ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ - ಮಧೂರು
ಕೇರಳ ರಾಜ್ಯದ ಕಾಸರಗೋಡುವಿನಿಂದ ಈಶಾನ್ಯಕ್ಕೆ ೭ ಕಿ.ಮೀ ದೂರದಲ್ಲಿರುವ ಕ್ಷೇತ್ರ ಮಧೂರು. ಇಲ್ಲಿ ಶ್ರೀಮದನಂತೇಶ್ವರನು ಪ್ರತಿಷ್ಠೆಗೊಂಡು ಪೂಜಿಸಲ್ಪಡುತ್ತಿರುವನಾದರೂ, ಗೋಡೆಯಲ್ಲಿ ಮೂಡಿಬಂದ ಶ್ರೀ ವಿನಾಯಕನೇ ಪ್ರಸಿದ್ಧನು. ಸುತ್ತಲೂ ಹಸಿರಿನಿಂದ ಕಂಗೊಳಿಸುತ್ತಿರುವ ಕ್ಷೇತ್ರ. ಸ್ವಲ್ಪ ದೂರದಲ್ಲಿ ಕಾಣಿಸುವ ಬೆಟ್ಟಗಳು ಅದರ ತಪ್ಪಲಲ್ಲಿ ಇರುವ ತೆಂಗು-ಅಡಿಕೆ ತೋಟಗಳು ಕ್ಷೇತ್ರಕ್ಕೆ ಮೆರುಗನ್ನು ನೀಡುತ್ತದೆ. ದೇವಸ್ಥಾನದ ಮುಂಭಾಗದಲ್ಲಿ ಮಧುವಾಹಿನಿ ಹೊಳೆ ಉತ್ತರದಿಂದ ದಕ್ಷಿಣಕ್ಕೆ ಹರಿಯುತ್ತದೆ. ಪೂರ್ವಾಭಿಮುಖವಾಗಿ ಗಜಪೃಷ್ಠಾಕಾರದ ಮೂರು ಅಂತಸ್ತಿನಲ್ಲಿ ಇರುವುದು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ. ಮೇಲಿನ ಎರಡು ಅಂತಸ್ತುಗಳಿಗೆ ತಾಮ್ರದ ಮತ್ತು ಕೆಳಗಿನ ಅಂತಸ್ತಿಗೆ ಹಂಚಿನ ಹೊದಿಕೆ. Read more about ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ - ಮಧೂರು




