ವಿಶ್ವಮಾನವ - ಕನ್ನಡದೊಳ್ ಭಾವಿಸಿದ ಜನಪದಂ
'ವಿಶ್ವಮಾನವ' ಎಂದಾಕ್ಷಣ ನಮಗೆ ನೆನಪಾಗುವುದು ನಮ್ಮ ರಾಷ್ಟ್ರಕವಿ ಶ್ರೀಕುವೆಂಪು. 'ಮನೆಯನೆಂದೂ ಕಟ್ಟದಿರು, ನೆಲೆಯನೆಂದೂ ಮುಟ್ಟದಿರು, ನೀ ಅನಂತವಾಗಿರು,' 'ಓ ನನ್ನ ಚೇತನ, ಆಗು ನೀ ಅನಿಕೇತನ', 'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು', ಎಂದು ಕರೆ ನೀಡುವ ಮೂಲಕ ಇಡೀ ಕನ್ನಡ ವಿಶ್ವಕ್ಕೆ 'ವಿಶ್ವಮಾನವ' ಸಂದೇಶವನ್ನು ನೀಡಿದ ಈ ಶತಮಾನದ ಸಾಹಿತ್ಯ ಶಿಖರ ಅವರು. ಅವರ 'ವಿಶ್ವಮಾನವ' ಸಂದೇಶವನ್ನು ನಾವೆಲ್ಲರೂ ನಡೆ,ನುಡಿಯಲ್ಲಿ ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ. ಹಾಗಾಗಿ, ಜಾತಿ, ಮತ, ಧರ್ಮ ಎಲ್ಲಾ ಜೊಳ್ಳುಗಳ ಹೊಟ್ಟು ತೂರಿ 'ವಿಶ್ವಮಾನವ'ನಾಗುವ ನನ್ನ ಪ್ರಯತ್ನದ ಒಂದು ಅಭಿವ್ಯಕ್ತಿಯೇ ಈ ಜಾಲತಾಣ.
ಹಾಗೆಯೇ, ತಮ್ಮ ಉನ್ನತ ಬದುಕಿನ ಮೂಲಕ ಮಾನವ ಕುಲಕ್ಕೇ ಬೆಳಕು ತೋರಿದ ಬುದ್ಧ, ಮಹಾವೀರ, ಅಲ್ಲಮ, ಬಸವರಾದಿಯಾಗಿ, ನಮ್ಮೆಲ್ಲಾ ವಚನಕಾರರು, ಆಧುನಿಕ ಭಾರತದ ಸಂತರೆಂದೇ ಹೇಳಬಹುದಾದ ಶ್ರೀರಾಮಕೃಷ್ಣ, ಶ್ರೀರಮಣ, ಶ್ರೀ ಅರವಿಂದರು, ಶ್ರೀ ಸ್ವಾಮಿ ವಿವೇಕಾನಂದರು, ಜಿಡ್ಡು ಕೃಷ್ಣಮೂರ್ತಿ, ಗಾಂಧಿ, ಓಶೋ ಮುಂತಾದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತಾ ನನ್ನ ಅನುಭವಕ್ಕೆ ಬರುವುದರಲ್ಲಿ ನಾನು ಅಭಿವ್ಯಕ್ತಗೊಳಿಸಬಹುದಾದವನ್ನು ಸಹೃದಯ ಓದುಗ ಮಿತ್ರರೊಂದಿಗೆ ಹಂಚಿಕೊಳ್ಳುವ ಒಂದು ಚಿಕ್ಕ ಪ್ರಯತ್ನವಾಗಿ ರೂಪುಗೊಂಡಿರುವ ಈ ಬ್ಲಾಗನ್ನು ಸಮಸ್ತ ಕನ್ನಡ ಬಾಂಧವರಿಗೆ ಅರ್ಪಿಸುತ್ತಿದ್ದೇನೆ.
shashikannada ರವರ ಬ್ಲಾಗ್
ಕಾಶ್ಮೀರದ ನಾಡ್ಗಿಚ್ಚು ನಂದೀತು ಎಂದು?
August 30, 2008 - 7:12pm — shashikannadaಪ್ರಸ್ತುತ ಕಾಶ್ಮೀರದಲ್ಲಿ ಉಂಟಾಗಿರುವ ಅಮರ್ನಾಥ್ ಭೂವಿವಾದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನಿನ್ನೆ "ಕಾಶ್ಮೀರ ಯಾರಿಗೆ ಸೇರಿದ್ದು" ಎನ್ನುವ ಲೇಖನವನ್ನು ನನ್ನ ಬ್ಲಾಗ್ನಲ್ಲಿ ಪ್ರಕಟಿಸಿದ್ದೆ. ಮುಂದೆ ಓದಿ »

ಕಾಶ್ಮೀರ ಯಾರಿಗೆ ಸೇರಿದ್ದು?
August 24, 2008 - 1:50pm — shashikannadaಭಾರತ ಪಾಕಿಸ್ತಾನಗಳೆರಡಕ್ಕೂ ಸ್ವಾತಂತ್ರ್ಯ ದೊರೆತು 60 ವರುಷಗಳೇ ಕಳೆದರೂ ಇನ್ನೂ ಬಗೆಹರಿಸಲಾಗದ, ಬದಲಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುವ ಭಾರತದ ಶಿರಸ್ಥಾನದಲ್ಲಿರುವ ಕಾಶ್ಮೀರ ಭೂ ಪ್ರದೇಶದ ಸದಾ ಚಾಲ್ತಿಯಲ್ಲಿರುವ ಸಂಘರ್ಷಕ್ಕೆ ವರ್ಷಕ್ಕೊಮ್ಮೆ ಜರುಗುವ "ಅಮರ್ನಾಥ್ ಯಾತ್ರೆ"ಯಿಂದಾಗಿ ಮತ್ತಷ್ಟು ಪುಷ್ಟಿ ದೊರಕಿದೆ ಎಂದೆನಿಸುತ್ತೆ. ಮುಂದೆ ಓದಿ »

- Login or register to post comments
- 105 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಅಣು ಒಪ್ಪಂದದಿಂದ ನಮಗೇನು ಲಾಭ, ನಿಮಗೇನಾದ್ರೂ ಗೊತ್ತಿದೆಯೇ?
July 22, 2008 - 3:51pm — shashikannadaಜುಲೈ 22, 2008. ಆಡಳಿತ ಪಕ್ಷ, ವಿರೋಧ ಪಕ್ಷಗಳು ಸೇರಿದಂತೆ ರಾಷ್ಟ್ರದ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶಿಸಲು (ತಿಳಿದುಕೊಳ್ಳಲು), ಮುಂಬರಲಿರುವ ಚುನಾವಣೆಯಲ್ಲಿ ತಮ್ಮ ಹಣೆಬರಹವನ್ನು ಪರೀಕ್ಷಿಸಿಕೊಳ್ಳಲು ಕೆಳಮನೆ ಲೋಕಸಭೆಯಲ್ಲಿ ವೇದಿಕೆ ಸಿದ್ಧವಾಗಿದೆ (ಅಲ್ಲಿಯವರೆಗೆ ಈ ಲೆಕ್ಕಾಚಾರ ತಲೆಕೆಳಗಾಗಬಹುದೇನೋ!). ಮುಂದೆ ಓದಿ »

ಈ ಸಂಭಾಷಣೆ...ಈ ಪ್ರೇಮ ಸಂಭಾಷಣೆ...!
July 17, 2008 - 6:30pm — shashikannadaಗಮನಿಸಿ: ಈ ಸಂಭಾಷಣೆಯಲ್ಲಿ ಬ್ರ್ಯಾಕೆಟ್ ಒಳಗಿರುವುದು ಹುಡುಗ ತನ್ನಂತಾನೇ ಮಾತಾಡಿಕೊಳ್ಳುವುದು
-------------------------------------------------------------------------
ಅವಳು ಅವನಿಗೆ ಎಂದಿನಂತೆ ಮಿಸ್ಡ್ ಕಾಲ್ ಕೊಟ್ಟಳು. ಅವನೂ ಸಹ ಎಂದಿನಂತೆ ಆ ಕಡೆಯಿಂದ ಕಾಲ್ ಮಾಡಿದ.
ಅವಳು: ಹಲೋ..
ಅವನು: (ಅಯ್ಯೋ ದೇವರೇ...ಇವತ್ತೇನು ಗ್ರಹಚಾರ ಕಾದಿದೆಯೋ?) ಹಾಯ್, ಏನೇ ಸಮಾಚಾರ...?
ಅವಳು: ಏನೂ ಇಲ್ಲ...ಹೀಗೇ ಕಾಲ್ ಮಾಡಿದೆ... ಮುಂದೆ ಓದಿ »

ಬೆಂಗಳೂರಿನಲ್ಲಿ 2-3 ದಿನ ನೀರಿಗೆ ಹಾಹಾಕಾರ!
July 15, 2008 - 4:38pm — shashikannadaಬೆಂಗಳೂರಿನ ಬಾಂಧವರೇ,
ಇತ್ತೀಚೆಗೆ ಬಂದ ಸುದ್ದಿಯೊಂದರ ಪ್ರಕಾರ ಬೆಂಗಳೂರಿನೆಲ್ಲೆಡೆ ಇನ್ನೂ 2-3 ದಿನಗಳ ಕಾಲ ಬರ ಉಂಟಾಗಲಿದೆ.
ಕಾವೇರಿ 4ನೇ ಹಂತದಲ್ಲಿ ಪ್ರಮುಖ ನೀರು ಪೂರೈಕೆ ಲೈನನ್ನು ಮರುಜೋಡಿಸುವ ಕೆಲಸ ನಡೆಯಲಿರುವುದರಿಂದ ಉಚ್ಚನ್ಯಾಯಾಲಯದ ನಿರ್ದೇಶನದಂತೆ ನೀರು ಪೂರೈಕೆಯನ್ನು ನಿಲ್ಲಿಸಲಾಗುವುದು ಎಂದು ತಿಳಿದುಬಂದಿದೆ. ಮುಂದೆ ಓದಿ »



RSS: