ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › ravikreddy ರವರ ಬ್ಲಾಗ್

ನನ್ನ ತಲೆಮಾರಿನ ತಲ್ಲಣಗಳು ಮತ್ತು ರಿವಾಲ್ವರ್‌ನಲ್ಲಿಯ ಬುಲೆಟ್

May 23, 2008 - 4:37am — ravikreddy

ನಾನು ಚುನಾವಣೆಗೆ ಸ್ಪರ್ಧಿಸುವುದಾಗಿ ಪ್ರಕಟಿಸಿದ ನಂತರ ಬಂದ ಬಹುಪಾಲು ಅಭಿಪ್ರಾಯಗಳನ್ನು ಇತ್ತೀಚೆಗೆ ತಾನೆ ವೆಬ್‍ಸೈಟಿನಲ್ಲಿ ಹಾಕಿದ್ದೇನೆ. ಭಾರತದ ನನ್ನ ತಲೆಮಾರಿನ ತಲ್ಲಣ, ಆಶಾವಾದ, ಕನಸುಗಳು, ಆದರ್ಶಗಳು, ಸಿನಿಕತೆ, ಎಲ್ಲವೂ ಇಲ್ಲಿವೆ.
http://www.ravikrishnareddy.com/feedback.html

ಇದು ಪಯಣದ ಆರಂಭ. ಜೀವನ ಸಾರ್ಥಕ್ಯದ ಕ್ಷಣಗಳು ಈಗ ಆರಂಭವಾಗಿದೆ. ಒಂದಿಡೀ ತಿಂಗಳು ಮನಸ್ಸು ಎಲ್ಲಾ ತರಹದ ಗೊಂದಲ, ಗೊಜಲು, ಆಮಿಷ, ಒತ್ತಡ, ಮಮಕಾರ, ಆಸೆ, ಆಕಾಂಕ್ಷೆ, ಭಯಗಳಿಂದ ಮುಕ್ತವಾಗಿತ್ತು. ಬಹುಶಃ ಮೊದಲ ಬಾರಿಗೆ ಅನುಭವಿಸಿದ ಆತ್ಮತೃಪ್ತಿಯ ದಿನಗಳು ಅವು. ಸಂಪೂರ್ಣ ಆದರ್ಶದಲ್ಲಿ ನಡೆದುಕೊಂಡ ಕಾಲ. ಎಲ್ಲಿಯೂ ರಾಜಿಯಾಗಲಿಲ್ಲ. ಆತ್ಮಸಾಕ್ಷಿಗೊಪ್ಪದ್ದನ್ನು ಹೇಳಲಿಲ್ಲ, ಮಾಡಲಿಲ್ಲ.

ಇನ್ನೆರಡು ದಿನದಲ್ಲಿ ಕರ್ನಾಟಕದ ಚುನಾವಣಾ ಫಲಿತಾಂಶ ಬರಲಿದೆ. ಹತ್ತು ಲಕ್ಷದ ಮಿತಿಯೊಳಗೆ, ಕಾನೂನುಬದ್ಧವಾಗಿ ಚುನಾವಣೆ ನಡೆಸಿದ ಯಾರೊಬ್ಬರೂ ಗೆಲ್ಲುವ ಸೂಚನೆಗಳು ಇಲ್ಲ. ಕೆಲವು 'ಅತಿ ಬುದ್ಧಿವಂತರು' ಚುನಾವಣಾ ಆಯೋಗ ಅಭೂತಪೂರ್ವ ಕ್ರಮಗಳನ್ನು ತೆಗೆದುಕೊಂಡಿದೆ ಎಂಬ ಅಲ್ಪಬುದ್ಧಿಗೆ, ಅಲ್ಪತೃಪ್ತಿಗೆ ಶರಣಾಗಿದ್ದಾರೆ. ಆದರೆ, ಕಾನೂನು ಜಾರಿ ಮಾಡಲಾಗದ ಚುನಾವಣಾ ಆಯೋಗವೆ ಈ ಕೆಟ್ಟ ರಾಜಕೀಯ ವ್ಯವಸ್ಥೆಯ ಮಹಾಪೋಷಕ. ಒಳ್ಳೆಯದಕ್ಕೆ ಬದಲಾಗುತ್ತಿರುವ ಮತ್ತು ಬಲವಾಗುತ್ತಿರುವ ಭಾರತದ ಕಾನೂನು ವ್ಯವಸ್ಥೆಯ ಪರ ನಾನೂ ಇದ್ದೇನೆ ಎಂಬ ಹುಸಿ ನಟನೆ ಆಯೋಗದ್ದು. ಅಭ್ಯರ್ಥಿಗಳು ಕೋಟಿಕೋಟಿ ಖರ್ಚು ಮಾಡಿ ಕೇವಲ ಒಂದೆರಡು ಲಕ್ಷಗಳ ಲೆಕ್ಕ ತೋರಿಸಿದರೂ ಆಯೋಗ ಕಣ್ಣುಮುಚ್ಚಿಕೊಂಡು ಒಪ್ಪಿಕೊಳ್ಳುತ್ತದೆ ಎಂದರೆ, ಇದೊಂದು ಪ್ರಜಾಪ್ರಭುತ್ವ ಪರವಿಲ್ಲದ, ಕಾನೂನನ್ನು ಬಿಗಿಯಾಗಿ ಜಾರಿಗೊಳಿಸಲಾಗದ ಅಧಿಕಾರಿಗಳ ಕೂಟ. ಇದು ಬದಲಾಗಬೇಕು. ಆದರೆ ಇದನ್ನು ಸಾಧಿಸುವುದು ಹೇಗೆ?

ಇನ್ನು ಎರಡು ದಿನದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶವೂ ಬರುವ ಸಾಧ್ಯತೆಗಳಿವೆ. ನಾನು ಚುನಾವಣಾ ಅಯೋಗಕ್ಕೆ ಕೊಟ್ಟಿರುವ ದೂರಿಗೆ ಇನ್ನೂ ಉತ್ತರ ಬಂದಿಲ್ಲ ಮತ್ತು ಅವರು ಮುಂದಕ್ಕೆ ಏನು ಮಾಡಲಿದ್ದಾರೆ ಎನ್ನುವ ಬಗ್ಗೆಯೂ ಗೊತ್ತಾಗುತ್ತಿಲ್ಲ. "ಮತಎಣಿಕೆ ಪ್ರಕ್ರಿಯೆಗೆ ಸ್ಟೇ ಆರ್ಡರ್ ತರಲು ಆಗುವುದಿಲ್ಲ, ಯಾವುದಕ್ಕೂ ಫಲಿತಾಂಶ ಬರುವ ತನಕ ಕಾಯಬೇಕು," ಎಂದು ವಕೀಲರು ಹೇಳುತ್ತಿದ್ದಾರೆ. ಕೇಸು ಹಾಕಲು ಕೆಲವು ದಾಖಲೆಗಳು ಬೇಕಾಗಿವೆ. ಆಯೋಗ ನಮಗೆ ಒದಗಿಸಬೇಕಾದ ದಾಖಲೆಗಳನ್ನು ಇನ್ನೂ ಒದಗಿಸಿಲ್ಲ. ಏನೇ ಇರಲಿ, ಒಂದು ಸುದೀರ್ಘವಾದ ಕಾನೂನು ಸಮರಕ್ಕೆ ಎಲ್ಲಾ ಸಜ್ಜಾಗುತ್ತಿದೆ. ಸದ್ಯದ ಗುರಿ, "ಜಯನಗರ ಕ್ಷೇತ್ರದಲ್ಲಿ ಮರುಚುನಾವಣೆ ನಡೆಯುವಂತೆ ಮಾಡಬೇಕು ಮತ್ತು ಆಗ ಯಾವೊಬ್ಬ ಅಭ್ಯರ್ಥಿಯೂ ಹತ್ತು ಲಕ್ಷದ ಮಿತಿಗಿಂತ ಹೆಚ್ಚಿಗೆ ಖರ್ಚು ಮಾಡಬಾರದ ಕಾನೂನು ಜಾರಿಯಾಗುವಂತೆ ಮಾಡಬೇಕು," ಎನ್ನುವುದು. ಇದು ಕೇವಲ ಕರ್ನಾಟಕಕ್ಕಷ್ಟೇ ಅಲ್ಲದೆ, ಇಡೀ ದೇಶದ ಕಾನೂನು ಉಲ್ಲಂಘಕ ಅನೈತಿಕ ರಾಜಕಾರಣಿಗಳಿಗೆ ಮತ್ತು ಭ್ರಷ್ಟ ವ್ಯವಸ್ಥೆಗೆ ಸ್ಪಷ್ಟ ಸಂದೇಶ ರವಾನಿಸುತ್ತದೆ ಮತ್ತು ಮೌಲ್ಯ ಮತ್ತು ನೈತಿಕತೆ ಇರುವ ಯೋಗ್ಯರು ಸಾರ್ವಜನಿಕ ಬದುಕಿಗೆ ಬರಲು ಪ್ರೇರೇಪಿಸುತ್ತದೆ. ಸದ್ಯದ ಫಲಿತಾಂಶ ಮತ್ತು ಕೇಸು ಏನೇ ಆಗಲಿ, ಅಂತಿಮ ಗುರಿ ಇದೇನೆ.

ಕಳೆದ ಎರಡು ದಿನಗಳಿಂದ ನನ್ನ ವೈಯಕ್ತಿಕ ಸರಹದ್ದಿನಲ್ಲಿ ಆಗುತ್ತಿರುವ ಘಟನೆಗಳ ರೂಪಕ ಹೀಗಿದೆ:

ನಾನದನ್ನು ಬಯಸಿರಲಿಲ್ಲ. ಆದರೆ, ಸಮಯ ಮತ್ತು ಸಂದರ್ಭ ನನ್ನ ಕೈಯ್ಯಲ್ಲಿ ರಿವಾಲ್ವರ್ ಇಟ್ಟಿದೆ. ಟ್ರಿಗರ್ ಒತ್ತಲೇಬೇಕಾದ ಅನಿವಾರ್ಯತೆಯನ್ನೂ ನಿರ್ಮಿಸಿದೆ. ಈ ರಿವಾಲ್ವರ್‍‌ನಲ್ಲಿ ಗುಂಡು ಇದೆಯೊ ಇಲ್ಲವೊ ನನಗೆ ಗೊತ್ತಿಲ್ಲ. ಪಿಸ್ತೂಲಿನ ಅತ್ತ ಇರುವವರಲ್ಲಿ ಕೆಲವರು ಅಕ್ಷರಶಃ ಕಣ್ಣೀರು ಹಾಕುತ್ತಿದ್ದಾರೆ. ಅವರಿಗೆ ಅದರಲ್ಲಿ ಅವರಿಗಷ್ಟೆ ತಗಲುವ ಬುಲೆಟ್ ಇದೆ ಎಂಬ ಭಯ. ನಾನಂತೂ ಟ್ರಿಗರ್ ಒತ್ತುತ್ತೇನೆ. ಅದು ಪಾಲಿಗೆ ಬಂದಿರುವ ಕರ್ತವ್ಯ. ಅತ್ತ ಕಡೆಯವರೆಲ್ಲರಿಗೂ ತಗಲುವ ಗುಂಡು ಇದರಲ್ಲಿ ಇದ್ದದ್ದೇ ಆದರೆ, ಆದರ್ಶ ರಾಜಕೀಯದ ಭವಿಷ್ಯ ನಿರ್ಮಾಣದ ಹೊಸ್ತಿಲಲ್ಲಿ ನಾವಿದ್ದೇವೆ.

~.~
  • ravikreddy ರವರ ಬ್ಲಾಗ್
  • Login or register to post comments
  • 214 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನನ್ನ ಐಟಿ ಸಹಬಾಂಧವರಿಗೊಂದು ಪತ್ರ...
  • ಚುನಾವಣೆ ಸ್ಪರ್ಧಿಸಿದ ಸಾಫ್ಟ್‍ವೇರ್ ಇಂಜಿನಿಯರ್
  • ಬಂದಿದೆ ಚುನಾವಣೆ
  • ಐಟಿ ಜನರು ಸ್ವಾರ್ಥಿಗಳು ಮತ್ತು ಸ್ವಂತದ್ದನ್ನು ಮಾತ್ರವೆ ಯೋಚಿಸುವವರು
  • ಕಾನೂನು ಉಲ್ಲಂಘಿಸಲು ಕಾನೂನು ಪದವಿ
Syndicate content

ಲೇಖಕರು

ravikreddy's picture

ಪೂರ್ಣ ಹೆಸರು
ರವಿ ಕೃಷ್ಣಾ ರೆಡ್ಡಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ

— ನೆಪೊಲಿಯನ್ ಬೊನಾಪಾರ್ಟೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator