ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › roopablrao ರವರ ಬ್ಲಾಗ್

ಹೃದಯದ ಭಾವನೆಗಳ ಕನ್ನಡಿ

ಮನಸಿನ ಮಾತು ಹೊರಗೆ ಬಂದರೆ ಮನದ ದುಗುಡ ಕಡಿಮೆಯಾಗುತ್ತದೆ. ಸಂತೋಷ ಹೆಚ್ಚಾಗುತ್ತದೆ ಎಂದು ನಂಬಿರುವಳು ನಾನು ಹಾಗಾಗಿ ನನ್ನ ಮನದಲ್ಲಿ ಮೂಡಿದ ಭಾವನೆಗಳು ನನ್ನ ತೆರೆದ ಮನದಲ್ಲಿ ಪ್ರತ್ಯಕ್ಷವಾಗುತ್ತವೆ

(ಅವಳು )ಕಲ್ಪನೆಯಯೋ ಅಥವ ನಿಜವೇ?

March 20, 2008 - 8:12pm — roopablrao

ಆ ಹುಡುಗ 21ರ ಆಸುಪಾಸಿನವನಿರಬೇಕು . ಪ್ರತಿಷ್ಟಿತ ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿ ಎನಿಸಿಕೊಂಡಿದ್ದ. ಓದಿನಲ್ಲಿ ನಡತೆಯಲ್ಲಿ ನಂಬರ್ 1 . ಯಾವ ಹುಡುಗಿಯರ ಹಿಂದೆ ಬಿದ್ದ ಉದಾಹರಣೆ ಇರಲಿಲ್ಲ

 ಹೀಗಿದ್ದ ಹುಡುಗ ಒಮ್ಮೆ ಚಾಟ್ ಮಾಡುವಾಗ ಕಾಣಿಸಿತು ಆ ಹೆಸರು "ಐಶ್ವರ್ಯ" ಹೆಸರಿನ ಮಹಾತ್ಮೆ ಯಿಂದಲೋ ಅಥವ ಕುತೂಹಲದಿಂದಲೋ ಆ ಹೆಸರಿನ ಜೊತೆ ಚಾಟ್ ಮಾಡಿದ. ಆ ಕಡೆಯವಳು ಮಂಗಳೂರಿನವಳು ಎಂದು ತಿಳಿಯಿತು. ಅವಳ ಹೆಸರೇ ಐಶ್ವರ್ಯ ಎಂದೂ ಅರಿವಾಯಿತು

ಚಾಟ್ ಮಾಡುತ್ತಾ ಮಾಡುತ್ತಾ ಅವರಿಬ್ಬರ ಆಸಕ್ತಿ, ಗುರಿ , ಓದು ಎಲ್ಲಾ ಒಂದೇ ಅಗಿದ್ದು ಕೂಡ ತಿಳಿಯಿತು.

ಮತ್ತೆ ಇನ್ನೇನು ಬೇಕು ಸ್ನೇಹಕ್ಕೆ . ನೆಟ್‌ನಲ್ಲಿ ಸ್ನೇಹ ಬೆಳೆಯಿತು. ನಂತರ ಕೆಲದಿನಗಳಲ್ಲಿ ಸ್ನೇಹ ಪ್ರೀತಿಯಾಗಿ ಬದಲಾಗುವಾಗ ಆತನ ಸ್ನೇಹಿತರು ಎಚ್ಚರಿಸಿದರು" ಆ ಕಡೆ ಇರುವವರು ಹುಡುಗಿ ಎಂದು ಹೇಗೆ ಹೇಳುವೆ? ಮೊದಲು ಫೋನ್ ನಂಬರ್ ಕೇಳು" ಎಂದರು.

ಈತ ಕೇಳಿದ ಆಕೆ ತಾನು ಚಾಟ್ ಮಾಡುವ ಸೆಂಟರ್‌ನ ನಂಬರ್ ಕೊಟ್ಟಳು . ಈ ಹುಡುಗ ಅಲ್ಲಿಗೆ ಫೋನ್ ಮಾಡಿದ . ಅಲ್ಲಿ ಫೋನ್ ಎತ್ತಿದ್ದು ಆಕೆಯೆ . ಆಕೆಯ ಮಧುರ ವಾಣಿ ಕೇಳುತ್ತಲೇ ಈ ಹುಡುಗ ಕುಣಿದಾಡಿದ .

ಫೋನ್‌ನಲ್ಲಿ ಕೆಲ ವಿಚಾರಗಳನ್ನು ಹಂಚಿಕೊಂಡರು.

 ಕೆಲದಿನಗಳಾದ ಮೇಲೆ ಅವಳ ಫೋಟೊ ಕೇಳಿದ ಆಕೆ ಕಳಿಸಿದಳು(ತನ್ನ ಫೋಟೊವನ್ನು ಕೂಡ ಕಳಿಸಿದ) . ಫೋಟೊ ನೋಡಿ ದಂಗಾದ. ಅಷ್ಟು ಸುಂದರಿಯಾಗಿದ್ದಳು. ಸಾಕ್ಷಾತ್ ಐಶ್ ಸಹ ಅವಳ ಮುಂದೆ ಏನೂ ಇಲ್ಲ ಅನಿಸಿತು. ಅಂತಹ ಸುಂದರಿ ತನಗೆ ಸಿಕ್ಕಿದ್ದು ತನ್ನ ಲಕ್ ಎಂದೆ ಭಾವಿಸಿದ.

 ನಂತರ ಪ್ರೇಮವನ್ನು ನಿವೇದಿಸಿದ . ಅವಳಿಂದ ಒಪ್ಪಿಗೆ ಸಿಕ್ಕಿದ ಮೇಲೆ ಶುರುವಾಯಿತು ಇವರ ಮೈಲ್ ಲವ್. ಅವನಿಗೆ ಓದು ಬೇಕಿರಲಿಲ್ಲ .ಅವಳ ಮೇಲ್ ಒಂದು ದಿನ ಬರಲಿಲ್ಲವೆಂದರೂ ಚಡಪಡಿಸುತಿದ್ದ.

 ಹೀಗಿದ್ದಾಗ ಬಂತು ವ್ಯಾಲೆಂಟಿನೆ ಡೇ . ಏನು ಉಡುಗೊರೆ ಕೊಡುವೆ ಎಂದು ಕೇಳಿದಳು. ಕಾದು ನೋಡು ಎಂದು ಮೇಲ್ ಕಳಿಸಿದ .

ಕೆಲ ದಿನಗಳಲ್ಲಿ ಅವನ ಎದೆಯ ಮೇಲೆ ತೋಳಿನ ಮೇಲೆ ಐಶ್ವರ್ಯ ಎಂಬ ಹೆಸರು ಹಚ್ಚೆ ಹಾಕಿಸಿಕೊಂಡಿದ್ದ .

ನಿನಗಾಗಿ ಏನು ಮಾಡಲೂ ಸಿದ್ದ ಎಂದು ರಕ್ತದಲ್ಲಿ ಬರೆದ ಹಾಳೆ ಹಾಗು ತನ್ನ ಎದೆ ತೋಳಿನ ಮೇಲೆ ಬರೆದು ಕೊಂಡಿದ್ದ ಹಚ್ಚೆಯನ್ನು ಫೋಟೊ ತೆಗೆದು ಸ್ಕಾನ್ ಮಾಡಿ ಕಳಿಸಿದ

ಅಷ್ಟೇ ನಂತರದ ದಿನಗಳಲ್ಲಿ ಅವಳಿಂದ ಒಂದು ಮೈಲ್ ಅಥವ ಒಂದು ಫೋನ್ ಸಹ ಬರಲಿಲ್ಲ .

ಕೆಲ ದಿನಗಳು ಕಾದು ಆ ಸೆಂಟರ್‌ಗೆ ಫೋನ್ ಮಾಡಿದ . ಅಲ್ಲಿ ಆ ಹೆಸರಿನವರು ಯಾರು ಇಲ್ಲವೆಂದರು.

 ನಂತರ ಅವಳು ಹೇಳಿದ್ದ ಕಾಲೇಜಿಗೆ ಫೋನ್ ಮಾಡಿ ವಿಚಾರಿಸಿದರೆ ಅಲ್ಲೂ ಅದೇ ಉತ್ತರ. ಈ ಹುಡುಗ ಗೊಂದಲದಿಂದ ಹಣ್ಣಾಗಿದ್ದ .

 ಯಾರೋ ತನ್ನ ಐಶ್ ಅನ್ನು ಎಗರಿಸಿದ್ದಾರೆ. ಅವಳು ಆಪತ್ತಿನಲ್ಲಿದ್ದಾಳೆ ಎಂದುಕೊಂಡು ಅವಳನ್ನು ನೋಡಲು ಅವಳಿರುವ ಮಂಗಳೂರಿಗೆ ಹೋಗಬೇಕೆನ್ನುವಾಗ ಅವನ ಮೇಲ್‌ಗೆ ಬಂತೊಂದು ಪತ್ರ

ಅನಾಮಿಕ ಎಂದಿದ್ದ್ ಆ ಪತ್ರ ಹೀಗಿತ್ತು

ಹಾಯ್ ನಿಮಗೆ ವಿಷಯ ತಿಳಿಸುವ ಮೊದಲು ನಿಮ್ಮ ಕ್ಷಮೆಯನ್ನು ಕೇಳುವೆ.

 ನಾನು ಮಂಗಳೂರಿನ ಒಬ್ಬ ಹುಡುಗ. ಹುಡುಗಿಯರ ಹಿಂದೆ ಬೀಳುವ ಹುಡುಗರನ್ನು ಗೋಳು ಹೊಯ್ದುಕೊಳ್ಳುವುದೇ ನನ್ನ ಕೆಲಸ. ನಾನು ಮಿಮಿಕ್ರಿಯಲ್ಲಿ ಪರಿಣಿತ.ನೀವು ಐಶ್ ಎಂದು ಭಾವಿಸಿ ಮಾತನಾಡಿದ್ದು ಚಾಟ್ ಮಾಡಿದ್ದು ನನ್ನೊಡನೆಯೇ.

ನಾನು ಕಳಿಸಿದ ಫೋಟೊ ನಮ್ಮ ಅಜ್ಜಿಯ ಚಿಕ್ಕ ವಯಸ್ಸಿನದು . ಅವರು ಈಗ ಭೂಮಿಯ ಮೇಲೆ ಇಲ್ಲ ಹಾಗಾಗಿ ಅವರ ಫೋಟೊವನ್ನು ಬಣ್ಣ ಹಚ್ಚಿ ಅದಕ್ಕೆ ಮಾಡ್ ಉಡುಪು ಆಂಟಿಸಿ ಕಳಿಸಿದೆ. ನಾನು ಈ ರೀತಿ ಎಲ್ಲರಿಗೂ ಮಾಡುತ್ತಿದ್ದೆ.

ಆದರೆ ನಿಮ್ಮ ಪ್ರೇಮದ ತೀವ್ರತೆ ಅದಕ್ಕೆ ನೀವು ಕೊಡುತಿದ್ದ ಗೌರವ ನನ್ನನ್ನು ಮೂಕನನ್ನಾಗಿ ಮಾಡಿದೆ. ಇನ್ನೂ ನಿಮ್ಮನ್ನ ಆ ಪ್ರೇಮದ ಹುಚ್ಚಿನಲ್ಲಿ ಇಡುವುದು ಸರಿಯಲ್ಲ ಅನಿಸಿತು .

ಆ ಐಶ್ವರ್ಯ ಎನ್ನುವುದು ಒಂದು ಕಲ್ಪನೆ . ಅದನ್ನು ಮರೆತು ಬಿಡಿ ಯಾರೋ ಗೊತ್ತಿಲ್ಲದವಳಿಗಾಗಿ ನಿಮ್ಮ ರಕ್ತ , ದೇಹವನ್ನು ಹಾನಿ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ

ಮತ್ತೊಮ್ಮೆ----------

 ನಿಮ್ಮ ಭಾವನೆಗಳೊಂದಿಗೆ ಚೆಲ್ಲಾಟ ವಾಡಿದ್ದಾಕ್ಕಾಗಿ ಕ್ಷಮಿಸಿ

--- ಅನಾಮಿಕ

ಮೇಲ್ ನೋಡಿ ಏನು ಮಾಡಬೇಕೊ ಎಂದು ತಿಳಿಯಲಿಲ್ಲ .

 ಅವಳು ಕಲ್ಪನೆ ಎಂದು ಮನಸ್ಸು ಒಪ್ಪಲು ಸಾಧ್ಯವಿರಲಿಲ್ಲ . ರೂಮಿಗೆ ಹೋಗಿ ಬಿಕ್ಕಳಿಸಿ ಅಳಲಾರಂಭಿಸಿದ.

8 ವರ್ಷಗಳ ನಂತರ

ಆ ಹುಡುಗ ಈಗ ಗೃಹಸ್ತನಾಗಿ ಬದಲಾಗಿದ್ದ. ಹೆಂಡತಿಯ ಬಲವಂತ ತಾಳಲಾರದೆ ಅವಳನ್ನು ಮಲ್ಪೆ ಬೀಚ್‌ಗೆ ಕರೆದು ತಂದಿದ್ದ . ಹೆಂಡತಿ ಮಗನೊಡನೆ ಆಟವಾಡುತ್ತಿದ್ದಾಗ .......

, ಆ ಜೋಡಿ ಕಣ್ಣಿಗೆ ಬಿತ್ತು

ಆಕೆಯ ಮುಖ ಬಹಳ ಪರಿಚಿತ ಅನ್ನಿಸಿತು. ಮಿಂಚು ಹೊಡೆದಂತಾಯಿತು.

ಹೌದು ಅವಳೇ ತನ್ನ ಐಶ್ವರ್ಯ . ಫೋಟೋದಲ್ಲಿ ನೋಡಿದ್ದ ಮುಖ ಅವಳದೇ... ಹಾಗಿದ್ದರೇ ಅವಳು ಕಲ್ಪನೆಯಲ್ಲವಾ?

ಆಕೆ ಇವನನ್ನು ಒಮ್ಮೆ ನೋಡಿ ತನ್ನ ಸಂಗಾತಿಯ ಕೈ ಹಿಡಿದುಕೊಂಡು ದೂರ ಕರೆದುಕೊಂಡು ಹೋದಳು.

ಹೋಗುವಾಗ ಇವನನ್ನು ಮತ್ತೊಮ್ಮೆ ನೋಡಿದಳು . ಕಣ್ಣಲ್ಲಿ ನೀರಿತ್ತಾ ? ಅವನಿಗೆ ತಿಳಿಯಲಿಲ್ಲ .

ಆದರೆ ಅವಳೆ ಐಶ್ ಎಂದು ಖಾತರಿಯಾಯಿತು. ಹಾಗೆ ನೋಡುತ್ತಲೇ ಇದ್ದ . ಅವಳು ಮರೆಯಾಗುವ ವರೆಗೆ.......

[ಓದುಗರಿಗೆ. ಇಲ್ಲಿ ಐಶ್ ಯಾಕೆ ಹಾಗೆ ಮಾಡಿದಳು ಅಥವ ಅವಳು ಅವಳೇನಾ ಅಥವ ಅಲ್ಲವ ಎಂಬುದನ್ನು ನೀವೆ ಊಹಿಸಿ . ಹಾಗು ನಮ್ಮೊಡನೆ ಹಂಚಿಕೊಳ್ಳಿ]

  • ಸಣ್ಣಕತೆ
~.~
  • roopablrao ರವರ ಬ್ಲಾಗ್
  • Login or register to post comments
  • 356 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 20, 2008 - 10:55pm — bachi

ಉ: (ಅವಳು )ಕಲ್ಪನೆಯಯೋ ಅಥವ ನಿಜವೇ?

bachi's picture

ಐಶ್ ಅವಳೇ ಎನ್ನುವುದರಲ್ಲಿ ಸಂದೇಹವೇ ಇಲ್ಲ. ಏಕೆಂದರೆ, "ಆ ಹುಡುಗ"ನನ್ನು ನೋಡಿದ ತಕ್ಷಣ ತನ್ನ ಸಂಗಾತಿಯನ್ನು "ಎಳೆದುಕೊಂಡು" ಬೇರೆಯ ಕಡೆ ಹೊರಟುಹೋದಳಲ್ಲ! ಬೇರೆ ಹುಡುಗಿಯಾಗಿದ್ದರೆ ಇವನ ನೋಟಕ್ಕೆ ಅಷ್ಟು ಗಮನ ಕೋಡುತ್ತಿರಲ್ಲಿಲ್ಲ. ಏನು, ನನ್ನ ಉತ್ತರ ಸರಿ ತಾನೆ?

ಅದರೆ, ಐಶ್ ಳ ಪ್ರತಿ"ರೂಪ"ದಂತಿರೋ ನೀವು, ನಿಮ್ಮ ಕಥೆಗಳನ್ನು ಆಸಕ್ತಿಯಿಂದ ಓದುವ ನನ್ನಂಥ ಹುಡುಗರ ಮೇಲೆ ಪ್ರಯೋಗ ಮಾಡಬೇಡಿ ಪ್ಲೀಜ್...Smiling

ಬಾchi - www.sumneblog.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 21, 2008 - 10:17am — gururajkodkani

ಉ: (ಅವಳು )ಕಲ್ಪನೆಯಯೋ ಅಥವ ನಿಜವೇ?

gururajkodkani's picture

ಗುರುರಾಜ ಕೊಡ್ಕಣಿ

ಮತ್ತೊ೦ದು ಸು೦ದರ ಕತೆ ರೂಪಾ ಅವರಿ೦ದ. ಇಲ್ಲಿ ಅವಳೇ ಐಶ್ವರ್ಯ ಎನ್ನುವುದು, ಕತೆಯ ಕೊನೆಯಲ್ಲಿಯೇ ಖಾತ್ರಿಯಾಗಿದೆ.ಅವಳು ಆ ರೀತಿ ಮಾಡಲು ಅವಳಿಗೆ ಸಾವಿರ ಕಾರಣಗಳಿರಬಹುದು.ಕೌಟು೦ಬಿಕ ಒತ್ತಡ,ಜಾತಿ ಕಾರಣಗಳು,ಪ್ರೇಮ ವಿವಾಹಗಳ ಮೇಲಿನ ಅಪನ೦ಬಿಕೆ,ಇತ್ಯಾದಿ ಇತ್ಯಾದಿ.ಓದಿನಲ್ಲಿ ನ೦ ೧ ಆಗಿದ್ದವನು ಈ ಪ್ರೇಮ ವಿಫಲತೆಯ ನ೦ತರವೂ ನ೦ ೧ ಆಗಿಯೇ ಉಳಿದ್ದಿದ್ದನಾ..? ಅಥವಾ ಜೀವನದಲ್ಲಿ ಯಶಸ್ಸು ಸಾಧಿಸಬೇಕಾಗಿದ್ದವನು,ಈ ಪ್ರೇಮ ವಿಫಲತೆಯ ನ೦ತರ ಜೀವನದಲ್ಲಿ ಸೋತ ಜನರ ತ೦ಡ ಸೇರಿಕೊ೦ಡುಬಿಟ್ಟನಾ ? ಇದು ನನ್ನಲ್ಲಿ ಉಳಿದ ಪ್ರಶ್ನೆ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 21, 2008 - 10:26am — roopablrao

ಉ: (ಅವಳು )ಕಲ್ಪನೆಯಯೋ ಅಥವ ನಿಜವೇ?

roopablrao's picture

ಗುರುರಾಜ್ರ್‌ರವರೇ,

ಆ ಅನಾಮಿಕನ ಪತ್ರ ಅವನನ್ನು ಕೆಲ ದಿನಗಳವರೆಗೆ ಕಾಡಿತ್ತಾದರೂ , ಅದು ವರ್ಚುಯಲ್ ಪ್ರೇಮ ಎಂಬುದು ಗೊತ್ತಾದ ನಂತರ ಹುಡುಗ ಮತ್ತೆ ಮೊದಲಿನಂತಾಗದಿದ್ದರೂ ಭಗ್ನ ಪ್ರೇಮಿಯಾಗುವುದಿಲ್ಲ . ಅವಳ (?) ನೆನಪು ಹಸಿರಾಗಿದ್ದರೂ ಅದನ್ನು ನೆನೆಸಿಕೊಂಡು ಜೀವನದಿಂದ ಹಿಮ್ಮುಖನಾಗಿ ಓಡುವುದಿಲ್ಲ.
ಅವನು ಒಂದರ್ಥದಲ್ಲಿ ಸೋತಿರಬಹುದು ಆದರೆ ಆ ಅನಾಮಿಕನ ಪತ್ರ ಅವನನ್ನು ಜೀವನದಲ್ಲಿ ನಡೆಯುವಂತೆ ಮಾಡಿದೆ.

ಸುಪ್ತ ಮನಸಿನ ಕನವರಿಕೆಗಳೊಂದಿಗೆ
ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 25, 2008 - 2:49pm — ನಾನು

ಉ: (ಅವಳು )ಕಲ್ಪನೆಯಯೋ ಅಥವ ನಿಜವೇ?

ನಾನು's picture

ಅವಳು("ಐಶ್") ಅವನನ್ನು ಪ್ರೀತಿಸಲೆ ಇಲ್ಲ .
ನೀವು ಕತೆಯನ್ನ ಹುಡುಗನ ಸುತ್ತ ಬರೆದಿದೀರಿ.ಹುಡುಗಿಯ ಮನಸಲ್ಲಿ ಪ್ರೀತಿ ಇಲ್ಲದೆ ಇರಬಹುದು.

ಆದರೂ ಕತೆ ಚೆನ್ನಾಗಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಎಲ್ಲೆಲ್ಲೂ ಇ-ಮೇಲು, ಆ ಮೇಲು…!
  • ಕತೆಯಾಗದ ಹುಡುಗಿ
  • ಸಿಪ್ಪೆ ಸಮೇತ ತಿನ್ನುವುದು
  • ನಗೆ ಗವನ
  • ಈ ಹುಡುಗರೇಕೆ ಹೀಗೆ
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:01pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 27 ಅತಿಥಿಗಳು ಆನ್ಲೈನ್ ಇರುವರು.


ಕುಲಗೆಟ್ಟವರ ಚಿಂತೆ | ಒಳಗಿರ್ಪರಂತಲ್ಲ |
ಕುಲಗೆಟ್ಟು ಶಿವನ ಮರೆಹೊಕ್ಕು ಋಷಿಗಳು |
ಕುಲವಾದರಯ್ಯ ಸರ್ವಜ್ಞ ||

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator