ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › pachhu2002 ರವರ ಬ್ಲಾಗ್

nannakanasu-chiguru

ನನಗೆ ಬರೆಯೋದಿಕ್ಕೆ ಸ್ಪೂರ್ತಿ ತಂದು ಕೊಟ್ಟ ನನ್ನ ಅತ್ಮೀಯ ಗೆಳೆಯರಾದ ಅಮರ ಮತ್ತೆ ವಿಜಯ್ ಗೆ ನನ್ನ ಹೃತ್ಪೋರ್ವಕ ವಂದನೆಗಳು. ನಿಮ್ಮೆಲ್ಲರ ಹಾರೈಕೆ ನನ್ನೊಂದಿಗಿರಲಿ... ನಮಸ್ಕಾರ, ನನ್ನ ಎಲ್ಲಾ ಸ್ನೇಹಿತರಿಗೂ.... ನಾನಿಲ್ಲಿ ಬರೆದಿರುವುದೆಲ್ಲಾ ನನ್ನ ಮನಸ್ಸಿನ ಭಾವನೆಗಳು, ಮನದ ಮಾತುಗಳು. ಮೊದ ಮೊದಲು ಕವನದ ಕಡೆಗೆ ಇದ್ದ ಒಲವು ಇತ್ತಿಚೆಗೆ ಕಡಿಮೆಯಾಗಿದೆ. ನನ್ನದೇ ಒಂದು ಪುಟ್ಟ ಬ್ಲಾಗ್ ಇದೆ. ಮನಸ್ಸಿಗೆ ತೋಚಿದ್ದನ್ನ ನಾನಿಲ್ಲಿ ವ್ಯಕ್ತಪಡಿಸ್ತಾ ಇದ್ದೇನೆ. ಇಲ್ಲಿ ಬರೆದಿರೊದ್ರಲ್ಲಿ ಬಹಳಷ್ಟು ತಪ್ಪುಗಳಿವೆ. ನನ್ನ ಓದುಗರು ಅದನ್ನ ನನಗೆ ತಿದ್ದಿ ಹೇಳಬೇಕು. ಯಾರೂಕೂಡಾ ಹುಟ್ಟಿದ ತಕ್ಷಣ ಎಲ್ಲಾದನ್ನೂ ಕಲಿಯೋದಿಲ್ಲ. ನಡಿಯೋಕಾಲು ಎಡವೋದು ಸಹಜತಾನೆ ??? ನಿಮ್ಮ ಪ್ರೀತಿಯ ತಿದ್ದುಪಡಿಗೆ ನಾನು ಚಿರರುಣಿ...

ಮುಂದೇನಾಗಬಹುದು ???

July 9, 2008 - 5:18pm — pachhu2002

ಉಸ್ಸಪ್ಪಾಪ್ಪಾಪ್ಪಾ !!!!

ಎಷ್ಟು ಕೆಲಸ ಇತ್ತು ಗೊತ್ತಾ, ಅದರ ಮಧ್ಯ Customer calls ಬೇರೆ !!!

ಯಾಕೋ ಈ ನಡುವೆ ನನ್ಗೆ ಸರಿಯಾಗಿ ಟೈಮ್ ಸಿಕ್ತಾನೇ ಇಲ್ಲ. ಆ ತೊಂದರೆ ಇಂದ ನನ್ನ friends ನ meetಕೂಡಾ ಮಾಡೋಕೆ ಅಗ್ತಾ ಇಲ್ಲ. ಹೀಗೇ ಯೋಚನೆ ಮಾಡ್ತಾ ಇರೋವಾಗ ನನ್ಗನ್ನಿಸ್ತು... ನಾಳೆದಿನ ನಮ್ಗೇನಾದ್ರೂ ಹೆಚ್ಚು ಕಮ್ಮಿ ಆಗಿ ನಾವು ಪರಲೋಕಕ್ಕೆ ಪ್ರಯಾಣ ಬೆಳೆಸಿದ್ರೆ ನಮ್ಮ ಬಗ್ಗೆ ನಮ್ಮ ಗೆಳೆಯರು ಏನಂತ ಮಾತಾಡ್ಕೋಬಹುದು ??? ಕೆಲವರಿಗೆ ಅಯ್ಯೋ ಪಾಪಾ ಅಂತ ಅನ್ನಿಸ್ಬಹುದು, ಮತ್ತೆ ಕೆಲವರ ಓಹೋ ಹೌದಾ ??? ಹೇಗಾಯ್ತಂತೆ ???? ಯಾವಾಗಾ ???? ಅಂತ ರಾಗ ತೆಗೆದು ತಮಗಿಲ್ಲದ ಕಾಳಜಿ ತೋರಿಸಬಹುದು, ಮತ್ತೆ ಕೆಲವರಿಗೆ ನಮ್ಮ ಉಳಿವು, ಅಳಿವಿನ ಸುಳಿವೇ ಇಲ್ಲದೇ ಹೋಗಬಹುದು... ಸುಮಾರು ದಿನಗಳ ನಂತರ ನನ್ನ ಮೊಬೈಲಿನಲ್ಲಿ Store ಆಗಿರುವ ಅವರ ನಂಬರಿನಿಂದ call ಬಂದು ಮೊಬೈಲ್ ರಿಂಗಣಿಸಬಹುದು, ಆನಂತರ ಆ ಕಡೆ ಇರುವ ವ್ಯಕ್ತಿ, ಛೇ !!! ನಂಗೆ ವಿಷ್ಯ ಗೊತ್ತೇ ಇರ್ಲಿಲ್ಲ.... ಅಂತ ಅನ್ನ ಬಹುದು. ಮತ್ತೆ ಕೆಲವರು ನಿಜವಾಗಿಯೂ ದುಃಖ ಪಡಬಹುದು...

ಇನ್ನು ನಮ್ಮ ಕುಟುಂಬದವರಲ್ಲಿ ದುಃಖ ಮಡುಗಟ್ಟಿರಬಹುದು.... ತದ ನಂತರ ನೆಂಟರಿಷ್ಟರಲ್ಲಿ ಕೆಲವರು ಮೊಸಳೇ ಕಣ್ಣೀರು ಇಡುತ್ತಾ Phone ಮಾಡಿ ದುಃಖದಲ್ಲಿರಿವವರನ್ನು ಮತ್ತಷ್ಟು ಅಳುವಂತೆ ಮಾಡಿ ತಾವೂ ದುಃಖಿತರಾಗಿದ್ದೀವಿ ಅಂತ ತೋರ್ಪಡಿಸಬಹುದು... ಕೆಲವರಿಗೆ ನೊಂದವರನ್ನು ಸಮಾಧಾನ ಪಡಿಸಲು ಬಾರದಿದ್ದರೂ, ಮತ್ತಷ್ಟು ಅಳಿಸಿ ಮರೆಯಲೆತ್ನಿಸುತ್ತಿದ್ದ ನೋವನ್ನ ಮತ್ತೆ ಕೆದಕಿ ತಿಳಿಗೊಳ್ಳುತ್ತಿರುವ ಮನವನ್ನ ಕದಡಿ ರಾಡಿ ಎಬ್ಬಿಸಿ ಹೋಗುತ್ತಾರೆ.

ನಮ್ಮ ಬ್ಯಾಂಕಿನ ಅಕೌಂಟುಗಳಲ್ಲಿ ಕೆಲವುದರ ಬಗ್ಗೆ ಮನೆಯವರಿಗೆ ತಿಳಿದಿದ್ದು ಸುಖಾಂತ್ಯ ಪಡೆಯಬಹುದು, ಮತ್ತೆ ಕೆಲವು ಸದ್ದಿಲ್ಲದೇ ಸತ್ತುಹೋಗಬಹುದು... ನಾವು ಉಪಯೋಗಿಸುತ್ತಿದ್ದ ವಸ್ತುಗಳು ಪರರ ಪಾಲಾಗಬಹುದು... ನಮ್ಮ ಬ್ಲಾಗು, ಈ-ಮೈಲ್ ಐಡಿ ಗಳು, ಅದರಲ್ಲಿ ಇರಬಹುದಾದ ವಿಷಯಗಳು ಎಲ್ಲಾ ಯಾರಕೈಗೂ ಸಿಗದೇ ಮುಂದೊಂದುದಿನ ಸರ್ವರ್ ಇಂದ ತೆಗೆಯಲ್ಪಡುತ್ತದೆ. ಇದೆಲ್ಲಾ ಆಗುವುದಂತೂ ಸತ್ಯ. ಏನಾದರೇನು ? ಅದನ್ನೆಲ್ಲಾ ನೋಡುವುದಕ್ಕೆ ನಾವೇ ಅಲ್ಲಿ ಇರುವುದಿಲ್ಲ ಅಲ್ವಾ ??? ಸುಮ್ಮನೇ ಯೋಚನೆ ಏತಕ್ಕೆ ಮಾಡಿ ತಲೆ ಕೆಡಿಸಿ ಇವತ್ತಿನ ದಿನವನ್ನ ಯಾಕೆ ಹಾಳುಮಾಡಿಕೊಳ್ಳುವುದು.... ಅಲ್ವಾ !!!

ಮತ್ತೆ ನೀವು ಈಗ ಕೇಳ್ತೀರಿ, ಯಾಕೆ ಅಷ್ಟೆಲ್ಲಾ ಹೇಳಿದ್ದು, ಬರೆದಿದ್ದು ಅಂತ.... ಸುಮ್ನೆ ಯಾಕೋ ತಲೇಲಿ ಯೋಚ್ನೆ ಬಂತು, ನಿಮ್ಮಲ್ಲಿ ಬೇರೆ ಯಾರಿಗಾದ್ರೂ ಇದೇ ಯೋಚ್ನೆ ಬಂದಿರ್ಬಹುದು, ಆದ್ರೆ ಅದ್ನ ಹೇಳಿರೋದಿಲ್ಲ ಅಷ್ಟೆ.

ಓಟ್ಟಿನಲ್ಲಿ ಎಲ್ಲಾ ಒಳ್ಳೇದಾಗ್ಲಿ ಅಂತ ಮಾತ್ರ ಹಾರೈಸಬಹುದು....

  • ಅನುಭವ ಕಥನ
~.~
  • pachhu2002 ರವರ ಬ್ಲಾಗ್
  • Login or register to post comments
  • 125 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 10, 2008 - 6:10pm — ನೀತಾ

ಉ: ಮುಂದೇನಾಗಬಹುದು ???

ನೀತಾ's picture

ನನಗೂ ಒಂದಿನ ರಾತ್ರಿ ಮಲಗುವಾಗ ಇದೇ ರೀತಿ ಯೊಚನೆ ಬಂತು... ಅಕಸ್ಮಾತ್ ನಾನೇನಾದ್ರು ಬೆಳಗಾಗುವಷ್ಟ್ರಲ್ಲಿ ಪ್ರಾಣ ಬಿಟ್ಟಿದ್ರೆ, ನನ್ನ ವಸ್ತುಗಳು ಏನ್ ಆಗ್ ಬಹುದು ಅಂತೆಲ್ಲಾ... ನನ್ನ ಅಪ್ಪ ಅಮ್ಮ ಅಳೋದನ್ನು ನೆನೆಸಿಕೊಳೋಕೆ ಆಗದೆ ಮಲ್ಕೊ ಬಿಟ್ಟೆ... ಬೆಳಿಗ್ಗೆ ಎದ್ದು ತುಂಬಾ ಕುಷಿ ಆಯ್ತು ಇನ್ನೂ ಜೀವಂತವಾಗಿದ್ದೇನೆ ಅಂತ... ಸಂತೋಷದಿಂದ ನನ್ನ ಸ್ನೇಹಿತೆಯ ಮದುವೆಗೆ ಹೋಗಲು ತಯಾರಾದೆ.Smiling

ಆದ್ರೆ ಇದೆಲ್ಲಾ ನಮ್ಮ ಯೋಚನೆ ಅಷ್ಟೆ.. ದೇವರ ಇಚ್ಚೆನೇ ಬೇರೆಯಾಗಿರುತ್ತೆ ಅಲ್ವಾ..??

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 11, 2008 - 9:14am — pachhu2002

ಉ: ಮುಂದೇನಾಗಬಹುದು ???

pachhu2002's picture

ನಮಸ್ಕಾರ ನೀತಾ ಅವರಿಗೆ,

ಹೌದು, ಇದೆಲ್ಲಾ ನಮ್ಮ ಮನದ ಭಾವನೆಗಳು, ಆದರೆ ನಾನು ಬರೆದಿರೋ ರೀತಿ ಜನ ಇದ್ದೇ ಇರ್ತಾರೆ. ಇದು ನಾನು ನನ್ನ ಕಣ್ಣಿನಿಂದ ಕಂಡು ಅರಿತುಕೊಂಡ ಸತ್ಯಗಳು. ಇದೇ ಜನವರಿಯಂದು ನಮ್ಮ ತಂದೆ ದೈವಾಧೀನರಾದರು. ಆಗ ನಮ್ಮನ್ನ ನೋಡಿ ಮಾತನಾಡಿಸಲು ಬಂದವರ ವರ್ತನೆಯ ಬಗ್ಗೆ ನಾನು ಇಲ್ಲಿ ಬರೆದಿದ್ದೇನೆ.

ದೇವರು ನಡೆಸಿದಂತೆಯೇ ಎಲ್ಲಾ ನಡೆವುದು... Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಂದೇನು ...?
  • ರಿಮೋಟ್ ಲಾಗಿನ್; ಸಮುದಾಯಗಳಲ್ಲಿ ನಾವು
  • ನಾನೆಲ್ಲಿ
  • ಸ್ಪೂರ್ತಿ
  • ಮನಸಲ್ಲಿ ಬರುತ್ತೆ ಯೋಚನೆ
Syndicate content

ಲೇಖಕರು

pachhu2002's picture

ಪೂರ್ಣ ಹೆಸರು
ಪ್ರಶಾಂತ ಜಿ ಉರಾಳ

ಪರಿಚಯ

ನಾನು ಹುಟ್ಟಿ ಬೆಳೆದದ್ದು ಮೈಸೂರಾದರೂ ನನ್ನ ಅಜ್ಜನ ಊರು ಉಡುಪಿ ಜಿಲ್ಲೆಯ ಬಾರಕೂರು. ಅಪ್ಪ ಸಾಲಿಗ್ರಾಮದ ಬಳಿಯ ಹಂದಟ್ಟಿನವರು. ನಾನು ಈಗ ನೆಲೆಸಿರುವುದು ರಾಜಧಾನಿ ಬೆಂಗಳೂರಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 51 ಅತಿಥಿಗಳು ಆನ್ಲೈನ್ ಇರುವರು.


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator