ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಕಾವೇರಿಯಿಂದಮಾ ಗೋದಾವರಿ.....

July 13, 2006 - 12:13pm — shreekant.mishrikoti

ಕೇಳಿದ್ದೆ , ಓದಿದ್ದೆ . ಕಾವೇರಿಯಿಂದ ಗೋದಾವರಿವರೆಗೆ ಕನ್ನಡನಾಡು ವ್ಯಾಪಿಸಿತ್ತು ಮತ್ತು ಇದು 'ಕವಿರಾಜಮಾರ್ಗ'ದಲ್ಲಿದೆ ಎಂದಷ್ಟೇ ಗೊತ್ತಿತ್ತು. ಇದರಲ್ಲಿ 'ಮಾ' ಎಂದರೇನು ಗೊತ್ತಿರಲಿಲ್ಲ . ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ ಎಂದೇನೋ ನಂತರದ ಸಾಲು ಇದೆ ಎಂದು ಗೊತ್ತಿತ್ತು ಅದರರ್ಥ ಗೊತ್ತಿರಲಿಲ್ಲ . ಈಗ ನನಗೆ ಈ ಬಗ್ಗೆ ಶ್ರೀ ಕೆ.ವಿ.ಸುಬ್ಬಣ್ಣ ಅವರ ಲೇಖನವೊಂದರಲ್ಲಿ ಮಾಹಿತಿ ಸಿಕ್ಕಿತು. ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬಯಸುವೆ.

`ಕವಿರಾಜಮಾರ್ಗ' ವೆಂಬ ಗ್ರಂಥ ಕವಿ ಶ್ರೀವಿಜಯ ಮತ್ತು ರಾಜಾ ನೃಪತುಂಗರಿಬ್ಬರೂ ಕೂಡಿ
ರಚಿಸಿದ್ದು. ಈ ಗ್ರಂಥವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. `ಕವಿರಾಜಮಾರ್ಗ' ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ.

`ಕಾವೇರಿಯಿಂದಂ-ಆ-ಗೋದಾವರಿವರಂ-ಇರ್ದ-ನಾಡು-ಅದು ಆ ಕನ್ನಡದೊಳ್ ಭಾವಿಸಿದ ಜನಪದಂ'. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು `ಭಾವಿತ' ವಾದದ್ದು; `ಕನ್ನಡ' ವೆಂಬುದರ ಒಳಗಡೆ-ಆ ಚಿಪ್ಪಿನ ಒಳಗೆ ಎನ್ನಿ-`ಭಾವಿತ' ವಾದದ್ದು. ಅಂದರೆ, `ಕನ್ನಡ' ವೆಂಬುದು ಒಂದು ಚಿತ್-ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್-ಜಗತ್ತಿನೊಳಗೆ ಮೈದಾಳಿದ್ದಾಗಿ ಅನಂತರ ನಿರ್ಮಿತಗೊಂಡಿದೆ. ಮತ್ತು ಇದು, `ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ'. ವಸುಧಾ (ಭೂಮಿ) ಎನ್ನುವುದು ಅನಂತ ಬ್ರಹ್ಮಾಂಡದೊಳಗಿನ ಒಂದು `ವಲಯ' ಅಷ್ಟೇ; ಮತ್ತು `ಕನ್ನಡ' ವೆಂಬ `ವಿಷಯ' (ನಾಡು) ವು ಆ ವಸುಧಾಲಯದಲ್ಲಿ `ವಿಲೀನ' ವಾಗಿದೆ, ಸಮರಸವಾಗಿ ಬೆರೆತುಕೊಂಡಿದೆ. ಹಾಗೆಂದ ಮಾತ್ರಕ್ಕೆ ಇದು ಸ್ವಂತಿಕೆಯ ಚಹರೆಯಿಲ್ಲದೆ ವಸುಧೆಯಲ್ಲಿ ಗುರುತು ಸಿಗದಂತೆ ಮುಳುಗಿಹೋದದ್ದಲ್ಲ; ತನ್ನದೇ `ವಿಶೇಷ' (ವೈಶಿಷ್ಟ್ಯ) ಇರುವ ನಾಡು. ಅಷ್ಟೇ ಅಲ್ಲ-ಇದು `ವಿಶದ' ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, `ವಸುಧಾಲಯ ವಿಲೀನ' ಎಂಬುದರ ಇನ್ನೊಂದು ಅರ್ಥವನ್ನು(ವಸುಧಾಲಯವನ್ನು ತನ್ನೊಳಗೆ ಅರಗಿಸಿಕೊಂಡಿರುವಂಥದು ಎಂಬ ಅರ್ಥವನ್ನು) ಪರಿಭಾವಿಸಿಕೊಳ್ಳಬೇಕು. ವಸುಧೆಯ ಒಳಗಿನ ಒಂದು ಕಿರಣಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ `ಕನ್ನಡ' ದ ಇಂಥ ಪ್ರತಿಮೆಯನ್ನು `ಕವಿರಾಜಮಾರ್ಗ' ವು ಕಂಡಿರಿಸಿಟ್ಟಿದೆ. ಕನ್ನಡವು ವಸುಧಾಲಯವನ್ನು ತನ್ನಲ್ಲಿ ವಿಲೀನಗೊಳಿಸಿಕೊಂಡಿರುವ ಪರಿಯನ್ನು `ಕವಿರಾಜಮಾರ್ಗ'ವು ಹೀಗೆ ಬಣ್ಣಿಸಿದೆ .

~.~
  • shreekant.mishrikoti ರವರ ಬ್ಲಾಗ್
  • Login or register to post comments
  • 561 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
  • ತುಂಗೆ ಮತ್ತು ಕನ್ನಡ ಸಾಹಿತ್ಯ
  • ಕಾವೇರಿಯಿಂದಂ ಆ ಗೋದಾವರಿವರಂ ಇರ್ಪ ನಾಡಾದ ಆ ಕನ್ನಡದೊಳ್
  • ಕನ್ನಡ ಕಸ್ತೂರಿ ...ನಮ್ಮದು ಚೆಲುವ ಕನ್ನಡ ನಾಡು..............ಜಿ.ವಿಜಯ್ ಹೆಮ್ಮರಗಾಲ
  • ಕನ್ನಡ ಬೆಳೆಯುತ್ತಿರುವುದು ನೋಡಿದರೆ ಖುಶಿ ಆಗುತ್ತದೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
  • kishoreyc
    ಉ: ಚೈನಾ ೧೦೦ ನಾವು ೦
    August 29, 2008 - 10:02pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:01pm
  • D.S.NAGABHUSHANA
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 8:37pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 33 ಅತಿಥಿಗಳು ಆನ್ಲೈನ್ ಇರುವರು.


ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator