ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › rajeshnaik111 ರವರ ಬ್ಲಾಗ್

೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ

November 11, 2007 - 11:36pm — rajeshnaik111

೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅದೇ ದೊಡ್ಡ ಸಾಧನೆ.

ಕಳೆದ ಋತುವಿನಲ್ಲಿ ಕರ್ನಾಟಕದ ಉತ್ತಮ ಪ್ರದರ್ಶನಕ್ಕೆ ಕಾರಣ ರಾಬಿನ್ ಉತ್ತಪ್ಪ. ಪ್ರಮುಖ ಪಂದ್ಯಗಳಲ್ಲಿ ರಾಬಿನ್ ನೀಡಿದ ಉತ್ತಮ ಆರಂಭದಿಂದ ಕರ್ನಾಟಕ ಉತ್ತಮ ಮೊತ್ತಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು. ಆದ್ದರಿಂದ ಬೌಲರ್ ಗಳಿಗೂ ಉತ್ತಮ ಮೊತ್ತದ ಬೆಂಬಲವಿದ್ದರಿಂದ ಎದುರಾಳಿ ತಂಡಗಳನ್ನು ಕಬಳಿಸುವಲ್ಲಿ ಕರ್ನಾಟಕ ಸಾಕಷ್ಟು ಯಶಸ್ವಿಯಾಗಿತ್ತು.

ಅದೇನು ಯೇಸು ಕ್ರಿಸ್ತನ ಮಾಯೆಯೋ, ಆ ರೋಲಂಡ್ ಬ್ಯಾರಿಂಗ್ಟನ್ ಮತ್ತೆ ತಂಡದಲ್ಲಿ ಸ್ಥಾನ ಪಡೆದದ್ದು ಮಹಾದಾಶ್ಚರ್ಯ! ಕಳೆದೆರಡು ಋತುವಿನಲ್ಲಿ ಕಳಪೆ ಪ್ರದರ್ಶನ ನೀಡಿದರೂ ಬ್ಯಾರಿಂಗ್ಟನ್ ಮತ್ತೆ ತನ್ನ ಸ್ಥಾನ ಕಾಯ್ದುಕೊಂಡಿದ್ದಾರೆ. ರೋಲಂಡ್ ಬ್ಯಾರಿಂಗ್ಟನ್ ಒಬ್ಬ ಕಲಾತ್ಮಕ ಆರಂಭಿಕ ಆಟಗಾರ. ತನ್ನಲ್ಲಿರುವ ಪ್ರತಿಭೆಗೆ ತಕ್ಕಂತೆ ಆಡಿದರೆ ಈತನನ್ನು ಔಟ್ ಮಾಡಲು ಎದುರಾಳಿ ಬೌಲರ್ ಗಳು ಹೆಣಗಾಡಬೇಕಾಗುತ್ತದೆ. ಆದರೆ ಕಳೆದೆರಡು ಋತುಗಳಿಂದ ಕ್ರಿಕೆಟ್ ಬಗ್ಗೆ ಮಾತನಾಡುವುದು ಮತ್ತು ಯೋಚಿಸುವುದನ್ನು ಬಿಟ್ಟು ತನ್ನ ಧರ್ಮದ ಬಗ್ಗೆ ಅತಿಯಾಗಿ ಮಾತನಾಡುವುದು ಮತ್ತು ಯೋಚಿಸುವುದನ್ನು ಮಾಡುತ್ತಿರುವುದರಿಂದ ಬ್ಯಾರಿಂಗ್ಟನ್ ಆಟದ ಮೇಲೆ ಗಮನ ಕಳೆದುಕೊಳ್ಳುತ್ತಿದ್ದಾರೆ. ಬ್ಯಾರಿಂಗ್ಟನ್ ಈಗ ಸೀನಿಯರ್ ಆಟಗಾರ. ಅದರಂತೆಯೇ ಅವರು ನಡೆದುಕೊಳ್ಳುವುದೂ ಲೇಸು. ಈ ಋತುವಿನಲ್ಲಾದರೂ ರೋಲಂಡ್, ಕರ್ನಾಟಕಕ್ಕೆ ಒಂದೆರಡಾದರೂ ಉತ್ತಮ ಆರಂಭವನ್ನು ದೊರಕಿಸಿಕೊಡಲಿ. ಆಮೆನ್.

ಸಿಕ್ಕಿದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಿದ್ದ ಭರತ್ ಚಿಪ್ಲಿ ತಂಡದಲ್ಲಿಲ್ಲ! ಆಕರ್ಷಕ ಆಟಗಾರ ಭರತ್, ಕಳೆದ ರಣಜಿ ಋತು ಮತ್ತು ಹಾಲಿ ಕೆ.ಎಸ್.ಸಿ.ಎ ಬೆಂಗಳೂರು ಲೀಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅವರ ಆಯ್ಕೆ ಆಗದಿರುವುದು ಕೆ.ಎಸ್.ಸಿ.ಎ ಯಲ್ಲಿ ಚುಕ್ಕಾಣಿ ಹಿಡಿಯುವವರು ಬದಲಾದರೂ, ಶಿಫಾರಸಿನ ಮತ್ತು ರಾಜಕೀಯದ ಹಳೇ ಚಾಳಿ ಬದಲಾಗಿಲ್ಲ ಎಂಬುದಕ್ಕೆ ನಿದರ್ಶನ. ಸಾಗರದವರಾದ ಭರತ್ ಚಿಪ್ಲಿ ಈ ಹಿನ್ನಡೆಯಿಂದ ಎದೆಗುಂದದೆ ಇನ್ನಷ್ಟು ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಮರಳಿ ಬರಲಿ.

ಆರಕ್ಕಿಂತ ಮೇಲೇರದ ಮತ್ತು ೩ಕ್ಕಿಂತ ಕೆಳಗಿಳಿಯದ ತಿಲಕ್ ನಾಯ್ಡುವಿಗೇ ಮತ್ತೆ ಮಣೆ ಹಾಕಲಾಗಿದೆ. ಈ ನಾಯ್ಡುಗಾರುಗೆ 'ಇನ್-ಫ್ಲುಯನ್ಸ್'ಗೇನೂ ಕಡಿಮೆ ಇಲ್ಲ. ಕಳೆದ ಋತುವಿನಲ್ಲಿ ದೇವರಾಜ್ ಪಾಟೀಲ್ ರೂಪದಲ್ಲಿ ಪ್ರತಿಸ್ಪರ್ಧಿಯೊಬ್ಬ ತಂಡದಲ್ಲಿದ್ದರಿಂದಲೇ ತಿಲಕ್, ತನ್ನ ರಣಜಿ ಜೀವನದ ಉತ್ತಮ ಋತುವನ್ನು ಆಡಿದ್ದರು. ಅದೇ ಕಾರಣದಿಂದ ಈಗ ತಂಡದಲ್ಲಿದ್ದಾರೆ. ಕಳೆದ ಋತುವಿನ ೨೦-೨೦ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಕರ್ನಾಟಕದ ವಿಕೆಟ್ ಕೀಪರ್ ಆಗಿ ಪಾಟೀಲ್ ಆಡಿದ್ದರು. ವಿಕೆಟ್ ಹಿಂದೆ ಉತ್ತಮ ನಿರ್ವಹಣೆ ತೋರಿದ್ದಲ್ಲದೇ, ಆರಂಭಿಕ ಆಟಗಾರನಾಗಿ ಬಿರುಸಿನ ಆರಂಭವನ್ನೂ ನೀಡಿ ಪಾಟೀಲ್ ಗಮನ ಸೆಳೆದಿದ್ದರು. ಕಳೆದ ಋತುವಿನಲ್ಲಿ ತಂಡದಲ್ಲಿದ್ದೂ ಒಂದೇ ಪಂದ್ಯವನ್ನಾಡದ ದೇವರಾಜ್ ಪಾಟೀಲ್-ಗೆ ಈ ಬಾರಿಯಾದರೂ ತಿಲಕ್ ನಾಯ್ಡು ಜಾಗದಲ್ಲಿ ಒಂದೆರಡು ಅವಕಾಶ ನೀಡಿದರೆ, ಕರ್ನಾಟಕಕ್ಕೆ ಒಬ್ಬ ಉತ್ತಮ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್-ಮನ್ ದೊರಕಿದಂತಾಗುವುದು.

ಕರ್ನಾಟಕಕ್ಕೆ ಮತ್ತೊಮ್ಮೆ ರಣಜಿ ಟ್ರೋಫಿ ಸಿಗುವವರಗೆ ತಾನು ನಿವೃತ್ತನಾಗುವುದಿಲ್ಲ ಎಂದು ಸುನಿಲ್ ಜೋಶಿ ಪಣತಟ್ಟಿರುವಂತೆ ತೋರುತ್ತಿದೆ. ಸ್ಪಿನ್ ವಿಭಾಗದಲ್ಲಿ ಅಪ್ಪಣ್ಣ, ಜೋಶಿಗೆ ಉತ್ತಮ ಜೊತೆ ನೀಡಬಲ್ಲರು. ಕೊಡಗಿನ ಪಾಲಿಬೆಟ್ಟದ ಸಮೀಪ ಕಾಲಹರಣ ಮಾಡುತ್ತಿದ್ದ ಅಪ್ಪಣ್ಣ, ಕಳೆದ ಋತುವಿನಲ್ಲಿ ರಣಜಿಗೆ ಪಾದಾರ್ಪಣ ಮಾಡಿ, ಭಾರತ ೧೯ ವರ್ಷದೊಳಗಿನವರ ತಂಡಕ್ಕೆ ಆಡುವಷ್ಟರ ಮಟ್ಟಕ್ಕೆ ಬೆಳೆದದ್ದು ಸೋಜಿಗದ ಕತೆ. ಇನ್ನು ದಾವಣಗೆರೆಯ ವಿನಯ್ ಕುಮಾರ್, ಕೊಡಗಿನ ಅಯ್ಯಪ್ಪ ಮತ್ತು ಮೈಸೂರಿನ ಧನಂಜಯ ವೇಗದ ಬೌಲರ್ ಗಳು.

ಕರ್ನಾಟಕದ ಬ್ಯಾಟಿಂಗ್ ರಘು ಮತ್ತು ಯೆರೆ ಗೌಡರನ್ನೇ ನೆಚ್ಚಿಕೊಂಡಿದೆ. ಇವರಿಬ್ಬರೊಂದಿಗೆ ಯುವ ಆಟಗಾರ ಪವನ್, ನಾಯ್ಡು ಮತ್ತು ಸವ್ಯಸಾಚಿ ಬಾಲಚಂದ್ರ ಅಖಿಲ್. ಕಳೆದ ಋತುವಿನಲ್ಲಿ ಬ್ಯಾಟಿಂಗ್-ನಲ್ಲಿ ಉತ್ತಪ್ಪ ಬಳಿಕ ಮಿಂಚಿದವರು ರಘು ಮತ್ತು ನಾಯಕ ಯೆರೆ ಗೌಡ. ಈ ಬಾರಿ ಇವರಿಬ್ಬರು ಚೆನ್ನಾಗಿ ಆಡಿದರೆ ಮಾತ್ರ ಕರ್ನಾಟಕಕ್ಕೆ ಉಳಿಗಾಲ. ಮುಂಬೈ ವಿರುದ್ಧ ಕಳೆದ ವಾರ ನಡೆದ ಪಂದ್ಯದಲ್ಲಿ ಕರ್ನಾಟಕವನ್ನು ಪಾರು ಮಾಡಿದ್ದೇ ರಾಹುಲ್ ದ್ರಾವಿಡ್. ರಾಹುಲ್ ದ್ವಿಶತಕ ಮತ್ತು ಪವನ್ ಜತೆ ಅವರ ಶತಕದ ಜೊತೆಯಾಟದಿಂದ ಕರ್ನಾಟಕ ಪಂದ್ಯವನ್ನು ೧೪೨ ರನ್ನುಗಳ ಹಿನ್ನಡೆಯಿದ್ದರೂ ಡ್ರಾ ಮಾಡಿಕೊಂಡು ಒಂದು ಅಂಕವನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ರಾಹುಲ್ ಇನ್ನು ಒಂದು ಪಂದ್ಯಕ್ಕೆ ಮಾತ್ರ ಲಭ್ಯವಿರುವರು. ತನ್ನ ಎರಡನೇ ರಣಜಿ ಪಂದ್ಯವನ್ನಾಡುತ್ತಿದ್ದ ಯುವ ಆಟಗಾರ ಪವನ್, ದ್ರಾವಿಡ್ ನಂತಹ ಮಹಾನ್ ಆಟಗಾರನ ಜೊತೆ ಶತಕದ ಜೊತೆಯಾಟದಲ್ಲಿ ಪಾಲ್ಗೊಂಡು, ಇನ್ನಿಂಗ್ಸ್ ಹೇಗೆ ಆಡಬೇಕು ಎಂಬ ಪಾಠ ಕಲಿಯಲು ಸಿಕ್ಕಿದ್ದು ಅವರ ಅದೃಷ್ಟ. ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ರಾಬಿನ್ ಉತ್ತಪ್ಪ ಆಯ್ಕೆಯಾಗಲಾರರು ಎಂದಾದರೆ ಕರ್ನಾಟಕದ ಎರಡನೇ ಪಂದ್ಯದ ನಂತರ ಅವರು ಲಭ್ಯವಿರಬಹುದು. ಮೊದಲೆರಡು ಪಂದ್ಯಗಳಿಗೆ ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಲಭ್ಯವಿರುವರು.

ಮತ್ತೊಂದು ಸಂತೋಷದ ಸುದ್ದಿಯೆಂದರೆ ಉದಿತ್ ಪಟೇಲ್ ಮತ್ತು ಸ್ಟುವರ್ಟ್ ಬಿನ್ನಿ ತಂಡದಲ್ಲಿಲ್ಲ. ಇಂಡಿಯನ್ ಕ್ರಿಕೆಟ್ ಲೀಗ್ ಸೇರಿದ್ದರಿಂದ ಬಿನ್ನಿ, ತಾನಾಗಿಯೇ ಆಯ್ಕೆಗೆ ತನ್ನನ್ನು ಅನರ್ಹಗೊಳಿಸಿಕೊಂಡರೆ (ಆಯ್ಕೆಯಾಗಲಾರೆನು ಎಂದು ತಿಳಿದ ಬಳಿಕ ಇಂಡಿಯನ್ ಕ್ರಿಕೆಟ್ ಲೀಗ್ ಸೇರಿರಬೇಕು!) ಉದಿತ್ ಆಯ್ಕೆಯಾಗಲಿಲ್ಲ (ದೇವರ ದಯೆ).

ಸುಧೀಂದ್ರ ಶಿಂದೆ ಮತ್ತೆ ಮರಳಿ ತಂಡಕ್ಕೆ ಬಂದಿದ್ದಾರೆ. ಇವರೊಬ್ಬ ಉತ್ತಮ ಆಟಗಾರ. ಈ ಬಾರಿಯಾದರೂ ಸಿಕ್ಕಿದ ಅವಕಾಶಗಳನ್ನು ಶಿಂದೆ ಸರಿಯಾಗಿ ಉಪಯೋಗಿಸಿಕೊಂಡು ತಂಡದಲ್ಲಿ ತನ್ನ ಸ್ಥಾನ ಭದ್ರಗೊಳಿಸಲಿ.

ತಂಡ: ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ಎನ್.ಸಿ.ಅಯ್ಯಪ್ಪ, ಸುನಿಲ್ ಜೋಶಿ, ಯೆರೆ ಗೌಡ, ಸಿ.ರಘು, ಬ್ಯಾರಿಂಗ್ಟನ್ ರೋಲಂಡ್, ಕೆ.ಬಿ.ಪವನ್, ಶ್ರೀನಿವಾಸ ಧನಂಜಯ, ಆರ್.ವಿನಯ್ ಕುಮಾರ್, ಸುಧೀಂದ್ರ ಶಿಂದೆ, ಬಾಲಚಂದ್ರ ಅಖಿಲ್, ಕೆ.ಪಿ.ಅಪ್ಪಣ್ಣ, ದೇವರಾಜ ಪಾಟೀಲ್, ತಿಲಕ್ ನಾಯ್ಡು ಮತ್ತು ರಾಬಿನ್ ಉತ್ತಪ್ಪ.

ಇತರೆಡೆ ಕಳೆದ ಋತುವಿನಲ್ಲಿ ಪ್ಲೇಟ್ ಲೀಗ್-ನಲ್ಲಿ ಅಸ್ಸಾಮ್ ತಂಡವನ್ನು ನಾಯಕನಾಗಿ ಪ್ರತಿನಿಧಿಸಿದ್ದ ಕರ್ನಾಟಕದ ಮಾಜಿ ಆರಂಭಿಕ ಆಟಗಾರ ಜಗದೀಶ್ ಅರುಣ್ ಕುಮಾರ್, ಈ ಋತುವಿನಲ್ಲಿ ಪ್ಲೇಟ್ ಲೀಗ್-ನಲ್ಲಿ ಗೋವಾದ ಪರವಾಗಿ ಆಡಲಿದ್ದಾರೆ. ಅರುಣ್ ಗೋವಾವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಮತ್ತು ಈ ಋತುವಿನ ಮೊದಲ ಪಂದ್ಯದಲ್ಲಿ ಅರುಣ್ ನಾಯಕತ್ವದಲ್ಲಿ ಗೋವಾ ತನ್ನ ಮೊದಲ ಪಂದ್ಯವನ್ನು ಹರ್ಯಾನಾ ವಿರುದ್ಧ ಗೆದ್ದಿದೆ. ೨೦೦೫-೦೬ ಋತುವಿನಲ್ಲಿ ರಾಜಸ್ಥಾನದ ಪರವಾಗಿ ೩ ಪಂದ್ಯಗಳನ್ನು ಆಡಿದ್ದ ಕರ್ನಾಟಕದ ಮತ್ತೋರ್ವ ಮಾಜಿ ಆರಂಭಿಕ ಆಟಗಾರ ಮಿಥುನ್ ಬೀರಾಲ ಈ ಋತುವಿನಲ್ಲಿ ಹರ್ಯಾನವನ್ನು ಪ್ರತಿನಿಧಿಸಲಿದ್ದಾರೆ.

ಅಂತೆಯೇ ಅರುಣ್ ಕುಮಾರ್ ತೆರವುಗೊಳಿಸಿದ ಅಸ್ಸಾಮ್ ತಂಡದ ನಾಯಕತ್ವವನ್ನು ತಮಿಳುನಾಡಿನ ಶ್ರೀಧರನ್ ಶರತ್ ವಹಿಸಿಕೊಂಡಿದ್ದಾರೆ. ಕಳೆದ ಋತುವಿನ ಅಂತ್ಯದಲ್ಲಿ ಪ್ರಥಮ ದರ್ಜೆ ಕ್ರಿಕೆಟ್-ನಿಂದ ನಿವೃತ್ತಿ ಘೋಷಿಸಿದ್ದ ಶರತ್, ಈಗ ನಿವೃತ್ತಿಯಿಂದ ಹೊರಬಂದು ಅಸ್ಸಾಮ್ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ಅವರೊಂದಿಗೆ ಮಾಜಿ ಭಾರತ ಮತ್ತು ತಮಿಳುನಾಡಿನ ಆರಂಭಿಕ ಆಟಗಾರ ಸದಗೋಪನ್ ರಮೇಶ್ ಕೂಡಾ ಅಸ್ಸಾಮ್ ಪರವಾಗಿ ಆಡುತ್ತಿದ್ದಾರೆ.

ಕರ್ನಾಟಕದ ಪಂದ್ಯಗಳು:
೧. ನವೆಂಬರ್ ೩ ರಿಂದ ೬ - ಮುಂಬೈ ವಿರುದ್ಧ ಮುಂಬೈನಲ್ಲಿ
೨. ನವೆಂಬರ್ ೧೫ ರಿಂದ ೧೮ - ಹಿಮಾಚಲ ಪ್ರದೇಶ ವಿರುದ್ಧ ಬೆಂಗಳೂರಿನಲ್ಲಿ
೩. ನವೆಂಬರ್ ೨೩ ರಿಂದ ೨೬ - ತಮಿಳುನಾಡು ವಿರುದ್ಧ ಚೆನ್ನೈನಲ್ಲಿ
೪. ಡಿಸೆಂಬರ್ ೧ ರಿಂದ ೪ - ರಾಜಸ್ಥಾನ ವಿರುದ್ಧ ಬೆಂಗಳೂರಿನಲ್ಲಿ
೫. ಡಿಸೆಂಬರ್ ೯ ರಿಂದ ೧೨ - ಸೌರಾಷ್ಟ್ರ ವಿರುದ್ಧ ಬೆಂಗಳೂರಿನಲ್ಲಿ
೬. ಡಿಸೆಂಬರ್ ೧೭ ರಿಂದ ೨೦ - ದೆಹಲಿ ವಿರುದ್ಧ ಬೆಂಗಳೂರಿನಲ್ಲಿ
೭. ಡಿಸೆಂಬರ್ ೨೫ ರಿಂದ ೨೮ - ಮಹಾರಾಷ್ಟ್ರ ವಿರುದ್ಧ ಪುಣೆ/ ಕೊಲ್ಲಾಪುರ/ ನಾಸಿಕ್ ನಲ್ಲಿ

~.~
  • rajeshnaik111 ರವರ ಬ್ಲಾಗ್
  • Login or register to post comments
  • 956 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 12, 2007 - 7:38am — ಶಿವ

ಉ: ೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ

ಶಿವ's picture

ರಣಜಿ ಪಂದ್ಯಗಳು ಶುರುವಾದವು.ಕಾಯುತಿದ್ದೆ ನಿಮ್ಮ ಬರವಣಿಗೆಗೆಗಾಗಿ.

ಪಟೇಲ್ ಮತ್ತು ಬಿನ್ನಿ ಇಲ್ಲದಿರುವುದು ಸಂತಸದ ವಿಷಯ..ಆದರೆ ವೇಗದ ಬೌಲಿಂಗ್ ಮಾಡುವವರಲ್ಲಿ ಯಾವುದೇ ಹೊಸ ಹೆಸರುಗಳಿಲ್ಲ..ಕಳೆದ ವರ್ಷ ವೆಂಕಿ ಕೋಚ್ ಆಗಿದ್ರು.ರಾಬಿನ್ ಪ್ರಕಾರ ವೆಂಕಿ ಕೊಡುಗೆ ತುಂಬ ಇತ್ತು..ಈ ವರ್ಷ ವಿಜಯ್ ಹೇಗೆ ನಿಭಾಯಿಸುತ್ತಾರೋ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
November 12, 2007 - 10:01am — Sunil Jayaprakash

ಉ: ೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ

Sunil Jayaprakash's picture

"ಎಲ್ಲಿ ನಮ್ಮ ರಾಜೇಶ್-ನಾಯ್ಕ ಕಾಣಿಸುತ್ತಿಲ್ಲ" ಅಂತ ಅಂದ್ಕೋತಾ ಇದ್ದೆ. ಈ ಬಾರಿಯ ರಣಜಿಯಿಂದಾಗಿ ನಿಮ್ಮನ್ನು ಮತ್ತೆ ನೋಡುವಂತಾದದ್ದು ನಮ್ಮ ಭಾಗ್ಯ. ಇನ್ನು ರಣಜಿ ಅಪ್ಡೋಟುಗಳಿಗೆ ಮೋಸ ಇಲ್ಲ, ಬಿಡಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
November 26, 2007 - 3:22pm — sankul

ಉ: ೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ

sankul's picture

ವಿಜಯ ಭಾರದ್ವಾಜ ಒಂದೆರಡು ವರ್ಷದ ಹಿಂದೆ ತಂಡದ ಖಾಯಂ ಸದಸ್ಯರಾಗಿದ್ದವರು ಈಗ ತಂಡದ ತರಬೇತುದಾರರಾಗಿರುವದು ವಿಚಿತ್ರ. ಅಂತಹ ಯಾವ ವಿಶೇಷ ಗುಣವು ಅವರನ್ನು ಈ ಸ್ಥಾನಕ್ಕೆ ತಂದಿತು? ಕರ್ನಾಟಕ ತಂಡಕ್ಕೆ ಬೇರೆ ತರಬೇತುದಾರರು ಸಿಗಲಿಲ್ಲವೆ?

ಪಂದ್ಯಗಳು ನಡೆಯುವ ಸ್ಥಳದ ಬಗ್ಗೆ ನಾನೊಂದು ಚಿಕ್ಕ ಲೇಖನ ಬರೆದಿರುವೆ ಓದಿ ನೋಡಿ.

http://sampada.net/blog/sankul/26/11/2007/6406

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕರ್ನಾಟಕ ಕ್ರಿಕೆಟ್ - ೨
  • ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ
  • ಕರ್ನಾಟಕ ಕ್ರಿಕೆಟ್ - ೫
  • ಕರ್ನಾಟಕ ಕ್ರಿಕೆಟ್ - ೪
  • ಕರ್ನಾಟಕ ಕ್ರಿಕೆಟ್ - ೭
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
  • ಕೊನೆಗೂ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು!
  • ಓದಿದ್ದು ಕೇಳಿದ್ದು ನೋಡಿದ್ದು-2
  • ನೀನು ಯಾರೆ
  • ಚೈನಾ ೧೦೦ ನಾವು ೦
  • ಹರುಷ ತಂದ ಆರು ದಿನಗಳು (ನಮ್ಮೂರೇ ನನಗೆ ಮೇಲು| ಈ ಊರಿಗೆ ಕರೆದು ತಂದಿರುವುದು ಹಣದ ಗೀಳು|)
  • ಆರದ ದೀಪ
  • ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
  • ಈಗ "ನನ್ನ ವಯಸ್ಸೆಷ್ಟು?" ಹೇಳಿ
  • ಹುಡುಗಿಯಿಂದ ಆಯ್ತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 11:08am
  • mahesha
    ಉ: ಬಿಡ್ತಾರ್‍
    August 29, 2008 - 10:50am
  • mahesha
    ಉ: ಕುಹೂ ದನಿಯು ಕಿವಿ ತೂತ ಕೊರೆದಿತ್ತು!
    August 29, 2008 - 10:45am
  • mahesha
    ಉ: ಚೈನಾ ೧೦೦ ನಾವು ೦
    August 29, 2008 - 10:41am
  • mahesha
    ಉ: ಪೆಱೆ/ಹೆಱೆ
    August 29, 2008 - 10:39am
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:25am
  • mahesha
    ಉ: ಪೆಱೆ/ಹೆಱೆ
    August 29, 2008 - 10:19am
  • mahesha
    ಉ: must, can, may - ಕನ್ನಡದಲ್ಲಿ ಸಮಗಳೇನು?
    August 29, 2008 - 10:17am
  • kannadakanda
    ಉ: must, can, may - ಕನ್ನಡದಲ್ಲಿ ಸಮಗಳೇನು?
    August 29, 2008 - 10:03am
  • kannadakanda
    ಉ: ಕೆಲವು ಸಂಖ್ಯಾವಾಚಿಗಳು ಹಾಗೂ ಅವುಗಳ ಸಾಧಿತ ಪದಗಳು
    August 29, 2008 - 10:02am
ಇನ್ನಷ್ಟು
ಈಗಿನಂತೆ 17 ಸದಸ್ಯರು ಮತ್ತು 89 ಅತಿಥಿಗಳು ಆನ್ಲೈನ್ ಇರುವರು.


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator