ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ravikreddy ರವರ ಬ್ಲಾಗ್

ಲೋಕ್‌ ಸತ್ತಾದ ಜೇಪಿ, ಚಿತ್ರದುರ್ಗದ ಜನಾರ್ಧನ ಸ್ವಾಮಿ...

ಸರಿಯಾಗಿ ಎರಡು ವರ್ಷದ ಹಿಂದೆ ಅಮೆರಿಕದ ಸಿಲಿಕಾನ್ ಕಣಿವೆಯಲ್ಲಿ ಸುಮಾರು ನೂರು ಜನ ಸೇರಿದ್ದ ಸಭೆಯಲ್ಲಿ ಅವರಿಗೆ ಒಂದು ಪ್ರಶ್ನೆ ಕೇಳಿದೆ. ಅದು ನೇರವಾಗಿತ್ತು. ಅವರ ಇಡೀ ಆಶಾವಾದವನ್ನೆ, ಆದರ್ಶವನ್ನೆ, ವಾಸ್ತವದ ಹೆಸರಿನಲ್ಲಿ Undermine ಮಾಡುವ ರೀತಿಯಲ್ಲೂ ಇತ್ತು. ಆ ಪ್ರಶ್ನೆ ಚುಡಾಯಿಸುವ, ಹಂಗಿಸುವ ರೀತಿಯಲ್ಲಿ ಇರಬಾರದು ಎಂದುಕೊಂಡೆ ಸಾಕಷ್ಟು ಹುಷಾರಿನಲ್ಲಿ ಕೇಳಿದೆ.  ಮುಂದೆ ಓದಿ »

ಇದು ಕೇಂದ್ರಕ್ಕೆ ಕೊಟ್ಟ Mandate ಅಲ್ಲ... ಕ್ಷಮಿಸಿ...

ಇವತ್ತಿನ ಭಾರತದಲ್ಲಿ ಭಾರತದ ಪ್ರಧಾನಿಯಾಗಲು ಅರ್ಹರಾದ ಮತ್ತು ಭಾರತ ಅಹಂಕಾರವಿಲ್ಲದ ಹೆಮ್ಮೆಯಿಂದ 'ಈತ ನಮ್ಮ ಪ್ರಧಾನಿ; ಆ ಬಗ್ಗೆ ನಮಗೆ ಹೆಮ್ಮೆ ಇದೆ.' ಎಂದು ಹೇಳಿಕೊಳ್ಳಬಹುದಾದ ವ್ಯಕ್ತಿ ಡಾ. ಮನಮೋಹನ್ ಸಿಂಗ್.  ಮುಂದೆ ಓದಿ »

"ಅಭಿವೃದ್ಧಿ" ನಮ್ಮ ಸಮಸ್ಯೆಗಳನ್ನು ನಿವಾರಿಸುತ್ತಿದೆಯೆ?

(ವಿಕ್ರಾಂತ ಕರ್ನಾಟಕದ ಮೇ 8, 09 ರ ಸಂಚಿಕೆಗಾಗಿ ಕಳೆದ ಭಾನುವಾರ ಬರೆದದ್ದು.)

ನಮ್ಮಲ್ಲಿ ಒಂದಷ್ಟು ಪರಂಪರಾಗತ ಸಮಸ್ಯೆಗಳಿವೆ: ಅನಕ್ಷರತೆ, ಜಾತೀಯತೆ, ಬಡತನ, ಮೌಢ್ಯ, ಇತ್ಯಾದಿ. ನನ್ನ ತಲೆಮಾರು ನಂಬಿಕೊಂಡು ಬಂದ ಅಥವ ನಂಬಿದ ಮಾತು ಏನೆಂದರೆ, ವಿದ್ಯೆ ಮತ್ತು "ಆರ್ಥಿಕ ಅಭಿವೃದ್ಧಿ" ನಮ್ಮ ಎಷ್ಟೋ ಸಮಸ್ಯೆಗಳಿಗೆ ಪರಿಹಾರ ಕೊಡುತ್ತದೆ ಮತ್ತು ಅವುಗಳನ್ನು ಇಲ್ಲವಾಗಿಸುತ್ತದೆ ಎನ್ನುವುದು. ಆದರೆ, ಕಳೆದ ಮಾರ್ಚ್ ತಿಂಗಳಿನಲ್ಲಿ ಸುಮಾರು ಮೂರು ವಾರಗಳ ಕಾಲ ಕರ್ನಾಟಕದ ಬೇರೆಬೇರೆ ಕಡೆ ಸುತ್ತಿದ ನನ್ನ ಅನುಭವಗಳ ಆಧಾರದ ಮೇಲೆ ಹೇಳುವುದಾದರೆ, ನನಗೆ ನಾನೂ ಸಹ ನಂಬಿಕೊಂಡೆ ಬಂದ ಈ ಮೇಲಿನ ಮಾತುಗಳ ಬಗ್ಗೆ ನಂಬಿಕೆ ಹೋಗಿದೆ. ಇದಕ್ಕೆ ಪೂರಕವಾಗಿ ನಾನು ಈ ಸಲದ ನನ್ನ ಪ್ರವಾಸದಲ್ಲಿ ಕಂಡ ಮೂರು ಪ್ರಮುಖ ಘಟನೆಗಳನ್ನು ಇಲ್ಲಿ ಪ್ರಸ್ತಾಪಿಸುತ್ತೇನೆ. ಇವು ಆ ದಿನಗಳಲ್ಲಿ ನನ್ನನ್ನು ತೀವ್ರವಾಗಿ ತಟ್ಟಿದ, ನನ್ನ ಮಾತು ಮತ್ತು ಆಲೋಚನೆಗಳನ್ನು ಬಹುವಾಗಿ ಪ್ರಭಾವಿಸಿದ, ಖಿನ್ನತೆ ಮೂಡಿಸಿದ ಘಟನೆಗಳೂ ಹೌದು.

ಇನ್ನೂ ಎಷ್ಟು ದಿನ ನರಬಲಿ ಬೇಡುತ್ತದೆ ಈ ಕ್ರೂರ ಜಾತಿವ್ಯವಸ್ಥೆ?

ಮೊದಲನೆಯದು, ಬೆಂಗಳೂರಿನಿಂದ ಕೇವಲ 70 ಕಿ.ಮೀ. ದೂರದ ಊರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಡೆದಿರುವ ಘಟನೆ. ಅದು ಮಾಗಡಿ ತಾಲ್ಲೂಕಿನ ಒಂದು ಹಳ್ಳಿ. ರಾಮನಗರ ಮತ್ತು ಮಾಗಡಿ ಪಟ್ಟಣಗಳಿಂದ ಸುಮಾರು 20 ಕಿ.ಮೀ. ಅಂತರದಲ್ಲಿರುವ ಊರು. ಆ ಊರಿನಿಂದ ಬೆಂಗಳೂರಿಗೆ ಹೋಗಿ ಲಾಯರ್  ಮುಂದೆ ಓದಿ »

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು ಮದುವೆಯಾದರೆ ಏನಾಗುತ್ತೆ?

ಹಿಂದೂ ಹುಡುಗ ಮುಸ್ಲಿಂ ಹುಡುಗಿಯನ್ನು
ಮದುವೆಯಾದರೆ ಏನಾಗುತ್ತೆ?
ಏನೂ ಆಗೊಲ್ಲ,
ಮುದ್ದಾದ ಎರಡು ಮಕ್ಕಳಾಗುತ್ತೆ!

--ಸವಿತಾ ನಾಗಭೂಷಣ

ಮಾನವ(ವೀಯ) ಪಶು ಸಾಗಾಣಿಕೆ !?

ಭಾರತದಲ್ಲಿ ಊಟ ಸಂಪಾದಿಸಿಕೊಳ್ಳುವುದೇ ದೊಡ್ಡ ಸವಾಲು. ಆ ಸವಾಲು ಸ್ವೀಕರಿಸಿದ ಮನುಷ್ಯರು ಕೋಟ್ಯಾಂತರ ಇರುವುದರಿಂದ ಮತ್ತು ಅವರಲ್ಲಿ ಬಹಳಷ್ಟು ಜನ "ನಗಣ್ಯ"ರೂ ಆಗಿರುವುದರಿಂದ ಅವರ ಸಾವು, ನೋವು, ಅಪಘಾತ, ಸುರಕ್ಷೆ, ಸುದ್ದಿಯೂ ಅಲ್ಲ, ಗಮನಹರಿಸಬೇಕಾದ ಸಮಸ್ಯೆಯೂ ಅಲ್ಲ. ಹೌದೆ? ನಿಜವೆ?  ಮುಂದೆ ಓದಿ »

Syndicate content