ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › pachhu2002 ರವರ ಬ್ಲಾಗ್

nannakanasu-chiguru

ನನಗೆ ಬರೆಯೋದಿಕ್ಕೆ ಸ್ಪೂರ್ತಿ ತಂದು ಕೊಟ್ಟ ನನ್ನ ಅತ್ಮೀಯ ಗೆಳೆಯರಾದ ಅಮರ ಮತ್ತೆ ವಿಜಯ್ ಗೆ ನನ್ನ ಹೃತ್ಪೋರ್ವಕ ವಂದನೆಗಳು. ನಿಮ್ಮೆಲ್ಲರ ಹಾರೈಕೆ ನನ್ನೊಂದಿಗಿರಲಿ... ನಮಸ್ಕಾರ, ನನ್ನ ಎಲ್ಲಾ ಸ್ನೇಹಿತರಿಗೂ.... ನಾನಿಲ್ಲಿ ಬರೆದಿರುವುದೆಲ್ಲಾ ನನ್ನ ಮನಸ್ಸಿನ ಭಾವನೆಗಳು, ಮನದ ಮಾತುಗಳು. ಮೊದ ಮೊದಲು ಕವನದ ಕಡೆಗೆ ಇದ್ದ ಒಲವು ಇತ್ತಿಚೆಗೆ ಕಡಿಮೆಯಾಗಿದೆ. ನನ್ನದೇ ಒಂದು ಪುಟ್ಟ ಬ್ಲಾಗ್ ಇದೆ. ಮನಸ್ಸಿಗೆ ತೋಚಿದ್ದನ್ನ ನಾನಿಲ್ಲಿ ವ್ಯಕ್ತಪಡಿಸ್ತಾ ಇದ್ದೇನೆ. ಇಲ್ಲಿ ಬರೆದಿರೊದ್ರಲ್ಲಿ ಬಹಳಷ್ಟು ತಪ್ಪುಗಳಿವೆ. ನನ್ನ ಓದುಗರು ಅದನ್ನ ನನಗೆ ತಿದ್ದಿ ಹೇಳಬೇಕು. ಯಾರೂಕೂಡಾ ಹುಟ್ಟಿದ ತಕ್ಷಣ ಎಲ್ಲಾದನ್ನೂ ಕಲಿಯೋದಿಲ್ಲ. ನಡಿಯೋಕಾಲು ಎಡವೋದು ಸಹಜತಾನೆ ??? ನಿಮ್ಮ ಪ್ರೀತಿಯ ತಿದ್ದುಪಡಿಗೆ ನಾನು ಚಿರರುಣಿ...

ಅನಿರೀಕ್ಷಿತ ಅತಿಥಿ...

July 8, 2008 - 9:35am — pachhu2002
DSC02633111.JPG

 

ಅನಿರೀಕ್ಷಿತ ಅತಿಥಿ... ಕಳೆದ ತಿಂಗಳು ಒಂದು ಶುಕ್ರವಾರದಂದು ನಡೆದ ಘಟನೆ ಇದು. ವಾರಾಂತ್ಯವಾದ್ದರಿಂದ ನನ್ನ ಆಫೀಸಿನಿಂದ ಸ್ವಲ್ಪ ಬೇಗ ಹೊರಟಿದ್ದೆ. ಹೇಗಿದ್ದರೂ ಬೇಗ ಹೊರಟಿದ್ದರಿಂದ ಜಯನಗರದ ಜನತಾಬಜಾರ್‍ ನಿಂದ ಚಪಾತಿ ಮಾಡುವ ಸಲುವಾಗಿ ಹಿಟ್ಟು ಮತ್ತು ಸ್ವಲ್ಪ ತರಕಾರಿಯನ್ನ ತಂದು ಮನೆಗೆ ಬಂದ ನನಗೆ ಮನೆಯ ಗೇಟಿನ ಬಳಿ ಅನಿರೀಕ್ಷಿತವಾಗಿ ಯಾವುದೋ ಪ್ರಾಣಿ ಮಲಗಿರುವಂತೆ ಕಾಣಿಸಿತು. ಹತ್ತಿರ ಹೋಗಿ ನೋಡಿದರೆ ಒಂದು ಪುಟಾಣಿ ಅಳಿಲಿನ ಮರಿ !!!

ಪಾಪ ಅದು ಅಲ್ಲಿ ಏತಕ್ಕಾಗಿ ಬಂದು ಬಿದ್ದಿತ್ತೋ ? ಯಾರಾದರೂ ಕಿಡಿಗೇಡಿಗಳು ಅದನ್ನ ಹಿಡಿಯಲು ಪ್ರಯತ್ನಿಸಿ ಹಿಡಿಯಲಾಗದೇ ಕಲ್ಲು ತೂರಿ ಅದನ್ನು ಬಿಟ್ಟು ಹೋಗಿದ್ದರೋ ನನಗೆ ಅರ್ಥವಾಗಲಿಲ್ಲ, ಪಾಪ, ಅದರ ಬಾಯಿಯಲ್ಲಿ ಕೆಳಗಿನ ಒಂದು ಹಲ್ಲು ಮುರಿದಿತ್ತು, ಬಾಯಿಯಿಂದ ರಕ್ತ ಬಂದಿತ್ತು. ನಿತ್ರಾಣಗೊಂಡಿದ್ದ  ಅದನ್ನ ತಕ್ಷಣವೇ ಕೈನಲ್ಲಿ ಎತ್ತಿಕೊಂಡು ಮನೆಗೆ ಓಡಿಬಂದು ಅದಕ್ಕೆ ಸ್ವಲ್ಪ ನೀರು ಕುಡಿಸಿದೆ... ಉಸಿರಾಡುವಲ್ಲಿ ಕಷ್ಟ ಪಡುತ್ತಿದ್ದ ಅದನ್ನು ನಿಧಾನವಾಗಿ ಮನೆಯ ಬಕೇಟಿನೊಳಗೆ ತೆಂಗಿನನಾರು ಮತ್ತೆ ಹಳೇ ಬನಿಯನ್ ಅನ್ನು ಇಟ್ಟು ಅದರೊಳಗೆ ಜೋಪಾನವಾಗಿ ಅಳಿಲಿನ ಮರಿಯನ್ನ ಇಟ್ಟು ಅಂಗಡಿಗೆ ಹಾಲು ತರಲು ಓಡಿದೆ. ಹಲ್ಲು ಇಲ್ಲದ ಕಾರಣ ಅದಕ್ಕೆ ಏನನ್ನೂ ತಿನ್ನಲು ಆಗುವುದಿಲ್ಲವೆಂದು ತಿಳಿದಿತ್ತು. ಹಾಲು ತಂದು ಅದಕ್ಕೆ ಸ್ವಲ್ಪ ಬಿಸ್ಕೇಟನ್ನು ನುರಿದು ಆ ಬಿಸ್ಕೇಟಿನ ಹಾಲನ್ನು ಸ್ವಲ್ಪ ಸ್ವಲ್ಪವಾಗೇ ಅದರ ಬಾಯಿಗೆ ಹಾಕಿದೆ. ಕೇವಲ ಬಾಯಿಯ ಮೂಲಕ ಉಸಿರಾಡುತ್ತಿದ್ದ ಆ ಮರಿ ವಿಧಿಯಿಲ್ಲದೇ ನಾನು ಹಾಕಿದ ಹಾಲನ್ನು ಕುಡಿಯುತ್ತಲಿತ್ತು. ನಾನು ಬಲವಂತದಿಂದಾದರೂ ಸ್ವಲ್ಪ ಕುಡಿಸಲೇಬೇಕು, ಶಕ್ತಿಯಿಲ್ಲದಿದ್ದರೆ ಅದು ಮತ್ತೆ ಮೊದಲಿನಂತೆ ಆಗುವುದಾದರೂ ಹೇಗೆ ಅಂತ ಪ್ರಯತ್ನ ಪಟ್ಟು ಸ್ವಲ್ಪ ಕುಡಿಸಿ ನಂತರ ಅದನ್ನು ಆ ಬಕೇಟಿನಲ್ಲಿ ಮಲಗಿಸಿದೆ.

ಪಾಪ, ಅದರಲ್ಲಿ ಶಕ್ತಿ ಅಡಗಿಹೋಗಿತ್ತು. ಪೂರ್ಣವಾಗಿ ನಿತ್ರಾಣಗೊಂಡಿದ್ದ ಅದು ನನಗೆ ಮುಗ್ದ ಮಗುವಿನಂತೆ, ಕೈಲಾಗದ ಹಸುಗೂಸಿನಂತೆ ಕಾಣಿಸಿತು. ನಾನು ಹೇಳಿದ ಮಾತನ್ನು ಕೇಳುತ್ತಿದೆಯೇನೋ ಅನ್ನುವಹಾಗೆ ಹಾಲು ಕುಡಿದು ತನ್ನ ಬಕೇಟಿನಲ್ಲಿ ಮಲಗಿತ್ತು. ಅದಕ್ಕೆ ಹೊರಗಿನಿಂದ ಏನೂ ಪೆಟ್ಟಾದಂತೆ ಕಾಣದಿದ್ದರೂ ಒಳಗಿನಿಂದ ಪೆಟ್ಟಾದದ್ದು ಅದರ ನಿತ್ರಾಣಕ್ಕೆ ಕಾರಣವಾಗಿತ್ತು. ಸಂಜೆಯಿಂದಾ ರಾತ್ರಿಯ ವರೆವಿಗೂ ಅದನ್ನು ಗಮನಿಸುತ್ತಲೇ ಇದ್ದೆ. ರಾತ್ರಿಯ ಹೊತ್ತಿಗೆ ಅದರಲ್ಲಿ ಸ್ವಲ್ಪ ಚೈತನ್ಯ ಬಂದು ಆ ಬಕೇಟಿನ ಒಳಗಡೆ ಓಡಾಡುತ್ತಲಿತ್ತು. ಅಬ್ಬಾ !!! ಸಧ್ಯ ಅಪಾಯದಿಂದ ಪಾರಾಯಿತಲ್ಲ !!! ಅಂದುಕೊಂಡು ಸಂತಸದಿಂದ ಅದನ್ನು ಬಕೇಟಿನಿಂದ ಹೊರಗೆ ತೆಗೆದು ಹಾಲು ಕುಡಿಸಿದೆ. ಮನೆಯೆಲ್ಲಾ ತಿರುಗಾಡಿದ ಅದು ನನ್ನ ಕೈಮೇಲೆಲ್ಲಾ ಹತ್ತಿ ನಂತರ ಕೈಲಾಗದ ಮಗುವಿನಂತೆ ಬಂದು ನನ್ನ ತೊಡೆಯನ್ನೇರಿ ಅಲ್ಲೇ ತನ್ನ ಸುಂದರ ಕಣ್ಣುಗಳಿಂದ ಪಿಳಿ ಪಿಳಿ ಎಂದು ನನ್ನೇ ನೋಡುತ್ತಾ ನನ್ನಲ್ಲಿ ಏನೋ ಹೇಳುತ್ತಿದೆಯೇನೋ ಅನ್ನಿಸುತ್ತಿತ್ತು. ಮೊದಲೇ ಪ್ರಾಣಿ ಪ್ರಿಯನಾದ ನಾನು ಅದನ್ನೆತ್ತಿಕೊಂಡು ಮುದ್ದಾಡಿ ಮತ್ತೆ ರಾತ್ರಿಯಾದ್ದರಿಂದ ಅದರ ಬಕೇಟಿನಲ್ಲಿ ಮಲಗಿಸಿ ಚಳಿಯಾಗದಂತೆ ಅದಕ್ಕೆ ಬನಿಯನ್ ಬಟ್ಟೆಯನ್ನು ಹೊದ್ದಿಸಿ ಮಲಗಿಸಿದೆ. ಹಾಲು ಕುಡಿದು ಹೊಟ್ಟೇ ತುಂಬಿಸಿಕೊಂಡಿದ್ದ ಅದು ನಿರಮ್ಮಳವಾಗಿ ನಿದ್ರೆ ಮಾಡುತ್ತಿತ್ತು. ಅದನ್ನು ನೋಡಿ ನಾನು ನಿದ್ರೆ ಮಾಡಿದೆ. ಬೆಳಗ್ಗಿನತನಕ ನನಗೆ ಅದರದ್ದೇ ಯೋಚನೆ, ಮುಂಜಾವದಲ್ಲಿ ಎದ್ದು ಅದು ಏನುಮಾಡುತ್ತಿದೆ ಎಂದು ನೋಡಿ, ಇನ್ನೂ ನಿದ್ರೆ ಮಾಡುತ್ತಿದ್ದರಿಂದ ನಾನು ನನ್ನ ನಿತ್ಯಕರ್ಮಗಳನ್ನು ಮುಗಿಸಿ, ತಿಂಡಿ ಮಾಡಿ ಬಂದು ನೋಡುವ ಹೊತ್ತಿಗೆ ಅದು ಎದ್ದು ಅತ್ತಿಂದಿತ್ತ ಓಡಾಡುತ್ತಿತ್ತು. ಅದಕ್ಕೆ ಹಾಲು ಕುಡಿಸಿ ಎಂದಿನಂತೆ ನನ್ನ ಕೆಲಸಕ್ಕೆ ಹೊರಟೆ. ಮಧ್ಯಾನ್ನ ಬೇಗ ಮನೆಗೆ ಬಂದು ಅದು ಏನುಮಾಡುತ್ತಿದೆ ಎಂದು ನೋಡುವ ತವಕದಿಂದಲೇ ಹೊರಟೆ. ಹಾಗೆಯೇ ಅಕಸ್ಮಾತಾಗಿ ಅದಕ್ಕೆ ಹೊಟ್ಟೆ ಹಸಿದರೆ ಎಂದು ಒಂದು ಬಿಸ್ಕೇಟನ್ನೂ ಆ ಬಕೇಟಿನಲ್ಲಿ ಇಟ್ಟಿದ್ದೆ. ಮಧ್ಯಾನ್ನ ಮನೆಗೆ ಬಂದಾಕ್ಷಣ ಅದಕ್ಕೆ ಹಾಲು ಕುಡಿಸಿ ಸಾಧ್ಯವಾದರೆ ಸ್ವಲ್ಪ ಅನ್ನ, ಬಿಸ್ಕೇಟನ್ನು ನೀಡಬೇಕೆಂದು ಮನದಲ್ಲೇ ನೆನೆದು ಬಂದು ಅದನ್ನು ನೋಡಿದೆ, ಅದು ಸ್ವಲ್ಪ ನಿತ್ರಾಣಗೊಂಡಂತೆ ಕಂಡದ್ದರಿಂದ ತಕ್ಷಣ ಅದಕ್ಕೆ ಸ್ವಲ್ಪ ಹಾಲು ಕುಡಿಸಿ ಮಲಗಲು ಬಿಟ್ಟೆ. ಮಧ್ಯಾನ್ನದ ಮಂಪರು ಹತ್ತಿದ್ದರಿಂದ ಆ ಬಕೇಟಿನ ಪಕ್ಕದಲ್ಲೇ ನಾನು ನಿದ್ರೆಗೆ ಶರಣಾದೆ. ಒಂದು ೩೦ ನಿಮಿಷಗಳ ತರುವಾಯ ಎಚ್ಚರವಾಗಿ ಅದನ್ನು ನೋಡಿದರೆ ಅದು ಉಸಿರಾಡುತ್ತಿರುವಂತೆ ಕಾಣಲಿಲ್ಲ, ಅಯ್ಯೋ ದೇವರೇ ಎಂದುಕೊಂಡು ಅದನ್ನು ಎತ್ತಿಕೊಳ್ಳಲು ಕೈಚಾಚಿದರೆ ಅದರ ದೇಹ ಪೂರ್ಣವಾಗಿ ಮರುಗಟ್ಟಿತ್ತು, ಅದರ ಹೃದಯಬಡಿತ ನಿಂತುಹೋಗಿತ್ತು, ಅದು ಆತ್ಮವಿಲ್ಲದ ಶರೀರವಾಗಿತ್ತು. ಕೇವಲ ಒಂದು ದಿನದ ಅತಿಥಿಯಾಗಿ ಬಂದ ಅದು ನನ್ನ ಮನದಲ್ಲಿ ಆಳವಾದ ಹೆಜ್ಜೆಯ ಗುರುತನ್ನ ಮೂಡಿಸಿ ಪರಲೋಕಕ್ಕೆ ಪಯಣ ಬೆಳೆಸಿತ್ತು. ಮುಂಗಾರುಮಳೆಯಲ್ಲಿನ ದೇವದಾಸ ಗಣೇಶನನ್ನು ಬಿಟ್ಟು ಹೋದಾಗ ಕೂಡಾ ನನ್ನ ಕಣ್ಣಿನಲ್ಲಿ ನೀರು ಬಂದಿತ್ತು, ಅದು ಕೇವಲ ಸಿನಿಮಾ ಆದರೂ ದುಃಖ ತಡಿಯಲಾಗಿರಲಿಲ್ಲ, ಅಂತದ್ದರಲ್ಲಿ ನನ್ನ ಜೊತೆಯಲ್ಲೇ, ನನ್ನ ಆರೈಕೆಯಲ್ಲೇ ಒಂದು ದಿನ ಕಳೆದ ಆ ಪುಟ್ಟ ಅಳಿಲಿನ ಮರಿಯೊಡನೆ ಬೆಳೆದ ಬಾಂಧವ್ಯ ನನ್ನ ಕಣ್ಣಂಚಿನಲ್ಲಿ ನೀರುಬರಿಸಿತ್ತು. ನೆನ್ನೆತಾನೆ ಜಿಗಿದು ಓಡಾಡಿಕೊಂಡಿದ್ದ ಅಳಿಲು ಇಂದು ಕೇವಲ ಒಂದು ಶವವಾಗಿತ್ತು. ಅದನ್ನು ಎಲ್ಲೆಲ್ಲೋ ಬಿಸಾಡಲು ಮನಸ್ಸು ಬರದೇ ನನ್ನಬಳಿ ಇದ್ದ ಒಂದು ಹೂವಿನ ಕುಂಡದಲ್ಲಿ ಅದನ್ನು ಮಣ್ಣು ಮಾಡಿ ಅದರ ನೆನಪಿಗೆ ಅದೇ ಕುಂಡದಲ್ಲಿ ಒಂದು ಗಿಡವನ್ನ ನೆಟ್ಟೆ.

ಇಂದು ಆ ಗಿಡದಲ್ಲಿ ಹೂ ಮೂಡಿದೆ, ಆ ಗಿಡದ ಬುಡದಲ್ಲಿ ಬಹುಷ: ಮಣ್ಣಲ್ಲಿ ಮಣ್ಣಾಗಿ ಆ ಪುಟ್ಟ ಅಳಿಲುಮರಿ ನಿಸರ್ಗದ ಮಡಿಲಲ್ಲಿ ಸೇರಿಹೋಗಿದೆ...

~.~
  • pachhu2002 ರವರ ಬ್ಲಾಗ್
  • Login or register to post comments
  • 314 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 8, 2008 - 11:37am — girish.rajanal

ಉ: ಅನಿರೀಕ್ಷಿತ ಅತಿಥಿ...

girish.rajanal's picture

ನಿಮ್ಮದು ತುಂಬಾ ದೊಡ್ಡ ಗುಣ. ನಿಮ್ಮ ಕೈಯಿಂದ ಆರೈಕೆ ಮಾಡಿಸಿಕೊಳ್ಳುವ ಋಣ ಇತ್ತು ಅಂತ ಕಾಣುತ್ತೆ ಆ ಪುಟ್ಟ ಅಳಿಲಿಗೆ...
ನಿಮ್ಮ ಹೋ ಕುಂಟದಲ್ಲಿ ಸದಾ ಹೂ ನಗುತಿರಲಿ. ಆ ಹೂವುಗಳನ್ನು ಕೀಳಬೇಡಿ..

ನಿಮ್ಮವ,
ಗಿರೀಶ ರಾಜನಾಳ
ಉಡಾಳ ಓಣಿ ಕೆಡಸಿದರ...ಸಂಭಾವಿತ ಊರನ್ನೇ ಕೆಡಸಿದನಂತೆ....!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 12:30pm — pachhu2002

ಉ: ಅನಿರೀಕ್ಷಿತ ಅತಿಥಿ...

pachhu2002's picture

To girish:ಖಂಡಿತವಾಗಿಯೂ ಆ ಹೂವನ್ನ ಕೀಳೋದಿಲ್ಲ, ಅದರ ಸುಗಂಧ ಮತ್ತೆ ಅದರ ಪ್ರಸನ್ನತೆಯನ್ನ ನೋಡಿ ನಾನು ಸಂತಸಪಡುತ್ತೇನೆ... Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 11:57am — Sunil Jayaprakash

ಉ: ಅನಿರೀಕ್ಷಿತ ಅತಿಥಿ...

Sunil Jayaprakash's picture

ಆ ಅಳಿಲನ್ನು ಮಗುವಿನಂತೆ ನೋಡಿಕೊಂಡ್ರಲ್ಲಾ ನಿಮ್ಮ ಮನಸ್ಸು ತುಂಬಾ ದೊಡ್ಡದು ಬಿಡಿ. ನಿಮ್ಮ ಅಳಿಲು ಎಲ್ಲಿಯೂ ಹೋಗಿಲ್ಲ, ಇಲ್ಲೇ ನನ್ನ ಪಾಪೆಯಲ್ಲಿ ಇದೆ ನೋಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 12:32pm — pachhu2002

ಉ: ಅನಿರೀಕ್ಷಿತ ಅತಿಥಿ...

pachhu2002's picture

ಹೌದು, ಅದು ಕೇವಲ ನಿಮ್ಮ ಪಾಪೆಯಲ್ಲಷ್ಟೇ ಅಲ್ಲದೇ ನನ್ನ ಮನಸ್ಸಲ್ಲಿ ಅಚ್ಚಳಿಯದೇ ನಿಂತಿದೆ.... ನಿಮ್ಮ ಚಿತ್ರವನ್ನು ನೋಡಿದರೆ ನೀವೂ ಪ್ರಾಣಿಪ್ರಿಯರು ಅಂತ ಕಾಣ್ಸತ್ತೆ.... ಧನ್ಯವಾದಗಳು Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 5:37pm — ನೀತಾ

ಉ: ಅನಿರೀಕ್ಷಿತ ಅತಿಥಿ...

ನೀತಾ's picture

ಪಾಪ ಅಳಿಲು Sad ಆದ್ರು ಅದರ ಕೊನೇದಿನದ ಸೇವೆ ಮಾಡೋ ಭಾಗ್ಯ ನಿಮ್ಮದಾಯಿತು ನೂಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2008 - 9:28am — pachhu2002

ಉ: ಅನಿರೀಕ್ಷಿತ ಅತಿಥಿ...

pachhu2002's picture

ಹೌದು ನೀತಾ ಅವರೇ,

ಅದು ಒಂದುರೀತಿಯ ಭಾಗ್ಯಾನೇ ಸರಿ. ಆದರೆ ಅದು ನನ್ನ ಪಿಳಿ ಪಿಳಿ ಕಣ್ಣು ಬಿಟ್ಟು ನೋಡಿದಾಗ ನನ್ನಲ್ಲಿ ಅದು ಇನ್ನೂ ಬದುಕೋದಕ್ಕೆ ಹೋರಾಡ್ತಾಇರೂ ಹಾಗಿತ್ತು. ಆದ್ರೆ ನಾನೇನು ಮಾಡೊಕ್ಕೆ ಆಗ್ಲಿಲ್ಲ.

ಅದರ ಆಯಸ್ಸು ಮುಗಿದಿತ್ತು ಅಂತ ಕಾಣತ್ತೆ. Sad

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 10:27pm — Jayalaxmi.Patil

ಉ: ಅನಿರೀಕ್ಷಿತ ಅತಿಥಿ...

Jayalaxmi.Patil's picture

ಪ್ರಶಾಂತ್,
ಪುಟ್ಟ ಅಳಿಲನ್ನು ನೀವು ಆರೈಕೆ ಮಾಡುತ್ತಿದ್ದಾಗ ನಾನೂ ಅಲ್ಲೆ ಇದ್ದೆನೇನೊ ಅನಿಸಿತು. ಓದಿದ ನಂತರ ಖೇದ ಆವರಿಸಿದೆ.ಆ ಪುಟ್ಟ ಜೀವ ಹೂವಾಗಿ ನಿಮ್ಮೊಂದಿಗಿರುವುದು ತಿಳಿದು ವಿಚಿತ್ರ ಸಮಾಧಾನ ಮನಸಿಗೆ.
ಜಯಲಕ್ಷ್ಮೀ.ಪಾಟೀಲ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2008 - 9:32am — pachhu2002

ಉ: ಅನಿರೀಕ್ಷಿತ ಅತಿಥಿ...

pachhu2002's picture

ನಾನು ಇದೇ ರೀತಿ ಮೊದಲೊಂದು ಪುಟ್ಟ ಪಕ್ಷಿಯನ್ನು ಕಾಗೆ ಇಂದ ಕಾಪಾಡಿ ಆರೈಕೆ ಮಾಡಿ ಅದರ ರೆಕ್ಕೆ ಬಲಿತಮೇಲೆ ಅದನ್ನ ಹಾರಿ ಬಿಟ್ಟಿದ್ದೆ. Smiling
ಆದರೆ ಈ ಜೀವವನ್ನ ಉಳಿಸೋದಕ್ಕೆ ಪಟ್ಟ ಪ್ರಯತ್ನ ವಿಫಲವಾಯಿತು. Sad

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2008 - 12:22am — kalpana

ಉ: ಅನಿರೀಕ್ಷಿತ ಅತಿಥಿ...

kalpana's picture

ಆ ಅಳಿಲಿಗೆ ಕೊನೆಗಾಲದಲ್ಲಿ ನಿಮ್ಮ ಸೇವೆಯ ಋಣ ಇತ್ತು ನೋಡಿ, ಪಾಪ.

~ಕಲ್ಪನ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2008 - 1:07am — Rajeshwari

ಉ: ಅನಿರೀಕ್ಷಿತ ಅತಿಥಿ...

Rajeshwari's picture

ಈ ಲೇಖನ ಓದಿದ ಮೇಲೆ ನನಗೆ ಬೆಜಾರಾಯ್ತು , ಆ ಹೂವು ಇನ್ನೊಂದಿಷ್ಟು ದಿನ ನಿಮ್ಮ ಅಂಗಳದಲ್ಲಿ ನಗುತ್ತ ಇರಲಿ ಅದರ ಜೊತೆಗೆ ಇನ್ನು ತುಂಬ ಹೂ ಆ ಗಿಡದಲ್ಲಿ ಅರಳಲಿ.

ಅಳಿಲಿಗೆ ಇನ್ನು ಆಯಸ್ಸು ಕೊಡಬಾರದಿತ್ತೆ ಅಂತ ಅನ್ನಿಸುತ್ತಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2008 - 9:35am — pachhu2002

ಉ: ಅನಿರೀಕ್ಷಿತ ಅತಿಥಿ...

pachhu2002's picture

ಆ ಹೂವನ್ನ ಮುಟ್ಟಿದಾಗ ಕೋಮಲವಾದ ಆ ಅಳಿಲಿನ ಮೈ ಮುಟ್ಟಿದ ಅನುಭವ ಆಯಿತು Smiling
ಅದು ಇವತ್ತಿಗೆ ಬದುಕಿದ್ದರೆ ಮರದಿಂದ ಮರಕ್ಕೆ ಜಿಗಿಯುತ್ತಾ ಕುಣಿದಾಡ್ತಾ ಇತ್ತು ಅಂತ ಅನ್ಸತ್ತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗೋದಿ ಹಲ್ವಾ
  • ಹಕ್ಕಿಯೊಂದು ಗೂಡು ಕಟ್ಟಿತ್ತು...
  • ತಲೆನೋವು
  • ಗುಂಡೂ....ನಿನ್ನನ್ನು ಮರೆಯಲಾಗುತ್ತಿಲ್ಲಾ........
  • ಹಾಲು-ಹುಡುಗ-ಹಸು ಇತ್ಯಾದಿ..
Syndicate content

ಲೇಖಕರು

pachhu2002's picture

ಪೂರ್ಣ ಹೆಸರು
ಪ್ರಶಾಂತ ಜಿ ಉರಾಳ

ಪರಿಚಯ

ನಾನು ಹುಟ್ಟಿ ಬೆಳೆದದ್ದು ಮೈಸೂರಾದರೂ ನನ್ನ ಅಜ್ಜನ ಊರು ಉಡುಪಿ ಜಿಲ್ಲೆಯ ಬಾರಕೂರು. ಅಪ್ಪ ಸಾಲಿಗ್ರಾಮದ ಬಳಿಯ ಹಂದಟ್ಟಿನವರು. ನಾನು ಈಗ ನೆಲೆಸಿರುವುದು ರಾಜಧಾನಿ ಬೆಂಗಳೂರಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ನೇಹ ಬ೦ಧನ
  • ಓದಿದ್ದು ಕೇಳಿದ್ದು ನೋಡಿದ್ದು-51 (kann)ADIGA
  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • bvenkatraya
    ಉ: ಗೆದ್ದೆತ್ತಿನ ಬಾಲ
    October 16, 2008 - 12:39pm
  • gurubaliga
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:38pm
  • mahesha
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:34pm
  • uttanka
    ಉ: ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
    October 16, 2008 - 12:33pm
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:32pm
  • gurubaliga
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:29pm
  • mowna
    ಉ: ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
    October 16, 2008 - 12:10pm
  • ASHOKKUMAR
    ಉ: ಸೈಕಲ್ ರಿಕ್ಷಾಗೆ ಸೌರಶಕ್ತಿ
    October 16, 2008 - 12:05pm
  • gurubaliga
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:05pm
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:01pm
ಇನ್ನಷ್ಟು
ಈಗಿನಂತೆ 14 ಸದಸ್ಯರು ಮತ್ತು 127 ಅತಿಥಿಗಳು ಆನ್ಲೈನ್ ಇರುವರು.


ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator