ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › rajeshnaik111 ರವರ ಬ್ಲಾಗ್

ಕರ್ನಾಟಕ ಕ್ರಿಕೆಟ್ - ೪

January 14, 2007 - 2:01am — rajeshnaik111

ಯೆರೆ ಗೌಡರ ಸಮರ್ಥ ನೇತೃತ್ವದಲ್ಲಿ ಕರ್ನಾಟಕ ಈ ಋತುವಿನ (೨೦೦೬-೦೭) ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದೆ. ಎಲೀಟ್ ಲೀಗ್ ನ ತನ್ನ ಗುಂಪಿನಲ್ಲಿ ಆಡಿದ ೭ ಪಂದ್ಯಗಳಲ್ಲಿ ೩ ಗೆಲುವು (ಹರ್ಯಾನ, ಉತ್ತರ ಪ್ರದೇಶ ಮತ್ತು ತಮಿಳುನಾಡು ವಿರುದ್ಧ), ೩ ಡ್ರಾ (ದೆಹಲಿ, ಅಂಧ್ರ ಪ್ರದೇಶ ಮತ್ತು ಸೌರಾಷ್ಟ್ರ ವಿರುದ್ಧ) ಮತ್ತು ೧ ಸೋಲಿನ (ಬರೋಡ ವಿರುದ್ಧ) ಸಾಧನೆಯೊಂದಿಗೆ ದ್ವೀತಿಯ ಸ್ಥಾನ ಪಡೆದಿದೆ.

ಜನವರಿ ೨೩ ರಿಂದ ೨೭ ರವರೆಗೆ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ, ಬಂಗಾಲವನ್ನು ಎದುರಿಸಲಿದೆ. ಈ ಪಂದ್ಯ ಕೊಲ್ಕತ್ತಾದಲ್ಲಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಕರ್ನಾಟಕಕ್ಕೆ 'ಹೋಮ್ ಅಡ್ವಾಂಟೇಜ್' ಇರುವುದಿಲ್ಲ. ಬಂಗಾಲ, ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಕರ್ನಾಟಕಕ್ಕಿಂತ ಬಲಶಾಲಿಯಾಗಿರುವ ತಂಡ. ರಾಬಿನ್ ಉತ್ತಪ್ಪ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಕಾರಣ ಅವರ ಅನುಪಸ್ತಿತಿ ಕರ್ನಾಟಕಕ್ಕೆ ದುಬಾರಿಯಾಗಬಹುದು. ಈ ದೊಡ್ಡ ಸವಾಲನ್ನು ಕರ್ನಾಟಕದ ಆಟಗಾರರು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡೋಣ. ರಣಜಿ ಟ್ರೋಫಿ ಇತಿಹಾಸದಲ್ಲಿ ಸೆಮಿಫೈನಲ್ ನಲ್ಲಿ ಕರ್ನಾಟಕ ೩ ಸಲ ಬಂಗಾಲದೊಂದಿಗೆ ಆಡಿದ್ದು ಎರಡು ಬಾರಿ ಸೋತು ಒಂದು ಬಾರಿ ಗೆದ್ದಿದೆ.

ಸದ್ಯಕ್ಕೆ ನಾಯಕ ಯೆರೆ ಗೌಡ, ಕೋಚ್ ವೆಂಕಟೇಶ್ ಪ್ರಸಾದ್, ಮ್ಯಾನೇಜರ್ ರಘುರಾಮ್ ಭಟ್ ಮತ್ತು ತಂಡದ ಎಲ್ಲಾ ಸದಸ್ಯರಿಗೆ ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದ್ದಕ್ಕೆ ಅಭಿನಂದನೆಗಳು ಮತ್ತು ಬಂಗಾಲ ವಿರುದ್ಧದ ಪಂದ್ಯಕ್ಕೆ ಶುಭ ಹಾರೈಕೆಗಳು.

೧೯೯೯-೨೦೦೦ ಋತುವಿನಲ್ಲಿ ಬೆಂಗಳೂರಿನಲ್ಲಿ ನಡೆದ ರಣಜಿ ಸೆಮಿಫೈನಲ್ ನಲ್ಲಿ ಹೈದರಾಬಾದ್ ಗೆ ಪ್ರಥಮ ಬಾರಿಯ ಮುನ್ನಡೆಯ ಆಧಾರದಲ್ಲಿ ಸೋತ ೭ ವರ್ಷಗಳ ಬಳಿಕ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ತಲುಪಿದೆ. ಕಾಕತಾಳೀಯವೆಂದರೆ ಆಗ ಹೈದರಾಬಾದ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ತಂಡದ ನಾಯಕರಾಗಿದ್ದ ವೆಂಕಿ, ಇಂದು ಕೋಚ್ ಆಗಿದ್ದಾರೆ. ಈಗ ತಂಡದಲ್ಲಿರುವ ಮತ್ತು ೭ ವರ್ಷಗಳ ಹಿಂದಿನ ಸೆಮಿಫೈನಲ್ ನಲ್ಲಿ ಆಡಿದ ಆಟಗಾರರೆಂದರೆ ಬ್ಯಾರಿಂಗ್ಟನ್ ರೋಲಂಡ್, ಬಾಲಚಂದ್ರ ಅಖಿಲ್, ಸುನಿಲ್ ಜೋಶಿ ಮತ್ತು ತಿಲಕ್ ನಾಯ್ಡು.

ರಣಜಿ ಟ್ರೋಫಿ ಪಂದ್ಯಾಟದಲ್ಲಿ ಕರ್ನಾಟಕಕ್ಕಿದು ೨೬ನೇ ಸೆಮಿಫೈನಲ್ ಪ್ರವೇಶ. ರಣಜಿ ಟ್ರೋಫಿ ಆರಂಭವಾದದ್ದು ೧೯೩೪-೩೫ರಲ್ಲಿ. ೭೩ ಋತುಗಳಲ್ಲಿ ಕರ್ನಾಟಕ ೨೬ ಸಲ ಸೆಮಿಫೈನಲ್ ಪ್ರವೇಶಿಸಿದಂತಾಯಿತು. ಕರ್ನಾಟಕ ೧೧ ಬಾರಿ ಸೆಮಿಫೈನಲ್ ನಲ್ಲಿ ಗೆದ್ದರೆ, ೧೪ ಬಾರಿ ಸೋತಿದೆ. ಈ ಬಾರಿ ಏನಾಗಬಹುದು?

೧೯೭೩-೭೪ ಋತುವಿನಲ್ಲಿ ಪ್ರಥಮ ಬಾರಿಗೆ ನಮ್ಮ ರಣಜಿ ತಂಡವನ್ನು 'ಕರ್ನಾಟಕ'ವೆಂದು ಕರೆಯಲಾಯಿತು. ಅದುವರೆಗೆ ನಮ್ಮ ತಂಡವನ್ನು 'ಮೈಸೂರು' ಎಂದು ಕರೆಯಲಾಗುತ್ತಿತ್ತು. ಮೈಸೂರು ಎಂದು ಕರೆಯಲಾಗುತ್ತಿದ್ದಾಗ ೧೨ ಬಾರಿ ಸೆಮಿಫೈನಲ್ ಪ್ರವೇಶವಾಗಿ ೨ ಬಾರಿ ಸೆಮಿಫೈನಲ್ ಗೆದ್ದರೆ, ಕರ್ನಾಟಕ ನಾಮಧೇಯದೊಂದಿಗೆ ೧೩ ಬಾರಿ ಸೆಮಿಫೈನಲ್ ಪ್ರವೇಶವಾಗಿ ೯ ಬಾರಿ ಸೆಮಿಫೈನಲ್ ಗೆಲ್ಲಲಾಗಿದೆ.

ಆಸಕ್ತಿಯುಳ್ಳವರಿಗಾಗಿ ಕರ್ನಾಟಕ ಸೆಮಿಫೈನಲ್ ತಲುಪಿದ ಋತುಗಳ ಪಟ್ಟಿ ಮತ್ತು ಸೆಮಿಫೈನಲ್ ಪಂದ್ಯಗಳ ಫಲಿತಾಂಶ ಈ ಕೆಳಗಿದೆ.

ಋತು ನಾಯಕ ವಿರೋಧಿ ತಂಡ ಫಲಿತಾಂಶ

೧೯೪೧-೪೨ ಶಫಿ ದಾರಾಶಾಹ ಬಂಗಾಲ ಗೆಲುವು
೧೯೪೫-೪೬ ಬಿ.ಕೆ.ಗರುಡಾಚಾರ್ ಹೋಳ್ಕರ್ ಸೋಲು
೧೯೫೧-೫೨ ಪಿ.ಆರ್.ಶ್ಯಾಮಸುಂದರ್ ಮುಂಬಾಯಿ ಸೋಲು
೧೯೫೨-೫೩ ಪಿ.ಆರ್.ಶ್ಯಾಮಸುಂದರ್ ಬಂಗಾಲ ಸೋಲು
೧೯೫೯-೬೦ ಎ.ಎಸ್.ಕೃಷ್ಣಸ್ವಾಮಿ ಬಿಹಾರ ಗೆಲುವು
೧೯೬೩-೬೪ ವಿ.ಸುಬ್ರಮಣ್ಯ ಮುಂಬಾಯಿ ಸೋಲು
೧೯೬೫-೬೬ ವಿ.ಸುಬ್ರಮಣ್ಯ ರಾಜಸ್ಥಾನ ಸೋಲು
೧೯೬೬-೬೭ ವಿ.ಸುಬ್ರಮಣ್ಯ ಮುಂಬಾಯಿ ಸೋಲು
೧೯೬೮-೬೯ ವಿ.ಸುಬ್ರಮಣ್ಯ ಬಂಗಾಲ ಸೋಲು
೧೯೬೯-೭೦ ಇ.ಎ.ಎಸ್.ಪ್ರಸನ್ನ ಮುಂಬಾಯಿ ಸೋಲು
೧೯೭೦-೭೧ ಪಿ.ಆರ್.ಅಶೋಕಾನಂದ್ ಮಹಾರಾಷ್ಟ್ರ ಸೋಲು
೧೯೭೧-೭೨ ಇ.ಎ.ಎಸ್.ಪ್ರಸನ್ನ ಮುಂಬಾಯಿ ಸೋಲು
೧೯೭೩-೭೪ ಇ.ಎ.ಎಸ್.ಪ್ರಸನ್ನ ಮುಂಬಾಯಿ ಗೆಲುವು
೧೯೭೪-೭೫ ಇ.ಎ.ಎಸ್.ಪ್ರಸನ್ನ ದೆಹಲಿ ಗೆಲುವು
೧೯೭೫-೭೬ ವಿ.ಎಸ್.ವಿಜಯ್ ಕುಮಾರ್ ಬಿಹಾರ ಸೋಲು
೧೯೭೭-೭೮ ಇ.ಎ.ಎಸ್.ಪ್ರಸನ್ನ ದೆಹಲಿ ಗೆಲುವು
೧೯೭೮-೭೯ ಜಿ.ಆರ್.ವಿಶ್ವನಾಥ್ ಬರೋಡ ಗೆಲುವು
೧೯೮೧-೮೨ ಜಿ.ಆರ್.ವಿಶ್ವನಾಥ್ ಮುಂಬಾಯಿ ಗೆಲುವು
೧೯೮೨-೮೩ ಬೃಜೇಶ್ ಪಟೇಲ್ ಹರ್ಯಾನ ಗೆಲುವು
೧೯೮೪-೮೫ ಜಿ.ಆರ್.ವಿಶ್ವನಾಥ್ ದೆಹಲಿ ಸೋಲು
೧೯೮೬-೮೭ ಸದಾನಂದ್ ವಿಶ್ವನಾಥ್ ದೆಹಲಿ ಸೋಲು
೧೯೯೫-೯೬ ರಾಹುಲ್ ದ್ರಾವಿಡ್ ಹೈದರಾಬಾದ್ ಗೆಲುವು
೧೯೯೭-೯೮ ರಾಹುಲ್ ದ್ರಾವಿಡ್ ಹೈದರಾಬಾದ್ ಗೆಲುವು
೧೯೯೮-೯೯ ಸುಜಿತ್ ಸೋಮಸುಂದರ್ ಪಂಜಾಬ್ ಗೆಲುವು
೯೯-೨೦೦೦ ವೆಂಕಟೇಶ್ ಪ್ರಸಾದ್ ಹೈದರಾಬಾದ್ ಸೋಲು
೨೦೦೬-೦೭ ಯೆರೆ ಗೌಡ ಬಂಗಾಲ ?

~.~
  • rajeshnaik111 ರವರ ಬ್ಲಾಗ್
  • Login or register to post comments
  • 979 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 14, 2007 - 11:50am — ASHOKKUMAR

Re: ಕರ್ನಾಟಕ ಕ್ರಿಕೆಟ್ - ೪ ಕುಂಬ್ಳೆ ಲಭ್ಯರು

ASHOKKUMAR's picture

ಅನಿಲ್ ಸೇವೆ ಕರ್ನಾಟಕಕ್ಕೆ ಲಭ್ಯವಾದರೆ ಚೆನ್ನ. ಅಂದ ಹಾಗೆ ಗಂಗೂಲಿ ಬಂಗಾಳಕ್ಕೆ ಲಭ್ಯರಾಗದಿರಬಹದು.ಒಟ್ಟಿನಲ್ಲಿ ಕರ್ನಾಟಕಕ್ಕೆ ಒಳ್ಳೆಯ ಅವಕಾಶ ಅಂತನ್ನಿಸುತ್ತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಣಜಿ ಟ್ರೋಫಿ ೨೦೦೬-೦೭: ಕರ್ನಾಟಕದ ಅಭಿಯಾನ ಅಂತ್ಯ
  • ಸೇಡು ತೀರಿಸಿದ ಕರ್ನಾಟಕ
  • ೨೦೦೭-೦೮ ರಣಜಿ ಋತು ಮತ್ತು ಕರ್ನಾಟಕ
  • ಕರ್ನಾಟಕ ಮತ್ತು ಸೌರಾಷ್ಟ್ರ ನಡುವಣ ರಣಜಿ ಪಂದ್ಯ
  • ಸೋಲು ಗೆಲುವು
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಜೋಯೀಸರ ಮಗಳು
  • 1700 11th AVE NE ಅಪಾರ್ಟ್ ಮೆಂಟ್ - 6
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಓದಿದ್ದು ಕೇಳಿದ್ದು ನೋಡಿದ್ದು-11
  • ಶಿವರಾಜ್ ಕುಮಾರ ಅಭಿಮಾನಿಗಳಿಗೆ ಮತ್ತೇರಿಸುವ ಚಿತ್ರ " ಮಾದೇಶ "
  • ಹಬ್ಬ ತಂದ ನೆನಪು...
  • ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anil.ramesh
    ಉ: ಮೊದಲ ಚಿತ್ರ
    September 8, 2008 - 9:43am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:28am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:15am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:05am
  • Sunil Jayaprakash
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 8:40am
  • srinivasps
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 8:38am
  • pachhu2002
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:33am
  • savithasr
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 8:21am
  • savithasr
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 8, 2008 - 7:58am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 231 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator