ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › rajeshnaik111 ರವರ ಬ್ಲಾಗ್

ಕರ್ನಾಟಕ ಕ್ರಿಕೆಟ್ - ೯

December 9, 2007 - 9:33pm — rajeshnaik111

ಮುಲೆವಾ ಧಾರ್ಮಿಚಂದ್: ರಾಜಸ್ಥಾನದಿಂದ ವಲಸೆ ಬಂದು ಬೆಂಗಳೂರಿನಲ್ಲಿ ಬದುಕು ಕಂಡುಕೊಂಡ ಎರಡನೇ ತಲೆಮಾರಿನ ಹುಡುಗ ಧಾರ್ಮಿಚಂದ್. ೧೫ನೇ ವಯಸ್ಸಿನಲ್ಲೇ ಅಂಡರ್-೧೯ ಭಾರತ ತಂಡವನ್ನು ಪ್ರತಿನಿಧಿಸಿ ಎದುರಾಳಿ ತಂಡಗಳನ್ನು ತನ್ನ ಮಾಂತ್ರಿಕ ಆಫ್ ಸ್ಪಿನ್ ದಾಳಿಯಲ್ಲಿ ನುಚ್ಚುನೂರು ಮಾಡಿದವರು ಧಾರ್ಮಿಚಂದ್. ಕರ್ನಾಟಕದ ಪರವಾಗಿ ಎಲ್ಲಾ ವಯೋಮಿತಿಯ ತಂಡಗಳಲ್ಲಿ ಆಡಿದ ಧಾರ್ಮಿಚಂದ್ ಭರ್ಜರಿ ಯಶಸ್ಸು ಕಂಡರು. ಯಾವುದೇ ತರಹದ ಪಿಚ್ ಇರಲಿ, ಅವುಗಳ ಮೇಲೆ ಧಾರ್ಮಿಚಂದ್ ಪಡೆಯುತ್ತಿದ್ದ ಸ್ಪಿನ್ ಕಂಡು ಈರಪ್ಪಳ್ಳಿ ಪ್ರಸನ್ನ ನಿಬ್ಬೆರಗಾಗಿದ್ದರು. ಈ ಹುಡುಗನಿಗೆ ಸರಿಯಾದ ಮಾರ್ಗದರ್ಶನ ಸಿಕ್ಕರೆ ಉಜ್ವಲ ಭವಿಷ್ಯವಿದೆ ಎಂದು ಈರಪ್ಪಳ್ಳಿ ಪ್ರಸನ್ನ ೧೯೯೯ನೇ ಇಸವಿಯಲ್ಲಿ ನುಡಿದಿದ್ದರು. ಅಲ್ಲೇ ಆದದ್ದು ಎಡವಟ್ಟು. ಸರಿಯಾದ ಮಾರ್ಗದರ್ಶನವೆಂಬುವುದು ಧಾರ್ಮಿಚಂದ್-ಗೆ ಮರೀಚಿಕೆಯಾಗಿಯೇ ಉಳಿಯಿತು.

೨೦೦೦-೦೧ ಋತುವಿನಲ್ಲಿ ೧೬ನೇ ವಯಸ್ಸಿನಲ್ಲೇ ಕರ್ನಾಟಕದ ಪರವಾಗಿ ತನ್ನ ಚೊಚ್ಚಲ ಪಂದ್ಯವನ್ನಾಡಿದ ಧಾರ್ಮಿ, ಯಶಸ್ಸು ಕಾಣಲಿಲ್ಲ. ೨೦೦೦-೦೧ ಮತು ೨೦೦೧-೦೨ ಋತುಗಳಲ್ಲಿ ಕೇವಲ ೫ ಪಂದ್ಯಗಳಲ್ಲಿ ಧಾರ್ಮಿಯನ್ನು ಆಡಿಸಲಾಯಿತು. ಈ ೫ ಪಂದ್ಯಗಳಲ್ಲಿ ಒಟ್ಟಾರೆ ೭೦ರಷ್ಟು ಓವರ್-ಗಳನ್ನು ಮಾತ್ರ ಎಸೆದು ಕೇವಲ ೨ ವಿಕೆಟ್ ಗಳಿಸಿದ ಸಾಧನೆ ಯುವ ಆಟಗಾರ ಧಾರ್ಮಿಚಂದ್ ಅವರದ್ದು. ಈ ವೈಫಲ್ಯದಿಂದ ಎದೆಗುಂದಿದ ಧಾರ್ಮಿಗೆ ಸರಿಯಾದ ಮಾರ್ಗದರ್ಶನ ಎಲ್ಲೂ ದೊರೆಯಲಿಲ್ಲ.

ನಂತರ ತಂಡದಿಂದ ಹೊರಬಿದ್ದ ಧಾರ್ಮಿ ಮತ್ತೆ ಆಯ್ಕೆಯಾಗಲಿಲ್ಲ. ಕರ್ನಾಟಕ ಕಿರಿಯರ ತಂಡಗಳಲ್ಲಿ ಆಡಿ ವಿಕೆಟ್-ಗಳನ್ನು ಸೂರೆಗೊಳ್ಳುವುದನ್ನು ಮುಂದುವರೆಸಿದರು. ಅಯ್ಕೆಗಾರರು ಎರಡನೇ ಅವಕಾಶವನ್ನು ಮಾತ್ರ ನೀಡಲಿಲ್ಲ. ನಿಧಾನವಾಗಿ ಕಿರಿಯರ ತಂಡದಿಂದಲೂ ಧಾರ್ಮಿಚಂದ್ ಅವರನ್ನು ದೂರವಿಡಲಾಯಿತು. ಇಲ್ಲೇನಾಯಿತು ಎಂದು ನನಗೆ ತಿಳಿಯದು. ಆದರೆ ಕ್ರಿಕೆಟ್ ವಲಯದಲ್ಲಿರವ ಗೆಳೆಯರ ಪ್ರಕಾರ, ಧಾರ್ಮಿಚಂದ್-ಗಿಂತ ಕಡಿಮೆ ಅರ್ಹತೆಯಿರುವ ಕೆಲವು ಆಟಗಾರರಿಗೆ ಶಿಫಾರಸಿನ ಮೂಲಕ ಕರ್ನಾಟಕ ಕಿರಿಯರ ತಂಡಕ್ಕೆ ಆಯ್ಕೆ ಮಾಡಲಾಯಿತು. ಧಾರ್ಮಿಯನ್ನು ಹೊರಗಿಡಲಾಯಿತು. ರಣಜಿ ತಂಡಕ್ಕೆ ಆಡುವ ಅವಕಾಶ ಸಿಕ್ಕಿದಾಗ ವೈಫಲ್ಯ ಕಂಡು ಮತ್ತೆ ಆಯ್ಕೆಯಾಗುವ ತವಕದಲ್ಲಿದ್ದ ಧಾರ್ಮಿಗೆ ಕಿರಿಯರ ತಂಡದಿಂದ ಕೈಬಿಟ್ಟದ್ದು ಎಷ್ಟು ದೊಡ್ಡ 'ಶಾಕ್' ಕೊಟ್ಟಿತೆಂದರೆ, ಅವರು ಕ್ರಿಕೆಟ್ ಆಡುವುದನ್ನೇ ಬಿಟ್ಟುಬಿಟ್ಟರು!

ಯೆರೆ ಗೌಡ ಕೂಡಾ ಇಂತಹದೇ ಸನ್ನಿವೇಶ ಎದುರಾದಾಗ, ಎದೆಗುಂದದೆ ಕರ್ನಾಟಕಕ್ಕೆ ನಮಸ್ಕಾರ ಹೇಳಿ ರೈಲ್ವೇಸ್ ಪರವಾಗಿ ಆಡುವ ನಿರ್ಧಾರ ಮಾಡಿ ಯಶಸ್ಸನ್ನು ಕಂಡರು. ಆದರೆ ಧಾರ್ಮಿ ನೊಂದು ಕ್ರಿಕೆಟ್ ಬಿಟ್ಟೇಬಿಟ್ಟರು. ಆಯ್ಕೆ ಪ್ರಕ್ರಿಯೆಯಲ್ಲಿ ಮನೆ ಮಾಡಿರುವ ರಾಜಕೀಯ, ಶಿಫಾರಸು ಹೀಗೆ ಇನ್ನೆಷ್ಟು ಪ್ರತಿಭೆಗಳನ್ನು ನಾಶ ಮಾಡಿದೆಯೋ ಲೆಕ್ಕವಿಲ್ಲ. ಮನನೊಂದ ಧಾರ್ಮಿ, ನಂತರ ಸಿಂಗಾಪುರ್ ಕ್ರಿಕೆಟ್ ಸಂಸ್ಥೆ ತನ್ನ ದೇಶದಲ್ಲಿ ಕ್ರಿಕೆಟ್ ಆಟವನ್ನು ಅಭಿವೃದ್ಧಿಪಡಿಸಲು ಕೋಚ್/ಪ್ಲೇಯರ್ ಗಳನ್ನು ಹುಡುಕುತ್ತಿರುವಾಗ, ಸಂದರ್ಶನಕ್ಕೆ ಹಾಜರಾಗಿ ಆಯ್ಕೆಯಾದರು. ಹೀಗೆ ಆಯ್ಕೆಯಾದ ಧಾರ್ಮಿಚಂದ್ ಅವರನ್ನು ಸಿಂಗಾಪುರ ಕ್ರಿಕೆಟ್ ಸಾಂಸ್ಥೆ ಕೋಚಿಂಗ್-ನಲ್ಲಿ ಹೆಚ್ಚಿನ ತರಬೇತಿಗಾಗಿ ಆಸ್ಟ್ರೇಲಿಯಾಗೆ ಕಳಿಸಿತು. ತನ್ನ ೨೦ನೇ ವಯಸ್ಸಿನಲ್ಲೇ ಧಾರ್ಮಿಚಂದ್, ಸಿಂಗಾಪುರ ಕ್ರಿಕೆಟ್ ತಂಡದ ಕೋಚ್! ಹಣ ಮತ್ತು ಹೆಸರು ಎರಡೂ ಸಿಕ್ಕವು ಧಾರ್ಮಿಚಂದ್-ಗೆ, ಆದರೆ ಕರ್ನಾಟಕಕ್ಕೆ ಕೇವಲ ನಷ್ಟ ಮಾತ್ರ.

~.~
  • rajeshnaik111 ರವರ ಬ್ಲಾಗ್
  • Login or register to post comments
  • 771 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕರ್ನಾಟಕ ಕ್ರಿಕೆಟ್ - ೭
  • ಕರ್ನಾಟಕ ಕ್ರಿಕೆಟ್ - ೨
  • ಇಪ್ಪತ್ - ಇಪ್ಪತ್ ನಲ್ಲಿ ಕರ್ನಾಟಕ
  • ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ
  • ಕರ್ನಾಟಕ ಕ್ರಿಕೆಟ್ - ೮
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 585 ಅತಿಥಿಗಳು ಆನ್ಲೈನ್ ಇರುವರು.


ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator