Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › shobha.koppad ರವರ ಬ್ಲಾಗ್

ಹಾಗೆ ಸುಮ್ಮನೆ...

ಮನಸ್ಸಿಗೆ ಅನಿಸಿದ ೪ ಮಾತು ಹಾಗೆ ಸುಮ್ಮನೆ ...

ಹೀಗೊಂದು ಊರು !

May 1, 2008 - 10:29pm — shobha.koppad

ಸಾಮಾನ್ಯವಾಗಿ ನಮ್ಮ ಹಳ್ಳಿಗಳು ಅಂದ್ರೆ ಟಾರ್ ಇಲ್ಲದ ರಸ್ತೆಗಳು,, ಗಲ್ಲಿ ಗಲ್ಲಿಗಳಲ್ಲಿ ತಿಪ್ಪೆಗುಂಡಿಗಳು.., ಆಲದ ಮರದ ಕೆಳಗೆ ಕಾಡು ಹರಟೆ ಹೊಡೆಯುತ್ತ ಕೂತ ಯುವ ಜನರು, ಅಧೋಗತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹಂಚು ಹಾರಿ ಹೋಗಿರುವ, ಪಾಳು ಬಿದ್ದ ಶಾಲಾ ಕಟ್ಟಡಗಳು.. ಈ ನೋಟ ಕರ್ನಾಟಕದಾಂದ್ಯಂತ ಹಳ್ಳಿಗಳಲ್ಲಿ ಕಂಡು ಬರುವ ಸರ್ವೇಸಾಮಾನ್ಯ ದ್ರುಶ್ಯ,,.. ಆದ್ರೆ ಇಲ್ಲೊಂದು ಹಳ್ಳಿ ಇಡಿ ನಾಡಿಗೆ ಮಾದರಿ ಎನ್ನುವಂತದ್ದು...

ಈ ಹಳ್ಳಿಯ ಹೆಸರು ಬಡಗಂಡಿ,, ಇರೋದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ.. ಇ ಊರಲ್ಲೆಲ್ಲೂ ಕೊಳಚೆಯನ್ನುವ ಮಾತೆ ಇಲ್ಲ,, ರಸ್ತೆಗಳೆಲ್ಲ ಶುಭ್ರ,, ಊರಿನಲ್ಲೆ ಒಳ್ಳೆಯ ಭದ್ರವಾದ ಕಟ್ಟಡವುಳ್ಳ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಎಲ್ಲಾ ಪ್ರಾಥಮಿಕ ಸೌಲಭ್ಯ ವುಳ್ಳ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ,, ಇದೆಲ್ಲಕಿಂತ ಹೆಚ್ಚಾಗಿ,, ಇ ಊರಲ್ಲಿ ದುರ್ಬಿನ್ ಹಾಕೊಂಡ್ ಹುಡುಕಿದ್ರು ಒಬ್ಬೆ ಒಬ್ಬ ನಿರುದ್ಯೋಗಿ ಕಣ್ಣಿಗೆ ಕಾಣಲ್ಲ.. !! ಹೀಗೂ ಉಂಟೇ ಎಂದು ಮೂಗಿನ ಮೇಲೆ ಬೆರಳಿಡ್ಬೆಡಿ...ಇದೆಲ್ಲವು ಸಾಧ್ಯವಾದದ್ದು ಇಲ್ಲಿನ ಒಬ್ಬೆ ಒಬ್ಬ ವ್ಯಕಿಯಿಂದ,, ಅವರೆ ವಿಧಾನ ಪರಿಷತ್ ಸದಸ್ಯ ಎಸ್. ಆರ್‍. ಪಾಟೀಲ ರಿಂದ. ಇದೇ ಊರಿನಲ್ಲಿ ಹುಟ್ಟಿ ಬೆಳೆದ ಪಾಟೀಲರು ತಮ್ಮ ಹುಟ್ಟೂರಿನ ಋಣ ತೀರಿಸಿದ್ದು ಹೀಗೆ. ಬಾಗಲಕೋಟೆ, ಬೆಳಗಾವಿ, ಬಿಜಾಪುರ ಪ್ರಾಂತ್ಯದಲ್ಲಿ ರೈತರ ಮುಖ್ಯ ಬೆಳೆ ಕಬ್ಬು. ಬೆಳೆದ ಕಬ್ಬನ್ನು ನುರಿಸಲು ಮಹಾರಾಷ್ಟ್ರ ಕ್ಕೆ ಹೋಗುತ್ತಿದ್ದೆ ಜನರ ಬವಣೆ ನಿವಾರಿಸಲು, ಪಾಟೀಲ-ರ ನೇತ್ರತ್ವದಲ್ಲಿ ಅಸ್ತಿತ್ವಕ್ಕೆ ಬಂದಿದ್ದೆ ಬೀಳಗಿ ಶುಗರ್ ಮಿಲ್ಸ್. ಬಡಗಂಡಿಯ ಹೆಚ್ಚಿನ ಯುವಕರು ಇ ಕಾರ್ಖಾನೆಯಲ್ಲೆ ಕೆಲಸ ಮಾಡುತ್ತಾರೆ. ಇಷ್ಟಕ್ಕೆ ನಿಲ್ಲದೆ ಪಾಟೀಲರು ಊರಿನಲ್ಲಿ ಔದ್ಯೊಗಿಕ ತರಬೇತಿ ಕೇಂದ್ರವೊಂದನ್ನು (ಐ.ಟಿ.ಐ) ತೆರೆದು ಅಲ್ಲಿನ ಯುವಕರಿಗೆ ಉದ್ಯೊಗವಕಾಶ ಹೆಚ್ಚುಸುವಲ್ಲಿ ಸಹಾಯ ಮಾಡಿದ್ದಾರೆ. ಗ್ರಾಮದ ನೈರ್ಮಲ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲೂ ಪಾಟೀಲರು ಯಶಸ್ವಿಯಾಗಿದ್ದಾರೆ. ಇಷ್ಟೆಲ್ಲ ಆದರೂ ಎಲೆ ಮರೆಯ ಕಾಯಿಯಂತೆ ತಮ್ಮ ಕಾಯಕವನ್ನು ಮುಂದುವರಿಸಿರುವ ಎಸ್. ಆರ್‍. ಪಾಟೀಲರು ಅಭಿನಂದನೀಯರು...

ಉತ್ತರ ಕರ್ನಾಟಕದ ರಾಜಕಾರಣಿಗಳು ಅಂದ್ರೆ ಸೋಮಾರಿಗಳು, ಬೆಂಗಳೂರಿನಲ್ಲಿ ಸೈಟು,ಮನೆ ಮಾಡೊದ್ರಲ್ಲೆ ಹೆಚ್ಚು ಆಸಕ್ತರು ಅನ್ನೊ ಆರೊಪ ಇರುವಾಗ, ಎಸ್. ಆರ್‍. ಪಾಟೀಲ ಅಂಥವರು ಹೆಚ್ಚು ಪ್ರಸ್ತುತ ವೆನ್ನಿಸುತ್ತಾರೆ. ಗಣಿ ಧನಿಗಳ ಅಬ್ಬರದಲ್ಲಿ, ರಿಯಲ್ ಎಸ್ಟೇಟ್ ನ ಕೊಚ್ಚೆಯಲ್ಲಿ ಬಿದ್ದು ಗಬ್ಬೆದ್ದಿರೋ ರಾಜ್ಯ ರಾಜಕೀಯಕ್ಕೆ ಇವರು ಒಂಥರಾ exception.

ಇಂಥವರ ಸಂಖ್ಯೆ ಕರ್ನಾಟಕದೆಲ್ಲೆಡೆ ಜಾಸ್ತಿ ಆದರೆ, ನಮ್ಮ ನಾಡು ನಿಜವಾಗಿಯೂ ರಾಮ ರಾಜ್ಯ ವಾದೀತು..

  • kannada kannadigas karnataka bagalakote
Ornamental seperator
  • shobha.koppad ರವರ ಬ್ಲಾಗ್
  • Login or register to post comments
  • 245 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 3, 2008 - 12:42pm — Shivakumar.Revadi

ಉ: ಹೀಗೊಂದು ಊರು !

Shivakumar.Revadi's picture

ಶೋಭಾ ಅವರೆ..... ಆ ಊರಿನ ಹೆಸರು ಬಡಗಂಡಿ ಇರ್ಲಿಕ್ಕಿಲ್ಲಾ ಬಾಡಗಂಡಿ ಇರ್ಬೆಕ್ ನೋಡ್ರಿ.
ನಾ ಸಂಣಾವಾ ಇದ್ದಾಗಾ ಆ ಊರ್ಗೆ ಹೊಗ್ತಿದ್ಯಾ.

  • Login or register to post comments
  • link
  • Email this ಪ್ರತಿಕ್ರಿಯೆ
May 10, 2008 - 11:30am — kadakolla05

ಉ: ಹೀಗೊಂದು ಊರು !

kadakolla05's picture

ಶೋಭಾ ,
ನೀವು ಆ ಊರಿಗೆ ಯಾವಾಗಲಾದರು ಹೋಗಿದ್ದೀರ?

ಸ್ವಾಮಿ

  • Login or register to post comments
  • link
  • Email this ಪ್ರತಿಕ್ರಿಯೆ
May 12, 2008 - 9:44am — shobha.koppad

ಉ: ಹೀಗೊಂದು ಊರು !

shobha.koppad's picture

snehite obbala maduvegagi aa oorige hogidde..

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾಘವೇಂದ್ರಪಾಟೀಲರ "ತೇರು" ಕಾದಂಬರಿಗೆ ಕೇಂದ್ರಸಾಹಿತ್ಯ ಅಕಾಡೆಮಿ ಬಹುಮಾನ
  • ರಿಯಲ್ ಎಸ್ಟೇಟ್ ಮಾಲೀಕರು ರಾಜಕಾರಣಕ್ಕೆ
  • ಅಲ್ಲಿಸಾಬ್ ಅವರ ನಲ್ನುಡಿ ನಿಘಂಟು
  • ಅಜೇಯನ ರಂಗ ಪ್ರವೇಶ
  • ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು
Syndicate content

ಲೇಖಕರು

shobha.koppad's picture

ಪೂರ್ಣ ಹೆಸರು
ಶೋಭಾ ಕೊಪ್ಪದ್

ಪರಿಚಯ

ವೃತ್ತಿಯಿಂದ ವೈದ್ಯೆ. ಹುಟ್ಟೂರು ದಾವಣಗೆರೆ. ಈ ಸದ್ಯಕ್ಕೆ ಬೆಂಗಳೂರಲ್ಲಿ ಒಂದು ಆಸ್ಪತ್ರೆಯಲ್ಲಿ ಕೆಲಸ. ಕನ್ನಡ, ಕರ್ನಾಟಕ ಮತ್ತು ಕನ್ನಡಿಗನ ಬಗ್ಗೆ ಕೆಲವು ಕನಸಿವೆ. ಇದೇನು ಕನ್ನಡತಿ ಒಬ್ಬಳಿಗೆ ಇದೆಂತ ಹುಚ್ಚು ಅಂತೀರ? ನನ್ನ ಕನ್ನಡ ಮೇಷ್ಟ್ರಿಂದ ಬಂದಿದ್ದು ಈ ಕನ್ನಡ ಪ್ರೀತಿ. ಕನ್ನಡ ದಲ್ಲಿ ಉತ್ತಮವಾದ ಎಲ್ಲ ಸಾಹಿತ್ಯ ಓದಬೇಕು. ಓದಿರೋದು ತುಂಬ ಕಮ್ಮಿ. ತುಂಬ ಓದೋ ಆಸೆ ಇದೆ. ಜೊತೆಗೆ ಸಮಾನ ಮನಸ್ಕ ಸ್ನೇಹಿತರ ಹುಡುಕಾಟದಲ್ಲಿ ಸಂಪದದ ಸಂಪರ್ಕಕ್ಕೆ ಬಂದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪಂಪ ಆಂಡಯ್ಯರು ಬಣ್ಣಿಸಿದ ಕನ್ನಡನಾಡಿನ ಚೆಲುವು
  • ಘೃತಮುಮಂ ತೈಲಮುಮಂ
  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rameshbalaganchi
    ಉ: ಬುದ್ಧನ ನೆನಪಲ್ಲ್ಲಿ ಕೆಲವು ಸತ್ಯಗಳನ್ನು ಧ್ಯಾನಿಸುತ್ತಾ....
    May 17, 2008 - 9:40pm
  • ಸಂಗನಗೌಡ
    ಉ: ಅನನ್ಯ ಅಲ್ಲಮ - ೮
    May 17, 2008 - 5:25pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:53pm
  • ಸಂಗನಗೌಡ
    ಉ: ಆಹಾರ ಬೆಲೆ ಏರಿಕೆ: ಭಾರತದ ಮಕ್ಕಳಿಗೆ ಸಿಕ್ಕಾಪಟ್ಟೆ ತೊಂದರೆಯಾಗಬಹುದು - ಯೂನಿಸೆಫ್ ಎಚ್ಚರಿಕೆ
    May 17, 2008 - 4:38pm
  • Narayana
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 17, 2008 - 2:00pm
  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 6 ಅತಿಥಿಗಳು ಆನ್ಲೈನ್ ಇರುವರು.

ಅರಿವನರಿಯದ ಗುರುವು | ಪರಿವನರಿಯದ ಶಿಷ್ಯ |
ಸಂದೆರಡು ವರ್ಗವರಿಯದಿರ್ದುಪದೇಶ |
ಕೊಂದುಕೊಂಡಂತೆ ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator