ರಾಯಲ್ ಚಾಲೆಂಜರ್ಸ್, ಬೆಂಗಳೂರು...
May 7, 2008 - 12:36pm — rajeshnaik111ರಾಯಲ್ ಚಾಲೆಂಜರ್ಸ್, ಬೆಂಗಳೂರು. ೭ ಪಂದ್ಯಗಳಲ್ಲಿ ೫ನ್ನು ಸೋತ ಬಳಿಕ ಸಿ.ಇ.ಓ ಚಾರು ಶರ್ಮನನ್ನು ಮನೆಗೆ ಕಳಿಸಲಾಗಿದೆ. ಈ ಲೇಖನವನ್ನು ಬೆಂಗಳೂರು ತಂಡ ತನ್ನೆಲ್ಲಾ ಪಂದ್ಯಗಳನ್ನು ಆಡಿದ ಬಳಿಕ ಬರೆಯಬೇಕೆಂದಿದ್ದೆ. ಆದರೆ ಇದುವರೆಗೆ ಈ ತಂಡ ನೀಡಿದ ಹೀನಾಯ ಪ್ರದರ್ಶನದಿಂದ ಬೇಸತ್ತು ಈಗಲೇ ಗೀಚುತ್ತಿದ್ದೇನೆ. ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 592 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕರ್ನಾಟಕ ಕ್ರಿಕೆಟ್ - ೯
December 9, 2007 - 9:33pm — rajeshnaik111ಮುಲೆವಾ ಧಾರ್ಮಿಚಂದ್: ರಾಜಸ್ಥಾನದಿಂದ ವಲಸೆ ಬಂದು ಬೆಂಗಳೂರಿನಲ್ಲಿ ಬದುಕು ಕಂಡುಕೊಂಡ ಎರಡನೇ ತಲೆಮಾರಿನ ಹುಡುಗ ಧಾರ್ಮಿಚಂದ್. ೧೫ನೇ ವಯಸ್ಸಿನಲ್ಲೇ ಅಂಡರ್-೧೯ ಭಾರತ ತಂಡವನ್ನು ಪ್ರತಿನಿಧಿಸಿ ಎದುರಾಳಿ ತಂಡಗಳನ್ನು ತನ್ನ ಮಾಂತ್ರಿಕ ಆಫ್ ಸ್ಪಿನ್ ದಾಳಿಯಲ್ಲಿ ನುಚ್ಚುನೂರು ಮಾಡಿದವರು ಧಾರ್ಮಿಚಂದ್. ಕರ್ನಾಟಕದ ಪರವಾಗಿ ಎಲ್ಲಾ ವಯೋಮಿತಿಯ ತಂಡಗಳಲ್ಲಿ ಆಡಿದ ಧಾರ್ಮಿಚಂದ್ ಭರ್ಜರಿ ಯಶಸ್ಸು ಕಂಡರು. ಯಾವುದೇ ತರಹದ ಪಿಚ್ ಇರಲಿ, ಅವುಗಳ ಮೇಲೆ ಧಾರ್ಮಿಚಂದ್ ಪಡೆಯುತ್ತಿದ್ದ ಸ್ಪಿನ್ ಕಂಡು ಈರಪ್ಪಳ್ಳಿ ಪ್ರಸನ್ನ ನಿಬ್ಬೆರಗಾಗಿದ್ದರು. ಈ ಹುಡುಗನಿಗೆ ಸರಿಯಾದ ಮಾರ್ಗದರ್ಶನ ಸಿಕ್ಕರೆ ಉಜ್ವಲ ಭವಿಷ್ಯವಿದೆ ಎಂದು ಈರಪ್ಪಳ್ಳಿ ಪ್ರಸನ್ನ ೧೯೯೯ನೇ ಇಸವಿಯಲ್ಲಿ ನುಡಿದಿದ್ದರು. ಅಲ್ಲೇ ಆದದ್ದು ಎಡವಟ್ಟು. ಸರಿಯಾದ ಮಾರ್ಗದರ್ಶನವೆಂಬುವುದು ಧಾರ್ಮಿಚಂದ್-ಗೆ ಮರೀಚಿಕೆಯಾಗಿಯೇ ಉಳಿಯಿತು.
೨೦೦೦-೦೧ ಋತುವಿನಲ್ಲಿ ೧೬ನೇ ವಯಸ್ಸಿನಲ್ಲೇ ಕರ್ನಾಟಕದ ಪರವಾಗಿ ತನ್ನ ಚೊಚ್ಚಲ ಪಂದ್ಯವನ್ನಾಡಿದ ಧಾರ್ಮಿ, ಯಶಸ್ಸು ಕಾಣಲಿಲ್ಲ. ೨೦೦೦-೦೧ ಮತು ೨೦೦೧-೦೨ ಋತುಗಳಲ್ಲಿ ಕೇವಲ ೫ ಪಂದ್ಯಗಳಲ್ಲಿ ಧಾರ್ಮಿಯನ್ನು ಆಡಿಸಲಾಯಿತು. ಈ ೫ ಪಂದ್ಯಗಳಲ್ಲಿ ಒಟ್ಟಾರೆ ೭೦ರಷ್ಟು ಓವರ್-ಗಳನ್ನು ಮಾತ್ರ ಎಸೆದು ಕೇವಲ ೨ ವಿಕೆಟ್ ಗಳಿಸಿದ ಸಾಧನೆ ಯುವ ಆಟಗಾರ ಧಾರ್ಮಿಚಂದ್ ಅವರದ್ದು. ಈ ವೈಫಲ್ಯದಿಂದ ಎದೆಗುಂದಿದ ಧಾರ್ಮಿಗೆ ಸರಿಯಾದ ಮಾರ್ಗದರ್ಶನ ಎಲ್ಲೂ ದೊರೆಯಲಿಲ್ಲ. ಮುಂದೆ ಓದಿ »

- Login or register to post comments
- 607 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಕರ್ನಾಟಕ ಕ್ರಿಕೆಟ್ - ೮
November 18, 2007 - 2:40pm — rajeshnaik111
- Login or register to post comments
- 682 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ
November 11, 2007 - 11:36pm — rajeshnaik111೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅದೇ ದೊಡ್ಡ ಸಾಧನೆ.
ಕಳೆದ ಋತುವಿನಲ್ಲಿ ಕರ್ನಾಟಕದ ಉತ್ತಮ ಪ್ರದರ್ಶನಕ್ಕೆ ಕಾರಣ ರಾಬಿನ್ ಉತ್ತಪ್ಪ. ಪ್ರಮುಖ ಪಂದ್ಯಗಳಲ್ಲಿ ರಾಬಿನ್ ನೀಡಿದ ಉತ್ತಮ ಆರಂಭದಿಂದ ಕರ್ನಾಟಕ ಉತ್ತಮ ಮೊತ್ತಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು. ಆದ್ದರಿಂದ ಬೌಲರ್ ಗಳಿಗೂ ಉತ್ತಮ ಮೊತ್ತದ ಬೆಂಬಲವಿದ್ದರಿಂದ ಎದುರಾಳಿ ತಂಡಗಳನ್ನು ಕಬಳಿಸುವಲ್ಲಿ ಕರ್ನಾಟಕ ಸಾಕಷ್ಟು ಯಶಸ್ವಿಯಾಗಿತ್ತು.
ಅದೇನು ಯೇಸು ಕ್ರಿಸ್ತನ ಮಾಯೆಯೋ, ಆ ರೋಲಂಡ್ ಬ್ಯಾರಿಂಗ್ಟನ್ ಮತ್ತೆ ತಂಡದಲ್ಲಿ ಸ್ಥಾನ ಪಡೆದದ್ದು ಮಹಾದಾಶ್ಚರ್ಯ! ಕಳೆದೆರಡು ಋತುವಿನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಬ್ಯಾರಿಂಗ್ಟನ್ ಮತ್ತೆ ತನ್ನ ಸ್ಥಾನ ಕಾಯ್ದುಕೊಂಡಿದ್ದಾರೆ. ರೋಲಂಡ್ ಬ್ಯಾರಿಂಗ್ಟನ್ ಒಬ್ಬ ಕಲಾತ್ಮಕ ಆರಂಭಿಕ ಆಟಗಾರ. ತನ್ನಲ್ಲಿರುವ ಪ್ರತಿಭೆಗೆ ತಕ್ಕಂತೆ ಆಡಿದರೆ ಈತನನ್ನು ಔಟ್ ಮಾಡಲು ಎದುರಾಳಿ ಬೌಲರ್ ಗಳು ಹೆಣಗಾಡಬೇಕಾಗುತ್ತದೆ. ಆದರೆ ಕಳೆದೆರಡು ಋತುಗಳಿಂದ ಕ್ರಿಕೆಟ್ ಬಗ್ಗೆ ಮಾತನಾಡುವುದು ಮತ್ತು ಯೋಚಿಸುವುದನ್ನು ಬಿಟ್ಟು ತನ್ನ ಧರ್ಮದ ಬಗ್ಗೆ ಅತಿಯಾಗಿ ಮಾತನಾಡುವುದು ಮತ್ತು ಯೋಚಿಸುವುದನ್ನು ಮಾಡುತ್ತಿರುವುದರಿಂದ ಬ್ಯಾರಿಂಗ್ಟನ್ ಆಟದ ಮೇಲೆ ಗಮನ ಕಳೆದುಕೊಳ್ಳುತ್ತಿದ್ದಾರೆ. ಬ್ಯಾರಿಂಗ್ಟನ್ ಈಗ ಸೀನಿಯರ್ ಆಟಗಾರ. ಅದರಂತೆಯೇ ಅವರು ನಡೆದುಕೊಳ್ಳುವುದೂ ಲೇಸು. ಈ ಋತುವಿನಲ್ಲಾದರೂ ರೋಲಂಡ್, ಕರ್ನಾಟಕಕ್ಕೆ ಒಂದೆರಡಾದರೂ ಉತ್ತಮ ಆರಂಭವನ್ನು ದೊರಕಿಸಿಕೊಡಲಿ. ಆಮೆನ್. ಮುಂದೆ ಓದಿ »

- 3 ಪ್ರತಿಕ್ರಿಯೆಗಳು
- 865 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಪ್ಯಾರಿಸ್ ಪ್ರಸಂಗ
August 9, 2007 - 11:40pm — rajeshnaik111ನನ್ನ ಮೊದಲ ನೌಕರಿ ಚೆನ್ನೈನಲ್ಲಿ ಆಗಿತ್ತು. ಈ ಘಟನೆ ನಡೆದದ್ದು ನಾನು ಚೆನ್ನೈಗೆ ಕಾಲಿಟ್ಟ ಮೊದಲ ದಿನವೇ. ಗೆಳೆಯ ವಿಕ್ರಮ್ ಪಾಟೀಲ ಅದಾಗಲೇ ಅಲ್ಲಿ ನೌಕರಿ ಮಾಡುತ್ತಿದ್ದು, 'ಬ್ಯಾಚೆಲರ್ಸ್ ಪ್ಯಾರಡೈಸ್' ಎಂದು ಕರೆಸಿಕೊಳ್ಳುತ್ತಿದ್ದ ಟ್ರಿಪ್ಲಿಕೇನ್-ನಲ್ಲಿ ವಾಸವಾಗಿದ್ದ. ಮುಂದೆ ಓದಿ »

- ೧ ಪ್ರತಿಕ್ರಿಯೆ
- 947 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: