ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › rajeshnaik111 ರವರ ಬ್ಲಾಗ್

ರಾಯಲ್ ಚಾಲೆಂಜರ್ಸ್, ಬೆಂಗಳೂರು...

May 7, 2008 - 12:36pm — rajeshnaik111

ರಾಯಲ್ ಚಾಲೆಂಜರ್ಸ್, ಬೆಂಗಳೂರು. ೭ ಪಂದ್ಯಗಳಲ್ಲಿ ೫ನ್ನು ಸೋತ ಬಳಿಕ ಸಿ.ಇ.ಓ ಚಾರು ಶರ್ಮನನ್ನು ಮನೆಗೆ ಕಳಿಸಲಾಗಿದೆ. ಈ ಲೇಖನವನ್ನು ಬೆಂಗಳೂರು ತಂಡ ತನ್ನೆಲ್ಲಾ ಪಂದ್ಯಗಳನ್ನು ಆಡಿದ ಬಳಿಕ ಬರೆಯಬೇಕೆಂದಿದ್ದೆ. ಆದರೆ ಇದುವರೆಗೆ ಈ ತಂಡ ನೀಡಿದ ಹೀನಾಯ ಪ್ರದರ್ಶನದಿಂದ ಬೇಸತ್ತು ಈಗಲೇ ಗೀಚುತ್ತಿದ್ದೇನೆ.

ಅರುಣ್ ಕುಮಾರ್ ಹೇಗೆ ಆಡುತ್ತಾರೆ ನೋಡೋಣವೆಂದು ಬಹಳ ನಿರೀಕ್ಷೆಯೊಂದಿಗೆ ಕೊಲ್ಕತ್ತಾ ತಂಡದ ವಿರುದ್ಧದ ಮೊದಲ ಪಂದ್ಯ ನೋಡಲು ಕುಳಿತೆ. ಅರುಣ್ ತಂಡದಲ್ಲಿ ಇರಲೇ ಇಲ್ಲ! ಅರಂಭಿಕನಾಗಿ ಬಂದದ್ದು ವಾಸಿಮ್ ಜಾಫರ್!!!! ರಾಹುಲ್ ದ್ರಾವಿಡ್-ಗೆ ತಲೆ ಕೆಟ್ಟಿರಬೇಕೆಂದು ಊಹಿಸಿದೆ. ಅಂದು ಕೆಟ್ಟ ರಾಹುಲ್ ತಲೆ ಇದುವರೆಗೂ ಸರಿಯಾಗಿಲ್ಲ. ಅರುಣ್ ನಂತರದ ಯಾವ ಪಂದ್ಯದಲ್ಲೂ ಆಡಲಿಲ್ಲ. ಎಲ್ಲಾ ೭ ಪಂದ್ಯಗಳಲ್ಲೂ ಅರುಣ್ ಕುರ್ಚಿ ಬಿಸಿ ಮಾಡುತ್ತಾ ’ಡಗ್ ಔಟ್’ನಲ್ಲಿ ಕೂತಿದ್ದರು. ಅರುಣ್ ಹೊಡೆಬಡಿಯ ಆರಂಭಿಕ ಆಟಗಾರ. ೨೦-೨೦ ಇವರ ಆಟದ ಶೈಲಿಗೆ ಹೇಳಿ ಮಾಡಿಸಿದ್ದು. ಅರುಣ್ ಸಫಲರಾಗುತ್ತಾರೋ ಇಲ್ಲವೋ ನಾನರಿಯೆ ಆದರೆ ಒಂದೆರಡು ಅವಕಾಶವನ್ನಾದರೂ ಕೊಟ್ಟು ನೋಡಬಹುದಿತ್ತಲ್ವೇ...

ಇನ್ನು ವಾಸಿಮ್ ಜಾಫರ್. ಈತನನ್ನು ಬೆಂಗಳೂರು ತಂಡ ಖರೀದಿಸಿದಾಗ ನಾನು ಬಿದ್ದು ಬಿದ್ದು ನಕ್ಕಿದ್ದೆ. ಎಲ್ಲೋ ಕಟ್ಟುಪಾಡಿಗೆ ಬಿದ್ದು ಖರೀದಿಸಿರಬೇಕು (ಅನಿಲ್ ಕುಂಬ್ಳೆಯನ್ನು ಖರೀದಿಸಿದಂತೆ) ಎಂದು ತಿಳಿದುಕೊಂಡಿದ್ದೆ. ಆದರೆ ರಾಹುಲ್-ಗೆ ತಲೆ ಅಂದೇ ಕೆಟ್ಟಿತ್ತು ಅಂತ ಈಗ ತಿಳಿಯುತ್ತಿದೆ. ಎಲ್ಲಾ ಬಿಟ್ಟು ವಾಸಿಮ್ ಜಾಫರ್??!! ಈಗ ಬಂದಿರುವ ಸಿಹಿ ಸುದ್ದಿಯೆಂದರೆ ಜಾಫರ್ ಗಾಯಾಳಾಗಿ ಇನ್ನು ೩ ವಾರ ಆಡುವಂತಿಲ್ಲ.

ವಾಸಿಂ ಜಾಫರ್ ಮತ್ತು ಅನಿಲ್ ಕುಂಬ್ಳೆ ಮೇಲೆ ಖರೀದಿಯ ಸಮಯದಲ್ಲಿ ವ್ಯಯಿಸಿದ ಹಣ ವ್ಯರ್ಥ. ಸುನಿಲ್ ಜೋಶಿ ಆಡಿದ ಪಂದ್ಯಗಳಲ್ಲಿ (ದೆಹಲಿ ತಂಡದ ವಿರುದ್ಧದ ಪಂದ್ಯ ಬಿಟ್ಟು) ಚೆನ್ನಾಗಿ ಬೌಲಿಂಗ್ ಮಾಡಿದರೂ, ರಾಹುಲ್ ಅವರಿಗೆ ಎಲ್ಲಾ ೪ ಓವರ್ ಎಸೆಯಲು ಅವಕಾಶ ಒಂದು ಪಂದ್ಯದಲ್ಲೂ ನೀಡಲಿಲ್ಲ. ಉಳಿದೆಲ್ಲಾ ತಂಡಗಳು ಯುವ ಆಟಗಾರರಿಗೆ ಅವಕಾಶ ನೀಡುತ್ತಿರುವಾಗ, ಬೆಂಗಳೂರು ತಂಡ ಅಪ್ಪಣ್ಣನಿಗೆ ಅವಕಾಶ ನೀಡಲೇ ಇಲ್ಲ. ಆಡಿದ ೨ ಪಂದ್ಯಗಳಲ್ಲಿ ಭರವಸೆಯ ಆಟಗಾರ ಭರತ್ ಚಿಪ್ಲಿ ನಿರಾಸೆ ಮಾಡಿದರು. ಮಿಸ್ಬಾ ಉಲ್ ಹಕ್ ೩ ಪಂದ್ಯಗಳಿಗೆ ಲಭ್ಯವಿದ್ದರೂ ಅವರನ್ನು ಆಡಿಸಲೇ ಇಲ್ಲ! ಅವರ ಬದಲಿಗೆ ಆಸಕ್ತಿ ಇಲ್ಲದಂತೆ ಆಡುತ್ತಿದ್ದ ಕ್ಯಾಲ್ಲಿಸ್-ಗೆ ಮಣೆ. ಮಾರ್ಕ್ ಬೌಚರ್ ಮುಂಬೈ ವಿರುದ್ಧ ಪಂದ್ಯದಲ್ಲಿ ಆಡಿದ್ದು ಬಿಟ್ಟರೆ ನಂತರ ಎಲ್ಲಾ ಮೌನ.

ಬೌಲಿಂಗ್ ಪಡೆ ಚೆನ್ನಾಗಿದೆ. ಬ್ಯಾಟಿಂಗ್ ಪಡೆಯೂ ಚೆನ್ನಾಗಿದೆ. ಹಾಗಿದ್ದರೆ ಪ್ರಾಬ್ಲೆಮ್ ಎಲ್ಲಿ?

ಪ್ರಾಬ್ಲೆಮ್ ಇರುವುದು ಅಂತಿಮ ಹನ್ನೊಂದರ ಆಯ್ಕೆಯಲ್ಲಿ. ಜಾಫರ್-ರನ್ನು ಆಡಿಸಿದ್ದೇ ’ಜೋಕ್ ಆಫ್ ದಿ ಐಪಿಎಲ್’. ಕುಂಬ್ಳೆಯನ್ನು ಆಡಿಸಲೇಬಾರದು. ಕಟ್ಟುಪಾಡಿಗೆ ಬಿದ್ದು ಕುಂಬ್ಳೆಯನ್ನು ಆಡಿಸಿ ಹೈದರಾಬಾದ್ ವಿರುದ್ಧದ ಪಂದ್ಯ ಕೈಜಾರುತ್ತೇನೋ ಎಂಬಂತಾಗಿತ್ತು. ಇದೇ ಕುಂಬ್ಳೆ ಮೊಹಾಲಿ ತಂಡದ ವಿರುದ್ಧ ಕೆಟ್ಟದಾಗಿ ಬೌಲಿಂಗ್ ಮಾಡಿ ಗೆಲುವಿಗೆ ಇದ್ದ ಸಣ್ಣ ಅವಕಾಶವನ್ನೂ ತಂಡ ಕಳೆದುಕೊಂಡಿತು. ಕ್ಯಾಲ್ಲಿಸ್ ಆಡಿದ್ದು ಸಾಕೆನಿಸುತ್ತದೆ. ಮಿಸ್ಬಾ ಉಲ್ ಹಕ್ ಲಭ್ಯರಾದೊಡನೇ ಕ್ಯಾಲ್ಲಿಸ್ ಜಾಗದಲ್ಲಿ ಮಿಸ್ಬಾರನ್ನು ಆಡಿಸಬೇಕಿತ್ತು. ಬೌಚರ್ ಕೂಡ ಇನ್ನು ತಂಡದಿಂದ ಹೊರಗಿದ್ದರೇ ಚೆನ್ನ. ದೇವರಾಜ್ ಪಾಟೀಲ್ ಚೆನ್ನಾಗಿ ವಿಕೆಟ್ ಕೀಪ್ ಮಾಡುತ್ತಾರೆ ಮತ್ತು ಅಷ್ಟಿಷ್ಟು ಆಡುತ್ತಾರೆ ಕೂಡಾ. ಇನ್ನು ವಿನಯ್ ಕುಮಾರ್ ತುಂಬಾನೇ ನಿರಾಸೆ ಮಾಡಿದರು. ರಣಜಿ ಪಂದ್ಯಗಳಲ್ಲಿ ಕರ್ನಾಟಕದ ಪ್ರಮುಖ ಬೌಲರ್ ಆಗಿರುವ ವಿನಯ್, ಸ್ವಲ್ಪವೂ ತಲೆ ಖರ್ಚು ಮಾಡದೇ ಎರ್ರಾಬಿರ್ರಿ ಬೌಲಿಂಗ್ ಮಾಡಿದರು.

ಎಲ್ಲಾ ತಂಡಗಳಲ್ಲಿಯೂ ಬೌಲಿಂಗ್ ಮಾಡುವಾಗ ನಾಯಕನಿಗೆ ಆರೇಳು ಬೌಲರ್-ಗಳ ಆಯ್ಕೆಯಿರುವಂತೆ ತಂಡವನ್ನು ರಚಿಸಲಾಗಿದೆ. ಆದರೆ ಬೆಂಗಳೂರು ತಂಡದಲ್ಲಿ ತಿಪ್ಪರಲಾಗ ಹಾಕಿದರೂ ಐದಕ್ಕಿಂತ ಹೆಚ್ಚು ಬೌಲರ್-ಗಳು ಸಿಗಲಾರರು. ಇದೇ ಕಾರಣಕ್ಕಾಗಿ ಕ್ಯಾಲ್ಲಿಸ್-ನನ್ನು ಎಲ್ಲಾ ಪಂದ್ಯಗಳಲ್ಲೂ ಆಡಿಸಬೇಕಾಯಿತು. ಆಟಾಗಾರರನ್ನು ಖರೀದಿಸುವಾಗ ಸ್ವಲ್ಪವಾದರೂ ವಿವೇಚನೆ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ.

ಇದ್ದುದರಲ್ಲಿ ಪ್ರವೀಣ್ ಕುಮಾರ್, ರಾಸ್ ಟೇಲರ್, ಬಾಲಚಂದ್ರ ಅಖಿಲ್, ಡೇಲ್ ಸ್ಟೇಯ್ನ್ ಮತ್ತು ವಿರಾಟ್ ಕೊಹ್ಲಿ ಸ್ವಲ್ಪ ಮಾರ್ಯಾದೆ ಉಳಿಸಿದರು ಎನ್ನಬಹುದು.

ಅರುಣ್ ಕುಮಾರ್, ಚಂದರ್ ಪಾಲ್, ಕ್ಯಾಮರೊನ್ ವೈಟ್, ವಿರಾಟ್ ಕೊಹ್ಲಿ, ಮಿಸ್ಬಾ ಉಲ್ ಹಕ್, ರಾಹುಲ್ ದ್ರಾವಿಡ್, ದೇವರಾಜ್ ಪಾಟೀಲ್, ಬಾಲಚಂದ್ರ ಅಖಿಲ್, ಪ್ರವೀಣ್ ಕುಮಾರ್, ಝಹೀರ್ ಖಾನ್, ಡೇಲ್ ಸ್ಟೇಯ್ನ್ - ಈಗ ಸದ್ಯಕ್ಕೆ ಈ ಹನ್ನೊಂದು ಮಂದಿಯ ತಂಡ ಸರಿ ಎಂದೆನಿಸುತ್ತಿದೆ.

ಇದೇ ರೀತಿ ಆಡಿದರೆ ವಿಜಯ್ ಮಲ್ಯ ಖರೀದಿಸಿದ ಎಲ್ಲಾ ಆಟಗಾರರನ್ನು ಮುಂದಿನ ವರ್ಷ ಮಾರಾಟಕ್ಕೆ ಇಟ್ಟುಬಿಟ್ಟು, ರಾಹುಲ್-ನನ್ನು ’ಐಕಾನ್’ ಪಟ್ಟದಿಂದ ಕೆಳಗಿಳಿಸಿ (ಹೈದರಾಬಾದ್ ತಂಡದ ಮಾಲೀಕರಾದ ಡೆಕ್ಕನ್ ಕ್ರೋನಿಕಲ್ ಸಂಸ್ಥೆ ಲಕ್ಷ್ಮಣ್-ನೊಂದಿಗೆ ಮಾಡಿದಂತೆ), ತಂಡದ ಆಯ್ಕೆಯಲ್ಲಿ ತಾನೇ ಸಕ್ರಿಯವಾಗಿ ಪಾಲ್ಗೊಳ್ಳಬಹುದು. ಈ ಸಲ, ತಂಡದ ಆಯ್ಕೆಯನ್ನು ಸಂಪೂರ್ಣವಾಗಿ ರಾಹುಲ್ ಮತ್ತು ಚಾರುಗೆ ವಹಿಸಿಕೊಟ್ಟು, ತನ್ನ ’ರಾಯಲ್ ಚಾಲೆಂಜರ್ಸ್’ ಬ್ರಾಂಡ್ ಅನ್ನು ಪ್ರಮೋಟ್ ಮಾಡುವುದರಲ್ಲೇ ಮಲ್ಯ ಆಸಕ್ತಿ ವಹಿಸಿದ್ದರು. ಅತ್ತ ಫಾರ್ಮುಲಾ ಒನ್ ನಲ್ಲಿ ತನ್ನ ಫೋರ್ಸ್ ಇಂಡಿಯಾ ತಂಡವನ್ನು ಹುರಿದುಂಬಿಸುತ್ತಾ ಸ್ಪೇನ್-ನಲ್ಲಿ ಇದ್ದ ಮಲ್ಯ ೩ ದಿನಗಳ ನಂತರ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಮೊಹಾಲಿ ತಂಡಕ್ಕೆ ಹೀನಾಯವಾಗಿ ಸೋಲುವುದನ್ನು ಕಾಣಲು ಬೆಂಗಳೂರಿಗೆ ಬಂದಿದ್ದ. ತನ್ನ ವ್ಯವಹಾರದಲ್ಲಿ ’ಸೋಲು’ ಎಂಬ ಶಬ್ದ ಇರದಂತೆ ವ್ಯವಹರಿಸುವ ಮಲ್ಯ ಸಹಜವಾಗಿಯೇ ಸಿಟ್ಟಿಗೆದ್ದಿರಬೇಕು. ಈ ಸಿಟ್ಟು ತನ್ನ ಮೊದಲ ಬಲಿಯನ್ನು ಚಾರು ಶರ್ಮನ ರೂಪದಲ್ಲಿ ಪಡೆದಿದೆ. ಆದರೆ ಚಾರು ಶರ್ಮನ ಜಾಗಕ್ಕೆ ಬಂದವರು ಬೃಜೇಶ್ ಪಟೇಲ್ ಎನ್ನುವುದು ಮತ್ತೊಂದು ಜೋಕು.

ಪಾಪ ಕಟ್ರಿನಾ ಕೈಫ್ ಮುಖ ಸಪ್ಪಗೆ ಮಾಡಿ ಕುಳಿತಿರುವುದು ನೋಡಿಯೇ ಬೇಜಾರಾಗತೊಡಗಿದೆ. ಸುಂದರ ನಗು ಇರುವ ಈ ಚೆಲುವೆಯ ನಗುವನ್ನು ನೋಡುವ ಅವಕಾಶ ನಮಗೆ ಇನ್ನಷ್ಟು ಸಿಗಲಿ. ರಾಯಲ್ ಚಾಲೆಂಜರ್ಸ್ ಇನ್ನು ಮುಂದಿನ ೭ ಪಂದ್ಯಗಳಿಗಾದರೂ ತನ್ನ ಅಂತಿಮ ಹನ್ನೊಂದರ ಆಯ್ಕೆ ಸರಿಯಾಗಿ ಮಾಡಿ ಉತ್ತಮ ಪ್ರದರ್ಶನ ನೀಡಿ ನಗೆಪಾಟಲಾಗಿರುವ ತನ್ನ ಘನತೆಯನ್ನು ಸ್ವಲ್ಪವಾದರೂ ಮರಳಿ ಪಡೆಯಲಿ.

~.~
  • rajeshnaik111 ರವರ ಬ್ಲಾಗ್
  • Login or register to post comments
  • 621 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 7, 2008 - 1:58pm — vinayudupa

ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು...

vinayudupa's picture

ನಮಸ್ಕಾರ ರಾಜೇಶ್ ಅವರಿಗೆ,

ಸುಮಾರು ದಿನ ಆದ್ಮೇಲೆ ಕ್ರಿಕೆಟ್ ಬಗೆಗೆ ಬರೀತಾ ಇದ್ದೀರಿ.

ಯಾವಾಗ ತಂಡದಲ್ಲಿ ದ್ರಾವಿಡ್, ಕಾಲ್ಲಿಸ್, ಜಾಫರ್, ಚಂದ್ರಪಾಲ್ ಇದಾರೆ ಅಂತ ಗೊತ್ತಯ್ತೋ ಆಗ್ಲೇ ಆಸೆ ಬಿಟ್ಟು ಬಿಟ್ಟೆ. ಆದರೂ ನಮ್ಮ ಬೆಂಗಳೂರಿನ ಹೆಸರದ್ರೂ ಇದೆಯಲ್ಲ ಅಂತ ಹೈದರಾಬಾದ್ ವಿರುದ್ದದ ಪಂದ್ಯ ನೋಡೋಕೆ ಹೋಗಿದ್ದೆ. Smiling

ಅರುಣ್ ಕುಮಾರ್ ಒಂದು ಕಾಲದಲ್ಲಿ ಚೆನ್ನಾಗಿ ಆಡ್ತಿದ್ದ್ರು. ಈಗ್ಲೂ ಅಂತಹ ಫಾರ್ಮ್ ಇದೆಯ? ದ್ರಾವಿಡ್ ಕೀಪಿಂಗ್ ಮಾಡೋ ಹಾಗಿದ್ರೆ ಚೆನ್ನಾಗಿತ್ತು ಅನ್ನಿಸ್ತು. ಅಬ್ದುರ್ ರಜಾಕ್ ಒಳ್ಳೆ ಸ್ಪಿನ್ನರ್. ಅವರನ್ನೇ ಆಡಿಸಬಹುದು.

>>"ಅರುಣ್ ಕುಮಾರ್, ಚಂದರ್ ಪಾಲ್, ಕ್ಯಾಮರೊನ್ ವೈಟ್, ವಿರಾಟ್ ಕೊಹ್ಲಿ, ಮಿಸ್ಬಾ ಉಲ್ ಹಕ್, ರಾಹುಲ್ ದ್ರಾವಿಡ್, ದೇವರಾಜ್ ಪಾಟೀಲ್, ಬಾಲಚಂದ್ರ ಅಖಿಲ್, ಪ್ರವೀಣ್ ಕುಮಾರ್, ಝಹೀರ್ ಖಾನ್, ಡೇಲ್ ಸ್ಟೇಯ್ನ್"

೧೧ ಜನ ಆಟಗಾರರ ಪಟ್ಟೀಲಿ ಅಖಿಲ, ವೈಟ್ ಸೇರಿ ೫ ಜನ ಬೌಲರ್ ಗಳು. ಅಷ್ಟೊಂದು ನಂಬಿಕೆ ಇದೆಯಾ? Smiling

>>"ಆದರೆ ಚಾರು ಶರ್ಮನ ಜಾಗಕ್ಕೆ ಬಂದವರು ಬೃಜೇಶ್ ಪಟೇಲ್ ಎನ್ನುವುದು ಮತ್ತೊಂದು ಜೋಕು"

ದೇವರೇ ಕಾಪಾಡಬೇಕು. ಬರೀ ಚಾಲೆಂಜ್ ಮಾಡ್ಕೊಂದೆ ಇರ್ತಾರೆ, ಗೆಲ್ಲೋದಿಲ್ಲ ಅಂತ ಕಾಣುತ್ತೆ.

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 7, 2008 - 3:16pm — rajeshnaik111

ಉ: ರಾಯಲ್ ಚಾಲೆಂಜರ್ಸ್, ಬೆಂಗಳೂರು...

rajeshnaik111's picture

ವಿನಯ್,

ಹೌದಲ್ವೇ! ಅಬ್ದುರ್ ರಝಾಕ್ ಬಗ್ಗೆ ಮರೆತೇ ಬಿಟ್ಟಿದ್ದೆ. ಯಾರ ಜಾಗದಲ್ಲಿ ಅವರನ್ನು ಆಡಿಸುವುದು? ಬೇರೆ ದೇಶದ ನಾಲ್ಕೇ ಆಟಗಾರರು ತಂಡದಲ್ಲಿ ಇರಬಹುದು. ಆ ಲಿಸ್ಟಿನಲ್ಲಿ ಚಂದರ್ ಪಾಲ್ ಹೆಸರು ತೆಗೆದು ರಝಾಕ್ ಹೆಸರು ಬರೆಯಬಹುದು ಎಂದೆನಿಸುತ್ತದೆ. ನೀವಂದಂತೆ ದ್ರಾವಿಡ್ ಕೀಪ್ ಮಾಡಿದರೆ ಮತ್ತೊಂದು ಹೆಚ್ಚುವರಿ ಬ್ಯಾಟ್ಸ್-ಮನ್ ಆಡಬಹುದು. ಒಟ್ಟಾರೆ ತಮಾಷೆಯಾಗಿದೆ. ಹಾಗೆ ನೋಡಿದರೆ ಕೇವಲ ಜೈಪುರ ತಂಡ ಮಾತ್ರ ’ಟೀಮ್ ಡೈನಾಮಿಕ್ಸ್’ ನ್ನು ಸರಿಯಾಗಿ ಅರ್ಥ ಮಾಡಿಕೊಂಡು ತಂಡವನ್ನು ರಚಿಸಿದೆ ಎನ್ನಬಹುದು. ಉಳಿದವರೆಲ್ಲಾ ಎಡವಿದ್ದಾರೆ. ಮೊದಲ ಹರಾಜಾದ ಕಾರಣ ಹೀಗಾಗಿರಬಹುದು. ತಂಡದ ಸಮತೋಲನ ಕಾಪಾಡುವಲ್ಲಿ ಯಾರೂ ಮುತುವರ್ಜಿ ವಹಿಸಿಲ್ಲ. ಒಂದೇ ಬ್ಯಾಟ್ಸ್-ಮನ್ ಗಳು ತುಂಬಿದ್ದಾರೆ. ಇಲ್ಲವೇ ಬೌಲರ್ ಗಳು. ಮುಂದಿನ ವರ್ಷ ಖರೀದಿ ಪ್ರಕ್ರಿಯೆ ನಡೆಯಬೇಕಾದರೆ ಎಲ್ಲರೂ ಹುಷಾರಾಗಿರುತ್ತಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ
  • ಕರ್ನಾಟಕ ಕ್ರಿಕೆಟ್ - ೨
  • ಕರ್ನಾಟಕ ಕ್ರಿಕೆಟ್ - ೮
  • ಕರ್ನಾಟಕ ಕ್ರಿಕೆಟ್ - ೪
  • ಕರ್ನಾಟಕ ಕ್ರಿಕೆಟ್ - ೭
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 51 ಅತಿಥಿಗಳು ಆನ್ಲೈನ್ ಇರುವರು.


ನದಿ, ಪರ್ವತ, ನೀರು ಹೀಗೆ ಯಾವುದು ನೋಡಲು ಸಿಕ್ಕರೂ (ನಿಸರ್ಗ) ಅದು ಹರಿದರ್ಶನವೆಂದೇ ತಿಳಿಯಬೇಕು

— ಭಾಗವತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator