ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › ravee... ರವರ ಬ್ಲಾಗ್

ಕನ್ನಡಸಾಹಿತ್ಯ.ಕಾಂ-ಮೈಸೂರು ಬೆಂಬಲಿಗರ ಬಳಗದ ಉದ್ಘಾಟನೆ ಹಾಗೂ ‘ಸಲ್ಲಾಪ’ ಪ್ರಕಾಶನದ ಎರಡು ಕೃತಿಗಳ ಬಿಡುಗಡೆ

May 21, 2007 - 7:26pm — ravee...

ಈಗಾಗಲೇ ಬೆಂಗಳೂರು, ಮುಂಬೈ, ತುಮಕೂರು, ಹಾಸನಗಳಲ್ಲಿ ಬೆಂಬಲಿಗರ ಬಳಗವನ್ನು ಹೊಂದಿರುವ ಕನ್ನಡಸಾಹಿತ್ಯ.ಕಾಂ ಅಂತರ್ಜಾಲ ತಾಣ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದೊಂದಿಗೆ ಇದೇ ಭಾನುವಾರ ೨೦ರಂದು ಸಾಂಸ್ಕೃತಿಕ ರಾಜಧಾನಿಯಾದ ಮೈಸೂರಿನಲ್ಲಿ ಬೆಂಬಲಿಗರ ಬಳಗದ ಉದ್ಘಾಟನೆಯನ್ನು ಹಮ್ಮಿಕೊಂಡಿತ್ತು. 
 

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದಗೌಡ ಉದ್ಘಾಟನೆಯನ್ನು ನೆರವೇರಿಸಿದರು. ಯಾವುದೇ ಹೊಸ ತಂತ್ರಜ್ಞಾನ ಒಳಿತು-ಕೆಡುಕುಗಳೊಂದಿಗೆ ಬರುತ್ತದೆ ಎಂದು ಹೇಳಿದ ಅವರು ಸಮಾಜ ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ತಂತ್ರಜ್ಞಾನದ ಜೊತೆ ಮುಂದುವರೆಯಬೇಕೇ ಹೊರತು ಹೊಸದನ್ನು ನಿರಾಕರಿಸಬಾರದು ಎಂದು ಹೇಳಿದರು.
 

 ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳಾದ ಭಾಷಾ ತಜ್ಞ ಲಿಂಗದೇವರು ಹಳೆಮನೆಯವರು ಕನ್ನಡ ಭಾಷೆ ಅಂತರ್ಜಾಲದ ಅನುಕೂಲಗಳನ್ನು ಹೆಚ್ಚು ಹೆಚ್ಚು ಬಳಸಿಕೊಂಡು ಮುಂದುವರೆಯಬೇಕು ಎಂದು ಹೇಳಿದರು. ಕೆಲಕಾಲದ ಹಿಂದೆ ಕನ್ನಡ ನಶಿಸಿಹೋಗುತ್ತಿರುವ ಭಾಷೆಗಳಲ್ಲಿ ಒಂದು ಎಂಬ ವದಂತಿ ದಟ್ಟವಾಗಿ ಹಬ್ಬಿತ್ತು. ಆದರೆ ಅಂತಹ ಯಾವುದೇ ಭಯವಿಲ್ಲ, ಕನ್ನಡದ ಪರವಾಗಿ ಅಂತರ್ಜಾಲದಲ್ಲಿ ದನಿಯೆತ್ತುತ್ತಿರುವ ತಂತ್ರಜ್ಞರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಶ್ಲಾಘಿಸಿದ ಅವರು ಕನ್ನಡಸಾಹಿತ್ಯ.ಕಾಂನ ಯಾವುದೇ ಕನ್ನಡಪರ ಕೆಲಸಕ್ಕೆ ತಮ್ಮ ಸಹಕಾರ ಇರುವುದೆಂದು ಹೇಳಿದರು.
 

 ಶ್ರೀ ಜಯಚಾಮರಾಜೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ|| ಬಿ.ಜಿ.ಸಂಗಮೇಶ್ವರ ಮಾತನಾಡಿ ಭಾಷೆಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ತಮ್ಮ ಕಾಲೇಜಿನ ಸಂಪೂರ್ಣ ಸಹಕಾರ ಇರುತ್ತದೆಂದು ಹೇಳಿದರು. ಮುಕ್ತ ತಂತ್ರಾಂಶಗಳ ಉಪಯೋಗ ಹೆಚ್ಚಬೇಕು ಎಂದು ಹೇಳಿದ ಅವರು ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಕನ್ನಡಕ್ಕೆ ಬೇಕಾಗಿರುವ ತಂತ್ರಾಂಶಗಳ ತಯಾರಿ ಕೆಲಸಗಳಲ್ಲಿ ತೊಡಗಿಸಲು ತಾವು ಸಿದ್ಧರಿರುವುದಾಗಿ ಹೇಳಿದರು. ಈ ನಿಟ್ಟಿನಲ್ಲಿ ಕನ್ನಡಸಾಹಿತ್ಯ.ಕಾಂ  ಹಮ್ಮಿಕೊಳ್ಳುವ ಯಾವುದೇ ತಂತ್ರಾಂಶ ಸಂಬಂಧಿ ಕಾರ್ಯಕ್ರಮಕ್ಕೆ ಆರ್ಥಿಕ ಬೆಂಬಲ ನೀಡುವುದಾಗಿ ಕೆ ಎಸ್ ಸಿ ಬಳಗಕ್ಕೆ ತಿಳಿಸಿದರು.
 

 ಇದಕ್ಕೆ ಪೂರಕವಾಗಿ ಮಾತನಾಡಿದ ಕಸಾಕಾಂ ಸಂಪಾದಕ ಶ್ರೀ ಶೇಖರ್‌ಪೂರ್ಣರವರು ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಸರಿಯಾಗಿ ಸಮಾಜವನ್ನು ತಯಾರಿ ಮಾಡುವಲ್ಲಿ ತಂತ್ರಾಂಶ ತಜ್ಞರ ಜವಾಬ್ದಾರಿ ಹೆಚ್ಚು ಎಂದು ಹೇಳಿದರು. ವಿದ್ಯಾರ್ಥಿಗಳ ಸಹಕಾರದೊಂದಿಗೆ ಕನ್ನಡಕ್ಕೆ ಬೇಕಾಗುವ ತಂತ್ರಾಂಶ ತಯಾರು ಮಾಡುವ ಸಲಹೆಯನ್ನು ಸಂತಸದಿಂದ ಸ್ವೀಕರಿಸಿದ ಅವರು ಆ ನಿಟ್ಟಿನಲ್ಲಿ ಶೀಘ್ರವೇ ಕೆಲಸ ಪ್ರಾರಂಭಿಸುವುದಾಗಿ ಹೇಳಿದರು.
 

 ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ.ಕಾಂನ ಪ್ರಕಾಶನ ಅಂಗವಾದ ‘ಸಲ್ಲಾಪ’ದಿಂದ ಹೊರಬಂದಿರುವ ವಿಕ್ರಮ್ ಹತ್ವಾರರ ‘ಇದೇ ಇರಬೇಕು ಕವಿತೆ’ ಹಾಗೂ ‘ಕಟ್‍ಸೀಟ್ ಮತ್ತು ಇತರ ಕತೆಗಳು’ ಕೃತಿಗಳ ಬಿಡುಗಡೆ ಮಾಡಲಾಯಿತು.

 ಕೃತಿಗಳ ಕುರಿತು ಮಾಡಿದ ಚಲನಚಿತ್ರ ಹಾಗೂ ಕಿರುತೆರೆ ಕಲಾವಿದ ಶ್ರೀ ಸುಚೇಂದ್ರಪ್ರಸಾದ್‍ರವರು ಸಮಕಾಲೀನ ಲೇಖಕರ ಹಾಗೂ ಯುವಜನಾಂಗದಲ್ಲಿರುವ ಜಿಜ್ಞಾಸೆಗಳ ಬಗ್ಗೆ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಾನಸ, ಕನ್ನಡ ಅಧ್ಯಯನ ಕೇಂದ್ರದ ಶ್ರೀ ಪಂಡಿತಾರಾಧ್ಯ, ಶಿಕಾರಿಪುರ ಹರಿಹರೇಶ್ವರ ಮುಂತಾದ ಆಸಕ್ತ ಗಣ್ಯರು ಉಪಸ್ಥಿತರಿದ್ದರು. ಅನೇಕ ವಿದ್ಯಾರ್ಥಿಗಳು ಹಾಗೂ ತಂತ್ರಾಂಶ ತಂತ್ರಜ್ಞರು ಆಸಕ್ತಿಯಿಂದ ಪಾಲ್ಗೊಂಡರು.

 ವರದಿ:ಲಾವಣ್ಯ ಪಿ ಜಿ, ಮೈಸೂರು

~.~
  • ravee... ರವರ ಬ್ಲಾಗ್
  • Login or register to post comments
  • 407 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ-ಮೈಸೂರು ಉದ್ಘಾಟನೆ ಮತ್ತು ‘ಸಲ್ಲಾಪ’ ಪ್ರಕಾಶನದ ಪುಸ್ತಕಗಳ ಬಿಡುಗಡೆ ಸಮಾರಂಭ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ-ಮೈಸೂರು ಉದ್ಘಾಟನೆ ಮತ್ತು ‘ಸಲ್ಲಾಪ’ ಪ್ರಕಾಶನದ ಪುಸ್ತಕಗಳ ಬಿಡುಗಡೆ ಸಮಾರಂಭ
  • ಶೇಷಾದ್ರಿವಾಸು ಚಂದ್ರಶೇಖರ್, ಶೇಖರಪೂರ್ಣರಂಥವರ ಸಾಧನೆಗಳು ಯುವಜನತೆಗೆ ಮಾದರಿ : ನಿರ್ದೇಶಕ ಪಿ ಶೇಷಾದ್ರಿ
  • ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ ಪುಣೆ ಭೇಟಿ
Syndicate content

ಲೇಖಕರು

ravee...'s picture

ಪರಿಚಯ

ಮನಸ್ಸು ಬಂದಾಗ ಬರೆಯುವುದು , ಎಲ್ಲೆಂದರಲ್ಲಿ ಅಲೆಯುವುದು...ಇತ್ಯಾದಿ ನನ್ನ ಅಭ್ಯಾಸ,ಹವ್ಯಾಸಗಳು. ಎಂಜಿನೀರಿಂಗ್ ಕಾಲೇಜಿನಲ್ಲಿ ಕೆಲಸ. ಕನ್ನಡಸಾಹಿತ್ಯ.ಕಾಂ ನ ಸಕ್ರಿಯ ಸದಸ್ಯ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • sudhimail
    ಉ: ಏನಿದೇನಿದು?
    September 8, 2008 - 10:12pm
  • hamsanandi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:41pm
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 9:37pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:35pm
  • smurthygr
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 9:32pm
  • hamsanandi
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 9:23pm
  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 123 ಅತಿಥಿಗಳು ಆನ್ಲೈನ್ ಇರುವರು.


ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator