Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › naasomeswara ರವರ ಬ್ಲಾಗ್

ವ್ಯಾಸರಾಯ ಬಲ್ಲಾಳರು ನಮ್ಮನಗಲಿದರು!

January 30, 2008 - 11:22pm — naasomeswara
ಶ್ರೀವ್ಯಾಸರಾಯ ಬಲ್ಲಾಳ

ವ್ಯಾಸರಾಯ ಬಲ್ಲ್ಲಾಳರು ಮುಂದಿನ ವರ್ಷದವರೆಗೆ ಕಾಯಲಿಲ್ಲ. ನಾವು ಮುಂದಿನ ವರ್ಷ ಅವರಿಗೆ ಸಾಹಿತ್ಯ ಸಮ್ಮೆಳನದ ಅಧ್ಯಕ್ಷಗಿರಿಯನ್ನು ನೀಡುವ ಮೊದಲೇ ಅವರು ನಮ್ಮನ್ನು ಬಿಟ್ಟು ಕಾಣದ ದೂರದೂರಿಗೆ ಹೊರಟು ಹೋದರು.

ವ್ಯಾಸರಾಯರು ಹುಟ್ಟಿದ್ದು ೧.೧೨.೧೯೨೩. ಸ್ಠಳ ಉಡುಪಿಯ ಬಳಿಯ ಒಂದು ಸಣ್ಣ ಊರು. ತಂದೆ ನಿಡಂಬೂರು ರಾಮದಾಸ ಬಲ್ಲಾಳ. ತಾಯಿ ಕಲ್ಯಾಣಿ. ಇವರ ಹಿರಿಯ ಮಗ. ಮೆಟ್ರಿಕ್‍ವರೆಗೆ ಶಿಕ್ಷಣ. ಜಿಲ್ಲಾ ಬೋರ್ದ್ ಕಚೇರಿಯಲ್ಲಿ ಸ್ವಲ್ಪಕಾಲ ಕೆಲಸ. ನಂತರ ಮುಂಬಯಿಗೆ ಪಯಣ.

೧೯೪೪. ಕಾಲ್ಟೆಕ್ಸ್ ಸಂಸ್ಥೆಯಲ್ಲಿ ಕೆಲಸ. ೪೦ ವರ್ಷಗಳ ಸೇವೆ. ೧೯೮೪ರಲ್ಲಿ ನಿವೃತ್ತಿ.

ಮುಂಬಯಿಯಲ್ಲಿ ಯುವಕರು ‘ನುಡಿ‘ ಎಂಬ ಪ್ರತ್ರಿಕೆಯನ್ನು ನಡೆಸುತ್ತಿದ್ದರು. ೧೯೪೭. ಮೌಂಟ್ ಬ್ಯಾಟನ್ ಅವರ ಯೋಜನೆಯನ್ನು ವಿರೋಧಿಸಿ ಲೇಖನ. ಇದರಿಂದ ವ್ಯಾಸರಾಯರು ಜನಸಾಮಾನ್ಯರಗ ಮನದೊಡನೆ ಮುಂಬಯಿ ಸರ್ಕಾರದ ಗಮನವನ್ನೂ ಸೆಳೆದರು. ಮುಂದೆ ಇದರ ಸಂಪಾದಕತ್ವ. ಅಲ್ಲಿಂದ ಅವರ ಬರಹ ನಿರಂತರವಾಗಿ ಹರಿದು ಬಂದಿತು.

ಕಾದಂಬರಿಗಳು: ಅನುರಕ್ತೆ, ಆಕಾಶಕ್ಕೊಂದು ಕಂದೀಲು, ವಾತ್ಸಲ್ಯಪಥ, ಹೇಮಂತಗಾನ, ಬಂಡಾಯ, ಉತ್ತರಾಯಣ, ಹೆಜ್ಜೆ ಹಾಗೂ ಹೆಜ್ಜೆಗುರುತು. ಇವುಗಳಲ್ಲಿ ಅನುರಕ್ತೆ ಹಾಗೂ ವಾತ್ಸಲ್ಯಪಥ ಚಲನಚಿತ್ರಗಳಾದವು. ಬಂಡಾಯ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆಯಿತು.

ಸಣ್ಣಕಥೆಗಳು: ಬದುಕಿನ ಆದರ್ಶ, ಕಾಡುಮಲ್ಲಿಗೆ, ಸಂಪಿಗೆ ಹೂ, ಮಂಜರಿ, ತ್ರಿಕಾಲ ಇತ್ಯಾದಿ. ಇವುಗಳಲ್ಲಿ ಕಾಡುಮಲ್ಲಿಗೆಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಅಂಕಿತ ಪ್ರಕಾಶನದವರು ‘ವಾಸರಾಯಬ್ಲ್ಲಾಳರ ಸಮಗ್ರ ಕಠೆಗಳು‘ ಪ್ರಕಟಿಸಿದ್ದಾರೆ.

ಪ್ರವಾಸ ಸಾಹಿತ್ಯ: ನಾನೊಬ್ಬ ಭಾರತೀಯ ಪ್ರವಾಸಿ. ೧೯೮೮. ಸಾಹಿತ್ಯ ಅಕಾಡೆಮಿ ಪ್ರಶಸ್ತಿ.

ವಿಚಾರ ಸಾಹಿತ್ಯ: ಕಟ್ಟುವೆವು ನಾವು, ಸ್ವಾಥಂತ್ರ್ಯಕ್ಕೆ ಐವತ್ತು ವರ್ಷ, ಕಲಾವಿದ ಹೆಬ್ಬಾರರ ರೇಖಾ ಲಾವಣ್ಯ ಇತ್ಯಾದಿ.

ನಾಟಕ: ಗಿಳಿಯು ಪಂಜರದೊಳಿಲ್ಲ, ಮುಳ್ಳೆಲ್ಲಿದೆ ಮಂದಾರ.

ವಿಡಂಬನೆ: ಸಂಗ್ರಹ ಭಾರತಾಯಣ

ಜೀವನ ಚರಿತ್ರೆ: ಕುರ್ಶೇದ್ ನಾರಿಮನ್

ಪ್ರಶಸ್ತಿಗಳು: ೧೯೯೬. ಗದ್ಯಭಾಸ್ಕರ ಪ್ರಸಸ್ಥಿ, ಉಡುಪಿ ಪರ್ಯಾಯ ಮಹೋತ್ಸವ. ೨೦೦೦ ಅನಕೃ ಪ್ರಶಸ್ತಿ. ನಿರಂಜನ ಪ್ರಶಸ್ತಿ ಇತ್ಯಾದಿ.

ಆರು ದಶಕಗಳ ಕಾಲ ಕನ್ನಡ ಸಾಹಿತ್ಯ ರಚನೆ. ವಸ್ತುವೈವಿಧ್ಯ ಹಾಗೂ ಅಭಿವ್ಯಕ್ಥ ವಿಧಾನ ನೂತನ. ಕನ್ನಡಕ್ಕೆ ಸಮೃಧ್ಢ ಕಾಣಿಕೆ. ಯಾವ ಪಂಥಕ್ಕೂ ಸೇರದೆ, ಎಲ್ಲವನ್ನೂ ಜೀರ್ಣಿಸಿಕೊಂಡು ಬರೆದದ್ದು ವಿಶೇಷ. ಆದರೆ ಕನ್ನಡಿಗರು ಇವರನ್ನು ಉದಾಸೀನ ಮಾಡಿದ್ದೇ ಹೆಚ್ಚು. ವಿಮರ್ಶಕರು ಇವರನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಬಹುಶಃ ಇವರಿಗೆ ಹಿಂಬಾಲಕರಿರದಿರುವುದೆ ಇದಕ್ಕೆ ಕಾರಣವಿರಬಹುದು. ಬಹುಶಃ ಇದೇ ಕಾರಣದಿಂದ ಇವರಿಗೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಗಿರಿಯೂ ತಪ್ಪಿತೇನೋ!!

ಇವರ ಕೃತಿಗಳನ್ನು ಓದಿ, ಇವರ ಬರಹದ ಹರವನ್ನು, ಆಳವನ್ನು ಅನಾವರಣಗೊಳಿಸಿದರೆ, ಓದುಗರಾಗಿ ನಾವು ಕವಿಋಣವನ್ನು ತೀರಿಸಿಕೊಳ್ಳಬಹುದು.

- ನಾಸೋ

Ornamental seperator
  • naasomeswara ರವರ ಬ್ಲಾಗ್
  • Login or register to post comments
  • 247 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 31, 2008 - 10:57am — prem_gour

ಉ: ವ್ಯಾಸರಾಯ ಬಲ್ಲಾಳರು ನಮ್ಮನಗಲಿದರು!

prem_gour's picture

ಪ್ರೇಮ್ ಗೌರ್‍,
ಸರ್‍...
ರಾಯರ ಅಗಲಿಕೆ ಕನ್ನಡ ನಾಡಿಗೆ ತುಂಬಲಾರದ ನಷ್ಟ. ನಿಮ್ಮ ಲೇಖನ ಓದಿದ ನಂತರವಾದರೂ ಕನ್ನಡಿಗರು ಅವರುಗಳ ಕೃತಿಗಳನ್ನು ಓದಿದರೆ ಅದು ಸಾರ್ಥಕವೇ ಸರಿ. ಹಾಗಾಗಲಿ ಎಂದು ಹಾರೈಸುತ್ತೇನೆ...

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು
  • ಕನ್ನಡತಿ, ಪ್ರೊ. ಮಾಲತಿರಾವ್ ರವರಿಗೆ ಅಭಿನಂದನೆಗಳು.
  • ಹಿರಿಯ ಸಾಹಿತಿ ವ್ಯಾಸರಾಯ ಬಲ್ಲಾಳ ಇನ್ನಿಲ್ಲ
  • ಮಾಸ್ತಿಪ್ರಶಸ್ತಿವಿಜೇತ, ಬಂಡಾಯ, ಹೇಮಂತಗಾನ, ಉತ್ತರಾಯಣ, ವಾತ್ಸಲ್ಯಪಥ ದಂತಹ ಕಾದಂಬರಿಗಳ ರಚೇತ, ಮುಂಬೈನ ಕವಿ, ವ್ಯಾಸರಾಯ ಬಲ್ಲಾಳರ ನಿಧನ !
  • ಕನ್ನಡ ರಸಪ್ರಶ್ನೆ:೮
Syndicate content

ಲೇಖಕರು

naasomeswara's picture

ಪೂರ್ಣ ಹೆಸರು
naasomeswara

ಪರಿಚಯ

ವೃತ್ತಿಯಲ್ಲಿ ವೈದ್ಯ. ಪ್ರವೃತ್ತಿಯಲ್ಲಿ ಬರಹಗಾರ. ವಿಜ್ಞಾನ, ವೈದ್ಯಕೀಯ ಬರಹಗಳು, ಪುಸ್ತಕಗಳು ಒಂದಷ್ಟು ಪ್ರಕಟವಾಗಿವೆ. ದೂರದರ್ಶನದಲ್ಲಿ ಈಗ `ಥಟ್ ಅಂತ ಹೇಳಿ` ಕ್ವಿಜ್ ಕಾರ್ಯಕ್ರಮ ನಡೆಸಿಕೊಡುತ್ತಿದ್ದೇನೆ. 900 ಕಂತುಗಳು ಮುಗಿದಿವೆ. ಹೊಸ ಅರಿವು, ಹೊಸ ನೋಟ, ಹೊಸ ಗೆಳೆತನದಲ್ಲಿ ಆಸಕ್ತಿಯಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಘೃತಮುಮಂ ತೈಲಮುಮಂ
  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 15 ಅತಿಥಿಗಳು ಆನ್ಲೈನ್ ಇರುವರು.

ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.

— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator