕಿಗಳ ಬಗ್ಗೆ ಹೆಮ್ಮೆ ಮೂಡಿತು.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಭಾಷೆಗೊಂದು ಸಂಗೀತ
  • ಕನ್ನಡವನ್ನ ಹೀಗೆ ಬಳಸಿದರೆ ಚೆನ್ನಾಗಿರುತ್ತದೆ ಅಲ್ವಾ?
  • ಕವಿ
  • ಕನ್ನಡ ಅಕ್ಷರಗಳ ಚೆಲುವು
  • ಕನ್ನಡಿಗನಾಗಿ ಹೆಮ್ಮೆ...
Syndicate content

ಲೇಖಕರು

naasomeswara's picture

ಪೂರ್ಣ ಹೆಸರು
naasomeswara

ಪರಿಚಯ

ವೃತ್ತಿಯಲ್ಲಿ ವೈದ್ಯ. ಪ್ರವೃತ್ತಿಯಲ್ಲಿ ಬರಹಗಾರ. ವಿಜ್ಞಾನ, ವೈದ್ಯಕೀಯ ಬರಹಗಳು, ಪುಸ್ತಕಗಳು ಒಂದಷ್ಟು ಪ್ರಕಟವಾಗಿವೆ. ದೂರದರ್ಶನದಲ್ಲಿ ಈಗ `ಥಟ್ ಅಂತ ಹೇಳಿ` ಕ್ವಿಜ್ ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. 900 ಕಂತುಗಳು ಮುಗಿದಿವೆ. ಹೊಸ ಅರಿವು, ಹೊಸ ನೋಟ, ಹೊಸ ಗೆಳೆತನದಲ್ಲಿ ಆಸಕ್ತಿಯಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನಶಿಸುತ್ತಿರುವ ಗದ್ದೆಗಳು

(ಫೋಟೊ: ವಸಂತ ಕಜೆ.)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ರೀ ಮತ್ತು ಸಾರೀ ಮತ್ತು ಸುರೆ
  • ಚಂದ ಮಾಮಾ
  • ಅರಳೀ ವೃಕ್ಷದ ವಾತಾನುಕೂಲ ಕಕ್ಷ
  • ಸತ್ಯಹರಿಶ್ಚ೦ದ್ರದ ವೀರಭಾಹು ಇನ್ನಿಲ್ಲ.......................
  • ಭಾಷೆ ಒಂದು means of communication ಅಷ್ಟೆ
  • ಛಾಯಾಚುಂಬನ
  • ಹಾಗೇ ಸುಮ್ ಸುಮ್ನೆ.... :)
  • ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
  • ರಾಜರಲ್ಲೊಬ್ಬ ರತ್ನ
  • ಕುಡುಕರ ರಾಜ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಛಾಯಾಚುಂಬನ
    July 19, 2008 - 4:37am
  • anivaasi
    ಉ: ಅವನು ಇವನು ನೀಲುಗಳು
    July 19, 2008 - 4:35am
  • sushil
    ಉ: ಕನ್ನಡಿಗರೇ ನಿಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಶಾಲೆಯಲ್ಲಿ ವ್ಯಾಸಂಗಿಸಿ ಕನ್ನಡ ಸೇವೆ ಮಾಡಿರಿ.
    July 19, 2008 - 1:46am
  • venkatesh
    ಉ: ಲ೦ಡನ್ ಪ್ರವಾಸಕಥನ ಭಾಗ ೧೧: ಓಡುವ ಟ್ಯೂಬಿನಿ೦ದ ದಿನವೂ ಧುಮುಕುವ ಕೆ೦ಪು ನಿಲುವ೦ಗಿಯಾಕೆ!
    July 19, 2008 - 12:36am
  • ಗಣೇಶ
    ಉ: ಕಾಯ್
    July 19, 2008 - 12:00am
  • hamsanandi
    ಉ: ಛಾಯಾಚುಂಬನ
    July 18, 2008 - 11:31pm
  • hamsanandi
    ಉ: ಕಾಯ್
    July 18, 2008 - 11:18pm
  • srinivasps
    ಉ: ದೇವೇ....ಗೌಡ ಯಾಕೆ?
    July 18, 2008 - 11:17pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:12pm
  • ಗಣೇಶ
    ಉ: ದೇವೇ....ಗೌಡ ಯಾಕೆ?
    July 18, 2008 - 11:01pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.


ಎಲ್ಲ ಬಲ್ಲವರಿಲ್ಲ | ಬಲ್ಲವರು ಬಹಳಿಲ್ಲ
ಬಲ್ಲಿದರು ಇದ್ದು ಬಲವಿಲ್ಲ ಸಾಹಿತ್ಯ |
ವೆಲ್ಲವರಿಗಿಲ್ಲ ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator