ಅಸಾಧ್ಯವಾದುದನ್ನು ಮಾಡುವುದೊಂದು ಮಜಾ!

— ವಾಲ್ಟ್ ಡಿಸ್ನಿ

ಸಂಪದ ಆರ್ಕೈವಿನಿಂದ

rajeshnaik111 ರವರ ಬ್ಲಾಗ್

ರಾಹುಲ್ ದ್ರಾವಿಡ್ - ಶ್ರೇಷ್ಠತೆಯ ಪ್ರತೀಕ (೧)

 

ರಾಹುಲ್ ದ್ರಾವಿಡ್. ಹೆಸರು ಕೇಳಿದ ಕೂಡಲೇ ಮನಸಿಗೆ ಬರುವ ಚಿತ್ರಣವೇನು? ಶಿಸ್ತು, ಸಂಯಮ, ತಾಳ್ಮೆ, ಏಕಾಗ್ರತೆ, ಬುದ್ಧಿವಂತಿಕೆ, ಇತ್ಯಾದಿ. ಶ್ರೇಷ್ಠತೆಯ ಪರಾಕಾಷ್ಠೆಯನ್ನು ತಲುಪಿಯೂ ಇನ್ನೂ ಮುಂದಕ್ಕೆ ಹೋಗಬೇಕು ಎಂದು ಸದಾ ಹಂಬಲಿಸುತ್ತಿರುವ, ತಾನಿನ್ನೂ ಕ್ರೀಡೆಯ ವಿದ್ಯಾರ್ಥಿ ಎಂದು ತನ್ನನ್ನು ತಾನು ಪರಿಗಣಿಸುವ ಅಪರೂಪದ ಕ್ರೀಡಾಳು. ಯಾವುದರಲ್ಲಿ ನಾವು ಪರಿಪಕ್ವವಾಗಿಲ್ಲವೋ ಅದನ್ನು ಪ್ರಯತ್ನಿಸಲೂಬಾರದು ಎಂಬ ಧೋರಣೆಯೊಂದಿಗೆ ತನ್ನ ಕ್ರೀಡಾ ಜೀವನದ ಅತ್ಯುನ್ನತ ಮಟ್ಟ ತಲುಪಿರುವ ವ್ಯಕ್ತಿ ದ್ರಾವಿಡ್.

ದ್ರಾವಿಡ್ ಯಶಸ್ಸಿಗೆ ಮುಖ್ಯ ಕಾರಣ ಅವರು ಜೀವನದಲ್ಲಿ ಅಳವಡಿಸಿಕೊಂಡಿರುವ ಶಿಸ್ತು. ಏನೇ ಮಾಡಲಿ ಅದರಲ್ಲೊಂದು ಶಿಸ್ತು ಇದ್ದೇ ಇದೆ. ಒಂದು ನಿಯಮ ಇದ್ದೇ ಇದೆ. ಆ ಶಿಸ್ತು ಮತ್ತು ನಿಯಮ ದಾಟಿ ಒಂದು ಹೆಜ್ಜೆ ಆಚೀಚೆ ದ್ರಾವಿಡ್ ಇಡುವುದೇ ಇಲ್ಲ. ಆ ಕೆಲಸ ಬ್ಯಾಟಿಂಗ್ ಮಾಡುವುದಿರಲಿ, ಪಂದ್ಯದ ಮುಂಚಿನ ತಯಾರಿ ಇರಲಿ, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವುದಿರಲಿ, ವೈಯುಕ್ತಿಕ ಸಂದರ್ಶನ ಕೊಡುವುದಿರಲಿ, ಹೀಗೆ ಎಲ್ಲೆಲ್ಲೂ ಆ ಶಿಸ್ತು ಮತ್ತು ತನಗೆ ತಾನೇ ವಿಧಿಸಿದ ನಿಯಮದ ಪ್ರಕಾರ ದ್ರಾವಿಡ್ ನಡೆದುಕೊಳ್ಳುತ್ತಾರೆ. ಕೆಲವೊಂದು ಪ್ರಶ್ನೆಗಳಿಗೆ ತಾನು ಉತ್ತರ ನೀಡಲೇಬಾರದು ಎಂದು ದ್ರಾವಿಡ್ ಮುಂಚಿತವಾಗಿಯೇ ನಿರ್ಧರಿಸಿರುತ್ತಾರೆ. ಆಗ, ಜಪ್ಪಯ್ಯ ಎಂದರೂ ವರದಿಗಾರರಿಗೆ ದ್ರಾವಿಡ್-ನಿಂದ ಆ ಪ್ರಶ್ನೆಗಳಿಗೆ ಎಷ್ಟೇ ತಿರುಚಿ ಕೇಳಿದರೂ ಉತ್ತರ ಸಿಗುವುದಿಲ್ಲ. ಗಾಸಿಪ್ ಮಾಡಲು ಯಾವುದೆ ’ಸೌಂಡ್ ಬೈಟ್’ ದ್ರಾವಿಡ್ ನಿಂದ ಹೊರಬರುವುದಿಲ್ಲ. ಅವರದ್ದೇನಿದ್ದರೂ ನೇರ ಸರಳ ಸುಲಭ ಮಾತು. ಆಡುವ ಪ್ರತಿ ಮಾತಿನ ಹಿಂದೆ ಟನ್ನುಗಟ್ಟಲೆ ಬುದ್ಧಿವಂತಿಕೆಯಿರುತ್ತದೆ. ಆದ್ದರಿಂದಲೇ ದ್ರಾವಿಡ್ ರಾಷ್ಟ್ರೀಯ ತಂಡಕ್ಕೆ ಆಡಲು ಒಂದುವರೆ ದಶಕಗಳಾದರೂ ಇದುವರೆಗೆ ಒಂದೇ ಒಂದು ವಿವಾದವಾಗಲಿ, ತಪ್ಪು ಹೇಳಿಕೆಯಾಗಲಿ ಅವರ ಸುತ್ತ ಸುಳಿದಿಲ್ಲ.  ಮುಂದೆ ಓದಿ »

ಕೊನೆಯಲ್ಲಿ ಎಡವಿದ ಕರ್ನಾಟಕ - ೨

ಈ ಋತುವಿನ (೨೦೦೯-೧೦) ಆರಂಭದಲ್ಲಿ ಕರ್ನಾಟಕ ರಣಜಿ ತಂಡದ ಆಯ್ಕೆಗಾರರು ಕೆಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡರು. ಯಾವುದೇ ಶಿಫಾರಸುಗಳಿಗೆ ಕಿವಿಗೊಡದಿರುವುದು (ಆದರೂ ಅಖಿಲ್ ಬದಲು ಸ್ಟುವರ್ಟ್ ಬಿನ್ನಿ ಮತ್ತು ಉದಿತ್ ಪಟೇಲ್ ಆಯ್ಕೆಗೊಂಡದ್ದು ಆಶ್ಚರ್ಯ), ತಳವಾಗಿ ಬೇರೂರಿದ ಕೆಲವು ಆಟಗಾರರನ್ನು ಕೈಬಿಡುವುದು, ಯುವಕರಿಗೆ ಮನ್ನಣೆ ನೀಡುವುದು, ಹೊಸ ಕೋಚ್ ಮತ್ತು ಸಹಾಯಕ ಕೋಚ್ ನೇಮಿಸುವುದು ಮತ್ತು ರಾಜ್ಯ ತಂಡದ ಚುಕ್ಕಾಣಿಯನ್ನು ರಾಹುಲ್ ದ್ರಾವಿಡ್-ಗೆ ನೀಡುವುದು.

ಅಶೋಕಾನಂದ್, ಸಯ್ಯದ್ ಕಿರ್ಮಾನಿ, ರಘುರಾಮ್ ಭಟ್ ಮತ್ತು ರಂಗರಾವ್ ಅನಂತ್ ಇವರೇ ನಾಲ್ಕು ಆಯ್ಕೆಗಾರರು. ನಾಲ್ವರೂ ಕರ್ನಾಟಕಕ್ಕೆ ಆಡಿ ಅನುಭವವುಳ್ಳವರು. ಕಳೆದ ಏಳೆಂಟು ವರ್ಷಗಳಲ್ಲಿ ರಾಜ್ಯ ತಂಡದಲ್ಲಿ ಹೆಚ್ಚೇನು ಬದಲಾವಣೆಯಿರಲಿಲ್ಲ. ಒಂದೆರಡು ಆಟಗಾರರನ್ನು ಹೊರತುಪಡಿಸಿದರೆ ಉಳಿದವರೆಲ್ಲಾ ಮೊದಲಿದ್ದವರೇ. ಹೀಗಾಗಿ ಕರ್ನಾಟಕ ಆರಕ್ಕೇರದೆ ಮೂರಕ್ಕಿಳಿಯದೇ ಅಲ್ಲೇ ನಡುವಿನಲ್ಲಿ ತೂಗುಯ್ಯಾಲೆ ಆಡುತ್ತಾ ಉಳಿದುಬಿಟ್ಟಿತು. ಇದನ್ನು ಬದಲಾಯಿಸಲು ಸ್ವಲ್ಪ ಹೆಚ್ಚೇ ರಿಸ್ಕ್ ತಗೊಂಡ ಆಯ್ಕೆಗಾರರು ಕೆಲವರನ್ನು ಕೈಬಿಟ್ಟು ಯುವಕರಿಂದಲೇ ತಂಡವನ್ನು ತುಂಬಿಬಿಟ್ಟರು. ಇದೊಂದು ಮಾಸ್ಟರ್ ಸ್ಟ್ರೋಕ್ ನಿರ್ಣಯವಾಗುತ್ತೆಂದು ಯಾರಿಗೂ ಅರಿವಿರಲಿಲ್ಲ. ಆದರೆ ಆಯ್ಕೆಗಾರರು ರಿಸ್ಕ್ ತಗೊಂಡದ್ದನ್ನು ಮೆಚ್ಚಬೇಕು. ಏನಾದರೂ ಅದ್ಭುತ ಘಟಿಸಬೆಕಾದರೆ ಅಷ್ಟೇ ಮಹತ್ವದ ನಿರ್ಣಯ ಆ ಅದ್ಭುತದ ಹಿಂದೆ ಇರುತ್ತೆ. ಕರ್ನಾಟಕ ಫೈನಲ್ ತನಕ ಧಾವಿಸಿ ಬಂದುದರ ಹಿಂದೆ ಇರುವ ಪ್ರಮುಖ ಕಾರಣವೂ ಇದೇ - ಯುವಕರಿಗೆ ಮನ್ನಣೆ.  ಮುಂದೆ ಓದಿ »

Syndicate content