ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › rajeshnaik111 ರವರ ಬ್ಲಾಗ್

ಸೇಡು ತೀರಿಸಿದ ಕರ್ನಾಟಕ

March 17, 2007 - 11:27pm — rajeshnaik111

ಧರ್ಮಶಾಲಾದಲ್ಲಿ ಇಂದು ನಡೆದ ರಣಜಿ ಏಕದಿನ ಟ್ರೋಫಿಯ ಪ್ರಿ ಕ್ವಾರ್ಟರ್ ಪಂದ್ಯದಲ್ಲಿ ಬಂಗಾಲವನ್ನು ೩೨ ಓಟಗಳಿಂದ ಸೋಲಿಸಿ ಕರ್ನಾಟಕ ಕ್ವಾರ್ಟರ್ ಫೈನಲ್ ತಲುಪಿದೆ. ಈ ವಿಜಯದೊಂದಿಗೆ, ರಣಜಿ ಟ್ರೋಫಿ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯದಲ್ಲಿ ಬಂಗಾಲದ ಕೈಯಲ್ಲಿ ಅನುಭವಿಸಿದ ಸೋಲಿಗೆ ಸ್ವಲ್ಪ ಮಟ್ಟಿಗಾದರೂ ಪ್ರತೀಕಾರ ತೀರಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಕರ್ನಾಟಕ ೩೬ ಓಟಗಳಾಗುವಷ್ಟರಲ್ಲಿ ೫ ಹುದ್ದರಿಗಳನ್ನು ಕಳಕೊಂಡಿತ್ತು. ಆಗ ಜತೆಗೂಡಿದ ನಾಯಕ ಯೆರೆ ಗೌಡ ಮತ್ತು ತಿಲಕ್ ನಾಯ್ಡು ೭೭ ಓಟಗಳ ಜತೆಯಾಟ ನಡೆಸಿ ಸ್ವಲ್ಪ ಮಟ್ಟಿಗೆ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಗೌಡರು ಮತ್ತೆ ತನ್ನ ಸ್ಕಿಲ್ ತೋರ್ಪಡಿಸಿ ನೆಲಕಚ್ಚಿ ನಿಂತು ಆಡಿ ಅಮೂಲ್ಯ ೬೬ ಓಟಗಳನ್ನು ಗಳಿಸಿ ಒಂಬತ್ತೆನೆಯವರಾಗಿ ತಂಡದ ಮೊತ್ತ ೧೯೬ ಆದಾಗ ಔಟಾದರು. ೫೦ ಓವರುಗಳಲ್ಲಿ ಕರ್ನಾಟಕ ಗಳಿಸಿದ್ದು ೯ ಹುದ್ದರಿಗಳನ್ನು ಕಳಕೊಂಡು ೨೧೬ ಓಟಗಳನ್ನು.ಇದಕ್ಕುತ್ತರವಾಗಿ ಬಂಗಾಲ ೪೮ ಓವರುಗಳಲ್ಲಿ ಎಲ್ಲಾ ಹುದ್ದರಿಗಳನ್ನು ಕಳಕೊಂಡು ಗಳಿಸಿದ್ದು ೧೮೪ ಓಟಗಳನ್ನು. ಉತ್ತಮ ಬೌಲಿಂಗ್ ನಡೆಸಿದ ಜೋಶಿ ಮತ್ತು ಅಖಿಲ್ ಕ್ರಮವಾಗಿ ೪ ಮತ್ತು ೩ ಹುದ್ದರಿಗಳನ್ನು ಕೆಡವಿದರು.

ಮಾರ್ಚ್ ೨೧ರಂದು ದೆಹಲಿಯಲ್ಲಿ ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಎದುರಾಳಿ ರಾಜಸ್ಥಾನ.

ಬಂಗಾಲ ವಿರುದ್ಧದ ಪಂದ್ಯದ ಕ್ರಿಕ್ ಇನ್ಫೊ ವರದಿಯನ್ನು ಇಲ್ಲಿ ಓದಬಹುದು ಮತ್ತು ಸ್ಕೋರು ಪಟ್ಟಿಯನ್ನು ಇಲ್ಲಿ ನೋಡಬಹುದು.

ಕನ್ನಡಿಗ ಅರುಣ್ ಕುಮಾರ್ ನೇತೃತ್ವದ ಅಸ್ಸಾಮ್ ಮತ್ತೊಂದು ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ೪ ಹುದ್ದರಿಗಳಿಂದ ಸೋಲನ್ನು ಅನುಭವಿಸಿದೆ. ಅರುಣ್ ಕೇವಲ ೮ ಓಟಗಳನ್ನು ಗಳಿಸಿ ವಿಫಲರಾದರು.

~.~
  • rajeshnaik111 ರವರ ಬ್ಲಾಗ್
  • Login or register to post comments
  • 1446 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 18, 2007 - 10:57am — Sunil Jayaprakash

ದನಿಗೂಡು: ಸೇಡು ತೀರಿಸಿದ ಕರ್ನಾಟಕ

Sunil Jayaprakash's picture

ತುಂಬಾ ತುಂಬಾ ಸಂತೋಷ. ಬಂಗಾಳದ ವಿರುದ್ಧ ಮೊದಲ ಇನ್ನಿಂಗ್ಸಿನ ಹಿನ್ನಡೆಯನ್ನು ಹಿಮ್ಮೆಟ್ಟಿಸುವ ಹಾಗೆ ಈ ಬಾರಿ ಗೆದ್ದಿದ್ದಾರೆ. ಫೈನಲ್ ಪಂದ್ಯಕ್ಕಾಗಿ ನಮ್ಮ ತಂಡಕ್ಕೆ ಸವಿಹಾರೈಕೆಗಳು.

ಎಂದಿನ ಹಾಗೆ, ಕೊನೆ ಮಾತು. ಫೈನಲ್ ತಲುಪಿರುವ ನಮ್ಮವರ ಮೇಲೆ ಯಾವ ಕಾಗೆ, ಗೂಗೆ(ಬೆ), ಮಾರಿ, .... ಕಣ್ಣು ಬೀಳದಿರಲಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 19, 2007 - 2:01pm — rajeshnaik111

ದನಿಗೂಡು: ಸೇಡು ತೀರಿಸಿದ ಕರ್ನಾಟಕ

rajeshnaik111's picture

ಫೈನಲ್ ?! ನಾಳೆ ನಡೆಯಲಿರುವುದು ಕ್ವಾರ್ಟರ್ ಫೈನಲ್! ಗೆದ್ದರೆ ತಾನೆ ಮುಂದಿನ ಮಾತು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 22, 2007 - 11:15am — rajeshnaik111

ಕರ್ನಾಟಕಕ್ಕೆ ಸೋಲು

rajeshnaik111's picture

ರಾಜಸ್ಥಾನದಂತಹ ಸಾಧಾರಣ ತಂಡದೆದುರು ಮುಗ್ಗರಿಸಿ ಕರ್ನಾಟಕ ರಣಜಿ ಏಕದಿನ ಟ್ರೋಫಿಯಿಂದ ಹೊರಬಿದ್ದಿದೆ. ಎಂದಿನಂತೆ ಮತ್ತೆ ಬ್ಯಾಟಿಂಗ್ ವೈಫಲ್ಯ. ೫೧ಕ್ಕೆ ೫ ಹುದ್ದರಿ ಕಳಕೊಂಡ ಬಳಿಕ ಅಖಿಲ್ ಗಳಿಸಿದ ಬಿರುಸಿನ ೮೬ ಓಟಗಳ ಸಹಾಯದಿಂದ ಕರ್ನಾಟಕ ೨೦೦ ಓಟ ಗಳಿಸಲು ಶಕ್ತವಾಯಿತು. ರಾಜಸ್ಥಾನ ಸುಲಭವಾಗಿ ಇನ್ನೂ ೨೮ ಎಸೆತಗಳು ಬಾಕಿ ಇರುವಂತೆ ಜಯಗಳಿಸಿ ಸೆಮಿ ಫೈನಲ್ ಗೆ ತೇರ್ಗಡೆ ಹೊಂದಿತು. ಸ್ಕೋರು ಪಟ್ಟಿಯನ್ನು ಇಲ್ಲಿ ನೋಡಬಹುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 22, 2007 - 1:03pm — Sunil Jayaprakash

ಟಿ: ಕರ್ನಾಟಕಕ್ಕೆ ಸೋಲು

Sunil Jayaprakash's picture

ಈ ದಿನ ಬೆಳಗ್ಗೆ "ಕರ್ನಾಟಕವು ಗೆದ್ದ ಪಂದ್ಯಗಳ ವಿವರಗಳನ್ನು ಹಾಕದೆ, ಸೋತ ಪಂದ್ಯಗಳ ವಿವರಗಳನ್ನು ಖಂಡಿತವಾಗಿಯೂ ಹಾಕಿಯೇ ಹಾಕುವ" ಟೈಮ್ಸ್ ಆಫ್ ಇಂಡಿಯಾ ನೋಡಿದಾಗ ತಿಳಿಯಿತು. ನಾನು ಕರ್ನಾಟಕದವರು ಫೈನಲ್ ತಲುಪಿಬಿಟ್ಟಿರುವ ಕನಸು ಕಂಡಿದ್ದೆ. ಕ್ವಾಟರ್ಫೈನಲ್ಲಿನಲ್ಲಿಯೇ ಟುಸ್ಸಾದರು ನಮ್ಮವರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕರ್ನಾಟಕ ಕ್ರಿಕೆಟ್ - ೨
  • ಕರ್ನಾಟಕ ಕ್ರಿಕೆಟ್ - ೪
  • ಕರ್ನಾಟಕ ಮತ್ತು ಸೌರಾಷ್ಟ್ರ ನಡುವಣ ರಣಜಿ ಪಂದ್ಯ
  • ಕರ್ನಾಟಕ ಕ್ರಿಕೆಟ್ - ೮
  • ಈ ದಿನದ ಕ್ರಿಕೆಟ್ ಸುದ್ಧಿ - ಹಾ! ಎಚ್ಚರ ಇವು ಒಳ್ಳೆಯ ಸುದ್ಧಿಗಳು
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
  • ಕೊನೆಗೂ ಕುಮಾರಸ್ವಾಮಿ ರಾಮನಗರಕ್ಕೆ ಭೇಟಿ ನೀಡಿದರು!
  • ಓದಿದ್ದು ಕೇಳಿದ್ದು ನೋಡಿದ್ದು-2
  • ನೀನು ಯಾರೆ
  • ಚೈನಾ ೧೦೦ ನಾವು ೦
  • ಹರುಷ ತಂದ ಆರು ದಿನಗಳು (ನಮ್ಮೂರೇ ನನಗೆ ಮೇಲು| ಈ ಊರಿಗೆ ಕರೆದು ತಂದಿರುವುದು ಹಣದ ಗೀಳು|)
  • ಆರದ ದೀಪ
  • ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
  • ಈಗ "ನನ್ನ ವಯಸ್ಸೆಷ್ಟು?" ಹೇಳಿ
  • ಹುಡುಗಿಯಿಂದ ಆಯ್ತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Dr.Harisha
    ಉ: ಅಬ್ಬ, ರಾಷ್ತ್ರಕ್ಕೇ ಅವಮಾನ!
    August 29, 2008 - 11:31am
  • mowna
    ಉ: ಸಾಮಾನ್ಯ ‘ಜ್ಞಾನದ ಪ್ರಶ್ನೆಗಳಿಗೆ ಉತ್ತರಿಸುವಿರಾ
    August 29, 2008 - 11:27am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು-2
    August 29, 2008 - 11:22am
  • ಸಂಗನಗೌಡ
    ಉ: ಓದಿದ್ದು ಕೇಳಿದ್ದು ನೋಡಿದ್ದು-2
    August 29, 2008 - 11:19am
  • ಸಂಗನಗೌಡ
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 11:08am
  • mahesha
    ಉ: ಬಿಡ್ತಾರ್‍
    August 29, 2008 - 10:50am
  • mahesha
    ಉ: ಕುಹೂ ದನಿಯು ಕಿವಿ ತೂತ ಕೊರೆದಿತ್ತು!
    August 29, 2008 - 10:45am
  • mahesha
    ಉ: ಚೈನಾ ೧೦೦ ನಾವು ೦
    August 29, 2008 - 10:41am
  • mahesha
    ಉ: ಪೆಱೆ/ಹೆಱೆ
    August 29, 2008 - 10:39am
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:25am
ಇನ್ನಷ್ಟು
ಈಗಿನಂತೆ 15 ಸದಸ್ಯರು ಮತ್ತು 105 ಅತಿಥಿಗಳು ಆನ್ಲೈನ್ ಇರುವರು.


ಸಾಕೋದನ್ ಅರಿತಾತ - ಸಾವಿರ ಜನಕ್ ತ್ರಾತ

— ಟಿ ಪಿ ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator